AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶ್ರೇಯಸ್​ ತಲ್ಪಡೆ ಹೃದಯ 10 ನಿಮಿಷ ನಿಂತು ಹೋಗಿತ್ತು’: ಶಾಕಿಂಗ್​ ವಿಚಾರ ಬಹಿರಂಗ

ಶ್ರೇಯಸ್​ ತಲ್ಪಡೆ ಅವರಿಗೆ ಬಾಲಿವುಡ್​ ಮತ್ತು ಮರಾಠಿ ಚಿತ್ರರಂಗದಲ್ಲಿ ಬೇಡಿಕೆ ಇದೆ. ‘ಎಮರ್ಜಿನ್ಸಿ’ ಸಿನಿಮಾದಲ್ಲಿ ಅವರು ನಟಿಸುತ್ತಿದ್ದಾರೆ. ‘ವೆಲ್​ಕಮ್​ ಟು ದಿ ಜಂಗಲ್​’ ಸಿನಿಮಾದಲ್ಲೂ ಶ್ರೇಯಸ್​ ತಲ್ಪಡೆ ಅಭಿನಯಿಸುತ್ತಿದ್ದಾರೆ. ಈ ಸಿನಿಮಾದ ಶೂಟಿಂಗ್​ ಮುಗಿಸಿ ವಾಪಸ್​ ಬರುವಾಗ ಅವರಿಗೆ ಹೃದಯಾಘಾತ ಆಯಿತು.

‘ಶ್ರೇಯಸ್​ ತಲ್ಪಡೆ ಹೃದಯ 10 ನಿಮಿಷ ನಿಂತು ಹೋಗಿತ್ತು’: ಶಾಕಿಂಗ್​ ವಿಚಾರ ಬಹಿರಂಗ
ಶ್ರೇಯಸ್​ ತಲ್ಪಡೆ
ಮದನ್​ ಕುಮಾರ್​
|

Updated on: Dec 15, 2023 | 11:17 AM

Share

ಬಾಲಿವುಡ್​ನ ಖ್ಯಾತ ನಟ ಶ್ರೇಯಸ್​ ತಲ್ಪಡೆ (Shreyas Talpade) ಅವರಿಗೆ ಹೃದಯಾಘಾತ (Heart Attack) ಆಗಿರುವ ಸುದ್ದಿ ತಿಳಿದು ಅಭಿಮಾನಿಗಳಿಗೆ ಆತಂಕ ಆಗಿದೆ. ಹಲವು ಸಿನಿಮಾಗಳಲ್ಲಿ ನಟಿಸಿ ಜನರನ್ನು ರಂಜಿಸಿರುವ ಶ್ರೇಯಸ್​ ತಲ್ಪಡೆ ಅವರಿಗೆ ಗುರುವಾರ (ಡಿ.14) ಸಂಜೆ ಹಾರ್ಟ್​ ಅಟ್ಯಾಕ್​ ಆಯಿತು. ಆ ಕುರಿತು​ ನಟ ಬಾಬಿ ಡಿಯೋಲ್​ ಅವರು ‘ಬಾಲಿವುಡ್​ ಹಂಗಾಮಾ’ಗೆ ಹೆಚ್ಚಿನ ಮಾಹಿತಿ ನೀಡಿದ್ದಾರೆ. ‘ಶ್ರೇಯಸ್​ ತಲ್ಪಡೆ ಹೃದಯ 10 ನಿಮಿಷ ನಿಂತು ಹೋಗಿತ್ತು’ ಎಂದು ಬಾಬಿ ಡಿಯೋಲ್ (Bobby Deol)​ ಅವರು ಹೇಳಿರುವುದಾಗಿ ವರದಿ ಆಗಿದೆ.

‘ಅವರ ಪತ್ನಿಯ ಬಳಿ ಈಗಷ್ಟೇ ಮಾತನಾಡಿದೆ. ಅವರು ತುಂಬ ನೊಂದಿದ್ದಾರೆ. ಶ್ರೇಯಸ್​ ತಲ್ಪಡೆ ಅವರ ಹೃದಯ 10 ನಿಮಿಷ ನಿಂತು ಹೋಗಿತ್ತು. ಈಗ ಅವರಿಗೆ ಆ್ಯಂಜಿಯೋಪ್ಲಾಸ್ಟಿ ಮಾಡಲಾಗಿದೆ. ಅವರು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸಿ’ ಎಂದು ಬಾಬಿ ಡಿಯೋಲ್​ ಹೇಳಿದ್ದಾರೆ ಎಂದು ‘ಬಾಲಿವುಡ್​ ಹಂಗಾಮಾ’ ವರದಿ ಮಾಡಿದೆ. ಶ್ರೇಯಸ್​ ತಲ್ಪಡೆ ಅವರ ಹೆಲ್ತ್​ ಅಪ್​ಡೇಟ್​ ತಿಳಿಯಲು ಫ್ಯಾನ್ಸ್​ ಕಾದಿದ್ದಾರೆ.

ಇದನ್ನೂ ಓದಿ: 8 ತಿಂಗಳ ಗರ್ಭಿಣಿ, ಕಿರುತೆರೆ ನಟಿ ಹೃದಯಾಘಾತದಿಂದ ನಿಧನ; ಮಗು ಪರಿಸ್ಥಿತಿ ಏನು?

ಶ್ರೇಯಸ್​ ತಲ್ಪಡೆ ಅವರಿಗೆ ಬಾಲಿವುಡ್​ ಮತ್ತು ಮರಾಠಿ ಚಿತ್ರರಂಗದಲ್ಲಿ ಬೇಡಿಕೆ ಇದೆ. ಈಗ ಅವರಿಗೆ 47 ವರ್ಷ ವಯಸ್ಸು. 2002ರಿಂದಲೂ ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಅವರು ಹೆಚ್ಚು ಸಿನಿಮಾ ಮಾಡಿಲ್ಲ. ಸದ್ಯಕ್ಕೆ ಕಂಗನಾ ರಣಾವತ್​ ನಿರ್ದೇಶನದ ‘ಎಮರ್ಜಿನ್ಸಿ’ ಸಿನಿಮಾದಲ್ಲಿ ಶ್ರೇಯಸ್​ ತಲ್ಪಡೆ ನಟಿಸುತ್ತಿದ್ದಾರೆ. ಇದರಲ್ಲಿ ಅವರು ಅಟಲ್​ ಬಿಹಾರಿ ವಾಜಪೇಯಿ ಪಾತ್ರವನ್ನು ಮಾಡುತ್ತಿದ್ದಾರೆ.

ಇದನ್ನೂ ಓದಿ: 10 ವರ್ಷಗಳಲ್ಲಿ ಹೃದಯಾಘಾತ ಶೇ 22 ರಷ್ಟು ಹೆಚ್ಚಳ: ಡಾ ಸಿಎನ್ ಮಂಜುನಾಥ್ ಕೊಟ್ಟ ಕಾರಣ ಇಲ್ಲಿದೆ

ಡಬ್ಬಿಂಗ್​ ಕಲಾವಿದನಾಗಿಯೂ ಅವರು ಗುರುತಿಸಿಕೊಂಡಿದ್ದಾರೆ. ‘ಪುಷ್ಪ’ ಚಿತ್ರದ ಹಿಂದಿ ವರ್ಷನ್​ನಲ್ಲಿ ಅಲ್ಲು ಅರ್ಜುನ್​ ಪಾತ್ರಕ್ಕೆ ಧ್ವನಿ ನೀಡುವ ಮೂಲಕ ಶ್ರೇಯಸ್​ ತಲ್ಪಡೆ ಅವರು ಎಲ್ಲರ ಮೆಚ್ಚುಗೆ ಗಳಿಸಿದರು. ‘ವೆಲ್​ಕಮ್​ ಟು ದಿ ಜಂಗಲ್​’ ಸಿನಿಮಾದಲ್ಲೂ ಶ್ರೇಯಸ್​ ತಲ್ಪಡೆ ನಟಿಸುತ್ತಿದ್ದಾರೆ. ಈ ಸಿನಿಮಾದ ಶೂಟಿಂಗ್​ ಮುಗಿಸಿ ವಾಪಸ್​ ಬರುವಾಗ ಅವರಿಗೆ ಹೃದಯಾಘಾತ ಆಯಿತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಲಾಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ