AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌತ್​ ಸ್ಟಾರ್​ ಅಲ್ಲು ಅರ್ಜುನ್​ಗೆ ಧನ್ಯವಾದ ಹೇಳಿದ ಸಿದ್ದಾರ್ಥ್​ ಮಲ್ಹೋತ್ರಾ

‘ಶೇರ್​ಷಾ’ ಬಯೋಪಿಕ್​ ಸಾಕಷ್ಟು ಮೆಚ್ಚುಗೆ ಗಳಿಸಿಕೊಳ್ಳುತ್ತಿದೆ. ಕ್ಯಾಪ್ಟನ್​ ವಿಕ್ರಮ್​ ಬಾತ್ರ ಅವರ ಜೀವನ ಆಧರಿಸಿ ಸಿದ್ಧಗೊಂಡ ಈ ಸಿನಿಮಾ ಸಿದ್ದಾರ್ಥ್​ ವೃತ್ತಿ ಜೀವನಕ್ಕೆ ಮೈಲೇಜ್​ ನೀಡಿದೆ.

ಸೌತ್​ ಸ್ಟಾರ್​ ಅಲ್ಲು ಅರ್ಜುನ್​ಗೆ ಧನ್ಯವಾದ ಹೇಳಿದ ಸಿದ್ದಾರ್ಥ್​ ಮಲ್ಹೋತ್ರಾ
ಸೌತ್​ ಸ್ಟಾರ್​ ಅಲ್ಲು ಅರ್ಜುನ್​ಗೆ ಧನ್ಯವಾದ ಹೇಳಿದ ಸಿದ್ದಾರ್ಥ್​ ಮಲ್ಹೋತ್ರಾ
TV9 Web
| Edited By: |

Updated on: Sep 03, 2021 | 3:23 PM

Share

ಸಿದ್ದಾರ್ಥ್​ ಮಲ್ಹೋತ್ರಾ ಅವರ ನಟನೆಯನ್ನು ಮೆಚ್ಚಿಕೊಂಡವರು ಸಾಕಷ್ಟು ಮಂದಿ ಇದ್ದಾರೆ. ಅವರ ಅಭಿಮಾನಿ ಬಳಗ ತುಂಬಾನೇ ದೊಡ್ಡದಿದೆ. ಕೆಲ ಸ್ಟಾರ್​ ನಟರು ಕೂಡ ಅವರ ನಟನೆಯನ್ನು​ ಮೆಚ್ಚಿಕೊಂಡಿದ್ದಾರೆ. ಇತ್ತೀಚೆಗೆ ಟಾಲಿವುಡ್​ ಸ್ಟಾರ್​ ಅಲ್ಲು ಅರ್ಜುನ್​ ನಟ ಸಿದ್ದಾರ್ಥ್​ ಮಲ್ಹೋತ್ರಾ ಅವರನ್ನು ಪ್ರಶಂಸಿಸಿದ್ದರು. ಈಗ ಇದಕ್ಕೆ ಸಿದ್ದಾರ್ಥ್​ ಧನ್ಯವಾದ ಹೇಳಿದ್ದಾರೆ.

‘ಶೇರ್​ಷಾ’ ಬಯೋಪಿಕ್​ ಸಾಕಷ್ಟು ಮೆಚ್ಚುಗೆ ಗಳಿಸಿಕೊಳ್ಳುತ್ತಿದೆ. ಕ್ಯಾಪ್ಟನ್​ ವಿಕ್ರಮ್​ ಬಾತ್ರ ಅವರ ಜೀವನ ಆಧರಿಸಿ ಸಿದ್ಧಗೊಂಡ ಈ ಸಿನಿಮಾ ಸಿದ್ದಾರ್ಥ್​ ವೃತ್ತಿ ಜೀವನಕ್ಕೆ ಮೈಲೇಜ್​ ನೀಡಿದೆ. ಈ ಸಿನಿಮಾ ವೀಕ್ಷಿಸಿದ್ದ ಅಲ್ಲು ಅರ್ಜುನ್​ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಸಿದ್ದಾರ್ಥ್​ ಮಲ್ಹೋತ್ರಾ ನಟನೆಯನ್ನು ಅವರು ಮನಃಪೂರ್ವಕವಾಗಿ ಹೊಗಳಿದ್ದರು.

‘ಸಂಪೂರ್ಣ ‘ಶೇರ್​​ಷಾ’ ತಂಡಕ್ಕೆ ಅಭಿನಂದನೆಗಳು. ಹೃದಯ ಮುಟ್ಟುವ ಚಿತ್ರ. ಸಿದ್ದಾರ್ಥ್​ ವೃತ್ತಿಜೀವನದಲ್ಲೇ ಅವರು ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಇಡೀ ಶೋ ಅವರದ್ದೇ. ಕಿಯಾರಾ ಕೂಡ ಅದ್ಭುತವಾಗಿ ನಟಿಸಿದ್ದಾರೆ. ಚಿತ್ರದ ಎಲ್ಲಾ ತಂತ್ರಜ್ಞರಿಗೆ ನನ್ನ ಗೌರವ’ ಎಂದಿದ್ದರು ಅಲ್ಲು.

ಈ ಟ್ವೀಟ್​​ಅನ್ನು ಸಿದ್ದಾರ್ಥ್​ ರೀ-ಟ್ವೀಟ್​ ಮಾಡಿಕೊಂಡಿದ್ದಾರೆ. ಅಲ್ಲದೆ, ಅವರು ಸಿದ್ದಾರ್ಥ್​ಗೆ ಧನ್ಯವಾದ ಹೇಳಿದ್ದಾರೆ. ಸದ್ಯ, ಈ ಟ್ವೀಟ್​ ನೋಡಿದ ಅಭಿಮಾನಿಗಳು ಖುಷಿಯಾಗಿದ್ದಾರೆ.

ಸಿದ್ದಾರ್ಥ್​ ಹಾಗೂ ಅಲ್ಲು ಅರ್ಜುನ್​ ಮುಂಬರುವ ಸಿನಿಮಾಗೆ ಒಂದು ಸಾಮ್ಯತೆ ಇದೆ. ಇಬ್ಬರ ಚಿತ್ರಕ್ಕೂ ರಶ್ಮಿಕಾ ನಾಯಕಿ. ಸಿದ್ದಾರ್ಥ್​ ಮಲ್ಹೋತ್ರಾ ಅಭಿನಯದ ‘ಮಿಷನ್​ ಮಜ್ನು’ ಚಿತ್ರದಲ್ಲಿ ರಶ್ಮಿಕಾ ನಟಿಸುತ್ತಿದ್ದಾರೆ. ಅಲ್ಲು ಅರ್ಜುನ್​ ನಟನೆಯ ‘ಪುಷ್ಪ ಪಾರ್ಟ್​ 1’ಗೂ ರಶ್ಮಿಕಾ ಹೀರೋಯಿನ್.

‘ಸ್ಟುಡೆಂಟ್​ ಆಫ್​ ದಿ ಇಯರ್​’ ಸಿನಿಮಾ ಮೂಲಕ ಬಣ್ಣದ ಬದುಕು ಆರಂಭಿಸಿದ ಸಿದ್ದಾರ್ಥ್​, ನಂತರ ಸಾಕಷ್ಟು ಚಿತ್ರಗಳಲ್ಲಿ ನಟಿಸಿದ್ದಾರೆ. ಆದರೆ, ಅವರ ನಟನೆಯನ್ನು ಇಷ್ಟು ದೊಡ್ಡ ಮಟ್ಟಕ್ಕೆ ಹೊಗಳುವಂತೆ ಮಾಡಿದ್ದು ‘ಶೇರ್​ಷಾ’ ಸಿನಿಮಾ. ಇದಾದ ನಂತರದಲ್ಲಿ ಅವರಿಗೆ ಬರುತ್ತಿರೋ ಆಫರ್​ಗಳ ಸಂಖ್ಯೆ ಹೆಚ್ಚಿದೆ.

ಇದನ್ನೂ ಓದಿ: ಪ್ರೇಯಸಿ ಮಡಿಲಲ್ಲೇ ಪ್ರಾಣ ಬಿಟ್ರಾ ಸಿದ್ದಾರ್ಥ್​? ಹೃದಯಾಘಾತ ಆಗೋದಕ್ಕೂ ಮುನ್ನ ನಡೆದಿದ್ದೇನು? ಇಲ್ಲಿದೆ ವಿವರ

ಸೌತ್ ಹೀರೋಗಳಲ್ಲಿ ಅಲ್ಲು ಅರ್ಜುನ್​ ನಂ.1, ಯಶ್​ಗೆ 5ನೇ ಸ್ಥಾನ; ಇದು ಯಾವ​ ಹಣಾಹಣಿ?

Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!