AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಮಾನಿಗೆ 50 ಲಕ್ಷ ರೂಪಾಯಿ ದೋಖಾ; ಕೂಡಲೇ ಪ್ರತಿಕ್ರಿಯೆ ನೀಡಿದ ನಟ ಸಿದ್ದಾರ್ಥ್​ ಮಲ್ಹೋತ್ರಾ

ಸಿದ್ದಾರ್ಥ್​ ಮಲ್ಹೋತ್ರಾ ಅವರ ಪ್ರಾಣಕ್ಕೆ ಅಪಾಯ ಇದೆ ಎಂದು ಅಪ್ಪಣ ಅಭಿಮಾನಿಯೊಬ್ಬರನ್ನು ನಂಬಿಸಲಾಗಿದೆ. ನಂತರ ಆ ಅಭಿಮಾನಿಯಿಂದ 50 ಲಕ್ಷ ರೂಪಾಯಿ ವಸೂಲಿ ಮಾಡಲಾಗಿದೆ. ಇದೊಂದು ಹಗರಣ ಎಂಬುದು ಗೊತ್ತಾದ ನಂತರ ಆ ಅಭಿಮಾನಿಯು ಎಲ್ಲ ವಿಚಾರವನ್ನು ಸೋಶಿಯಲ್​ ಮೀಡಿಯಾದಲ್ಲಿ ಬಹಿರಂಗಪಡಿಸಿದ್ದಾರೆ. ಈ ಘಟನೆ ಬಗ್ಗೆ ಸಿದ್ದಾರ್ಥ್​ ಮಲ್ಹೋತ್ರಾ ಸ್ಪಷ್ಟನೆ ನೀಡಿದ್ದಾರೆ.

ಅಭಿಮಾನಿಗೆ 50 ಲಕ್ಷ ರೂಪಾಯಿ ದೋಖಾ; ಕೂಡಲೇ ಪ್ರತಿಕ್ರಿಯೆ ನೀಡಿದ ನಟ ಸಿದ್ದಾರ್ಥ್​ ಮಲ್ಹೋತ್ರಾ
ಸಿದ್ದಾರ್ಥ್​ ಮಲ್ಹೋತ್ರಾ
ಮದನ್​ ಕುಮಾರ್​
|

Updated on:Jul 03, 2024 | 10:04 PM

Share

ಬಾಲಿವುಡ್​ (Bollywood) ಮಂದಿಗೆ ಒಂದು ಶಾಕಿಂಗ್​ ಸುದ್ದಿ ಕೇಳಿಬಂದಿದೆ. ಸ್ಟಾರ್ ನಟ ಸಿದ್ದಾರ್ಥ್​ ಮಲ್ಹೋತ್ರಾ ಅವರ ಅಭಿಮಾನಿಯೊಬ್ಬರಿಗೆ ಬರೋಬ್ಬರಿ 50 ಲಕ್ಷ ರೂಪಾಯಿ ದೋಖಾ ಮಾಡಲಾಗಿದೆ. ಈ ಘಟನೆಯ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಸಖತ್​ ಚರ್ಚೆ ಆಗುತ್ತಿದೆ. ನಟನ ಆಪ್ತರು ಒಂದು ಹೇಳಿಕೊಂಡ ವ್ಯಕ್ತಿಗಳು ಮಿನೂ ವಾಸುದೇವನ್​ ಎಂಬ ಅಭಿಮಾನಿಗೆ ಮೋಸ ಮಾಡಿದ್ದಾರೆ. ಬೇರೆ ಯಾರೂ ಕೂಡ ಇಂಥ ಮೋಸದ ಜಾಲಕ್ಕೆ ಸಿಲುಕಬಾರದು ಎಂಬ ಉದ್ದೇಶದಿಂದ ಸಿದ್ದಾರ್ಥ್​ ಮಲ್ಹೋತ್ರ (Sidharth Malhotra) ಅವರು ಪ್ರತಿಕ್ರಿಯೆ ನೀಡಿದ್ದಾರೆ. ವಂಚನೆ ಜಾಲದ ವಿಷಯ ತಮ್ಮ ಗಮನಕ್ಕೆ ಬಂದಿದೆ ಎಂದು ಅವರು ಹೇಳಿದ್ದಾರೆ.

‘ನನ್ನ ಅಭಿಮಾನಿಗಳು ಅಂತ ಹೇಳಿಕೊಂಡು ಅಥವಾ ನಮ್ಮ ಕುಟುಂಬದ ಆಪ್ತರು ಅಂತ ಹೇಳಿಕೊಂಡು ಜನರಿಂದ ಹಣ ಕೇಳುತ್ತಿರುವ ಮೋಸದ ಜಾಲದ ಬಗ್ಗೆ ನನಗೆ ತಿಳಿದುಬಂದಿದೆ. ಈ ಬಗ್ಗೆ ನಾನು ಸ್ಪಷ್ಟನೆ ನೀಡುತ್ತಿದ್ದೇನೆ. ಇಂಥ ಮೋಸಗಳನ್ನು ನಾನಾಗಲಿ, ನನ್ನ ಕುಟುಂಬದವರಾಗಿ ಅಥವಾ ನನ್ನ ತಂಡದವರಾಗಲಿ ಬೆಂಬಲಿಸುವುದಿಲ್ಲ’ ಎಂದು ಸಿದ್ದಾರ್ಥ್​ ಮಲ್ಹೋತ್ರಾ ಅವರು ಪೋಸ್ಟ್​ ಮಾಡಿದ್ದಾರೆ.

‘ಇಂಥ ವಿಷಯಗಳಲ್ಲಿ ವ್ಯವಹರಿಸುವಾಗ ಎಲ್ಲರೂ ಎಚ್ಚರಿಕೆಯಿಂದ ಇರಬೇಕು ಎಂದು ನಾನು ಒತ್ತಾಯಿಸುತ್ತೇನೆ. ಅನುಮಾನಾಸ್ಪದವಾದ ಸಂದೇಶಗಳು ಬಂದಾಗ ಅದನ್ನು ಸಂಬಂಧಪಟ್ಟವರ ಗಮನಕ್ಕೆ ತನ್ನಿ ಹಾಗೂ ತಪ್ಪು ಮಾಹಿತಿ ಹರಡುವುದನ್ನು ತಪ್ಪಿಸಿ. ಯಾವಾಗಲೂ ಅಭಿಮಾನಿಗಳೇ ನನಗೆ ದೊಡ್ಡ ಶಕ್ತಿ. ನಿಮ್ಮ ನಂಬಿಕೆ ಮತ್ತು ಸುರಕ್ಷತೆಯೇ ನನ್ನ ಮೊದಲ ಆದ್ಯತೆ’ ಎಂದು ಸಿದ್ದಾರ್ಥ್​ ಮಲ್ಹೋತ್ರಾ ಅವರು ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ಚಿತ್ರರಂಗದಲ್ಲಿ 10 ವರ್ಷ ಪೂರೈಸಿದ ನಟಿ ಕಿಯಾರಾ ಅಡ್ವಾಣಿ; ಭರ್ಜರಿ ಸೆಲೆಬ್ರೇಷನ್​

ಏನಿದು ಘಟನೆ?

ಸಿದ್ದಾರ್ಥ್​ ಮಲ್ಹೋತ್ರಾ ಅವರ ದೊಡ್ಡ ಅಭಿಮಾನಿ ಮಿನೂ ವಾಸುದೇವನ್​. ಅವರು ಅಮೆರಿಕದಲ್ಲಿ ವಾಸಿಸುತ್ತಿದ್ದಾರೆ. ಸಿದ್ದಾರ್ಥ್​ ಅವರ ಜೀವನಕ್ಕೆ ಪತ್ನಿ ಕಿಯಾರಾ ಅಡ್ವಾಣಿಯಿಂದಲೇ ಅಪಾಯ ಇದೆ ಎಂದು ಕೆಲವು ಕಿಡಿಗೇಡಿಗಳು ಮಿನೂ ವಾಸುದೇವನ್​ಗೆ ತಿಳಿಸಿದ್ದಾರೆ. ಅಲ್ಲದೇ, ಸಿದ್ದಾರ್ಥ್​ ಅವರ ಪ್ರಾಣ ಉಳಿಸಲು ಸಹಾಯ ಮಾಡುತ್ತೇವೆ ಎಂದು ನಂಬಿಸಿ ಮಿನೂ ಅವರಿಂದ 50 ಲಕ್ಷಕ್ಕೂ ಅಧಿಕ ಹಣ ವಸೂಲಿ ಮಾಡಿದ್ದಾರೆ. ಇದು ಮೋಸದ ಜಾಲ ಎಂಬುದು ಗೊತ್ತಾದ ಬಳಿಕ ಮಿನೂ ಅವರು ಸೋಶಿಯಲ್​ ಮೀಡಿಯಾದಲ್ಲಿ ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:03 pm, Wed, 3 July 24

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ