AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Siddhanth Kapoor: ಬೆಂಗಳೂರು ಡ್ರಗ್ಸ್​ ಪಾರ್ಟಿಯಲ್ಲಿ ಸಿಕ್ಕಿಬಿದ್ದ ಶ್ರದ್ಧಾ ಕಪೂರ್​ ಅಣ್ಣ ಸಿದ್ಧಾಂತ್​ ಕಪೂರ್​ ಹಿನ್ನೆಲೆ ಏನು?

Shraddha Kapoor brother Siddhanth Kapoor: ಸಿದ್ಧಾಂತ್​ ಕಪೂರ್ ಅವರಿಗೆ ಸಂಕಷ್ಟ ಎದುರಾಗಿದೆ. ಹಲವು ಸಿನಿಮಾಗಳಲ್ಲಿ ನಟಿಸಿದರೂ ಹೆಚ್ಚು ಸುದ್ದಿಯಾಗದ ಅವರು ಈಗ ಡ್ರಗ್ಸ್​ ಕೇಸ್​ ವಿಚಾರದಲ್ಲಿ ಕುಖ್ಯಾತಿ ಪಡೆಯುವಂತಾಗಿದೆ.

Siddhanth Kapoor: ಬೆಂಗಳೂರು ಡ್ರಗ್ಸ್​ ಪಾರ್ಟಿಯಲ್ಲಿ ಸಿಕ್ಕಿಬಿದ್ದ ಶ್ರದ್ಧಾ ಕಪೂರ್​ ಅಣ್ಣ ಸಿದ್ಧಾಂತ್​ ಕಪೂರ್​ ಹಿನ್ನೆಲೆ ಏನು?
ಸಿದ್ಧಾಂತ್ ಕಪೂರ್, ಶ್ರದ್ಧಾ ಕಪೂರ್
TV9 Web
| Edited By: |

Updated on: Jun 13, 2022 | 11:29 AM

Share

ಚಿತ್ರರಂಗಕ್ಕೆ ಡ್ರಗ್ಸ್​ ಎಂಬುದು ಕಪ್ಪುಚುಕ್ಕೆ ಆಗಿದೆ. ಪ್ರತಿ ಬಾರಿ ರೇವ್​ ಪಾರ್ಟಿ ಮೇಲೆ ದಾಳಿ ನಡೆದಾಗ ಯಾರಾದರೊಬ್ಬರು ಸೆಲೆಬ್ರಿಟಿಗಳು ಸಿಕ್ಕಿ ಬೀಳುತ್ತಾರೆ. ಈಗ ಬಾಲಿವುಡ್​ನ ಖ್ಯಾತ ನಟಿ ಶ್ರದ್ಧಾ ಕಪೂರ್ (Shraddha Kapoor)​ ಅವರ ಸಹೋದರ ಸಿದ್ಧಾಂತ್​ ಕಪೂರ್​ ಅವರು ಈ ಕೇಸ್​ನಲ್ಲಿ ಸಿಲುಕಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಡ್ರಗ್ಸ್​ ಪಾರ್ಟಿ (Bengaluru Drugs Bust) ಬಯಲಿಗೆ ಬಂದಿದ್ದು, ಅನೇಕರನ್ನು ವಶಕ್ಕೆ ಪಡೆಯಲಾಗಿದೆ. ಸ್ಟಾರ್​ ಹೋಟೆಲ್​ವೊಂದರಲ್ಲಿ ಪಾರ್ಟಿ ನಡೆಯುತ್ತಿದ್ದಾಗ ಪೊಲೀಸರು ದಾಳಿ ಮಾಡಿದ್ದಾರೆ. ಈ ಪಾರ್ಟಿಯಲ್ಲಿ ಸಿದ್ಧಾಂತ್​ ಕಪೂರ್ ಇರುವುದು ತಿಳಿದುಬಂದಿದೆ. ಅವರನ್ನು ಕೂಡ ವಶಕ್ಕೆ ಪಡೆಯಲಾಗಿದ್ದು, ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದೆ. ಈ ವಿಚಾರ ಕೇಳಿ ಶ್ರದ್ಧಾ ಕಪೂರ್​ ಫ್ಯಾನ್ಸ್​ ಅಚ್ಚರಿಪಟ್ಟಿದ್ದಾರೆ. ಸಿದ್ಧಾಂತ್​ ಕಪೂರ್​ ಡ್ರಗ್ಸ್​ ಕೇಸ್ (Siddhanth Kapoor Drugs Case)​ ಯಾವ ಮಟ್ಟಕ್ಕೆ ಹೋಗಲಿದೆ ಎಂಬ ಕೌತುಕ ಮೂಡಿದೆ.

ಬೆಂಗಳೂರು ಡ್ರಗ್ಸ್​ ಪಾರ್ಟಿಯಲ್ಲಿ ಸಿಕ್ಕಿಬಿದ್ದಿರುವ ಸಿದ್ಧಾಂತ್​ ಕಪೂರ್​ ಅವರದ್ದು ಫಿಲ್ಮಿ ಹಿನ್ನೆಲೆಯ ಕುಟುಂಬ. ಅವರ ತಂದೆ ಶಕ್ತಿ ಕಪೂರ್​ ಅವರು ಬಾಲಿವುಡ್​ನಲ್ಲಿ ಜನಪ್ರಿಯ ನಟ. ಚಿತ್ರರಂಗದಲ್ಲಿ ಶಕ್ತಿ ಕಪೂರ್​ ಅವರ ಅನುಭವ ಅಪಾರ. ಸಿದ್ಧಾಂತ್​ ಅವರ ಸಹೋದರಿ ಶ್ರದ್ಧಾ ಕಪೂರ್​ ಅವರು ಈಗಾಗಲೇ ಹಿಂದಿ ಚಿತ್ರರಂಗದಲ್ಲಿ ತಮ್ಮ ಸಾಮರ್ಥ್ಯ ಏನು ಎಂಬುದನ್ನು ಸಾಬೀತುಪಡಿಸಿದ್ದಾರೆ. ಬಣ್ಣದ ಲೋಕದಲ್ಲಿ ಸಿದ್ಧಾಂತ್​ ಕಪೂರ್​ ಕೂಡ ಸಕ್ರಿಯರಾಗಿದ್ದಾರೆ. ಅದರ ನಡುವೆ ಅವರು ಡ್ರಗ್ಸ್​ ಸಹವಾಸ ಮಾಡಿರುವುದರಿಂದ ಸಂಕಷ್ಟ ಎದುರಾಗಿದೆ.

ನಟನೆ ಮತ್ತು ನಿರ್ದೇಶನದಲ್ಲಿ ಸಿದ್ಧಾಂತ್​ ಕಪೂರ್​ಗೆ ಆಸಕ್ತಿ:

ಇದನ್ನೂ ಓದಿ
Image
Drug Case: ಡ್ರಗ್ಸ್ ಪಾರ್ಟಿ ಆಯೋಜನೆ ಆರೋಪ: ಬಾಲಿವುಡ್‌ ನಟ ಸಿದ್ಧಾಂತ್​ ಕಪೂರ್ ಪೊಲೀಸರ ವಶಕ್ಕೆ
Image
Aryan Khan: ಡ್ರಗ್ಸ್​ ಪ್ರಕರಣದಿಂದ ಮುಕ್ತಿ ಸಿಕ್ಕ ಬೆನ್ನಲ್ಲೇ ಅಮೇರಿಕಾಗೆ ತೆರಳಲಿದ್ದಾರಾ ಆರ್ಯನ್ ಖಾನ್?
Image
ಡ್ರಗ್ಸ್​ ಕೇಸ್​ನಲ್ಲಿ ಸಿಕ್ಕಿಬಿದ್ದ ಮಗನ ಜತೆ ಹೆಮ್ಮೆಯಿಂದ ಪೋಸ್​ ಕೊಟ್ಟ ತಂದೆ; ನಗೆಪಾಟಲಿನ ವಿಡಿಯೋ ವೈರಲ್​
Image
ಬಾಲಿವುಡ್​ Drugs ದಂಧೆ ಆರೋಪ ಪ್ರಕರಣ: ಮೂವರು ನಟಿಯರಿಗೆ NCB ಸಮನ್ಸ್

ಶಕ್ತಿ ಕಪೂರ್​ ಅವರ ಮಗ ಎಂಬ ಕಾರಣಕ್ಕೆ ಸಿದ್ಧಾಂತ್ ಕಪೂರ್​ ಅವರಿಗೆ ಬಣ್ಣದ ಲೋಕದಲ್ಲಿ ಸುಲಭವಾಗಿ ಅವಕಾಶ ಸಿಕ್ಕಿತು. ಆದರೆ ನಟನೆಗಿಂತಲೂ ಮೊದಲು ಅವರು ಆಯ್ಕೆ ಮಾಡಿಕೊಂಡಿದ್ದು ನಿರ್ದೇಶನದ ವಿಭಾಗವನ್ನು. 2006ರಲ್ಲಿ ಬಂದ ‘ಭಾಗಂ ಭಾಗ್​’ ಚಿತ್ರಕ್ಕೆ ಅವರು ಸಹಾಯಕ ನಿರ್ದೇಶಕನಾಗಿದ್ದರು. ‘ಚುಪ್​ ಚುಪ್​ಕೇ’, ‘ಭೂಲ್​ ಭುಲಯ್ಯ’, ‘ಡೋಲ್​’ ಮುಂತಾದ ಸಿನಿಮಾಗಳಿಗೂ ಅವರು ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದರು.

ನಟನಾಗಿಯೂ ಸಿದ್ಧಾಂತ್​ ಕಪೂರ್​ ಅವರು ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ. ಆದರೆ ದೊಡ್ಡ ಮಟ್ಟದಲ್ಲಿ ಅವರಿಗೆ ಜನಪ್ರಿಯತೆ ಸಿಕ್ಕಿಲ್ಲ. ‘ಹೆಲೋ ಚಾರ್ಲಿ’, ‘ಅಗ್ಲಿ’, ‘ಜಝ್ಬಾ’, ‘ಹಸೀನಾ ಪಾರ್ಕರ್​’ ಸೇರಿ ಹಲವು ಸಿನಿಮಾಗಳಲ್ಲಿ ಅವರು ಬಣ್ಣ ಹಚ್ಚಿದ್ದಾರೆ. ವೆಬ್​ ಸಿರೀಸ್​ ಹಾಗೂ ಮ್ಯೂಸಿಕ್​ ವಿಡಿಯೋದಲ್ಲೂ ಕಾಣಿಸಿಕೊಂಡ ಅನುಭವ ಅವರಿಗೆ ಇದೆ. ಆಗೆಲ್ಲ ಹೆಚ್ಚು ಸುದ್ದಿಯಾಗದ ಅವರು ಈಗ ಡ್ರಗ್ಸ್​ ಕೇಸ್​ ವಿಚಾರದಲ್ಲಿ ಕುಖ್ಯಾತಿ ಪಡೆಯುವಂತಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Web contact
Web contact

TV9 Kannada

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು