AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟಾಕ್ಸಿಕ್’ ಟ್ರೇಲರ್; ಕಿಯಾರಾ ಟ್ರೋಲ್ ಮಾಡಿದವರ ಬಾಯಿ ಮುಚ್ಚಿಸಿದ ಪತಿ ಸಿದ್ದಾರ್ಥ್

ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ಟಾಕ್ಸಿಕ್' ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದ್ದು, ನಟಿ ಕಿಯಾರಾ ಅಡ್ವಾಣಿ ಅಭಿನಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಪತಿ ಸಿದ್ಧಾರ್ಥ್ ಮಲ್ಹೋತ್ರಾ ಇನ್‌ಸ್ಟಾಗ್ರಾಮ್‌ನಲ್ಲಿ ಟ್ರೇಲರ್ ಹಂಚಿಕೊಂಡು ಪತ್ನಿಯ ಶ್ರಮವನ್ನು ಶ್ಲಾಘಿಸಿದ್ದಾರೆ. ಈ ಚಿತ್ರವು ಕಿಯಾರಾ ವೃತ್ತಿಜೀವನದಲ್ಲಿ ಹೊಸ ಮೈಲಿಗಲ್ಲಾಗಲಿದೆ ಎಂದು ಸಿದ್ಧಾರ್ಥ್ ಭವಿಷ್ಯ ನುಡಿದಿದ್ದಾರೆ.

‘ಟಾಕ್ಸಿಕ್’ ಟ್ರೇಲರ್; ಕಿಯಾರಾ ಟ್ರೋಲ್ ಮಾಡಿದವರ ಬಾಯಿ ಮುಚ್ಚಿಸಿದ ಪತಿ ಸಿದ್ದಾರ್ಥ್
ಕಿಯಾರಾ-ಸಿದ್ದಾರ್ಥ್
ರಾಜೇಶ್ ದುಗ್ಗುಮನೆ
|

Updated on:Aug 10, 2026 | 7:11 AM

Share

ಮುಖ್ಯಾಂಶಗಳು

  • ಟಾಕ್ಸಿಕ್ ಟ್ರೇಲರ್ ನಲ್ಲಿ ಕಿಯಾರಾ ಅಡ್ವಾಣಿ ಅಭಿನಯಕ್ಕೆ ಸಿದ್ಧಾರ್ಥ್ ಮೆಚ್ಚುಗೆ
  • ಯಶ್ ಅಭಿನಯದ ಟಾಕ್ಸಿಕ್ ಸಿನಿಮಾದಲ್ಲಿ ಕಿಯಾರಾ ಅಡ್ವಾಣಿ ಪಾತ್ರ
  • ಮಗಳ ಜನನದ ನಂತರ ಕಿಯಾರಾ ಅಡ್ವಾಣಿ ಕಂಬ್ಯಾಕ್ ಸಿನಿಮಾ ಟಾಕ್ಸಿಕ್

ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾದ (Toxic Movie) ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದೆ. ಈ ಚಿತ್ರದಲ್ಲಿ ನಯನತಾರಾ ಹಾಗೂ ರುಕ್ಮಿಣಿ ವಸಂತ್ ಸೇರಿದಂತೆ ಪ್ರಮುಖ ನಟಿಯರ ದಂಡೇ ಇದೆ. ಚಿತ್ರದಲ್ಲಿ ಕಿಯಾರಾ ಅಡ್ವಾಣಿ ಅಭಿನಯ ಪ್ರೇಕ್ಷಕರ ಗಮನ ಸೆಳೆದಿದೆ. ಇದೀಗ ಕಿಯಾರಾ ಪತಿ ಸಿದ್ಧಾರ್ಥ್ ಮಲ್ಹೋತ್ರಾ ಕೂಡ ಟ್ರೇಲರ್ ನೋಡಿ ಪತ್ನಿಯ ಅಭಿನಯಕ್ಕೆ ಜೈ ಎಂದಿದ್ದಾರೆ.

ಸಿದ್ಧಾರ್ಥ್ ಮಲ್ಹೋತ್ರಾ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಟ್ರೇಲರ್ ಶೇರ್ ಮಾಡಿದ್ದಾರೆ. ಕಿಯಾರಾ ಅವರ ಶ್ರಮ ಹಾಗೂ ಶ್ರದ್ಧೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಈ ಸಿನಿಮಾ ಕಿಯಾರಾ ವೃತ್ತಿಜೀವನದಲ್ಲೇ ಅತ್ಯುತ್ತಮ ಚಿತ್ರವಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ನಿರ್ದೇಶಕಿ ಗೀತು ಮೋಹನ್ ದಾಸ್ ಮತ್ತು ನಟ ಯಶ್ ತಂಡಕ್ಕೆ ಶುಭ ಹಾರೈಸಿದ್ದಾರೆ. ದೊಡ್ಡ ಪರದೆ ಮೇಲೆ ಆಗಸ್ಟ್ 26ರಂದು ಸಿನಿಮಾ ನೋಡಲು ಕಾತರದಿಂದ ಕಾಯುತ್ತಿರುವುದಾಗಿ ಬರೆದುಕೊಂಡಿದ್ದಾರೆ.

‘ಟಾಕ್ಸಿಕ್’ ಸಿನಿಮಾ ಬಗ್ಗೆ ಸಿದ್ದಾರ್ಥ್ ಯಾವುದೇ ಪೋಸ್ಟ್ ಮಾಡಿರಲಿಲ್ಲ. ಕಿಯಾರಾ ಬೋಲ್ಡ್ ಅವತಾರ ಕಂಡು ಅವರು ಸುಮ್ಮನಾಗಿರಬಹುದು ಎಂದು ಅನೇಕರು ಹಹೇಳಿದ್ದು ಇದೆ. ಆದರೆ, ಈಗ ಅವರ ಪೋಸ್ಟ್ ಎಲ್ಲಾ ಟ್ರೋಲರ್​​ಗಳ ಬಾಯಿ ಮುಚ್ಚಿಸಿದೆ.

ಟ್ರೇಲರ್ ಲಾಂಚ್ ಕಾರ್ಯಕ್ರಮದಲ್ಲಿ ಕಿಯಾರಾ ಕೂಡ ಮಾತನಾಡಿದ್ದಾರೆ. ಈ ಸಿನಿಮಾದಲ್ಲಿ ನಾದಿಯಾ ಪಾತ್ರ ಮಾಡಲು ಗೀತು ಮತ್ತು ಯಶ್ ಅವಕಾಶ ನೀಡಿದರು. ನನ್ನ ಮೇಲಿಟ್ಟ ನಂಬಿಕೆಗೆ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದು ಹೇಳಿದರು. ‘ಟಾಕ್ಸಿಕ್’ ಸಿನಿಮಾ ನನ್ನ ವೃತ್ತಿಜೀವನಕ್ಕೆ ಹೊಸ ತಿರುವು ನೀಡಲಿದೆ. ಈ ಚಿತ್ರದ ನಂತರ ನನ್ನ ಕೆರಿಯರ್‌ನಲ್ಲಿ ದೊಡ್ಡ ಬದಲಾವಣೆ ಆಗಲಿದೆ. ಒಬ್ಬ ನಟಿಯಾಗಿ ಈ ಪಾತ್ರ ನನಗೆ ತುಂಬಾ ವಿಶೇಷವಾಗಿದೆ ಎಂದು ಕಿಯಾರಾ ಹರ್ಷ ವ್ಯಕ್ತಪಡಿಸಿದರು.

ಮಗಳ ಜನನದ ನಂತರ ಕಿಯಾರಾ ಮತ್ತೆ ಬೆಳ್ಳಿತೆರೆಗೆ ಮರಳುತ್ತಿದ್ದಾರೆ. 2025 ರಲ್ಲಿ ಸಿದ್ಧಾರ್ಥ್ ಹಾಗೂ ಕಿಯಾರಾಗೆ ಸರಾಯಾ ಎಂಬ ಹೆಣ್ಣು ಮಗು ಜನಿಸಿತ್ತು. ಸುದೀರ್ಘ ಬ್ರೇಕ್ ನಂತರ ಕಿಯಾರಾ ಈ ಬಿಗ್ ಪ್ರಾಜೆಕ್ಟ್ ಮೂಲಕ ಕಂಬ್ಯಾಕ್ ಮಾಡುತ್ತಿದ್ದಾರೆ. ಹೀಗಾಗಿ ಅಭಿಮಾನಿಗಳಲ್ಲಿ ಈ ಸಿನಿಮಾದ ಮೇಲೆ ಅಪಾರ ನಿರೀಕ್ಷೆಗಳು ಮೂಡಿವೆ. ಕಿಯಾರಾ ಅವರ ಹೊಸ ಲುಕ್ ಎಲ್ಲರ ಗಮನ ಸೆಳೆಯುತ್ತಿದೆ.

ಇದನ್ನೂ ಓದಿ: ‘ಟಾಕ್ಸಿಕ್’ ಸಿನಿಮಾಕ್ಕೆ ರಾಧಿಕಾ ಪಂಡಿತ್ ಕೊಟ್ಟಿರುವ ಕೊಡುಗೆ ಏನು? 

‘ಟಾಕ್ಸಿಕ್’ ಗೀತು ಮೋಹನ್ ದಾಸ್ ನಿರ್ದೇಶನದ ಪ್ಯಾನ್ ಇಂಡಿಯಾ ಆಕ್ಷನ್ ಥ್ರಿಲ್ಲರ್ ಆಗಿದೆ. ಈ ಸಿನಿಮಾವನ್ನು ಕನ್ನಡ ಹಾಗೂ ಇಂಗ್ಲಿಷ್‌ನಲ್ಲಿ ಏಕಕಾಲಕ್ಕೆ ಶೂಟ್ ಮಾಡಲಾಗಿದೆ. ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಿಗೆ ಡಬ್ ಮಾಡಲಾಗಿದೆ. ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್ ಜಂಟಿಯಾಗಿ ಈ ಚಿತ್ರ ನಿರ್ಮಿಸಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:09 am, Mon, 10 August 26

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ