AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರಾಶಾದಾಯಕ ಓಪನಿಂಗ್ ಕಂಡ ‘ಯೋಧ’; ಮೊದಲ ದಿನ ಗಳಿಸಿದ್ದು ಕೇವಲ 4 ಕೋಟಿ ರೂಪಾಯಿ

ಸಿದ್ದಾರ್ಥ್ ಮಲ್ಹೋತ್ರಾ ಸಿನಿಮಾ ಎಂದರೆ ದೊಡ್ಡ ಮಟ್ಟದ ನಿರೀಕ್ಷೆ ಇರುತ್ತದೆ. ‘ಯೋಧ’ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇತ್ತು ಈ ಚಿತ್ರ ದೊಡ್ಡ ಓಪನಿಂಗ್ ಪಡೆಯಬಹುದು ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಲೆಕ್ಕಾಚಾರ ಸಂಪೂರ್ಣ ಉಲ್ಟಾ ಆಗಿದೆ.

ನಿರಾಶಾದಾಯಕ ಓಪನಿಂಗ್ ಕಂಡ ‘ಯೋಧ’; ಮೊದಲ ದಿನ ಗಳಿಸಿದ್ದು ಕೇವಲ 4 ಕೋಟಿ ರೂಪಾಯಿ
ಸಿದ್ದಾರ್ಥ್
ರಾಜೇಶ್ ದುಗ್ಗುಮನೆ
|

Updated on: Mar 16, 2024 | 8:38 AM

Share

ಸಿದ್ದಾರ್ಥ್ ಮಲ್ಹೋತ್ರ (Sidharth Malhotra) ನಟನೆಯ ‘ಯೋಧ’ ಚಿತ್ರಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಮೆಚ್ಚುಗೆ ವ್ಯಕ್ತವಾಗಿತ್ತು. ಸಿದ್ದಾರ್ಥ್ ಮಲ್ಹೋತ್ರ, ದಿಶಾ ಪಟಾಣಿ, ರಾಶಿ ಖನ್ನಾ ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರ ಅಂದುಕೊಂಡಿದ್ದಕ್ಕಿಂತಲೂ ಕಡಿಮೆ ಗಳಿಕೆ ಮಾಡಿದೆ. ಇದು ಕಳೆದ ವಾರ ರಿಲೀಸ್ ಆದ ‘ಶೈತಾನ್’ ಚಿತ್ರಕ್ಕೆ ವರದಾನ ಆಗುವ ಸಾಧ್ಯತೆ ಇದೆ. ‘ಯೋಧ’ ಸಿನಿಮಾ ಮೊದಲ ದಿನ ಗಳಿಕೆ ಮಾಡಿದ್ದು ಕೇವಲ 4.25 ಕೋಟಿ ರೂಪಾಯಿ ಮಾತ್ರ.

ಸಿದ್ದಾರ್ಥ್ ಮಲ್ಹೋತ್ರಾ ಸಿನಿಮಾ ಎಂದರೆ ದೊಡ್ಡ ಮಟ್ಟದ ನಿರೀಕ್ಷೆ ಇರುತ್ತದೆ. ‘ಯೋಧ’ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇತ್ತು ಈ ಚಿತ್ರ ದೊಡ್ಡ ಓಪನಿಂಗ್ ಪಡೆಯಬಹುದು ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಲೆಕ್ಕಾಚಾರ ಸಂಪೂರ್ಣ ಉಲ್ಟಾ ಆಗಿದೆ. ಈ ಸಿನಿಮಾಗೆ ನೀರಸ ಪ್ರತಿಕ್ರಿಯೆ ಸಿಕ್ಕಿದೆ. ಕಳೆದ ವಾರ ರಿಲೀಸ್ ಆದ ಅಜಯ್ ದೇವಗನ್, ಮಾಧವನ್ ಹಾಗೂ ಜ್ಯೋತಿಕಾ ನಟನೆಯ ‘ಶೈತಾನ್’ ಮೊದಲ ದಿನ 14 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಈ ಚಿತ್ರಕ್ಕಿಂತ 10 ಕೋಟಿ ರೂಪಾಯಿ ಕಡಿಮೆ ಗಳಿಕೆಯನ್ನು ಈ ಸಿನಿಮಾ ಮಾಡಿದೆ.

ಇದನ್ನೂ ಓದಿ: ‘ಒಂದೊಳ್ಳೆಯ ಹೈಜಾಕ್ ಸಿನಿಮಾ’; ‘ಯೋಧ’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ನೆಟ್ಟಿಗರು

‘ಯೋಧ’ ಸಿನಿಮಾದಲ್ಲಿ ಹೈಜಾಕ್ ಕಥೆ ಇದೆ. ಈ ಮೊದಲು ಈ ರೀತಿಯ ಅನೇಕ ಕಥೆಗಳು ಬಂದು ಹೋಗಿವೆ. ಈ ಕಾರಣಕ್ಕೆ ಜನರು ಅಷ್ಟಾಗಿ ಆಸಕ್ತಿ ತೋರಿಸುತ್ತಿಲ್ಲ ಎನ್ನಲಾಗಿದೆ. ಇನ್ನೂ ಕೆಲವರು ‘ಸಿನಿಮಾದ ಕಥೆ ಇನ್ನಷ್ಟು ಉತ್ತಮಗೊಳಿಸಬಹುದಿತ್ತು’ ಎನ್ನುವ ಅಭಿಪ್ರಾಯ ಹೊರ ಹಾಕಿದ್ದಾರೆ. ಇದು ಕೂಡ ಚಿತ್ರಕ್ಕೆ ಹಿನ್ನಡೆ ಉಂಟು ಮಾಡಿದೆ. ಇಂದು (ಮಾರ್ಚ್​ 16) ಹಾಗೂ ನಾಳೆ (ಮಾರ್ಚ್ 17) ಸಿನಿಮಾ ಎಷ್ಟು ಗಳಿಕೆ ಮಾಡಲಿದೆ ಎನ್ನುವ ಕುತೂಹಲ ಮೂಡಿದೆ. ಪುಷ್ಕರ್ ಓಜಾ ಹಾಗೂ ಸಾಗರ್ ಅಂಬ್ರೆ ಸಿನಿಮಾನ ಒಟ್ಟಾಗಿ ನಿರ್ದೇಶನ ಮಾಡಿದ್ದಾರೆ.  ಚಿತ್ರವನ್ನು ಕರಣ್ ಜೋಹರ್, ಹೀರೂ ಯಶ್ ಜೋಹರ್, ಅಪೂರ್ವ ಮೆಹ್ತಾ, ಶಶಾಂಕ್ ಖೈತಾನ್ ನಿರ್ಮಾಣ ಮಾಡಿದ್ದಾರೆ. ಚಿತ್ರದ ಗಳಿಕೆ ನೋಡಿದರೆ ಸಿನಿಮಾ ಮುಗ್ಗರಿಸುವ ಸೂಚನೆ ಸಿಕ್ಕಿದೆ .

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!