AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ ಲಸಿಕೆಯಿಂದ ಶ್ರೇಯಸ್​ ತಲ್ಪಡೆಗೆ ಹೃದಯಾಘಾತ ಆಯ್ತಾ? ನಟನಿಗೂ ಇದೆ ಅನುಮಾನ

ಎಲ್ಲ ವಿಚಾರದಲ್ಲಿಯೂ ನಟ ಶ್ರೇಯಸ್​ ತಲ್ಪಡೆ ಫಿಟ್ನೆಸ್​ ಕಾಪಾಡಿಕೊಂಡಿದ್ದಾರೆ. ಆದರೂ ಕೂಡ ತಮಗೆ ಹೃದಯಾಘಾತ ಆಗಿದ್ದರ ಬಗ್ಗೆ ಅವರಿಗೆ ಅನುಮಾನ ಶುರುವಾಗಿದೆ. ಕೊವಿಡ್​-19 ಲಸಿಕೆಯ ಬಗ್ಗೆ ಅವರು ಕೆಲವು ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ. ಮಾಧ್ಯಮವೊಂದಕ್ಕೆ ಅವರು ಸಂದರ್ಶನ ನೀಡಿದ್ದು, ಒಂದಷ್ಟು ಪ್ರಮುಖ ಪ್ರಶ್ನೆಗಳನ್ನು ಎತ್ತಿದ್ದಾರೆ.

ಕೊವಿಡ್​ ಲಸಿಕೆಯಿಂದ ಶ್ರೇಯಸ್​ ತಲ್ಪಡೆಗೆ ಹೃದಯಾಘಾತ ಆಯ್ತಾ? ನಟನಿಗೂ ಇದೆ ಅನುಮಾನ
ಶ್ರೇಯಸ್​ ತಲ್ಪಡೆ
ಮದನ್​ ಕುಮಾರ್​
|

Updated on: May 05, 2024 | 10:44 AM

Share

ಕೊವಿಡ್​ 19 ಲಸಿಕೆಯ ಅಡ್ಡ ಪರಿಣಾಮಗಳ (Corona Vaccine Side Effect) ಬಗ್ಗೆ ದೊಡ್ಡ ಚರ್ಚೆ ನಡೆಯುತ್ತಿದೆ. ಕೆಲವು ಸೆಲೆಬ್ರಿಟಿಗಳು ದಿಢೀರ್​ ಸಾವಿಗೆ ಇದು ಕಾರಣ ಆಗಿರಬಹುದೇ ಎಂದು ಕೂಡ ಕೆಲವರು ಅನುಮಾನ ವ್ಯಕ್ತಪಡಿಸಿದ್ದಾರೆ. ಕಾಕತಾಳೀಯ ಎಂಬಂತೆ ಒಂದಷ್ಟು ಸೆಲೆಬ್ರಿಟಿಗಳಿಗೆ ಹೃದಯಘಾತ (Heart Attack) ಆಯಿತು. ಅಂಥವರ ಪೈಕಿ ಖ್ಯಾತ ನಟ ಶ್ರೇಯಸ್​ ತಲ್ಪಡೆ ಕೂಡ ಒಬ್ಬರು. ಹೃದಯಾಘಾತದ ಬಳಿಕ ಅವರಿಗೆ ಚಿಕಿತ್ಸೆ ನೀಡಲಾಯಿತು. ಅದೃಷ್ಟವಶಾತ್​ ಅವರು ಬದುಕುಳಿದರು. ಆದರೆ ಆ ಹೃದಯಾಘಾತಕ್ಕೆ ಲಸಿಕೆ ಕಾರಣ ಆಗಿರಬಹುದು ಎಂದು ಸ್ವತಃ ಶ್ರೇಯಸ್​ ತಲ್ಪಡೆ (Shreyas Talpade) ಹೇಳಿದ್ದಾರೆ.

ಮಾಧ್ಯಮವೊಂದಕ್ಕೆ ಇತ್ತೀಚೆಗೆ ನೀಡಿದ ಸಂದರ್ಶನದಲ್ಲಿ ಶ್ರೇಯಸ್​ ತಲ್ಪಡೆ ಅವರು ಈ ವಿಚಾರ ಪ್ರಸ್ತಾಪಿಸಿದ್ದಾರೆ. ‘ನಾನು ಧೂಮಪಾನ ಮಾಡುವುದಿಲ್ಲ. ರೆಗ್ಯುಲರ್​ ಆಗಿ ಮದ್ಯಪಾನ ಕೂಡ ಮಾಡಲ್ಲ. ತಿಂಗಳಿಗೆ ಒಮ್ಮೆ ಕುಡಿಯುತ್ತೇನೆ ಅಷ್ಟೇ. ತಂಬಾಕು ಸೇವಿಸಲ್ಲ. ನನ್ನ ಕೊಲೆಸ್ಟ್ರಾಲ್ ಪ್ರಮಾಣ ಸ್ವಲ್ಪ ಜಾಸ್ತಿ ಇತ್ತು ಎಂಬುದು ನಿಜ. ಆದರೆ ಈ ದಿನಗಳಲ್ಲಿ ಅದನ್ನು ನಾರ್ಮಲ್​ ಅಂತಾರೆ. ಅದಕ್ಕೆ ನಾನು ಔಷದಿ ಪಡೆಯುತ್ತಿದ್ದೆ. ಅದು ಗಣನೀಯವಾಗಿ ಕಡಿಮೆ ಆಗಿದೆ. ಮಧುಮೇಹ ಇಲ್ಲ, ಅಧಿಕ ರಕ್ತದೊತ್ತಡ ಇಲ್ಲ. ಎಲ್ಲವೂ ಸರಿಯಾಗಿದೆ ಎಂದರೆ ಹೃದಯಾಘಾತಕ್ಕೆ ಕಾರಣ ಏನಿರಬಹುದು’ ಎಂದು ಶ್ರೇಯಸ್​ ತಲ್ಪಡೆ ಕೇಳಿದ್ದಾರೆ.

‘ನಾನು ಒಂದು ಥಿಯೆರಿ ಹುಟ್ಟುಹಾಕಲ್ಲ. ಕೊವಿಡ್​-19 ಲಸಿಕೆ ಪಡೆದ ನಂತರವೇ ನನಗೆ ಸುಸ್ತು ಶುರುವಾಯಿತು. ಅದರಲ್ಲಿ ಸ್ವಲ್ಪ ಪ್ರಮಾಣದ ಸತ್ಯ ಇರಬಹುದು. ಕೊವಿಡ್​ ಇರಬಹುದು ಅಥವಾ ಅದರ ಲಸಿಕೆ ಇರಬಹುದು. ಆ ಬಳಿಕವೇ ಇದೆಲ್ಲ ಶುರುವಾಗಿದ್ದು. ದುರದೃಷ್ಟಕರ ಸಂಗತಿ ಏನೆಂದರೆ, ನಾವು ದೇಹದ ಒಳಗೆ ಏನನ್ನು ತೆಗೆದುಕೊಂಡಿದ್ದೇವೆ ಎಂಬುದು ನಮಗೆ ತಿಳಿದಿಲ್ಲ. ಕಂಪನಿಯನ್ನು ನಂಬಿದೆವು. ಕೊವಿಡ್​-19 ಬರುವುದಕ್ಕೂ ಮುನ್ನ ನಾನು ಈ ರೀತಿಯ ಘಟನೆಗಳ ಬಗ್ಗೆ ಕೇಳಿರಲಿಲ್ಲ’ ಎಂದಿದ್ದಾರೆ ಶ್ರೇಯಸ್​ ತಲ್ಪಡೆ.

ಇದನ್ನೂ ಓದಿ: ಈ ಸೆಲೆಬ್ರಿಟಿಗಳ ಸಾವಿಗೆ ಕೋವಿಶೀಲ್ಡ್​ ಅಡ್ಡಪರಿಣಾಮ ಕಾರಣ? ಸೋಶಿಯಲ್ ಮೀಡಿಯಾದಲ್ಲಿ ಶುರುವಾಗಿದೆ ಚರ್ಚೆ

ಕೊವಿಡ್​-19 ಲಸಿಕೆಯು ಮನುಷ್ಯರ ಮೇಲೆ ಉಂಟು ಮಾಡುವ ದೀರ್ಘಾವಧಿ ಪರಿಣಾಮಗಳ ಬಗ್ಗೆ ತಿಳಿದುಕೊಳ್ಳಲು ಶ್ರೇಯಸ್​ ತಲ್ಪಡೆ ಬಯಸಿದ್ದಾರೆ. ಆದರೆ ಅಂತಿಮ ನಿರ್ಧಾರಕ್ಕೆ ಬರುವುದಕ್ಕೂ ಮುನ್ನ ಸೂಕ್ತ ಸಂಶೋಧನೆ ಆಗಬೇಕು ಎಂದು ಅವರು ಹೇಳಿದ್ದಾರೆ. ಪುನೀತ್ ರಾಜ್​ಕುಮಾರ್​ ಅವರ ನಿಧನದ ಬಗ್ಗೆ ಕೂಡ ಅಭಿಮಾನಿಗಳು ಕೆಲವು ಪ್ರಶ್ನೆಗಳನ್ನು ಈಗ ಎತ್ತುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಕುರಿತು ಚರ್ಚೆ ಶುರುವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು