AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲುಗು ಚಿತ್ರರಂಗದಲ್ಲಿ ಆದ ಕೆಟ್ಟ ಅನುಭವ ಹಂಚಿಕೊಂಡ ನಟಿ

Shweta Basu: ಬಾಲಿವುಡ್ ನಟಿ ಶ್ವೇತಾ ಬಸು ತೆಲುಗು ಹಾಗೂ ತಮಿಳಿನ ಕೆಲ ಸಿನಿಮಾಗಳಲ್ಲಿ ನಟಿಸಿದ್ದಾರೆ. ತೆಲುಗು ಚಿತ್ರರಂಗದಲ್ಲಿ ನಟಿಸುವಾಗ ಒಂದು ಸಿನಿಮಾ ತಂಡದಿಂದ ತೀವ್ರ ನಿಂದನೆಗೆ ಶ್ವೇತಾ ಬಸು ಒಳಗಾಗಿದ್ದರಂತೆ. ಆ ವಿಷಯದ ಬಗ್ಗೆ ಇತ್ತೀಚೆಗಿನ ಸಂದರ್ಶನದಲ್ಲಿ ಶ್ವೇತಾ ಮಾತನಾಡಿದ್ದಾರೆ.

ತೆಲುಗು ಚಿತ್ರರಂಗದಲ್ಲಿ ಆದ ಕೆಟ್ಟ ಅನುಭವ ಹಂಚಿಕೊಂಡ ನಟಿ
Shweatha Basu
ಮಂಜುನಾಥ ಸಿ.
|

Updated on: Feb 18, 2025 | 7:57 AM

Share

ದಕ್ಷಿಣ ಭಾರತ ಚಿತ್ರರಂಗದಲ್ಲಿ ನಟಿಸಲು ಬಾಲಿವುಡ್ ನಟ, ನಟಿಯರು ಸಾಲುಗಟ್ಟಿ ನಿಂತಿದ್ದಾರೆ. ಕಳೆದ ಕೆಲ ವರ್ಷಗಳಿಂದ ಅಂತೂ ದಕ್ಷಿಣ ಭಾರತ ಚಿತ್ರರಂಗದ ಬಗ್ಗೆ ಹೊಗಳಿಕೆಗಳ ಸುರಿಮಳೆಯನ್ನೇ ಸುರಿಸಲಾಗುತ್ತಿದೆ. ಅದರಲ್ಲೂ ತೆಲುಗು ಚಿತ್ರರಂಗದ ಬಗ್ಗೆ ಹಲವು ನಟರು ಬಹಳ ಒಳ್ಳೆಯ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ಬಹಳ ವರ್ಷಗಳಿಂದಲೂ ತೆಲುಗು ಚಿತ್ರರಂಗದಲ್ಲಿ ಬಾಲಿವುಡ್ ನಟಿಯರು ಬಂದು ನಟಿಸಿ ಹೋಗುತ್ತಿದ್ದಾರೆ. ಇದೀಗ ತೆಲುಗು ಚಿತ್ರರಂಗದಲ್ಲಿ ನಟಿಸಿರುವ ಬಾಲಿವುಡ್ ನಟಿಯೊಬ್ಬರು, ತೆಲುಗು ಚಿತ್ರರಂಗದಲ್ಲಿ ಆದ ಕೆಟ್ಟ ಅನುಭವದ ಬಗ್ಗೆ ಮಾತನಾಡಿದ್ದಾರೆ.

‘ಮಕಡೀ’ ಸಿನಿಮಾದಲ್ಲಿ ಬಾಲನಟಿಯಾಗಿ ನಟಿಸಿದ್ದ ಶ್ವೇತಾ ಬಸು, ತೆಲುಗಿನಲ್ಲಿ ‘ಕೊತ್ತ ಬಂಗಾರು ಲೋಕಂ ’ ಹೆಸರಿನ ಸಿನಿಮಾದಲ್ಲಿ ನಟಿಸಿದ್ದರು. ಶಾಲಾ ವಿದ್ಯಾರ್ಥಿಗಳ ಪ್ರೇಮ ಕತೆ ಹೊಂದಿದ್ದ ಈ ಸಿನಿಮಾದಲ್ಲಿ ಶ್ವೇತಾ ಅದ್ಬುತ ಅಭಿನಯ ನೀಡಿದ್ದರು. ಸಿನಿಮಾ ಸೂಪರ್ ಹಿಟ್ ಆಯ್ತು. ಆ ನಂತರವೂ ಶ್ವೇತಾ ಇನ್ನೂ ಕೆಲವು ತೆಲುಗು ಸಿನಿಮಾಗಳಲ್ಲಿ ನಟಿಸಿದರು. ಆದರೆ ಶ್ವೇತಾಗೆ ತೆಲುಗು ಚಿತ್ರರಂಗದಲ್ಲಿ ಒಳ್ಳೆಯ ಅನುಭವ ಆಗಲಿಲ್ಲವಂತೆ.

ಇತ್ತೀಚೆಗೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ಶ್ವೇತಾ ಬಸು, ತೆಲುಗು ಚಿತ್ರರಂಗದ ಸೆಟ್​ಗಳಲ್ಲಿ ಶ್ವೇತಾ ಬಸು ಪದೇ ಪದೇ ನಿಂದನೆ, ಮೂದಲಿಕೆ ಅನುಭವಿಸಿದ್ದರಂತೆ. ಶ್ವೇತಾ ಬಸು ಹೇಳಿರುವಂತೆ, ‘ನಾನು ಹೆಚ್ಚು ಎತ್ತರ ಇಲ್ಲದ ಕಾರಣ ಪದೇ ಪದೇ ನಾನು ನಿಂದನೆ ಕೇಳಬೇಕಾಗಿತ್ತು, ನಾನು ಕುಳ್ಳ ಇದ್ದೆ ನನ್ನೊಟ್ಟಿಗೆ ನಟಿಸುವ ನಟರು ಎತ್ತರ ಇರುತ್ತಿದ್ದರು’ ಎಂದಿದ್ದಾರೆ ಶ್ವೇತಾ ಬಸು.

ಇದನ್ನೂ ಓದಿ:ಸಿಸಿಎಲ್​ಗೂ ಮೊದಲು ಪುನೀತ್ ಸಮಾಧಿಗೆ ಟಾಲಿವುಡ್ ಸೆಲೆಬ್ರಿಟಿಗಳ ಭೇಟಿ

ಮುಂದುವರೆದು, ‘ನನಗೆ ಸರಿಯಾಗಿ ತೆಲುಗು ಮಾತನಾಡಲು ಬರುವುದಿಲ್ಲ ಎಂಬ ಕಾರಣಕ್ಕೂ ಸಹ ಸಾಕಷ್ಟು ಬೈಸಿಕೊಂಡಿದ್ದೇನೆ. ಒಂದು ಸಿನಿಮಾ ಸೆಟ್​ನಲ್ಲಿ ನನ್ನ ಸಹನಟನಿಗೂ ತೆಲುಗು ಸರಿಯಾಗಿ ಮಾತನಾಡಲು ಬರುತ್ತಿರಲಿಲ್ಲ. ಆದರೆ ಚಿತ್ರತಂಡದವರು ನನ್ನನ್ನು ಬೈಯ್ಯುತ್ತಿದ್ದರು, ಆತನಿಗೆ ಏನೂ ಹೇಳುತ್ತಿರಲಿಲ್ಲ. ಒಂದು ತೆಲುಗು ಸಿನಿಮಾದಲ್ಲಿ ಮಾತ್ರ ನಾನು ಈ ಸಮಸ್ಯೆಯನ್ನು ಎದುರಿಸಿದೆ’ ಎಂದಿದ್ದಾರೆ ಶ್ವೇತಾ ಬಸು.

ಶ್ವೇತಾ ಬಸು, ಹಲವಾರು ತೆಲುಗು ಹಾಗೂ ತಮಿಳು ಸಿನಿಮಾಗಳಲ್ಲಿ ನಟಿಸಿದ್ದಾರೆ. ನಟ ನಾನಿ ಸೇರಿದಂತೆ ಕೆಲವು ಪ್ರಮುಖ ನಟರೊಟ್ಟಿಗೂ ಶ್ವೇತಾ ನಟಿಸಿದ್ದಾರೆ. ತೆಲುಗು, ತಮಿಳು ಮಾತ್ರವೇ ಅಲ್ಲದೆ ಒಂದು ಬೆಂಗಾಲಿ ಸಿನಿಮಾ ಹಾಗೂ ಹಲವಾರು ಹಿಂದಿ ಸಿನಿಮಾಗಳಲ್ಲಿ ಶ್ವೇತಾ ಬಸು ನಟಿಸಿದ್ದಾರೆ. 2022 ರಲ್ಲಿ ನಟಿಸಿದ್ದ ‘ಇಂಡಿಯಾ ಲಾಕ್​ಡೌನ್’ ಅವರ ಕೊನೆಯ ಸಿನಿಮಾ. ಇತ್ತೀಚೆಗೆ ಕೆಲ ವೆಬ್ ಸರಣಿಗಳಲ್ಲಿ ನಟಿಸುತ್ತಿದ್ದಾರೆ. 2014 ರಲ್ಲಿ ಹೈದರಾಬಾದ್​ನ ಹೋಟೆಲ್ ಒಂದರಿಂದ ನಟಿ ಶ್ವೇತಾ ಅವರನ್ನು ವ್ಯಭಿಚಾರ ಪ್ರಕರಣದಲ್ಲಿ ಬಂಧಿಸಲಾಗಿತ್ತು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು