AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೇಯಸಿ ಮಡಿಲಲ್ಲೇ ಪ್ರಾಣ ಬಿಟ್ರಾ ಸಿದ್ದಾರ್ಥ್​? ಹೃದಯಾಘಾತ ಆಗೋದಕ್ಕೂ ಮುನ್ನ ನಡೆದಿದ್ದೇನು? ಇಲ್ಲಿದೆ ವಿವರ

ಸೆ.1ರ ಮಧ್ಯ ರಾತ್ರಿ 1.30ರ ಸುಮಾರಿಗೆ ಶೆಹನಾಜ್​ ಗಿಲ್​ ಅವರ ಮಡಿಲ ಮೇಲೆ ಸಿದ್ದಾರ್ಥ್​ ಶುಕ್ಲಾ ನಿದ್ರಿಸಿದರು. ಬೆಳಗ್ಗೆ 7.30ಕ್ಕೆ ಶೆಹನಾಜ್​ಗೆ ಎಚ್ಚರವಾಗಿ ನೋಡಿದಾಗ ಯಾವುದೇ ರೀತಿ ಚಲನೆ ಇಲ್ಲದಿರುವುದು ಕಂಡುಬಂತು.

ಪ್ರೇಯಸಿ ಮಡಿಲಲ್ಲೇ ಪ್ರಾಣ ಬಿಟ್ರಾ ಸಿದ್ದಾರ್ಥ್​? ಹೃದಯಾಘಾತ ಆಗೋದಕ್ಕೂ ಮುನ್ನ ನಡೆದಿದ್ದೇನು? ಇಲ್ಲಿದೆ ವಿವರ
ಶೆಹನಾಜ್​ ಗಿಲ್​, ಸಿದ್ಧಾರ್ಥ್​ ಶುಕ್ಲಾ
TV9 Web
| Edited By: |

Updated on: Sep 03, 2021 | 9:36 AM

Share

ಕಿರುತೆರೆಯ ಖ್ಯಾತ ನಟ ಸಿದ್ದಾರ್ಥ್​ ಶುಕ್ಲಾ ಅವರು ಇನ್ನಿಲ್ಲ ಎಂಬ ಸುದ್ದಿಯನ್ನು ಯಾರಿಗೂ ನಂಬಲಾಗುತ್ತಿಲ್ಲ. ಹೃದಯಾಘಾತದಿಂದ ಅವರು ಗುರುವಾರ (ಸೆ.2) ಬೆಳಗ್ಗೆ ನಿಧನರಾದರು. ಮರಣೋತ್ತರ ಪರೀಕ್ಷೆ ವರದಿ ಇನ್ನಷ್ಟೇ ಬರಬೇಕಿದೆ. ಈಗ ಸಿದ್ದಾರ್ಥ್​ ಸಾವಿನ ಕುರಿತು ಕೆಲವು ಅಚ್ಚರಿಯ ಮಾಹಿತಿಗಳು ಹೊರಬರುತ್ತಿವೆ. ಹೃದಯಾಘಾತ ಆಗುವ ಸಂದರ್ಭದಲ್ಲಿ ಅವರ ಪ್ರೇಯಸಿ ಶೆಹನಾಜ್​ ಗಿಲ್​ ಕೂಡ ಜೊತೆಯಲ್ಲೇ ಇದ್ದರು ಎಂಬ ಸುದ್ದಿ ಕೇಳಿಬರುತ್ತಿದೆ. ಬಿಗ್​ ಬಾಸ್​ ಸೀಸನ್​ 13ರಲ್ಲಿ ಶೆಹನಾಜ್ ಮತ್ತು ಸಿದ್ದಾರ್ಥ್​ ಶುಕ್ಲಾ ಸ್ಪರ್ಧಿಸಿದ್ದರು. ಆಗ ಇಬ್ಬರ ನಡುವೆ ಆಪ್ತತೆ ಬೆಳೆದಿತ್ತು.

ಸಿದ್ದಾರ್ಥ್​ ನಿಧನದ ಬಳಿಕ ಅವರ ಕುಟುಂಬದವರಿಗೆ ಸಾಂತ್ವನ ಹೇಳಲು ಕೆಲವರು ಸೆಲೆಬ್ರಿಟಿಗಳು ಅವರ ಮನೆಗೆ ತೆರಳಿದ್ದಾರೆ. ಈ ವೇಳೆ ಒಂದಷ್ಟು ವಿವರಗಳು ಹೊರಬಂದಿವೆ. ಮೂಲಗಳ ಪ್ರಕಾರ, ಬುಧವಾರ (ಸೆ.1) ರಾತ್ರಿ 9.30ಕ್ಕೆ ಸಿದ್ದಾರ್ಥ್​ ಶುಕ್ಲಾ ಅವರು ಮನೆಗೆ ಬಂದಿದ್ದರು. ಆಗ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತು. ತಾಯಿ ಮತ್ತು ಗೆಳತಿ ಶೆಹನಾಜ್​ ಗಿಲ್​ ಅವರು ನಿಂಬು ಪಾನಿ ಮತ್ತು ಐಸ್​ ಕ್ರೀಮ್ ನೀಡಿದರು. ಬಳಿಕ ವಿಶ್ರಾಂತಿ ಪಡೆದುಕೊಳ್ಳುವಂತೆ ಹೇಳಿದರು ಎಂಬ ಮಾಹಿತಿ ಕೇಳಿಬಂದಿದೆ.

ಎಷ್ಟು ಸಮಯ ಕಳೆದರೂ ಸಿದ್ದಾರ್ಥ್​ಗೆ ನಿದ್ದೆ ಬರಲಿಲ್ಲ. ಹಾಗಾಗಿ ತಮ್ಮ ಜೊತೆಯೇ ಇರುವಂತೆ ಗೆಳತಿ ಶೆಹನಾಜ್​ಗೆ ಅವರು ಕೇಳಿಕೊಂಡರು. ಮಧ್ಯ ರಾತ್ರಿ 1.30ರ ಸುಮಾರಿಗೆ ಶೆಹನಾಜ್​ ಅವರ ಮಡಿಲ ಮೇಲೆ ಸಿದ್ದಾರ್ಥ್​ ನಿದ್ರಿಸಿದರು. ಬಳಿಕ ಅವರನ್ನು ಪಕ್ಕಕ್ಕೆ ಸರಿಸಿ ಶೆಹನಾಜ್​ ಕೂಡ ಮಲಗಲು ತೆರಳಿದರು. ಬೆಳಗ್ಗೆ 7.30ರ ಸುಮಾರಿಗೆ ಶೆಹನಾಜ್​ಗೆ ಎಚ್ಚರವಾಗಿ ನೋಡಿದಾಗ ಸಿದ್ದಾರ್ಥ್​ ರಾತ್ರಿ ನಿದ್ರಿಸುತ್ತಿದ್ದ ಭಂಗಿಯಲ್ಲೇ ಮಲಗಿದ್ದರು. ಯಾವುದೇ ರೀತಿ ಚಲನೆ ಇಲ್ಲದಿರುವುದು ಗಮನಿಸಿದಾಗ ಶೆಹನಾಜ್​ಗೆ ಗಾಬರಿ ಆಯಿತು.

ಅದೇ ಅಪಾರ್ಟ್​ಮೆಂಟ್​ನ 5ನೇ ಮಹಡಿಗೆ ತೆರಳಿ ಅಲ್ಲಿರುವ ಕುಟುಂಬದವರಿಗೆ ಶೆಹನಾಜ್​ ಸುದ್ದಿ ತಿಳಿಸಿದರು. ಕೂಡಲೇ ಫ್ಯಾಮಿಲಿ ಡಾಕ್ಟರ್​ರನ್ನು ಕರೆಸಿ ನೋಡಿದಾಗ ಸಿದ್ದಾರ್ಥ್​ ನಿಧನರಾಗಿರುವುದು ತಿಳಿಯಿತು ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ. ಆದರೆ ಈ ಎಲ್ಲ ಘಟನೆಗಳ ಕುರಿತು ಪ್ರತಿಕ್ರಿಯೆ ನೀಡಲು ಇನ್ನೂ ಶೆಹನಾಜ್​ ಗಿಲ್​ ಸಂಪರ್ಕಕ್ಕೆ ಸಿಕ್ಕಿಲ್ಲ. ಘಟನೆ ಬಳಿಕ ಅವರ ಮೊಬೈಲ್​ ಫೋನ್​ ಸ್ವಿಚ್​ಆಫ್​ ಆಗಿರುವ ಬಗ್ಗೆ ವರದಿ ಆಗಿದೆ.

ಇದನ್ನೂ ಓದಿ:

ಬಿಗ್​ ಬಾಸ್​ ವಿನ್ನರ್​ ಸಿದ್ಧಾರ್ಥ್​ ನಿಧನ; ಗೆಳತಿ ಶೆಹನಾಜ್​ ಪರಿಸ್ಥಿತಿ ಹೇಗಿದೆ? ಪ್ರತಿಕ್ರಿಯೆ ನೀಡಿದ ತಂದೆ

ಸಿದ್ದಾರ್ಥ್​ ಶುಕ್ಲಾ ಅನುಮಾನಾಸ್ಪದ ಸಾವು: ಗೆಳತಿ ಫೋನ್​ ಆಫ್​; ಮರಣೋತ್ತರ ಪರೀಕ್ಷೆ ವರದಿ ಮೇಲೆ ಎಲ್ಲರ ಕಣ್ಣು

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು