AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಷ್ಟು ದಿನ ಬದುಕುತ್ತೇನೋ ಗೊತ್ತಿಲ್ಲ, ದೇವರಿಗೆ ಬಿಟ್ಟಿದ್ದು: ಸಲ್ಮಾನ್ ಖಾನ್

ನಟ ಸಲ್ಮಾನ್ ಖಾನ್ ಅವರಿಗೆ ಜೀವ ಬೆದರಿಕೆ ಇದೆ. ಎಲ್ಲಿ ಹೋದರೂ ಅವರು ಹೈ ಸೆಕ್ಯೂರಿಟಿ ಜೊತೆಗೆ ಹೋಗಬೇಕು. ಈ ಬಗ್ಗೆ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ. ‘ಸಿಕಂದರ್’ ಸಿನಿಮಾದ ಬಿಡುಗಡೆ ಪ್ರಯುಕ್ತ ಅವರು ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಒಂದಷ್ಟು ಪ್ರಶ್ನೆಗಳಿಗೆ ಸಲ್ಮಾನ್ ಖಾನ್ ಉತ್ತರ ನೀಡಿದ್ದಾರೆ.

ಎಷ್ಟು ದಿನ ಬದುಕುತ್ತೇನೋ ಗೊತ್ತಿಲ್ಲ, ದೇವರಿಗೆ ಬಿಟ್ಟಿದ್ದು: ಸಲ್ಮಾನ್ ಖಾನ್
Salman Khan
ಮದನ್​ ಕುಮಾರ್​
|

Updated on: Mar 27, 2025 | 7:11 PM

Share

ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ಅವರನ್ನು ಕೊಲ್ಲುವುದಾಗಿ ಲಾರೆನ್ಸ್ ಬಿಷ್ಣೋಯ್ (Lawrence Bishnoi) ಬೆದರಿಕೆ ಹಾಕಿದ್ದು ಗೊತ್ತೇ ಇದೆ. ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ನಡೆದ ಬಳಿಕವಂತೂ ಅವರ ಅಭಿಮಾನಿಗಳಿಗೆ ಆತಂಕ ಹೆಚ್ಚಾಗಿದೆ. ಈಗ ಸಲ್ಮಾನ್ ಅವರು ಬಿಗಿ ಭದ್ರತೆಯ ನಡುವೆಯೇ ಬದುಕಬೇಕಾಗಿದೆ. ಶೂಟಿಂಗ್, ಪ್ರಮೋಷನ್, ಮೀಟಿಂಗ್.. ಹೀಗೆ ಯಾವುದೇ ಕೆಲಸಕ್ಕೆ ಹೋದರೂ ಅವರ ಜೊತೆ ಹತ್ತಾರು ಮಂದಿ ಬಾಡಿ ಗಾರ್ಡ್ಸ್ ಇರುತ್ತಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಸಲ್ಮಾನ್ ಖಾನ್ ಅವರು ಮೌನ ಮುರಿದಿದ್ದಾರೆ. ಎಲ್ಲವನ್ನೂ ದೇವರಿಗೆ ಬಿಟ್ಟಿದ್ದೇನೆ ಎಂದು ಅವರು ಹೇಳಿದ್ದಾರೆ.

‘ಭಗವಾನ್, ಅಲ್ಲಾ.. ಎಲ್ಲವೂ ಅವನ ಮೇಲಿದೆ. ಎಷ್ಟು ಆಯಸ್ಸು ಬರೆದಿದೆಯೋ ಅಷ್ಟೇ. ಕೆಲವೊಮ್ಮೆ ಇಷ್ಟು ಜನರನ್ನು ಒಟ್ಟಿಗೆ ಇಟ್ಟುಕೊಂಡು ಹೋಗಬೇಕಾಗುತ್ತದೆ. ಅದೇ ಸಮಸ್ಯೆ ಆಗಿಬಿಡುತ್ತದೆ’ ಎಂದು ಸಲ್ಮಾನ್ ಖಾನ್ ಅವರು ಹೇಳಿದ್ದಾರೆ. ‘ಸಿಕಂದರ್’ ಕುರಿತ ಸುದ್ದಿಗೋಷ್ಠಿಗೆ ಬಾಡಿಗಾರ್ಡ್ಸ್​ ಜೊತೆ ಬಂದ ಸಲ್ಮಾನ್ ಖಾನ್ ಅವರ ವಿಡಿಯೋಗಳು ವೈರಲ್ ಆಗಿವೆ.

1998ರಲ್ಲಿ ‘ಹಮ್ ಸಾಥ್ ಸಾಥ್ ಹೈ’ ಸಿನಿಮಾದ ಶೂಟಿಂಗ್ ವೇಳೆ ಕೃಷ್ಣಮೃಗ ಬೇಟೆ ಆಡಿದ ಆರೋಪ ಸಲ್ಮಾನ್ ಖಾನ್ ಮೇಲೆ ಎದುರಾಯಿತು. ಆಗಿನಿಂದಲೂ ಸಲ್ಮಾನ್ ಖಾನ್ ಅವರಿಗೆ ಜೀವ ಬೆದರಿಕೆ ಬರುತ್ತಲೇ ಇದೆ. ಅವರನ್ನು ಹತ್ಯೆ ಮಾಡಬೇಕು ಎಂದು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್​ನವರು ಪ್ರಯತ್ನಿಸುತ್ತಲೇ ಇದ್ದಾರೆ. ಬಹಿರಂಗವಾಗಿಯೇ ಕೊಲೆ ಬೆದರಿಗೆ ಹಾಕಲಾಗುತ್ತಿದೆ.

ಇದನ್ನೂ ಓದಿ
Image
ಸಲ್ಲು ಜೊತೆ ಪ್ರೇಮ, ಇಬ್ಬರು ಮಕ್ಕಳ ತಂದೆಯ ಜೊತೆ ವಿವಾಹ, ಆ ಬಳಿಕ ವಿಚ್ಛೇದನ
Image
ಸಿನಿಮಾ ಕೈಬಿಟ್ಟು ಸಲ್ಮಾನ್ ಖಾನ್​ಗೆ ಕ್ಷಮೆ ಕೇಳಿದ ಅಟ್ಲಿ; ರಾಂಗ್ ಆದ ನಟ?
Image
ದಕ್ಷಿಣದ ನಿರ್ದೇಶಕನ ಮೇಲೆ ಉರಿದು ಬಿದ್ದ ಸಲ್ಮಾನ್ ಖಾನ್ ಅಭಿಮಾನಿಗಳು, ಕಾರಣ?
Image
ಸಲ್ಮಾನ್ ಖಾನ್​ಗೆ ಬಂದಿರಲಿಲ್ಲ ಆಫರ್; ಜೀವನ ಬದಲಾಯಿಸಿದ ವ್ಯಕ್ತಿ ಇವರು

ಇದನ್ನೂ ಓದಿ: ಸಲ್ಮಾನ್ ಖಾನ್ ಸಿನಿಮಾದಲ್ಲಿ ಕಂತೆ ಕಂತೆ ನಕಲಿ ನೋಟು ಬಳಕೆ; ಇಲ್ಲಿದೆ ಸಾಕ್ಷಿ

ಮನೆಮೇಲೆ ಗುಂಡಿನ ದಾಳಿ ನಡೆದ ನಂತರ ಸಲ್ಮಾನ್ ಖಾನ್ ಅವರು ಭದ್ರತೆ ಹೆಚ್ಚಿಸಿಕೊಂಡರು. ಅವರ ಇಡೀ ಕುಟುಂಬಕ್ಕೆ ಈ ಘಟನೆಯಿಂದ ಶಾಕ್ ಆಗಿದೆ. ಒಂದಷ್ಟು ದಿನಗಳ ಕಾಲ ಸಲ್ಮಾನ್ ಖಾನ್ ಅವರು ಮನೆಯಿಂದ ಹೊರಗೆ ಬಂದಿರಲಿಲ್ಲ. ಆದರೆ ಎಷ್ಟು ದಿನ ಹಾಗಿರಲು ಸಾಧ್ಯ? ಶೂಟಿಂಗ್​ನಲ್ಲಿ ಅವರು ಪಾಲ್ಗೊಳ್ಳಲೇಬೇಕು. ಹಾಗಾಗಿ ಅಪಾಯದ ನಡುವೆಯೇ ಸಲ್ಮಾನ್ ಖಾನ್ ಅವರು ಸಿನಿಮಾ ಕೆಲಸಗಳನ್ನು ಮಾಡುತ್ತಿದ್ದಾರೆ.

‘ಸಿಕಂದರ್’ ಸಿನಿಮಾ ಬಗ್ಗೆ ಹೇಳುವುದಾದರೆ, ಈ ಚಿತ್ರಕ್ಕೆ ಎ.ಆರ್. ಮುರುಗದಾಸ್ ಅವರು ನಿರ್ದೇಶನ ಮಾಡಿದ್ದಾರೆ. ರಶ್ಮಿಕಾ ಮಂದಣ್ಣ ಮತ್ತು ಸಲ್ಮಾನ್ ಖಾನ್ ಅವರು ಜೋಡಿಯಾಗಿ ನಟಿಸಿದ್ದಾರೆ. ಏಪ್ರಿಲ್ 30ರಂದು ಈ ಚಿತ್ರ ಬಿಡುಗಡೆ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!