AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾತಾಡುತ್ತಿದೆಯಾ ಸಿದ್ದಾರ್ಥ್​ ಶುಕ್ಲಾ ಆತ್ಮ? ವೈರಲ್​ ಆಗುತ್ತಿದೆ ವಿಚಿತ್ರ ಧ್ವನಿ ಇರುವ ವಿಡಿಯೋ

ಸೆ.2ರಂದು ಸಿದ್ದಾರ್ಥ್​ ಶುಕ್ಲಾ ನಿಧನರಾದರು. ಆ ದುರ್ಘಟನೆಯ ಬೆನ್ನಲ್ಲೇ ಸ್ಟೀವ್​ ಹಫ್​ ಅವರು ತಮ್ಮ ಯೂಟ್ಯೂಬ್​ ಚಾನೆಲ್​ನಲ್ಲಿ ವಿಡಿಯೋ ಹಂಚಿಕೊಂಡಿದ್ದು, ಅದರಲ್ಲಿರುವ ಧ್ವನಿ ಸಿದ್ದಾರ್ಥ್​ ಶುಕ್ಲಾರ ಆತ್ಮದ್ದು ಎಂದು ಹೇಳುತ್ತಿದ್ದಾರೆ.

ಮಾತಾಡುತ್ತಿದೆಯಾ ಸಿದ್ದಾರ್ಥ್​ ಶುಕ್ಲಾ ಆತ್ಮ? ವೈರಲ್​ ಆಗುತ್ತಿದೆ ವಿಚಿತ್ರ ಧ್ವನಿ ಇರುವ ವಿಡಿಯೋ
ಸ್ಟೀವ್​ ಹಫ್​, ಸಿದ್ದಾರ್ಥ್​ ಶುಕ್ಲಾ
Follow us
TV9 Web
| Updated By: ಮದನ್​ ಕುಮಾರ್​

Updated on:Sep 13, 2021 | 12:08 PM

ನಟ ಸಿದ್ದಾರ್ಥ್​ ಶುಕ್ಲಾ ಅವರು ಹೃದಯಾಘಾತದಿಂದ ನಿಧನರಾದ ಬಳಿಕ ಅವರ ಅಭಿಮಾನಿಗಳ ವಲಯದಲ್ಲಿ ಶೋಕ ಆವರಿಸಿದೆ. ಫಿಟ್ನೆಸ್​ಗೆ ಹೆಚ್ಚು ಮಹತ್ವ ನೀಡುತ್ತಿದ್ದ ಅವರು ಹೃದಯಾಘಾತದಲ್ಲಿ ಮೃತರಾದರು ಎಂಬ ಸುದ್ದಿಯನ್ನು ಬಹುತೇಕರಿಗೆ ನಂಬಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಅವರ ಸಾವಿನ ಬಗ್ಗೆ ಹಲವು ಅನುಮಾನಗಳು ಕೂಡ ಮೂಡಿವೆ. ಈ ನಡುವೆ ಸಿದ್ದಾರ್ಥ್​ ಶುಕ್ಲಾ ಅವರ ಆತ್ಮ ಮಾತನಾಡುತ್ತಿದೆ ಎಂಬ ಕಥೆಗಳೆಲ್ಲ ಹುಟ್ಟಿಕೊಂಡಿವೆ. ಅದಕ್ಕೆ ಕಾರಣ ಆಗಿರುವುದು ಪ್ಯಾರಾ ನಾರ್ಮಲ್​ ತಜ್ಞ ಸ್ಟೀವ್​ ಹಫ್​ ಹಂಚಿಕೊಂಡಿರುವ ಒಂದು ವಿಡಿಯೋ.

ಸ್ಟೀವ್​ ಹಫ್​ ಹೆಸರು ಕೇಳಿಬರುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಸುಶಾಂತ್​ ಸಿಂಗ್​ ರಜಪೂತ್​ ನಿಧನರಾದಾಗ ಕೂಡ ಸ್ಟೀವ್​ ಹಫ್​ ಹೀಗೆಯೇ ಹೇಳಿದ್ದರು. ತಾವು ಸುಶಾಂತ್​ ಆತ್ಮದ ಜೊತೆ ಮಾತನಾಡಿರುವುದಾಗಿ ಹೇಳಿಕೊಂಡಿದ್ದ ಅವರು, ಅದಕ್ಕೆ ಸಂಬಂಧಿಸಿದ ಒಂದು ವಿಡಿಯೋವನ್ನು ರಿಲೀಸ್​ ಮಾಡಿದ್ದರು. ಅದನ್ನೇ ಈ ಬಾರಿಯೂ ಅವರು ಮುಂದುವರಿಸಿದ್ದಾರೆ. ಸೆ.2ರಂದು ಸಿದ್ದಾರ್ಥ್​ ಶುಕ್ಲಾ ನಿಧನರಾದರು. ಸೆ.4ರಂದು ಸ್ಟೀವ್​ ಹಫ್​ ಅವರು ತಮ್ಮ ಯೂಟ್ಯೂಬ್​ ಚಾನೆಲ್​ನಲ್ಲಿ ವಿಡಿಯೋ ಹಂಚಿಕೊಂಡಿದ್ದು, ಅದರಲ್ಲಿರುವ ಧ್ವನಿ ಸಿದ್ದಾರ್ಥ್​ ಶುಕ್ಲಾರ ಆತ್ಮದ್ದು ಎಂದು ಹೇಳುತ್ತಿದ್ದಾರೆ.

‘ದೇಹ ಬಿಡುವಾಗ ನೀವು ಏನನ್ನು ನೋಡಿದ್ರಿ’ ಎಂದು ಕೇಳಿದ್ದಕ್ಕೆ ‘ಒಬ್ಬ ಗಂಧರ್ವನನ್ನು ನೋಡಿದೆ’ ಎಂದು ಆ ಧ್ವನಿ ಉತ್ತರಿಸಿದೆ. ‘ಸಾಯುವಾಗ ನನಗೆ ತುಂಬ ನೋವಾಯಿತು. ನಾನು ನಗ್ನವಾಗಿದ್ದೆ. ನಾನೀಗ ಸ್ವರ್ಗದಲ್ಲಿ ಇದ್ದೇನೆ. ನಾನು ದೇವರ ಜೊತೆ ಇದ್ದೇನೆ. ನನ್ನ ಬಗ್ಗೆ ಯೋಚನೆ ಮಾಡಿ’ ಎಂಬಿತ್ಯಾದಿ ಮಾತುಗಳನ್ನು ಆ ಧ್ವನಿ ಹೇಳಿದೆ. ಈ ವಿಡಿಯೋ ಲಕ್ಷಾಂತರ ಬಾರಿ ವೀಕ್ಷಣೆ ಕಂಡಿದೆ. ಇದನ್ನು ಕೆಲವರು ನಂಬಿದ್ದಾರೆ. ಮತ್ತೆ ಕೆಲವರು ಇದೆಲ್ಲ ಸುಳ್ಳು ಎಂದು ಸ್ಟೀವ್​ ಹಫ್​ಗೆ ನೆಗೆಟಿವ್​ ಕಮೆಂಟ್​ ಮಾಡಿದ್ದಾರೆ.

ಫೋಟೋಗ್ರಾಫರ್​ ಕೂಡ ಆಗಿರುವ ಸ್ಟೀವ್​ ಹಫ್​ ಅವರು ಪ್ಯಾರಾ ನಾರ್ಮಲ್​ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ತುಂಬ ಫೇಮಸ್​ ಆಗಿದ್ದಾರೆ. ಅವರ ಯೂಟ್ಯೂಬ್​ ಚಾನೆಲ್​ಗೆ 19 ಲಕ್ಷ ಚಂದದಾರರು ಇದ್ದಾರೆ. ಸತ್ತವರ ಆತ್ಮಗಳ ಜೊತೆ ಮಾತನಾಡಲು ತಾವು ಕೆಲವೊಂದು ಉಪಕರಣಗಳನ್ನು ಕಂಡು ಹಿಡಿದಿರುವುದಾಗಿ ಅವರು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ:

‘ನೀನೂ ಸತ್ತು ಹೋಗು’: ಸಿದ್ದಾರ್ಥ್​ ಶುಕ್ಲಾ ನಿಧನದ ಬಳಿಕ ಕಿಡಿಗೇಡಿಗಳಿಂದ ನಟಿಗೆ ಮೆಸೇಜ್​; ಆಸ್ಪತ್ರೆಗೆ ದಾಖಲು

Sidharth Shukla: ಸಿದ್ದಾರ್ಥ್​ ಶುಕ್ಲಾ ಸಾವಿನ ಸಮಯದ ಬಗ್ಗೆ ಮೂಡಿದೆ ಶಂಕೆ; ಹಿಂದೂಸ್ತಾನಿ ಭಾವು ಹೇಳಿದ ಇನ್ನೊಂದು ಕಥೆ

Published On - 12:07 pm, Mon, 13 September 21

ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಗಾಜಿಯಾಬಾದ್ ಅಪಾರ್ಟ್​ಮೆಂಟ್​​ ಲಿಫ್ಟ್‌ನಲ್ಲಿ ಸಿಲುಕಿದ ಮಗು
ಗಾಜಿಯಾಬಾದ್ ಅಪಾರ್ಟ್​ಮೆಂಟ್​​ ಲಿಫ್ಟ್‌ನಲ್ಲಿ ಸಿಲುಕಿದ ಮಗು
ಆರ್​ಸಿಬಿ ವಿರುದ್ಧ ಶತಕ ಬಾರಿಸಿ ಪಲ್ಟಿ ಹೊಡೆದ ಪಂತ್
ಆರ್​ಸಿಬಿ ವಿರುದ್ಧ ಶತಕ ಬಾರಿಸಿ ಪಲ್ಟಿ ಹೊಡೆದ ಪಂತ್
ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ
ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ನಕಲಿ ಫೋಟೋ ವಿವಾದದ ಬಗ್ಗೆ ಪಾಕ್ ಪಿಎಂ, ಸೇನಾ ಮುಖ್ಯಸ್ಥರನ್ನು ಕೆಣಕಿದ ಓವೈಸಿ
ನಕಲಿ ಫೋಟೋ ವಿವಾದದ ಬಗ್ಗೆ ಪಾಕ್ ಪಿಎಂ, ಸೇನಾ ಮುಖ್ಯಸ್ಥರನ್ನು ಕೆಣಕಿದ ಓವೈಸಿ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್
ಕ್ಷೇತ್ರದಲ್ಲಿ ಮಾಡಲು ಬೇಕಾದಷ್ಟು ಕೆಲಸವಿದೆ, ಮುಂದುವರಿಸುತ್ತೇನೆ: ಸೋಮಶೇಖರ್
ಕ್ಷೇತ್ರದಲ್ಲಿ ಮಾಡಲು ಬೇಕಾದಷ್ಟು ಕೆಲಸವಿದೆ, ಮುಂದುವರಿಸುತ್ತೇನೆ: ಸೋಮಶೇಖರ್