AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾತಾಡುತ್ತಿದೆಯಾ ಸಿದ್ದಾರ್ಥ್​ ಶುಕ್ಲಾ ಆತ್ಮ? ವೈರಲ್​ ಆಗುತ್ತಿದೆ ವಿಚಿತ್ರ ಧ್ವನಿ ಇರುವ ವಿಡಿಯೋ

ಸೆ.2ರಂದು ಸಿದ್ದಾರ್ಥ್​ ಶುಕ್ಲಾ ನಿಧನರಾದರು. ಆ ದುರ್ಘಟನೆಯ ಬೆನ್ನಲ್ಲೇ ಸ್ಟೀವ್​ ಹಫ್​ ಅವರು ತಮ್ಮ ಯೂಟ್ಯೂಬ್​ ಚಾನೆಲ್​ನಲ್ಲಿ ವಿಡಿಯೋ ಹಂಚಿಕೊಂಡಿದ್ದು, ಅದರಲ್ಲಿರುವ ಧ್ವನಿ ಸಿದ್ದಾರ್ಥ್​ ಶುಕ್ಲಾರ ಆತ್ಮದ್ದು ಎಂದು ಹೇಳುತ್ತಿದ್ದಾರೆ.

ಮಾತಾಡುತ್ತಿದೆಯಾ ಸಿದ್ದಾರ್ಥ್​ ಶುಕ್ಲಾ ಆತ್ಮ? ವೈರಲ್​ ಆಗುತ್ತಿದೆ ವಿಚಿತ್ರ ಧ್ವನಿ ಇರುವ ವಿಡಿಯೋ
ಸ್ಟೀವ್​ ಹಫ್​, ಸಿದ್ದಾರ್ಥ್​ ಶುಕ್ಲಾ
TV9 Web
| Edited By: |

Updated on:Sep 13, 2021 | 12:08 PM

Share

ನಟ ಸಿದ್ದಾರ್ಥ್​ ಶುಕ್ಲಾ ಅವರು ಹೃದಯಾಘಾತದಿಂದ ನಿಧನರಾದ ಬಳಿಕ ಅವರ ಅಭಿಮಾನಿಗಳ ವಲಯದಲ್ಲಿ ಶೋಕ ಆವರಿಸಿದೆ. ಫಿಟ್ನೆಸ್​ಗೆ ಹೆಚ್ಚು ಮಹತ್ವ ನೀಡುತ್ತಿದ್ದ ಅವರು ಹೃದಯಾಘಾತದಲ್ಲಿ ಮೃತರಾದರು ಎಂಬ ಸುದ್ದಿಯನ್ನು ಬಹುತೇಕರಿಗೆ ನಂಬಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಅವರ ಸಾವಿನ ಬಗ್ಗೆ ಹಲವು ಅನುಮಾನಗಳು ಕೂಡ ಮೂಡಿವೆ. ಈ ನಡುವೆ ಸಿದ್ದಾರ್ಥ್​ ಶುಕ್ಲಾ ಅವರ ಆತ್ಮ ಮಾತನಾಡುತ್ತಿದೆ ಎಂಬ ಕಥೆಗಳೆಲ್ಲ ಹುಟ್ಟಿಕೊಂಡಿವೆ. ಅದಕ್ಕೆ ಕಾರಣ ಆಗಿರುವುದು ಪ್ಯಾರಾ ನಾರ್ಮಲ್​ ತಜ್ಞ ಸ್ಟೀವ್​ ಹಫ್​ ಹಂಚಿಕೊಂಡಿರುವ ಒಂದು ವಿಡಿಯೋ.

ಸ್ಟೀವ್​ ಹಫ್​ ಹೆಸರು ಕೇಳಿಬರುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಸುಶಾಂತ್​ ಸಿಂಗ್​ ರಜಪೂತ್​ ನಿಧನರಾದಾಗ ಕೂಡ ಸ್ಟೀವ್​ ಹಫ್​ ಹೀಗೆಯೇ ಹೇಳಿದ್ದರು. ತಾವು ಸುಶಾಂತ್​ ಆತ್ಮದ ಜೊತೆ ಮಾತನಾಡಿರುವುದಾಗಿ ಹೇಳಿಕೊಂಡಿದ್ದ ಅವರು, ಅದಕ್ಕೆ ಸಂಬಂಧಿಸಿದ ಒಂದು ವಿಡಿಯೋವನ್ನು ರಿಲೀಸ್​ ಮಾಡಿದ್ದರು. ಅದನ್ನೇ ಈ ಬಾರಿಯೂ ಅವರು ಮುಂದುವರಿಸಿದ್ದಾರೆ. ಸೆ.2ರಂದು ಸಿದ್ದಾರ್ಥ್​ ಶುಕ್ಲಾ ನಿಧನರಾದರು. ಸೆ.4ರಂದು ಸ್ಟೀವ್​ ಹಫ್​ ಅವರು ತಮ್ಮ ಯೂಟ್ಯೂಬ್​ ಚಾನೆಲ್​ನಲ್ಲಿ ವಿಡಿಯೋ ಹಂಚಿಕೊಂಡಿದ್ದು, ಅದರಲ್ಲಿರುವ ಧ್ವನಿ ಸಿದ್ದಾರ್ಥ್​ ಶುಕ್ಲಾರ ಆತ್ಮದ್ದು ಎಂದು ಹೇಳುತ್ತಿದ್ದಾರೆ.

‘ದೇಹ ಬಿಡುವಾಗ ನೀವು ಏನನ್ನು ನೋಡಿದ್ರಿ’ ಎಂದು ಕೇಳಿದ್ದಕ್ಕೆ ‘ಒಬ್ಬ ಗಂಧರ್ವನನ್ನು ನೋಡಿದೆ’ ಎಂದು ಆ ಧ್ವನಿ ಉತ್ತರಿಸಿದೆ. ‘ಸಾಯುವಾಗ ನನಗೆ ತುಂಬ ನೋವಾಯಿತು. ನಾನು ನಗ್ನವಾಗಿದ್ದೆ. ನಾನೀಗ ಸ್ವರ್ಗದಲ್ಲಿ ಇದ್ದೇನೆ. ನಾನು ದೇವರ ಜೊತೆ ಇದ್ದೇನೆ. ನನ್ನ ಬಗ್ಗೆ ಯೋಚನೆ ಮಾಡಿ’ ಎಂಬಿತ್ಯಾದಿ ಮಾತುಗಳನ್ನು ಆ ಧ್ವನಿ ಹೇಳಿದೆ. ಈ ವಿಡಿಯೋ ಲಕ್ಷಾಂತರ ಬಾರಿ ವೀಕ್ಷಣೆ ಕಂಡಿದೆ. ಇದನ್ನು ಕೆಲವರು ನಂಬಿದ್ದಾರೆ. ಮತ್ತೆ ಕೆಲವರು ಇದೆಲ್ಲ ಸುಳ್ಳು ಎಂದು ಸ್ಟೀವ್​ ಹಫ್​ಗೆ ನೆಗೆಟಿವ್​ ಕಮೆಂಟ್​ ಮಾಡಿದ್ದಾರೆ.

ಫೋಟೋಗ್ರಾಫರ್​ ಕೂಡ ಆಗಿರುವ ಸ್ಟೀವ್​ ಹಫ್​ ಅವರು ಪ್ಯಾರಾ ನಾರ್ಮಲ್​ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ತುಂಬ ಫೇಮಸ್​ ಆಗಿದ್ದಾರೆ. ಅವರ ಯೂಟ್ಯೂಬ್​ ಚಾನೆಲ್​ಗೆ 19 ಲಕ್ಷ ಚಂದದಾರರು ಇದ್ದಾರೆ. ಸತ್ತವರ ಆತ್ಮಗಳ ಜೊತೆ ಮಾತನಾಡಲು ತಾವು ಕೆಲವೊಂದು ಉಪಕರಣಗಳನ್ನು ಕಂಡು ಹಿಡಿದಿರುವುದಾಗಿ ಅವರು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ:

‘ನೀನೂ ಸತ್ತು ಹೋಗು’: ಸಿದ್ದಾರ್ಥ್​ ಶುಕ್ಲಾ ನಿಧನದ ಬಳಿಕ ಕಿಡಿಗೇಡಿಗಳಿಂದ ನಟಿಗೆ ಮೆಸೇಜ್​; ಆಸ್ಪತ್ರೆಗೆ ದಾಖಲು

Sidharth Shukla: ಸಿದ್ದಾರ್ಥ್​ ಶುಕ್ಲಾ ಸಾವಿನ ಸಮಯದ ಬಗ್ಗೆ ಮೂಡಿದೆ ಶಂಕೆ; ಹಿಂದೂಸ್ತಾನಿ ಭಾವು ಹೇಳಿದ ಇನ್ನೊಂದು ಕಥೆ

Published On - 12:07 pm, Mon, 13 September 21

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ