AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೇಯಸಿ ಮಡಿಲಲ್ಲೇ ಪ್ರಾಣ ಬಿಟ್ರಾ ಸಿದ್ದಾರ್ಥ್​? ಹೃದಯಾಘಾತ ಆಗೋದಕ್ಕೂ ಮುನ್ನ ನಡೆದಿದ್ದೇನು? ಇಲ್ಲಿದೆ ವಿವರ

ಸೆ.1ರ ಮಧ್ಯ ರಾತ್ರಿ 1.30ರ ಸುಮಾರಿಗೆ ಶೆಹನಾಜ್​ ಗಿಲ್​ ಅವರ ಮಡಿಲ ಮೇಲೆ ಸಿದ್ದಾರ್ಥ್​ ಶುಕ್ಲಾ ನಿದ್ರಿಸಿದರು. ಬೆಳಗ್ಗೆ 7.30ಕ್ಕೆ ಶೆಹನಾಜ್​ಗೆ ಎಚ್ಚರವಾಗಿ ನೋಡಿದಾಗ ಯಾವುದೇ ರೀತಿ ಚಲನೆ ಇಲ್ಲದಿರುವುದು ಕಂಡುಬಂತು.

ಪ್ರೇಯಸಿ ಮಡಿಲಲ್ಲೇ ಪ್ರಾಣ ಬಿಟ್ರಾ ಸಿದ್ದಾರ್ಥ್​? ಹೃದಯಾಘಾತ ಆಗೋದಕ್ಕೂ ಮುನ್ನ ನಡೆದಿದ್ದೇನು? ಇಲ್ಲಿದೆ ವಿವರ
ಶೆಹನಾಜ್​ ಗಿಲ್​, ಸಿದ್ಧಾರ್ಥ್​ ಶುಕ್ಲಾ
TV9 Web
| Edited By: |

Updated on: Sep 03, 2021 | 9:36 AM

Share

ಕಿರುತೆರೆಯ ಖ್ಯಾತ ನಟ ಸಿದ್ದಾರ್ಥ್​ ಶುಕ್ಲಾ ಅವರು ಇನ್ನಿಲ್ಲ ಎಂಬ ಸುದ್ದಿಯನ್ನು ಯಾರಿಗೂ ನಂಬಲಾಗುತ್ತಿಲ್ಲ. ಹೃದಯಾಘಾತದಿಂದ ಅವರು ಗುರುವಾರ (ಸೆ.2) ಬೆಳಗ್ಗೆ ನಿಧನರಾದರು. ಮರಣೋತ್ತರ ಪರೀಕ್ಷೆ ವರದಿ ಇನ್ನಷ್ಟೇ ಬರಬೇಕಿದೆ. ಈಗ ಸಿದ್ದಾರ್ಥ್​ ಸಾವಿನ ಕುರಿತು ಕೆಲವು ಅಚ್ಚರಿಯ ಮಾಹಿತಿಗಳು ಹೊರಬರುತ್ತಿವೆ. ಹೃದಯಾಘಾತ ಆಗುವ ಸಂದರ್ಭದಲ್ಲಿ ಅವರ ಪ್ರೇಯಸಿ ಶೆಹನಾಜ್​ ಗಿಲ್​ ಕೂಡ ಜೊತೆಯಲ್ಲೇ ಇದ್ದರು ಎಂಬ ಸುದ್ದಿ ಕೇಳಿಬರುತ್ತಿದೆ. ಬಿಗ್​ ಬಾಸ್​ ಸೀಸನ್​ 13ರಲ್ಲಿ ಶೆಹನಾಜ್ ಮತ್ತು ಸಿದ್ದಾರ್ಥ್​ ಶುಕ್ಲಾ ಸ್ಪರ್ಧಿಸಿದ್ದರು. ಆಗ ಇಬ್ಬರ ನಡುವೆ ಆಪ್ತತೆ ಬೆಳೆದಿತ್ತು.

ಸಿದ್ದಾರ್ಥ್​ ನಿಧನದ ಬಳಿಕ ಅವರ ಕುಟುಂಬದವರಿಗೆ ಸಾಂತ್ವನ ಹೇಳಲು ಕೆಲವರು ಸೆಲೆಬ್ರಿಟಿಗಳು ಅವರ ಮನೆಗೆ ತೆರಳಿದ್ದಾರೆ. ಈ ವೇಳೆ ಒಂದಷ್ಟು ವಿವರಗಳು ಹೊರಬಂದಿವೆ. ಮೂಲಗಳ ಪ್ರಕಾರ, ಬುಧವಾರ (ಸೆ.1) ರಾತ್ರಿ 9.30ಕ್ಕೆ ಸಿದ್ದಾರ್ಥ್​ ಶುಕ್ಲಾ ಅವರು ಮನೆಗೆ ಬಂದಿದ್ದರು. ಆಗ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತು. ತಾಯಿ ಮತ್ತು ಗೆಳತಿ ಶೆಹನಾಜ್​ ಗಿಲ್​ ಅವರು ನಿಂಬು ಪಾನಿ ಮತ್ತು ಐಸ್​ ಕ್ರೀಮ್ ನೀಡಿದರು. ಬಳಿಕ ವಿಶ್ರಾಂತಿ ಪಡೆದುಕೊಳ್ಳುವಂತೆ ಹೇಳಿದರು ಎಂಬ ಮಾಹಿತಿ ಕೇಳಿಬಂದಿದೆ.

ಎಷ್ಟು ಸಮಯ ಕಳೆದರೂ ಸಿದ್ದಾರ್ಥ್​ಗೆ ನಿದ್ದೆ ಬರಲಿಲ್ಲ. ಹಾಗಾಗಿ ತಮ್ಮ ಜೊತೆಯೇ ಇರುವಂತೆ ಗೆಳತಿ ಶೆಹನಾಜ್​ಗೆ ಅವರು ಕೇಳಿಕೊಂಡರು. ಮಧ್ಯ ರಾತ್ರಿ 1.30ರ ಸುಮಾರಿಗೆ ಶೆಹನಾಜ್​ ಅವರ ಮಡಿಲ ಮೇಲೆ ಸಿದ್ದಾರ್ಥ್​ ನಿದ್ರಿಸಿದರು. ಬಳಿಕ ಅವರನ್ನು ಪಕ್ಕಕ್ಕೆ ಸರಿಸಿ ಶೆಹನಾಜ್​ ಕೂಡ ಮಲಗಲು ತೆರಳಿದರು. ಬೆಳಗ್ಗೆ 7.30ರ ಸುಮಾರಿಗೆ ಶೆಹನಾಜ್​ಗೆ ಎಚ್ಚರವಾಗಿ ನೋಡಿದಾಗ ಸಿದ್ದಾರ್ಥ್​ ರಾತ್ರಿ ನಿದ್ರಿಸುತ್ತಿದ್ದ ಭಂಗಿಯಲ್ಲೇ ಮಲಗಿದ್ದರು. ಯಾವುದೇ ರೀತಿ ಚಲನೆ ಇಲ್ಲದಿರುವುದು ಗಮನಿಸಿದಾಗ ಶೆಹನಾಜ್​ಗೆ ಗಾಬರಿ ಆಯಿತು.

ಅದೇ ಅಪಾರ್ಟ್​ಮೆಂಟ್​ನ 5ನೇ ಮಹಡಿಗೆ ತೆರಳಿ ಅಲ್ಲಿರುವ ಕುಟುಂಬದವರಿಗೆ ಶೆಹನಾಜ್​ ಸುದ್ದಿ ತಿಳಿಸಿದರು. ಕೂಡಲೇ ಫ್ಯಾಮಿಲಿ ಡಾಕ್ಟರ್​ರನ್ನು ಕರೆಸಿ ನೋಡಿದಾಗ ಸಿದ್ದಾರ್ಥ್​ ನಿಧನರಾಗಿರುವುದು ತಿಳಿಯಿತು ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ. ಆದರೆ ಈ ಎಲ್ಲ ಘಟನೆಗಳ ಕುರಿತು ಪ್ರತಿಕ್ರಿಯೆ ನೀಡಲು ಇನ್ನೂ ಶೆಹನಾಜ್​ ಗಿಲ್​ ಸಂಪರ್ಕಕ್ಕೆ ಸಿಕ್ಕಿಲ್ಲ. ಘಟನೆ ಬಳಿಕ ಅವರ ಮೊಬೈಲ್​ ಫೋನ್​ ಸ್ವಿಚ್​ಆಫ್​ ಆಗಿರುವ ಬಗ್ಗೆ ವರದಿ ಆಗಿದೆ.

ಇದನ್ನೂ ಓದಿ:

ಬಿಗ್​ ಬಾಸ್​ ವಿನ್ನರ್​ ಸಿದ್ಧಾರ್ಥ್​ ನಿಧನ; ಗೆಳತಿ ಶೆಹನಾಜ್​ ಪರಿಸ್ಥಿತಿ ಹೇಗಿದೆ? ಪ್ರತಿಕ್ರಿಯೆ ನೀಡಿದ ತಂದೆ

ಸಿದ್ದಾರ್ಥ್​ ಶುಕ್ಲಾ ಅನುಮಾನಾಸ್ಪದ ಸಾವು: ಗೆಳತಿ ಫೋನ್​ ಆಫ್​; ಮರಣೋತ್ತರ ಪರೀಕ್ಷೆ ವರದಿ ಮೇಲೆ ಎಲ್ಲರ ಕಣ್ಣು

Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!