AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದಾರ್ಥ್​ ಶುಕ್ಲಾ ಶ್ರದ್ದಾಂಜಲಿ ಸಭೆ: ಅಭಿಮಾನಿಗಳಿಗೂ ಆಹ್ವಾನ ನೀಡಿದ ತಾಯಿ; ಇಲ್ಲಿದೆ ಮೀಟಿಂಗ್​ ಲಿಂಕ್​

ಸಿದ್ದಾರ್ಥ್​ ಶುಕ್ಲಾ ಕುಟುಂಬದವರು ಆಯೋಜಿಸುತ್ತಿರುವ ಶ್ರದ್ಧಾಂಜಲಿ ಸಭೆಯಲ್ಲಿ ಭಾಗವಹಿಸಲು ಎಲ್ಲ ಅಭಿಮಾನಿಗಳಿಗೆ ಅವಕಾಶ ನೀಡಲಾಗಿದೆ. ಜೂಮ್​ ಮೀಟಿಂಗ್​ ಮೂಲಕ ಎಲ್ಲರೂ ಪಾಲ್ಗೊಳ್ಳಬಹುದು.

ಸಿದ್ದಾರ್ಥ್​ ಶುಕ್ಲಾ ಶ್ರದ್ದಾಂಜಲಿ ಸಭೆ: ಅಭಿಮಾನಿಗಳಿಗೂ ಆಹ್ವಾನ ನೀಡಿದ ತಾಯಿ; ಇಲ್ಲಿದೆ ಮೀಟಿಂಗ್​ ಲಿಂಕ್​
ಸಿದ್ದಾರ್ಥ್​ ಶುಕ್ಲಾ
Follow us
TV9 Web
| Updated By: ಮದನ್​ ಕುಮಾರ್​

Updated on: Sep 06, 2021 | 1:31 PM

ಕಿರುತೆರೆಯ ಖ್ಯಾತ ನಟ ಸಿದ್ದಾರ್ಥ್​ ಶುಕ್ಲಾ ನಿಧನದಿಂದಾಗಿ ಅವರ ಇಡೀ ಅಭಿಮಾನಿ ಬಳಗ ಶೋಕ ಸಾಗರದಲ್ಲಿ ಮುಳುಗಿದೆ. 40ರ ಪ್ರಾಯದಲ್ಲಿ ಸಿದ್ದಾರ್ಥ್ ಅವರು ಹೀಗೆ ಅಕಾಲಿಕ ಮರಣಕ್ಕೆ ತುತ್ತಾಗುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ. ಫಿಟ್ನೆಸ್​ಗೆ ಹೆಚ್ಚು ಮಹತ್ವ ನೀಡುತ್ತಿದ್ದ ಅವರು ಹೃದಯಾಘಾತಕ್ಕೆ ಒಳಗಾದರು ಎಂಬುದನ್ನು ಅಭಿಮಾನಿಗಳಿಗೆ ನಂಬಲಾಗುತ್ತಿಲ್ಲ. ಸೆ.2ರ ಮುಂಜಾನೆ ಸಿದ್ದಾರ್ಥ್ ನಿಧನರಾದರು. ಇಂದಿಗೆ (ಸೆ.6) ನಾಲ್ಕು ದಿನ ಕಳೆದಿದೆ. ಈಗ ಅವರ ಕುಟುಂಬದವರು ಶ್ರದ್ಧಾಂಜಲಿ ಸಭೆ ನಡೆಸುತ್ತಿದ್ದಾರೆ. ವಿಶೇಷ ಎಂದರೆ ಈ ಸಭೆಗೆ ಅಭಿಮಾನಿಗಳಿಗೂ ಆಹ್ವಾನ ನೀಡಲಾಗಿದೆ.

ಕಿರುತೆರೆಯ ಹಲವು ಧಾರಾವಾಹಿಗಳಲ್ಲಿ ನಟಿಸಿದ ಸಿದ್ದಾರ್ಥ್​ ಶುಕ್ಲಾಗೆ ಅಪಾರ ಅಭಿಮಾನಿಗಳಿದ್ದಾರೆ. ಬಿಗ್​ ಬಾಸ್​ ಸೀಸನ್​ 13ರಲ್ಲಿ ಸ್ಪರ್ಧಿಸಿ ಗೆದ್ದ ಬಳಿಕವಂತೂ ಅವರ ಅಭಿಮಾನಿಗಳ ಸಂಖ್ಯೆ ಹೆಚ್ಚಿತು. ಅವರೆಲ್ಲರೂ ಸಿದ್ದಾರ್ಥ್​ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. ಈಗ ಸಿದ್ದಾರ್ಥ್​ ಕುಟುಂಬದವರು ಆಯೋಜಿಸುತ್ತಿರುವ ಶ್ರದ್ಧಾಂಜಲಿ ಸಭೆಗೆ ಭಾಗವಹಿಸಲು ಎಲ್ಲ ಅಭಿಮಾನಿಗಳಿಗೆ ಅವಕಾಶ ನೀಡಲಾಗಿದೆ. ಜೂಮ್​ ಮೀಟಿಂಗ್​ ಮೂಲಕ ಎಲ್ಲರೂ ಪಾಲ್ಗೊಳ್ಳಬಹುದು.

ನಟ ಕರಣ್​ವೀರ್​ ಬೊಹ್ರಾ ಅವರು ಈ ಬಗ್ಗೆ ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಮಾಹಿತಿ ನೀಡಿದ್ದು, ಜೂಮ್​ ಮೀಟಿಂಗ್​ನ ಲಿಂಕ್​ ಕೂಡ ಹಂಚಿಕೊಂಡಿದ್ದಾರೆ. ‘ಇಂದು ಸಂಜೆ 5 ಗಂಟೆಗೆ ಎಲ್ಲರೂ ಒಂದಾಗಿ ಸಿದ್ದಾರ್ಥ್​ ಶುಕ್ಲಾಗೆ ಶ್ರದ್ಧಾಂಜಲಿ ಸಲ್ಲಿಸೋಣ. ಅವರ ತಾಯಿ ರೀಟಾ, ಸಹೋದರಿಯರಾದ ನೀತು, ಪ್ರೀತಿ ಈ ಸಭೆ ಆಯೋಜಿಸುತ್ತಿದ್ದಾರೆ’ ಎಂದು ಕರಣ್​ವೀರ್​ ಬೊಹ್ರಾ ಪೋಸ್ಟ್​ ಮಾಡಿದ್ದಾರೆ.

ಸಿದ್ದಾರ್ಥ್​ ಶುಕ್ಲಾ ಜೊತೆ ನಟಿ ಶೆಹನಾಜ್​ ಗಿಲ್​ ಹೆಚ್ಚು ಆಪ್ತವಾಗಿದ್ದರು. ಇಬ್ಬರ ನಡುವೆ ಪ್ರೀತಿ ಇತ್ತು ಎಂಬುದು ಕೂಡ ಈಗ ರಹಸ್ಯವಾಗಿ ಉಳಿದಿಲ್ಲ. ಸಿದ್ದಾರ್ಥ್​ ನಿಧನದ ಬಳಿಕ ಶೆಹನಾಜ್​ ಅವರು ಮಾನಸಿಕವಾಗಿ ಕುಸಿದುಹೋಗಿದ್ದಾರೆ. ಅವರು ಈ ಶ್ರದ್ಧಾಂಜಲಿ ಸಭೆಯಲ್ಲಿ ಪಾಲ್ಗೊಳ್ಳುತ್ತಾರೋ ಇಲ್ಲವೋ ಎಂಬುದು ಇನ್ನೂ ಖಚಿತವಾಗಿಲ್ಲ.

‘ಇಂದು ಶೆಹನಾಜ್​ ಅವರನ್ನು ನೋಡಿದರೆ ಜೀವ ನಡುಗುತ್ತದೆ. ಸಿದ್ದಾರ್ಥ್​ ಮತ್ತು ಶೆಹನಾಜ್​ ರೀತಿ ಪ್ರೇಮಿಗಳಾಗಿರಬೇಕು ಅಂತ ಅನೇಕರು ಬಯಸುತ್ತಾರೆ. ಅವರ ಸಂಬಂಧ ಅಷ್ಟು ಚೆನ್ನಾಗಿತ್ತು. ಶೆಹನಾಜ್​ ಮತ್ತು ಸಿದ್ದಾರ್ಥ್​ ಸಂಬಂಧವು ಗಂಡ-ಹೆಂಡತಿ ಸಂಬಂಧಕ್ಕಿಂತ ಏನೂ ಕಡಿಮೆ ಆಗಿರಲಿಲ್ಲ. ಅದನ್ನು ಬರೀ ಸ್ನೇಹ ಎನ್ನಲು ಸಾಧ್ಯವಿಲ್ಲ. ಗರ್ಲ್​ಫ್ರೆಂಡ್​-ಭಾಯ್​ಫ್ರೆಂಡ್​ ಸಂಬಂಧ ಎನ್ನಲೂ ಆಗುವುದಿಲ್ಲ. ರೋಮಿಯೋ-ಜೂಲಿಯಟ್​ ರೀತಿ ಶೆಹನಾಜ್​-ಸಿದ್ದಾರ್ಥ್​ ಸಂಬಂಧವನ್ನು ಕೂಡ ಜನರು ಕೊನೆಯವರೆಗೆ ನೆನಪಿಟ್ಟುಕೊಳ್ಳುತ್ತಾರೆ’ ಎಂದು ಮಾಜಿ ಬಿಗ್​ ಬಾಸ್​ ಸ್ಪರ್ಧಿ ಪವಿತ್ರಾ ಪೂನಿಯಾ ಹೇಳಿದ್ದಾರೆ.

ಇದನ್ನೂ ಓದಿ:

ಮದುವೆ ತಯಾರಿಯಲ್ಲಿದ್ದ ಸಿದ್ದಾರ್ಥ್​ ಶುಕ್ಲಾ ಮತ್ತು ಶೆಹನಾಜ್​ ಗಿಲ್​​ ; ಮೂರು ತಿಂಗಳಿರುವಾಗಲೇ ನಡೆಯಿತು ದುರಂತ

ಸಿದ್ದಾರ್ಥ್​ ಶುಕ್ಲಾ ಸಾವಿನ ಬಗ್ಗೆ ನಗುತ್ತಾ ಮಾತನಾಡಿದ್ದ ಸಲ್ಮಾನ್​ ಖಾನ್​: ಶಾಕಿಂಗ್​ ವಿಡಿಯೋ ವೈರಲ್

ವೇಗದ ಶತಕ ಸಿಡಿಸಿ ಹೆಡ್ ದಾಖಲೆ ಮುರಿದ ಕ್ಲಾಸೆನ್
ವೇಗದ ಶತಕ ಸಿಡಿಸಿ ಹೆಡ್ ದಾಖಲೆ ಮುರಿದ ಕ್ಲಾಸೆನ್
ಉಡುಪಿ: ಬೈಕ್​ಗೆ ನಾಯಿ ಕಟ್ಟಿ ಎಳೆದೊಯ್ದ ವ್ಯಕ್ತಿ, ವಿಡಿಯೋ ವೈರಲ್
ಉಡುಪಿ: ಬೈಕ್​ಗೆ ನಾಯಿ ಕಟ್ಟಿ ಎಳೆದೊಯ್ದ ವ್ಯಕ್ತಿ, ವಿಡಿಯೋ ವೈರಲ್
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ