AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಎಮರ್ಜೆನ್ಸಿ’ ಚಿತ್ರದಲ್ಲಿ ಅಟಲ್​ ಬಿಹಾರಿ ವಾಜಪೇಯಿ ಪಾತ್ರಕ್ಕೆ ಶ್ರೇಯಸ್​ ತಲ್ಪಡೆ ಆಯ್ಕೆ; ಫಸ್ಟ್​ಲುಕ್​ ರಿಲೀಸ್​

Shreyas Talpade | Atal Bihari Vajpayee: ಅಟಲ್​ ಬಿಹಾರಿ ವಾಜಪೇಯಿ ಅವರ ಪಾತ್ರವನ್ನು ಮಾಡುತ್ತಿರುವುದಕ್ಕೆ ಶ್ರೇಯಸ್​ ತಲ್ಪಡೆ ಅವರಿಗೆ ತುಂಬ ಖುಷಿ ಇದೆ. ತಮ್ಮನ್ನು ಆಯ್ಕೆ ಮಾಡಿದ ಕಂಗನಾ ರಣಾವತ್​ಗೆ ಅವರು ಧನ್ಯವಾದ ತಿಳಿಸಿದ್ದಾರೆ.

‘ಎಮರ್ಜೆನ್ಸಿ’ ಚಿತ್ರದಲ್ಲಿ ಅಟಲ್​ ಬಿಹಾರಿ ವಾಜಪೇಯಿ ಪಾತ್ರಕ್ಕೆ ಶ್ರೇಯಸ್​ ತಲ್ಪಡೆ ಆಯ್ಕೆ; ಫಸ್ಟ್​ಲುಕ್​ ರಿಲೀಸ್​
ಶ್ರೇಯಸ್ ತಲ್ಪಡೆ, ಅಟಲ್ ಬಿಹಾರಿ ವಾಜಪೇಯಿ
Follow us
TV9 Web
| Updated By: ಮದನ್​ ಕುಮಾರ್​

Updated on: Jul 27, 2022 | 12:19 PM

ದಿನದಿಂದ ದಿನಕ್ಕೆ ‘ಎಮರ್ಜೆನ್ಸಿ’ ಸಿನಿಮಾದ (Emergency Movie) ಕ್ರೇಜ್​ ಹೆಚ್ಚಾಗುತ್ತಿದೆ. ನೈಜ ಘಟನೆಗಳನ್ನು ಆಧರಿಸಿ ತಯಾರಾಗುತ್ತಿರುವ ಈ ಸಿನಿಮಾದಲ್ಲಿ ಅನೇಕ ಪ್ರತಿಭಾವಂತ ಕಲಾವಿದರು ನಟಿಸುತ್ತಿದ್ದಾರೆ. ಈಗಾಗಲೇ ತಿಳಿದಿರುವಂತೆ ಇಂದಿರಾ ಗಾಂಧಿ ಅವರ ಪಾತ್ರ ಈ ಚಿತ್ರದಲ್ಲಿ ಪ್ರಮುಖವಾಗಿ ಇರಲಿದೆ. ಆ ಪಾತ್ರವನ್ನು ನಟಿ ಕಂಗನಾ ರಣಾವತ್​ ಅವರು ನಿಭಾಯಿಸುತ್ತಿದ್ದಾರೆ. ಉಳಿದಂತೆ, ಜಯಪ್ರಕಾಶ್​ ನಾರಾಯಣ್​ ಪಾತ್ರವನ್ನು ಅನುಪಮ್​ ಖೇರ್​ ಮಾಡುತ್ತಿದ್ದಾರೆ. ಅಟಲ್​ ಬಿಹಾರಿ ವಾಜಪೇಯಿ (Atal Bihari Vajpayee) ಪಾತ್ರದಲ್ಲಿ ಶ್ರೇಯಸ್​ ತಲ್ಪಡೆ ನಟಿಸುತ್ತಿದ್ದಾರೆ. ಎಲ್ಲ ಕಲಾವಿದರ ಫಸ್ಟ್​ ಲುಕ್ ಪೋಸ್ಟರ್​​ಗಳು ಗಮನ ಸೆಳೆಯುತ್ತಿವೆ. ಈಗ ಶ್ರೇಯಸ್​ ತಲ್ಪಡೆ (Shreyas Talpade) ಅವರ ಪೋಸ್ಟರ್​ ಬಿಡುಗಡೆ ಮಾಡಲಾಗಿದೆ. ಆ ಮೂಲಕ ‘ಎಮರ್ಜೆನ್ಸಿ’ ಸಿನಿಮಾ ಬಗ್ಗೆ ನಿರೀಕ್ಷೆ ಹೆಚ್ಚುವಂತೆ ಮಾಡಿದ್ದಾರೆ ನಾಯಕಿ ಕಮ್​ ನಿರ್ದೇಶಕಿ ಕಂಗನಾ ರಣಾವತ್​.

ಚಿತ್ರದ ಶೀರ್ಷಿಕೆಯೇ ಹೇಳುವಂತೆ ಇಂದಿರಾ ಗಾಂಧಿ ಅವರು ಹೇರಿದ್ದ ತುರ್ತು ಪರಿಸ್ಥಿತಿಯನ್ನು ಆಧರಿಸಿ ‘ಎಮರ್ಜೆನ್ಸಿ’ ಸಿನಿಮಾ ಸಿದ್ಧವಾಗುತ್ತಿದೆ. ಆ ಕಾಲಘಟ್ಟದಲ್ಲಿ ಭಾರತದ ರಾಜಕೀಯದಲ್ಲಿ ಬದಲಾವಣೆ ತರಲು ಕಾರಣರಾದ ಅನೇಕ ನಾಯಕರ ಪಾತ್ರಗಳು ಈ ಸಿನಿಮಾದಲ್ಲಿ ಹೈಲೈಟ್​ ಆಗಲಿವೆ. ನಟಿ ಕಂಗನಾ ಅವರು ಮುಖ್ಯ ಭೂಮಿಕೆಯನ್ನು ನಿಭಾಯಿಸುವುದರ ಜೊತೆಗೆ ನಿರ್ದೇಶನದ ಹೊಣೆಯನ್ನೂ ಹೊತ್ತಿದ್ದಾರೆ. ಪಾತ್ರಧಾರಿಗಳ ಆಯ್ಕೆಯಲ್ಲಿ ಅವರ ಕೆಲಸವನ್ನು ಸಿನಿಪ್ರಿಯರು ಮೆಚ್ಚಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ
Image
Emergency: ‘ಇಂದಿರಾ ಗಾಂಧಿ ಈ ವಿಡಿಯೋದಲ್ಲಿ ಕಂಗನಾ ರೀತಿ ಮಾಡ್ತಿದ್ದಾರೆ’: ರಾಮ್​ ಗೋಪಾಲ್​ ವರ್ಮಾ
Image
Emergency: ನಟ ಅನುಪಮ್​ ಖೇರ್​ಗೆ ‘ಎಮರ್ಜೆನ್ಸಿ’ ಚಿತ್ರದಲ್ಲೊಂದು ಮುಖ್ಯ ಪಾತ್ರ; ಇಲ್ಲಿದೆ ಫಸ್ಟ್​ ಲುಕ್​
Image
Emergency: ಇದು ಇಂದಿರಾ ಗಾಂಧಿ ಅಲ್ಲ, ಕಂಗನಾ ರಣಾವತ್! ಗಮನ ಸೆಳೆದ ‘ಎಮರ್ಜೆನ್ಸಿ’ ಫಸ್ಟ್​ ಲುಕ್​
Image
Kangana Ranaut: ಇಂದಿರಾ ಗಾಂಧಿ ಬಗ್ಗೆ ಕಂಗನಾ ಮಾಡುವ ‘ಎಮರ್ಜೆನ್ಸಿ’ ಚಿತ್ರ ಫ್ಲಾಪ್​ ಆಗಲಿದೆ; ಭವಿಷ್ಯ ನುಡಿದ ನಟ

ಶ್ರೇಯಸ್​ ತಲ್ಪಡೆ ಅವರ ಪೋಸ್ಟರ್​ ಅನ್ನು ಕಂಗನಾ ರಣಾವತ್​ ಇನ್​ಸ್ಟಾಗ್ರಾಮ್​ನಲ್ಲಿ ಶೇರ್​ ಮಾಡಿಕೊಂಡಿದ್ದಾರೆ. ‘ಭಾರತ ರತ್ನ ಅಟಲ್​ ಬಿಹಾರಿ ವಾಜಪೇಯಿ ಅವರ ಪಾತ್ರದಲ್ಲಿ ನಟಿಸುತ್ತಿರುವ ಶ್ರೇಯಸ್​ ತಲ್ಪಡೆ ಪೋಸ್ಟರ್​ ಅನ್ನು ಬಿಡುಗಡೆ ಮಾಡುತ್ತಿದ್ದೇವೆ. ವಾಜಪೇಯಿ ಅವರು ನಿಜವಾದ ರಾಷ್ಟ್ರವಾದಿ ಆಗಿದ್ದರು. ದೇಶದ ಬಗ್ಗೆ ಅವರಿಗೆ ಇದ್ದ ಗೌರವ ಮತ್ತು ಪ್ರೀತಿಗೆ ಬೇರೆ ಯಾವುದೂ ಸಾಟಿ ಇಲ್ಲ. ಎಮರ್ಜೆನ್ಸಿ ಸಮಯದಲ್ಲಿ ಅವರು ಉದಯೋನ್ಮುಖ ನಾಯಕನಾಗಿದ್ದರು’ ಎಂದು ಕಂಗನಾ ಬರೆದುಕೊಂಡಿದ್ದಾರೆ.

ಈ ಪಾತ್ರ ಮಾಡುತ್ತಿರುವುದಕ್ಕೆ ಶ್ರೇಯಸ್​ ತಲ್ಪಡೆ ಅವರಿಗೆ ತುಂಬ ಖುಷಿ ಇದೆ. ಈ ಬಗ್ಗೆ ಅವರು ಸೋಶಿಯಲ್​ ಮೀಡಿಯಾದಲ್ಲಿ ಸಂತಸ ಹಂಚಿಕೊಂಡಿದ್ದಾರೆ. ತಮ್ಮನ್ನು ಈ ಪಾತ್ರಕ್ಕೆ ಆಯ್ಕೆ ಮಾಡಿದ ಕಂಗನಾಗೆ ಅವರು ಧನ್ಯವಾದ ತಿಳಿಸಿದ್ದಾರೆ. ‘ನೀವು ಅತ್ಯುತ್ತಮ ನಟಿ ಮಾತ್ರವಲ್ಲ. ಶ್ರೇಷ್ಠ ನಿರ್ದೇಶಕಿ ಕೂಡ ಹೌದು’ ಎಂದು ಕಂಗನಾರನ್ನು ಶ್ರೇಯಸ್​ ಹೊಗಳಿದ್ದಾರೆ. ಈ ಸಿನಿಮಾದ ಶೂಟಿಂಗ್​ ಪ್ರಗತಿಯಲ್ಲಿದೆ.

ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ 1 ತಿಂಗಳ ಸಂಬಳ ನೀಡುತ್ತೇವೆ: ಅಶೋಕ್​
ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ 1 ತಿಂಗಳ ಸಂಬಳ ನೀಡುತ್ತೇವೆ: ಅಶೋಕ್​
ಹೇಸರಘಟ್ಟದಲ್ಲಿನ ಡ್ರ್ಯಾಗನ್​ ಫ್ರೂಟ್​ ಜಮೀನಿಗೆ ಭೇಟಿ ನೀಡಿದ ಕೇಂದ್ರ ಸಚಿವ
ಹೇಸರಘಟ್ಟದಲ್ಲಿನ ಡ್ರ್ಯಾಗನ್​ ಫ್ರೂಟ್​ ಜಮೀನಿಗೆ ಭೇಟಿ ನೀಡಿದ ಕೇಂದ್ರ ಸಚಿವ
ರೇಣುಕಾ ಸ್ವಾಮಿ ಕೊಲೆಯಾಗಿ ಒಂದು ವರ್ಷ, ಕುಟುಂಬದವರಿಂದ ಪೂಜೆ
ರೇಣುಕಾ ಸ್ವಾಮಿ ಕೊಲೆಯಾಗಿ ಒಂದು ವರ್ಷ, ಕುಟುಂಬದವರಿಂದ ಪೂಜೆ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ