AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಮಾನಿಗೆ 50 ಲಕ್ಷ ರೂಪಾಯಿ ದೋಖಾ; ಕೂಡಲೇ ಪ್ರತಿಕ್ರಿಯೆ ನೀಡಿದ ನಟ ಸಿದ್ದಾರ್ಥ್​ ಮಲ್ಹೋತ್ರಾ

ಸಿದ್ದಾರ್ಥ್​ ಮಲ್ಹೋತ್ರಾ ಅವರ ಪ್ರಾಣಕ್ಕೆ ಅಪಾಯ ಇದೆ ಎಂದು ಅಪ್ಪಣ ಅಭಿಮಾನಿಯೊಬ್ಬರನ್ನು ನಂಬಿಸಲಾಗಿದೆ. ನಂತರ ಆ ಅಭಿಮಾನಿಯಿಂದ 50 ಲಕ್ಷ ರೂಪಾಯಿ ವಸೂಲಿ ಮಾಡಲಾಗಿದೆ. ಇದೊಂದು ಹಗರಣ ಎಂಬುದು ಗೊತ್ತಾದ ನಂತರ ಆ ಅಭಿಮಾನಿಯು ಎಲ್ಲ ವಿಚಾರವನ್ನು ಸೋಶಿಯಲ್​ ಮೀಡಿಯಾದಲ್ಲಿ ಬಹಿರಂಗಪಡಿಸಿದ್ದಾರೆ. ಈ ಘಟನೆ ಬಗ್ಗೆ ಸಿದ್ದಾರ್ಥ್​ ಮಲ್ಹೋತ್ರಾ ಸ್ಪಷ್ಟನೆ ನೀಡಿದ್ದಾರೆ.

ಅಭಿಮಾನಿಗೆ 50 ಲಕ್ಷ ರೂಪಾಯಿ ದೋಖಾ; ಕೂಡಲೇ ಪ್ರತಿಕ್ರಿಯೆ ನೀಡಿದ ನಟ ಸಿದ್ದಾರ್ಥ್​ ಮಲ್ಹೋತ್ರಾ
ಸಿದ್ದಾರ್ಥ್​ ಮಲ್ಹೋತ್ರಾ
ಮದನ್​ ಕುಮಾರ್​
|

Updated on:Jul 03, 2024 | 10:04 PM

Share

ಬಾಲಿವುಡ್​ (Bollywood) ಮಂದಿಗೆ ಒಂದು ಶಾಕಿಂಗ್​ ಸುದ್ದಿ ಕೇಳಿಬಂದಿದೆ. ಸ್ಟಾರ್ ನಟ ಸಿದ್ದಾರ್ಥ್​ ಮಲ್ಹೋತ್ರಾ ಅವರ ಅಭಿಮಾನಿಯೊಬ್ಬರಿಗೆ ಬರೋಬ್ಬರಿ 50 ಲಕ್ಷ ರೂಪಾಯಿ ದೋಖಾ ಮಾಡಲಾಗಿದೆ. ಈ ಘಟನೆಯ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಸಖತ್​ ಚರ್ಚೆ ಆಗುತ್ತಿದೆ. ನಟನ ಆಪ್ತರು ಒಂದು ಹೇಳಿಕೊಂಡ ವ್ಯಕ್ತಿಗಳು ಮಿನೂ ವಾಸುದೇವನ್​ ಎಂಬ ಅಭಿಮಾನಿಗೆ ಮೋಸ ಮಾಡಿದ್ದಾರೆ. ಬೇರೆ ಯಾರೂ ಕೂಡ ಇಂಥ ಮೋಸದ ಜಾಲಕ್ಕೆ ಸಿಲುಕಬಾರದು ಎಂಬ ಉದ್ದೇಶದಿಂದ ಸಿದ್ದಾರ್ಥ್​ ಮಲ್ಹೋತ್ರ (Sidharth Malhotra) ಅವರು ಪ್ರತಿಕ್ರಿಯೆ ನೀಡಿದ್ದಾರೆ. ವಂಚನೆ ಜಾಲದ ವಿಷಯ ತಮ್ಮ ಗಮನಕ್ಕೆ ಬಂದಿದೆ ಎಂದು ಅವರು ಹೇಳಿದ್ದಾರೆ.

‘ನನ್ನ ಅಭಿಮಾನಿಗಳು ಅಂತ ಹೇಳಿಕೊಂಡು ಅಥವಾ ನಮ್ಮ ಕುಟುಂಬದ ಆಪ್ತರು ಅಂತ ಹೇಳಿಕೊಂಡು ಜನರಿಂದ ಹಣ ಕೇಳುತ್ತಿರುವ ಮೋಸದ ಜಾಲದ ಬಗ್ಗೆ ನನಗೆ ತಿಳಿದುಬಂದಿದೆ. ಈ ಬಗ್ಗೆ ನಾನು ಸ್ಪಷ್ಟನೆ ನೀಡುತ್ತಿದ್ದೇನೆ. ಇಂಥ ಮೋಸಗಳನ್ನು ನಾನಾಗಲಿ, ನನ್ನ ಕುಟುಂಬದವರಾಗಿ ಅಥವಾ ನನ್ನ ತಂಡದವರಾಗಲಿ ಬೆಂಬಲಿಸುವುದಿಲ್ಲ’ ಎಂದು ಸಿದ್ದಾರ್ಥ್​ ಮಲ್ಹೋತ್ರಾ ಅವರು ಪೋಸ್ಟ್​ ಮಾಡಿದ್ದಾರೆ.

‘ಇಂಥ ವಿಷಯಗಳಲ್ಲಿ ವ್ಯವಹರಿಸುವಾಗ ಎಲ್ಲರೂ ಎಚ್ಚರಿಕೆಯಿಂದ ಇರಬೇಕು ಎಂದು ನಾನು ಒತ್ತಾಯಿಸುತ್ತೇನೆ. ಅನುಮಾನಾಸ್ಪದವಾದ ಸಂದೇಶಗಳು ಬಂದಾಗ ಅದನ್ನು ಸಂಬಂಧಪಟ್ಟವರ ಗಮನಕ್ಕೆ ತನ್ನಿ ಹಾಗೂ ತಪ್ಪು ಮಾಹಿತಿ ಹರಡುವುದನ್ನು ತಪ್ಪಿಸಿ. ಯಾವಾಗಲೂ ಅಭಿಮಾನಿಗಳೇ ನನಗೆ ದೊಡ್ಡ ಶಕ್ತಿ. ನಿಮ್ಮ ನಂಬಿಕೆ ಮತ್ತು ಸುರಕ್ಷತೆಯೇ ನನ್ನ ಮೊದಲ ಆದ್ಯತೆ’ ಎಂದು ಸಿದ್ದಾರ್ಥ್​ ಮಲ್ಹೋತ್ರಾ ಅವರು ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ಚಿತ್ರರಂಗದಲ್ಲಿ 10 ವರ್ಷ ಪೂರೈಸಿದ ನಟಿ ಕಿಯಾರಾ ಅಡ್ವಾಣಿ; ಭರ್ಜರಿ ಸೆಲೆಬ್ರೇಷನ್​

ಏನಿದು ಘಟನೆ?

ಸಿದ್ದಾರ್ಥ್​ ಮಲ್ಹೋತ್ರಾ ಅವರ ದೊಡ್ಡ ಅಭಿಮಾನಿ ಮಿನೂ ವಾಸುದೇವನ್​. ಅವರು ಅಮೆರಿಕದಲ್ಲಿ ವಾಸಿಸುತ್ತಿದ್ದಾರೆ. ಸಿದ್ದಾರ್ಥ್​ ಅವರ ಜೀವನಕ್ಕೆ ಪತ್ನಿ ಕಿಯಾರಾ ಅಡ್ವಾಣಿಯಿಂದಲೇ ಅಪಾಯ ಇದೆ ಎಂದು ಕೆಲವು ಕಿಡಿಗೇಡಿಗಳು ಮಿನೂ ವಾಸುದೇವನ್​ಗೆ ತಿಳಿಸಿದ್ದಾರೆ. ಅಲ್ಲದೇ, ಸಿದ್ದಾರ್ಥ್​ ಅವರ ಪ್ರಾಣ ಉಳಿಸಲು ಸಹಾಯ ಮಾಡುತ್ತೇವೆ ಎಂದು ನಂಬಿಸಿ ಮಿನೂ ಅವರಿಂದ 50 ಲಕ್ಷಕ್ಕೂ ಅಧಿಕ ಹಣ ವಸೂಲಿ ಮಾಡಿದ್ದಾರೆ. ಇದು ಮೋಸದ ಜಾಲ ಎಂಬುದು ಗೊತ್ತಾದ ಬಳಿಕ ಮಿನೂ ಅವರು ಸೋಶಿಯಲ್​ ಮೀಡಿಯಾದಲ್ಲಿ ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:03 pm, Wed, 3 July 24

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?