AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇದು ಅಸಾಧ್ಯ’; ಮಗ ಸಿದ್ಧಾಂತ್​​ ಕಪೂರ್​ ಡ್ರಗ್ಸ್​ ಸೇವಿಸಿದ್ದಾರಲ್ಲ ಅಂತ ಕೇಳಿದ್ದಕ್ಕೆ ತಂದೆ ಶಕ್ತಿ ಕಪೂರ್​ ಹೇಳಿದ್ದಿಷ್ಟು​

Siddhanth Kapoor Drugs Case: ಖಾಸಗಿ ಹೋಟೆಲ್​ನಲ್ಲಿ ಪಾರ್ಟಿ ಮಾಡಿದ ಎಲ್ಲರನ್ನೂ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದೆ. ಈ ವೇಳೆ ಸಿದ್ಧಾಂತ್​ ಕಪೂರ್​ ಕೂಡ ಮಾದಕ ವಸ್ತು ಸೇವಿಸಿರುವುದು ಖಚಿತವಾಗಿದೆ.

‘ಇದು ಅಸಾಧ್ಯ’; ಮಗ ಸಿದ್ಧಾಂತ್​​ ಕಪೂರ್​ ಡ್ರಗ್ಸ್​ ಸೇವಿಸಿದ್ದಾರಲ್ಲ ಅಂತ ಕೇಳಿದ್ದಕ್ಕೆ ತಂದೆ ಶಕ್ತಿ ಕಪೂರ್​ ಹೇಳಿದ್ದಿಷ್ಟು​
ಸಿದ್ಧಾಂತ್ ಕಪೂರ್, ಶಕ್ತಿ ಕಪೂರ್
TV9 Web
| Edited By: |

Updated on:Jun 13, 2022 | 12:33 PM

Share

ಮಕ್ಕಳು ಮಾಡುವ ತಪ್ಪಿನಿಂದಾಗಿ ಅವರ ತಂದೆ-ತಾಯಿ ಕೂಡ ತಲೆ ತಗ್ಗಿಸಬೇಕಾಗುತ್ತದೆ. ಅಷ್ಟೇ ಅಲ್ಲ, ಇಡೀ ಕುಟುಂಬಕ್ಕೆ ಮುಜುಗರ ಆಗುತ್ತದೆ. ನಟ ಸಿದ್ಧಾಂತ್​ ಕಪೂರ್ (Siddhanth Kapoor)​ ಅವರು ಡ್ರಗ್ಸ್​ ಕೇಸ್​ನಲ್ಲಿ ಸಿಕ್ಕಿಬಿದ್ದಿರುವುದು ಅವರ ಕುಟುಂಬಕ್ಕೆ ತಲೆ ನೋವಾಗಿದೆ. ಸಿದ್ಧಾಂತ್​ ಕಪೂರ್​ ಅವರ ತಂದೆ ಶಕ್ತಿ ಕಪೂರ್​ ಅವರು ಬಾಲಿವುಡ್​ನ ಜನಪ್ರಿಯ ನಟ. ಹಲವಾರು ಸಿನಿಮಾಗಳಲ್ಲಿ ನಟಿಸಿದ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಆದರೆ ಅವರ ಪುತ್ರ ಸಿದ್ಧಾಂತ್​ ಕಪೂರ್​ ಈಗ ಬೆಂಗಳೂರಿನಲ್ಲಿ ಡ್ರಗ್ಸ್​ ಪಾರ್ಟಿ (Bengaluru Drugs Party) ಮಾಡಿ ಹೆಸರು ಕೆಡಿಸಿಕೊಂಡಿದ್ದಾರೆ. ಭಾನುವಾರ (ಜೂನ್​ 12) ತಡರಾತ್ರಿ ಈ ಪಾರ್ಟಿ ನಡೆದಿದೆ. ರೇವ್​ ಪಾರ್ಟಿಯಲ್ಲಿ ಡ್ರಗ್ಸ್​ ಬಳಕೆ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಪೊಲೀಸರು ಅನೇಕರನ್ನು ಬಂಧಿಸಿದ್ದಾರೆ. ಈ ಘಟನೆ ಕುರಿತಂತೆ ಮಾಧ್ಯಮಗಳಿಗೆ ಶಕ್ತಿ ಕಪೂರ್​ (Shakti Kapoor) ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಖಾಸಗಿ ಹೋಟೆಲ್​ನಲ್ಲಿ ಪಾರ್ಟಿ ಮಾಡಿದ ಎಲ್ಲರನ್ನೂ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದೆ. ಈ ವೇಳೆ ಸಿದ್ಧಾಂತ್​ ಕಪೂರ್​ ಕೂಡ ಮಾದಕ ವಸ್ತು ಸೇವಿಸಿರುವುದು ಖಚಿತವಾಗಿದೆ. ಈ ವಿಚಾರವಾಗಿ ಪ್ರತಿಕ್ರಿಯೆ ಪಡೆಯಲು ಶಕ್ತಿ ಕಪೂರ್​ ಅವರನ್ನು ‘ಇಟೈಮ್ಸ್​’ ಸಂಪರ್ಕಿಸಿದೆ. ‘ಇದು ಅಸಾಧ್ಯ. ಅಷ್ಟು ಮಾತ್ರ ನಾನು ಹೇಳಬಲ್ಲೆ’ ಎಂದು ಶಕ್ತಿ ಕಪೂರ್​ ಹೇಳಿರುವುದಾಗಿ ವರದಿ ಆಗಿದೆ.

ಬೆಂಗಳೂರಿಗೆ ಬಂದು ಪಾರ್ಟಿಯಲ್ಲಿ ಭಾಗವಹಿಸುವ ಬಗ್ಗೆ ಸಿದ್ಧಾಂತ್​ ಕಪೂರ್​ ಅವರು ತಮ್ಮ ಕುಟುಂಬದವರಿಗೆ ಸರಿಯಾಗಿ ಮಾಹಿತಿ ನೀಡಿರಲಿಲ್ಲ. ಬೆಂಗಳೂರಿನ ಯಾವ ಹೋಟೆಲ್​ನಲ್ಲಿ ಸಿದ್ಧಾಂತ್​ ಉಳಿದುಕೊಂಡಿದ್ದಾರೆ ಎಂಬುದು ಕೂಡ ಫ್ಯಾಮಿಲಿಯವರಿಗೆ ತಿಳಿದಿರಲಿಲ್ಲ ಎಂದು ವರದಿಯಲ್ಲಿ ವಿವರಿಸಲಾಗಿದೆ. ಒಟ್ಟಿನಲ್ಲಿ ಶಕ್ತಿ ಕಪೂರ್​ ಕುಟುಂಬಕ್ಕೆ ಈ ಘಟನೆಯಿಂದ ಮುಜುಗರ ಆದಂತಾಗಿದೆ.

ಇದನ್ನೂ ಓದಿ
Image
Siddhanth Kapoor: ಬೆಂಗಳೂರು ಡ್ರಗ್ಸ್​ ಪಾರ್ಟಿಯಲ್ಲಿ ಸಿಕ್ಕಿಬಿದ್ದ ಶ್ರದ್ಧಾ ಕಪೂರ್​ ಅಣ್ಣ ಸಿದ್ಧಾಂತ್​ ಕಪೂರ್​ ಹಿನ್ನೆಲೆ ಏನು?
Image
Drug Case: ಡ್ರಗ್ಸ್ ಪಾರ್ಟಿ ಆಯೋಜನೆ ಆರೋಪ: ಬಾಲಿವುಡ್‌ ನಟ ಸಿದ್ಧಾಂತ್​ ಕಪೂರ್ ಪೊಲೀಸರ ವಶಕ್ಕೆ
Image
Aryan Khan: ಡ್ರಗ್ಸ್​ ಪ್ರಕರಣದಿಂದ ಮುಕ್ತಿ ಸಿಕ್ಕ ಬೆನ್ನಲ್ಲೇ ಅಮೇರಿಕಾಗೆ ತೆರಳಲಿದ್ದಾರಾ ಆರ್ಯನ್ ಖಾನ್?
Image
ಬಾಲಿವುಡ್​ Drugs ದಂಧೆ ಆರೋಪ ಪ್ರಕರಣ: ಮೂವರು ನಟಿಯರಿಗೆ NCB ಸಮನ್ಸ್

ಸಿದ್ಧಾಂತ್​ ಕಪೂರ್ ಅವರ ತಂಗಿ ಶ್ರದ್ಧಾ ಕಪೂರ್ ಅವರು ಬಾಲಿವುಡ್​ನಲ್ಲಿ ಸ್ಟಾರ್​ ನಟಿಯಾಗಿ ಮಿಂಚುತ್ತಿದ್ದಾರೆ. ಈ ಹಿಂದೆ ಅವರು ಕೂಡ ಎನ್​ಸಿಬಿ ಕಚೇರಿಯ ಮೆಟ್ಟಿಲು ಹತ್ತಿದ್ದರು. ಸುಶಾಂತ್​ ಸಿಂಗ್​ ರಜಪೂತ್​ ಸಾವಿನ ತನಿಖೆಯ ವೇಳೆ ಬಾಲಿವುಡ್​ ಡ್ರಗ್ಸ್​ ಕೇಸ್​ ಪುರಾಣ ಬಯಲಾಗಿತ್ತು. ಆ ಸಂಬಂಧ ಶ್ರದ್ಧಾ ಕಪೂರ್​ ಅವರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ತಮ್ಮ ಮೇಲಿನ ಆರೋಪಗಳೆಲ್ಲವೂ ಸುಳ್ಳು ಎಂದು ಅವರು ಹೇಳಿದ್ದರು. ಈಗ ಅವರ ಸಹೋದರ ಸಿದ್ಧಾಂತ್​ ಕಪೂರ್​ ಡ್ರಗ್ಸ್​ ಪಾರ್ಟಿ ಮಾಡಿ ಪೊಲೀಸರ ಅತಿಥಿ ಆಗಿರುವುದರಿಂದ ಶಕ್ತಿ ಕಪೂರ್​ ಕುಟುಂಬಕ್ಕೆ ಸಂಕಷ್ಟ ಶುರುವಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:33 pm, Mon, 13 June 22

Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?