AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದಾರ್ಥ್​ ಶುಕ್ಲಾ ಶ್ರದ್ದಾಂಜಲಿ ಸಭೆ: ಅಭಿಮಾನಿಗಳಿಗೂ ಆಹ್ವಾನ ನೀಡಿದ ತಾಯಿ; ಇಲ್ಲಿದೆ ಮೀಟಿಂಗ್​ ಲಿಂಕ್​

ಸಿದ್ದಾರ್ಥ್​ ಶುಕ್ಲಾ ಕುಟುಂಬದವರು ಆಯೋಜಿಸುತ್ತಿರುವ ಶ್ರದ್ಧಾಂಜಲಿ ಸಭೆಯಲ್ಲಿ ಭಾಗವಹಿಸಲು ಎಲ್ಲ ಅಭಿಮಾನಿಗಳಿಗೆ ಅವಕಾಶ ನೀಡಲಾಗಿದೆ. ಜೂಮ್​ ಮೀಟಿಂಗ್​ ಮೂಲಕ ಎಲ್ಲರೂ ಪಾಲ್ಗೊಳ್ಳಬಹುದು.

ಸಿದ್ದಾರ್ಥ್​ ಶುಕ್ಲಾ ಶ್ರದ್ದಾಂಜಲಿ ಸಭೆ: ಅಭಿಮಾನಿಗಳಿಗೂ ಆಹ್ವಾನ ನೀಡಿದ ತಾಯಿ; ಇಲ್ಲಿದೆ ಮೀಟಿಂಗ್​ ಲಿಂಕ್​
ಸಿದ್ದಾರ್ಥ್​ ಶುಕ್ಲಾ
TV9 Web
| Updated By: ಮದನ್​ ಕುಮಾರ್​|

Updated on: Sep 06, 2021 | 1:31 PM

Share

ಕಿರುತೆರೆಯ ಖ್ಯಾತ ನಟ ಸಿದ್ದಾರ್ಥ್​ ಶುಕ್ಲಾ ನಿಧನದಿಂದಾಗಿ ಅವರ ಇಡೀ ಅಭಿಮಾನಿ ಬಳಗ ಶೋಕ ಸಾಗರದಲ್ಲಿ ಮುಳುಗಿದೆ. 40ರ ಪ್ರಾಯದಲ್ಲಿ ಸಿದ್ದಾರ್ಥ್ ಅವರು ಹೀಗೆ ಅಕಾಲಿಕ ಮರಣಕ್ಕೆ ತುತ್ತಾಗುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ. ಫಿಟ್ನೆಸ್​ಗೆ ಹೆಚ್ಚು ಮಹತ್ವ ನೀಡುತ್ತಿದ್ದ ಅವರು ಹೃದಯಾಘಾತಕ್ಕೆ ಒಳಗಾದರು ಎಂಬುದನ್ನು ಅಭಿಮಾನಿಗಳಿಗೆ ನಂಬಲಾಗುತ್ತಿಲ್ಲ. ಸೆ.2ರ ಮುಂಜಾನೆ ಸಿದ್ದಾರ್ಥ್ ನಿಧನರಾದರು. ಇಂದಿಗೆ (ಸೆ.6) ನಾಲ್ಕು ದಿನ ಕಳೆದಿದೆ. ಈಗ ಅವರ ಕುಟುಂಬದವರು ಶ್ರದ್ಧಾಂಜಲಿ ಸಭೆ ನಡೆಸುತ್ತಿದ್ದಾರೆ. ವಿಶೇಷ ಎಂದರೆ ಈ ಸಭೆಗೆ ಅಭಿಮಾನಿಗಳಿಗೂ ಆಹ್ವಾನ ನೀಡಲಾಗಿದೆ.

ಕಿರುತೆರೆಯ ಹಲವು ಧಾರಾವಾಹಿಗಳಲ್ಲಿ ನಟಿಸಿದ ಸಿದ್ದಾರ್ಥ್​ ಶುಕ್ಲಾಗೆ ಅಪಾರ ಅಭಿಮಾನಿಗಳಿದ್ದಾರೆ. ಬಿಗ್​ ಬಾಸ್​ ಸೀಸನ್​ 13ರಲ್ಲಿ ಸ್ಪರ್ಧಿಸಿ ಗೆದ್ದ ಬಳಿಕವಂತೂ ಅವರ ಅಭಿಮಾನಿಗಳ ಸಂಖ್ಯೆ ಹೆಚ್ಚಿತು. ಅವರೆಲ್ಲರೂ ಸಿದ್ದಾರ್ಥ್​ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. ಈಗ ಸಿದ್ದಾರ್ಥ್​ ಕುಟುಂಬದವರು ಆಯೋಜಿಸುತ್ತಿರುವ ಶ್ರದ್ಧಾಂಜಲಿ ಸಭೆಗೆ ಭಾಗವಹಿಸಲು ಎಲ್ಲ ಅಭಿಮಾನಿಗಳಿಗೆ ಅವಕಾಶ ನೀಡಲಾಗಿದೆ. ಜೂಮ್​ ಮೀಟಿಂಗ್​ ಮೂಲಕ ಎಲ್ಲರೂ ಪಾಲ್ಗೊಳ್ಳಬಹುದು.

ನಟ ಕರಣ್​ವೀರ್​ ಬೊಹ್ರಾ ಅವರು ಈ ಬಗ್ಗೆ ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಮಾಹಿತಿ ನೀಡಿದ್ದು, ಜೂಮ್​ ಮೀಟಿಂಗ್​ನ ಲಿಂಕ್​ ಕೂಡ ಹಂಚಿಕೊಂಡಿದ್ದಾರೆ. ‘ಇಂದು ಸಂಜೆ 5 ಗಂಟೆಗೆ ಎಲ್ಲರೂ ಒಂದಾಗಿ ಸಿದ್ದಾರ್ಥ್​ ಶುಕ್ಲಾಗೆ ಶ್ರದ್ಧಾಂಜಲಿ ಸಲ್ಲಿಸೋಣ. ಅವರ ತಾಯಿ ರೀಟಾ, ಸಹೋದರಿಯರಾದ ನೀತು, ಪ್ರೀತಿ ಈ ಸಭೆ ಆಯೋಜಿಸುತ್ತಿದ್ದಾರೆ’ ಎಂದು ಕರಣ್​ವೀರ್​ ಬೊಹ್ರಾ ಪೋಸ್ಟ್​ ಮಾಡಿದ್ದಾರೆ.

ಸಿದ್ದಾರ್ಥ್​ ಶುಕ್ಲಾ ಜೊತೆ ನಟಿ ಶೆಹನಾಜ್​ ಗಿಲ್​ ಹೆಚ್ಚು ಆಪ್ತವಾಗಿದ್ದರು. ಇಬ್ಬರ ನಡುವೆ ಪ್ರೀತಿ ಇತ್ತು ಎಂಬುದು ಕೂಡ ಈಗ ರಹಸ್ಯವಾಗಿ ಉಳಿದಿಲ್ಲ. ಸಿದ್ದಾರ್ಥ್​ ನಿಧನದ ಬಳಿಕ ಶೆಹನಾಜ್​ ಅವರು ಮಾನಸಿಕವಾಗಿ ಕುಸಿದುಹೋಗಿದ್ದಾರೆ. ಅವರು ಈ ಶ್ರದ್ಧಾಂಜಲಿ ಸಭೆಯಲ್ಲಿ ಪಾಲ್ಗೊಳ್ಳುತ್ತಾರೋ ಇಲ್ಲವೋ ಎಂಬುದು ಇನ್ನೂ ಖಚಿತವಾಗಿಲ್ಲ.

‘ಇಂದು ಶೆಹನಾಜ್​ ಅವರನ್ನು ನೋಡಿದರೆ ಜೀವ ನಡುಗುತ್ತದೆ. ಸಿದ್ದಾರ್ಥ್​ ಮತ್ತು ಶೆಹನಾಜ್​ ರೀತಿ ಪ್ರೇಮಿಗಳಾಗಿರಬೇಕು ಅಂತ ಅನೇಕರು ಬಯಸುತ್ತಾರೆ. ಅವರ ಸಂಬಂಧ ಅಷ್ಟು ಚೆನ್ನಾಗಿತ್ತು. ಶೆಹನಾಜ್​ ಮತ್ತು ಸಿದ್ದಾರ್ಥ್​ ಸಂಬಂಧವು ಗಂಡ-ಹೆಂಡತಿ ಸಂಬಂಧಕ್ಕಿಂತ ಏನೂ ಕಡಿಮೆ ಆಗಿರಲಿಲ್ಲ. ಅದನ್ನು ಬರೀ ಸ್ನೇಹ ಎನ್ನಲು ಸಾಧ್ಯವಿಲ್ಲ. ಗರ್ಲ್​ಫ್ರೆಂಡ್​-ಭಾಯ್​ಫ್ರೆಂಡ್​ ಸಂಬಂಧ ಎನ್ನಲೂ ಆಗುವುದಿಲ್ಲ. ರೋಮಿಯೋ-ಜೂಲಿಯಟ್​ ರೀತಿ ಶೆಹನಾಜ್​-ಸಿದ್ದಾರ್ಥ್​ ಸಂಬಂಧವನ್ನು ಕೂಡ ಜನರು ಕೊನೆಯವರೆಗೆ ನೆನಪಿಟ್ಟುಕೊಳ್ಳುತ್ತಾರೆ’ ಎಂದು ಮಾಜಿ ಬಿಗ್​ ಬಾಸ್​ ಸ್ಪರ್ಧಿ ಪವಿತ್ರಾ ಪೂನಿಯಾ ಹೇಳಿದ್ದಾರೆ.

ಇದನ್ನೂ ಓದಿ:

ಮದುವೆ ತಯಾರಿಯಲ್ಲಿದ್ದ ಸಿದ್ದಾರ್ಥ್​ ಶುಕ್ಲಾ ಮತ್ತು ಶೆಹನಾಜ್​ ಗಿಲ್​​ ; ಮೂರು ತಿಂಗಳಿರುವಾಗಲೇ ನಡೆಯಿತು ದುರಂತ

ಸಿದ್ದಾರ್ಥ್​ ಶುಕ್ಲಾ ಸಾವಿನ ಬಗ್ಗೆ ನಗುತ್ತಾ ಮಾತನಾಡಿದ್ದ ಸಲ್ಮಾನ್​ ಖಾನ್​: ಶಾಕಿಂಗ್​ ವಿಡಿಯೋ ವೈರಲ್

ಶಾಹೀನ್ ಅಫ್ರಿದಿ ಬ್ಯಾಟಿಂಗ್ ಶ್ಲಾಘಿಸಿದ ಕುಲ್ದೀಪ್ ಯಾದವ್
ಶಾಹೀನ್ ಅಫ್ರಿದಿ ಬ್ಯಾಟಿಂಗ್ ಶ್ಲಾಘಿಸಿದ ಕುಲ್ದೀಪ್ ಯಾದವ್
ಬುರುಡೆ ಜತೆ ಸಿಕ್ಕ ID ಕಾರ್ಡ್,ವಾಕಿಂಗ್ ಸ್ಟಿಕ್ ಬಗ್ಗೆ ಸತ್ಯ ಬಿಚ್ಚಿಟ ಮಗ
ಬುರುಡೆ ಜತೆ ಸಿಕ್ಕ ID ಕಾರ್ಡ್,ವಾಕಿಂಗ್ ಸ್ಟಿಕ್ ಬಗ್ಗೆ ಸತ್ಯ ಬಿಚ್ಚಿಟ ಮಗ
ಬೆಂಗಳೂರಿನಲ್ಲಿ ಮಳೆ ರುದ್ರನರ್ತನ: ವಾಹನ ಸವಾರರಿಗೆ ನರಕ ದರ್ಶನ
ಬೆಂಗಳೂರಿನಲ್ಲಿ ಮಳೆ ರುದ್ರನರ್ತನ: ವಾಹನ ಸವಾರರಿಗೆ ನರಕ ದರ್ಶನ
ಸಂಪುಟ ಸಭೆಯಲ್ಲಿ ಜಾತಿ ಜ್ವಾಲೆ:ಏರು ಧ್ವನಿಯಲ್ಲೇ ಸಚಿವರಿಂದ ಆಕ್ಷೇಪ
ಸಂಪುಟ ಸಭೆಯಲ್ಲಿ ಜಾತಿ ಜ್ವಾಲೆ:ಏರು ಧ್ವನಿಯಲ್ಲೇ ಸಚಿವರಿಂದ ಆಕ್ಷೇಪ
ಧರ್ಮಸ್ಥಳ ಕೇಸ್: ಇಂದು ಇನ್ನಷ್ಟು ತಲೆಬುರುಡೆ, ಅಸ್ಥಿಪಂಜರಗಳು ಪತ್ತೆ
ಧರ್ಮಸ್ಥಳ ಕೇಸ್: ಇಂದು ಇನ್ನಷ್ಟು ತಲೆಬುರುಡೆ, ಅಸ್ಥಿಪಂಜರಗಳು ಪತ್ತೆ
ಒಳನುಸುಳುಕೋರರನ್ನು ರಕ್ಷಿಸಲು ರಾಹುಲ್ ಗಾಂಧಿ ಯಾತ್ರೆ; ಅಮಿತ್ ಶಾ ವಾಗ್ದಾಳಿ
ಒಳನುಸುಳುಕೋರರನ್ನು ರಕ್ಷಿಸಲು ರಾಹುಲ್ ಗಾಂಧಿ ಯಾತ್ರೆ; ಅಮಿತ್ ಶಾ ವಾಗ್ದಾಳಿ
ಆಳಂದ ಮತಗಳ್ಳತನ:ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ
ಆಳಂದ ಮತಗಳ್ಳತನ:ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ
ಇನ್ಮುಂದೆ ಕಿಚ್ಚ ಸುದೀಪ್ ಅವರೇ ವಿಷ್ಣುವರ್ಧನ್​ ಮಗ: ಅಭಿಮಾನದ ಮಾತು
ಇನ್ಮುಂದೆ ಕಿಚ್ಚ ಸುದೀಪ್ ಅವರೇ ವಿಷ್ಣುವರ್ಧನ್​ ಮಗ: ಅಭಿಮಾನದ ಮಾತು
ವಿಷ್ಣುವರ್ಧನ್ ಎಂದಿಗೂ ನಮ್ಮ ಜೊತೆಗೇ ಇರುತ್ತಾರೆ: ಶಿವರಾಜ್ ಕುಮಾರ್
ವಿಷ್ಣುವರ್ಧನ್ ಎಂದಿಗೂ ನಮ್ಮ ಜೊತೆಗೇ ಇರುತ್ತಾರೆ: ಶಿವರಾಜ್ ಕುಮಾರ್
ಸುಮ್ಮನೆ ನಿಂತಿದ್ದ ಅಂಪೈರ್​ ತಲೆಗೆ ಗಾಯ ಮಾಡಿದ ಪಾಕ್ ಆಟಗಾರ; ವಿಡಿಯೋ
ಸುಮ್ಮನೆ ನಿಂತಿದ್ದ ಅಂಪೈರ್​ ತಲೆಗೆ ಗಾಯ ಮಾಡಿದ ಪಾಕ್ ಆಟಗಾರ; ವಿಡಿಯೋ