AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನದ ಪ್ಯಾಲೆಸ್​ನಲ್ಲಿ ಕಿಯಾರಾ-ಸಿದ್ದಾರ್ಥ್ ಮದುವೆ; ಇಶಾ ಅಂಬಾನಿ ವಿಶೇಷ ಅತಿಥಿ

ಕಿಯಾರಾ ಹಾಗೂ ಸಿದ್ದಾರ್ಥ್ ಮದುವೆ ಆಗುತ್ತಿದ್ದಾರೆ. ಈ ಜೋಡಿ ರಾಜಸ್ಥಾನದ ಜೈಸಲ್ಮೇರ್​ನಲ್ಲಿರುವ ಸೂರ್ಯಗಢ ಪ್ಯಾಲೇಸ್​ನಲ್ಲಿ ಮದುವೆ ಆಗಲಿದೆ.

ರಾಜಸ್ಥಾನದ ಪ್ಯಾಲೆಸ್​ನಲ್ಲಿ ಕಿಯಾರಾ-ಸಿದ್ದಾರ್ಥ್ ಮದುವೆ; ಇಶಾ ಅಂಬಾನಿ ವಿಶೇಷ ಅತಿಥಿ
ಸಿದ್ದಾರ್ಥ್​-ಕಿಯಾರಾ
ರಾಜೇಶ್ ದುಗ್ಗುಮನೆ
|

Updated on:Feb 03, 2023 | 7:54 AM

Share

ನಟಿ ಕಿಯಾರಾ ಅಡ್ವಾಣಿ (Kiara Advani) ಹಾಗೂ ನಟ ಸಿದ್ದಾರ್ಥ್​ ಮಲ್ಹೋತ್ರ ಇಬ್ಬರೂ ಮದುವೆ ಆಗುತ್ತಿದ್ದಾರೆ. ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಈ ಜೋಡಿ ಈಗ ಹೊಸ ಬಾಳಿಗೆ ಕಾಲಿಡುವ ಸಂಭ್ರಮದಲ್ಲಿದೆ. ರಾಜಸ್ಥಾನದಲ್ಲಿ ಇವರು ಮದುವೆ ಆಗಲಿದ್ದಾರೆ. ಖ್ಯಾತ ಉದ್ಯಮಿ ಮುಕೇಶ್ ಅಂಬಾನಿ (Mukesh Ambani) ಮಗಳು ಇಶಾ ಅಂಬಾನಿ ಈ ಮದುವೆಗೆ ವಿಶೇಷ ಅತಿಥಿಯಾಗಿ ಆಗಮಿಸಲಿದ್ದಾರೆ. ಫೆಬ್ರವರಿ 6ರಂದು ವಿವಾಹ ಕಾರ್ಯಗಳು ನಡೆಯಲಿವೆ. ಸದ್ಯ, ಮದುವೆಗೆ ಭರದ ಸಿದ್ಧತೆಗಳು ನಡೆಯುತ್ತಿವೆ.

ಬಾಲಿವುಡ್​ನಲ್ಲಿ ಸಾಲು ಸಾಲು ವಿವಾಹಗಳು ನಡೆಯುತ್ತಿವೆ. 2021ರಲ್ಲಿ ಕತ್ರಿನಾ ಕೈಫ್ ಹಾಗೂ ವಿಕ್ಕಿ ಕೌಶಲ್ ಮದುವೆ ಆದರು. 2022ರಲ್ಲಿ ಆಲಿಯಾ ಭಟ್​-ರಣಬೀರ್ ಕಪೂರ್ ಹಸೆಮಣೆ ಏರಿದರು. ಇತ್ತೀಚೆಗೆ ಬಾಲಿವುಡ್ ನಟಿ ಅಥಿಯಾ ಶೆಟ್ಟಿ ಹಾಗೂ ಕೆಎಲ್​ ರಾಹುಲ್ ವಿವಾಹ ನಡೆಯಿತು. ಈಗ ಕಿಯಾರಾ ಹಾಗೂ ಸಿದ್ದಾರ್ಥ್ ಸರದಿ. ಈ ಜೋಡಿ ರಾಜಸ್ಥಾನದ ಜೈಸಲ್ಮೇರ್​ನಲ್ಲಿರುವ ಸೂರ್ಯಗಢ ಪ್ಯಾಲೇಸ್​ನಲ್ಲಿ ಮದುವೆ ಆಗಲಿದೆ.

ಸದ್ಯ ಮದುವೆ ತಯಾರಿಗಳು ನಡೆಯುತ್ತಿವೆ. ಸಿದ್ದಾರ್ಥ್ ಹಾಗೂ ಕಿಯಾರಾ ಶಾಪಿಂಗ್​ನಲ್ಲಿ ಬ್ಯುಸಿ ಆಗಿದ್ದಾರೆ. ಬಾಲಿವುಡ್​ ಫೋಟೋಗ್ರಾಫರ್​ಗಳು ಮದುವೆ ನಡೆಯುವ ಸ್ಥಳಕ್ಕೆ ತೆರಳಿದ್ದಾರೆ. ಇಶಾ ಅಂಬಾನಿ ಕೂಡ ಮದುವೆಗೆ ಹಾಜರಾಗಲಿದ್ದಾರೆ. ಕಿಯಾರಾ ಹಾಗೂ ಇಶಾ ಚಿಕ್ಕವಯಸ್ಸಿನಿಂದ ಫ್ರೆಂಡ್ಸ್​. ಹೀಗಾಗಿ, ಗೆಳತಿ ಮದುವೆಗೆ ಅವರು ಹಾಜರಿ ಹಾಕಲಿದ್ದಾರೆ.

ಇದನ್ನೂ ಓದಿ
Image
‘ವೈಯಕ್ತಿಕ ಜೀವನದಲ್ಲಿ ನಾನು ಖುಷಿಯಾಗಿದ್ದೇನೆ’; ಬ್ರೇಕಪ್​ನಿಂದ ಚೇತರಿಸಿಕೊಂಡ ಕಿಯಾರಾ ಅಡ್ವಾಣಿ
Image
ಪಡ್ಡೆಗಳ ನಿದ್ದೆ ಕದ್ದ ಕಿಯಾರಾ ಅಡ್ವಾಣಿ; ಇಲ್ಲಿದೆ ಫೋಟೋ ಗ್ಯಾಲರಿ
Image
ಕಿಯಾರಾ ಜತೆಗಿನ ಬ್ರೇಕಪ್​ ವದಂತಿಗೆ ತುಪ್ಪ ಸುರಿದ ಸಿದ್ದಾರ್ಥ್​ ಮಲ್ಹೋತ್ರಾ; ಫ್ಯಾನ್ಸ್​ ಊಹಿಸಿದ್ದೇನು?
Image
ಬಾಲಿವುಡ್​ನಲ್ಲಿ ಮತ್ತೊಂದು ಬ್ರೇಕಪ್​; ಸಿದ್ದಾರ್ಥ್​-ಕಿಯಾರಾ ಪ್ರೇಮ್​ ಕಹಾನಿಗೆ ಸ್ಯಾಡ್ ಎಂಡಿಂಗ್

ಈ ಮದುವೆಗೆ ಬಾಲಿವುಡ್​ನ ಅನೇಕರು ಹಾಜರಿ ಹಾಕಲಿದ್ದಾರೆ. ಕರಣ್ ಜೋಹರ್ ಅವರು ಸಿದ್ದಾರ್ಥ್ ಹಾಗೂ ಕಿಯಾರಾ ಅವರನ್ನು ಚಿತ್ರರಂಗಕ್ಕೆ ಪರಿಚಯಿಸಿದವರು. ಇಬ್ಬರಿಗೂ ಕರಣ್ ಅವರೇ ಗಾಡ್ ಫಾದರ್. ಹೀಗಾಗಿ ಕರಣ್​ ಈ ವಿಶೇಷ ಕ್ಷಣವನ್ನು ಕಣ್ತುಂಬಿಕೊಳ್ಳಲಿದ್ದಾರೆ. ಕರಣ್ ಮಾತ್ರವಲ್ಲದೆ  ರೋಹಿತ್ ಶೆಟ್ಟಿ ಮೊದಲಾದವರು ಈ ಮದುವೆಗೆ ಹಾಜರಿ ಹಾಕಲಿದ್ದಾರೆ.

ಇದನ್ನೂ ಓದಿ: ‘ಪಠಾಣ್​’ ನಿರ್ದೇಶಕನಿಂದ ಮತ್ತೊಂದು ಮಲ್ಟಿ ಸ್ಟಾರರ್​ ಪ್ಲ್ಯಾನ್​; ಪ್ರಭಾಸ್ ಜತೆ ಹಿಂದಿ ಹೀರೋ

‘ಶೇರ್ಷಾ’ ಸಿನಿಮಾದಲ್ಲಿ ಕಿಯಾರಾ ಹಾಗೂ ಸಿದ್ದಾರ್ಥ್ ಮೊದಲ ಬಾರಿಗೆ ಒಟ್ಟಾಗಿ ನಟಿಸಿದರು. ಈ ಸಿನಿಮಾದ ಸೆಟ್​​ನಲ್ಲಿ ಇಬ್ಬರ ಮಧ್ಯೆ ಪ್ರೀತಿ ಮೂಡಿತ್ತು. ಈಗ ಇವರ ಪ್ರೀತಿಗೆ ಹೊಸ ಅರ್ಥ ನೀಡಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:53 am, Fri, 3 February 23

ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ