AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶೇರ್​ಷಾ’ ಬೆನ್ನಲ್ಲೇ ಅಭಿಮಾನಿಗಳಿಗೆ ಸಿದ್ಧಾರ್ಥ್​-ಕರಣ್ ಕಡೆಯಿಂದ ಹೊಸ ನ್ಯೂಸ್​

‘ಸ್ಟುಡೆಂಟ್​ ಆಫ್​ ದಿ ಇಯರ್​’ ಸಿನಿಮಾ ಮೂಲಕ ಬಣ್ಣದ ಬದುಕು ಆರಂಭಿಸಿದ ಸಿದ್ಧಾರ್ಥ್​, ನಂತರ ಸಾಕಷ್ಟು ಚಿತ್ರಗಳಲ್ಲಿ ನಟಿಸಿದ್ದಾರೆ. ಆದರೆ, ಅವರ ನಟನೆಯನ್ನು ಇಷ್ಟು ದೊಡ್ಡ ಮಟ್ಟಕ್ಕೆ ಹೊಗಳುವಂತೆ ಮಾಡಿದ್ದು ‘ಶೇರ್​ಷಾ’ ಸಿನಿಮಾ.

‘ಶೇರ್​ಷಾ’ ಬೆನ್ನಲ್ಲೇ ಅಭಿಮಾನಿಗಳಿಗೆ ಸಿದ್ಧಾರ್ಥ್​-ಕರಣ್ ಕಡೆಯಿಂದ ಹೊಸ ನ್ಯೂಸ್​
‘ಶೇರ್​ಷಾ’ ಬೆನ್ನಲ್ಲೇ ಅಭಿಮಾನಿಗಳಿಗೆ ಸಿದ್ಧಾರ್ಥ್​-ಕರಣ್ ಕಡೆಯಿಂದ ಹೊಸ ನ್ಯೂಸ್​
TV9 Web
| Updated By: ಮದನ್​ ಕುಮಾರ್​|

Updated on: Aug 27, 2021 | 7:15 AM

Share

ಸಿದ್ಧಾರ್ಥ್​ ಮಲ್ಹೋತ್ರಾ ನಟನೆಯ ‘ಶೇರ್​ಷಾ’ ಬಯೋಪಿಕ್​ ಸಾಕಷ್ಟು ಮೆಚ್ಚುಗೆ ಗಳಿಸಿಕೊಳ್ಳುತ್ತಿದೆ. ಕ್ಯಾಪ್ಟನ್​ ವಿಕ್ರಮ್​ ಬಾತ್ರ ಅವರ ಜೀವನ ಆಧರಿಸಿ ಸಿದ್ಧಗೊಂಡ ಈ ಸಿನಿಮಾ ಸಿದ್ಧಾರ್ಥ್​ ವೃತ್ತಿ ಜೀವನಕ್ಕೆ ಮೈಲೇಜ್​ ನೀಡಿದೆ. ಕರಣ್​ ಜೋಹರ್ ಒಡೆತನದ ಧರ್ಮ ಪ್ರೊಡಕ್ಷನ್​ ಈ ಸಿನಿಮಾ ನಿರ್ಮಾಣ ಮಾಡಿತ್ತು. ಈಗ ಇವರ ಕಡೆಯಿಂದ ಹೊಸ ಅಪ್​ಡೇಟ್​ ಒಂದು ಕೇಳಿ ಬಂದಿದೆ.

ಸಿದ್ಧಾರ್ಥ್​ ಅವರನ್ನು ಚಿತ್ರರಂಗಕ್ಕೆ ಪರಿಚಯಿಸಿದ್ದು ಕರಣ್​ ಜೋಹರ್. ‘ಸ್ಟುಡೆಂಟ್​ ಆಫ್​ ದಿ ಇಯರ್​’ ಸಿನಿಮಾ ಮೂಲಕ ಬಣ್ಣದ ಬದುಕು ಆರಂಭಿಸಿದ ಸಿದ್ಧಾರ್ಥ್​, ನಂತರ ಸಾಕಷ್ಟು ಚಿತ್ರಗಳಲ್ಲಿ ನಟಿಸಿದ್ದಾರೆ. ಆದರೆ, ಅವರ ನಟನೆಯನ್ನು ಇಷ್ಟು ದೊಡ್ಡ ಮಟ್ಟಕ್ಕೆ ಹೊಗಳುವಂತೆ ಮಾಡಿದ್ದು ‘ಶೇರ್​ಷಾ’ ಸಿನಿಮಾ. ಈ ಚಿತ್ರದಲ್ಲಿನ ಅವರ ಅದ್ಭುತ ನಟನೆ ಸಾಕಷ್ಟು ಜನರಿಗೆ ಇಷ್ಟವಾಗಿದೆ. ಹೀಗಾಗಿ, ಅವರಿಗೆ ಬರೋ ಆಫರ್​ಗಳ ಸಂಖ್ಯೆ ಕೂಡ ಹೆಚ್ಚಿದೆ.

ಈಗ ಧರ್ಮ ಪ್ರೊಡಕ್ಷನ್​ ಜತೆ ಸಿದ್ಧಾರ್ಥ್ ಮತ್ತೆ ಕೈ ಜೋಡಿಸುತ್ತಿದ್ದಾರೆ ಎನ್ನಲಾಗಿದೆ. ಇದು ಆ್ಯಕ್ಷನ್​ ಸಿನಿಮಾ ಆಗಿದ್ದು, ಹಿಂದೆಂದೂ ಕಾಣಿಸದ ಅವತಾರದಲ್ಲಿ ಸಿದ್ಧಾರ್ಥ್​ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಇದು ದೊಡ್ಡ ಬಜೆಟ್​ನಲ್ಲಿ ಸಿದ್ಧಗೊಳ್ಳುತ್ತಿರುವ ಸಿನಿಮಾ. ಈ ಕಾರಣಕ್ಕೆ ಸಿನಿಮಾ ಬಗ್ಗೆ ಸಾಕಷ್ಟು ಹೈಪ್​ ಸೃಷ್ಟಿ ಆಗುತ್ತಿದೆ.

ಪುಷ್ಕರ್​ ಓಝಾ ಹಾಗೂ ಸಾಗರ್​ ಅಂಬ್ರೆ ಅವರು ಒಟ್ಟಾಗಿ ಈ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ‘ಕಿಕ್’​, ‘ವಾರ್’​ ಸಿನಿಮಾಗಳಿಗೆ ಪುಷ್ಕರ್​ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದರೆ, ಸಾಗರ್​ ಅವರು ‘ಉರಿ’, ‘ಧಡಕ್’​ ಮುಂತಾದ ಚಿತ್ರಗಳಲ್ಲಿ ಸಹಾಯಕರಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.  ಕಳೆದ ಒಂದು ವರ್ಷದಿಂದ ಈ ಸಿನಿಮಾಗಾಗಿ ಸಿದ್ಧತೆ ನಡೆದಿದೆ ಎನ್ನಲಾಗಿದೆ.

ಧರ್ಮ ಪ್ರೊಡಕ್ಷನ್​ ಜತೆ ಸಿದ್ಧಾರ್ಥ್​ಗೆ ಇದು ಎಂಟನೇ ಸಿನಿಮಾ. ‘ಹಸೀ ತೋ ಫಸೀ’, ‘ಬ್ರದರ್ಸ್’​ ಮೊದಲಾದ ಸಿನಿಮಾ​ಗಳಲ್ಲಿ ಒಟ್ಟಾಗಿ ಕೆಲಸ ಮಾಡಿದ್ದಾರೆ ಸಿದ್ಧಾರ್ಥ್​ ಹಾಗೂ ಕರಣ್​. ಈಗ ಇಬ್ಬರೂ ಮತ್ತೆ ಒಂದಾಗುತ್ತಿದ್ದಾರೆ ಎನ್ನುವ ವಿಚಾರ ಸಹಜವಾಗಿಯೇ ಕುತೂಹಲ ಹೆಚ್ಚಿಸಿದೆ.

ಇದನ್ನೂ ಓದಿ: ಬಿಗ್​ಬಾಸ್​ ಒಟಿಟಿ ನಿರೂಪಕ ಕರಣ್ ಜೋಹರ್ ವಿರುದ್ಧ ಜೋರಾಯ್ತು ಅಸಮಾಧಾನ; ಕಾರಣವೇನು?

ಆಹಾ ಏನಿಂಥ ಅಚ್ಚರಿ; ಬದ್ಧ ವೈರಿ ಕರಣ್​ ಜೋಹರ್​ ಕೆಲಸಕ್ಕೆ ಮನಸಾರೆ ಹೊಗಳಿದ ಕಂಗನಾ ರಣಾವತ್​

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!