AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಷ್ಟು ದಿನ ಬದುಕುತ್ತೇನೋ ಗೊತ್ತಿಲ್ಲ, ದೇವರಿಗೆ ಬಿಟ್ಟಿದ್ದು: ಸಲ್ಮಾನ್ ಖಾನ್

ನಟ ಸಲ್ಮಾನ್ ಖಾನ್ ಅವರಿಗೆ ಜೀವ ಬೆದರಿಕೆ ಇದೆ. ಎಲ್ಲಿ ಹೋದರೂ ಅವರು ಹೈ ಸೆಕ್ಯೂರಿಟಿ ಜೊತೆಗೆ ಹೋಗಬೇಕು. ಈ ಬಗ್ಗೆ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ. ‘ಸಿಕಂದರ್’ ಸಿನಿಮಾದ ಬಿಡುಗಡೆ ಪ್ರಯುಕ್ತ ಅವರು ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಒಂದಷ್ಟು ಪ್ರಶ್ನೆಗಳಿಗೆ ಸಲ್ಮಾನ್ ಖಾನ್ ಉತ್ತರ ನೀಡಿದ್ದಾರೆ.

ಎಷ್ಟು ದಿನ ಬದುಕುತ್ತೇನೋ ಗೊತ್ತಿಲ್ಲ, ದೇವರಿಗೆ ಬಿಟ್ಟಿದ್ದು: ಸಲ್ಮಾನ್ ಖಾನ್
Salman Khan
Follow us
ಮದನ್​ ಕುಮಾರ್​
|

Updated on: Mar 27, 2025 | 7:11 PM

ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ಅವರನ್ನು ಕೊಲ್ಲುವುದಾಗಿ ಲಾರೆನ್ಸ್ ಬಿಷ್ಣೋಯ್ (Lawrence Bishnoi) ಬೆದರಿಕೆ ಹಾಕಿದ್ದು ಗೊತ್ತೇ ಇದೆ. ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ನಡೆದ ಬಳಿಕವಂತೂ ಅವರ ಅಭಿಮಾನಿಗಳಿಗೆ ಆತಂಕ ಹೆಚ್ಚಾಗಿದೆ. ಈಗ ಸಲ್ಮಾನ್ ಅವರು ಬಿಗಿ ಭದ್ರತೆಯ ನಡುವೆಯೇ ಬದುಕಬೇಕಾಗಿದೆ. ಶೂಟಿಂಗ್, ಪ್ರಮೋಷನ್, ಮೀಟಿಂಗ್.. ಹೀಗೆ ಯಾವುದೇ ಕೆಲಸಕ್ಕೆ ಹೋದರೂ ಅವರ ಜೊತೆ ಹತ್ತಾರು ಮಂದಿ ಬಾಡಿ ಗಾರ್ಡ್ಸ್ ಇರುತ್ತಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಸಲ್ಮಾನ್ ಖಾನ್ ಅವರು ಮೌನ ಮುರಿದಿದ್ದಾರೆ. ಎಲ್ಲವನ್ನೂ ದೇವರಿಗೆ ಬಿಟ್ಟಿದ್ದೇನೆ ಎಂದು ಅವರು ಹೇಳಿದ್ದಾರೆ.

‘ಭಗವಾನ್, ಅಲ್ಲಾ.. ಎಲ್ಲವೂ ಅವನ ಮೇಲಿದೆ. ಎಷ್ಟು ಆಯಸ್ಸು ಬರೆದಿದೆಯೋ ಅಷ್ಟೇ. ಕೆಲವೊಮ್ಮೆ ಇಷ್ಟು ಜನರನ್ನು ಒಟ್ಟಿಗೆ ಇಟ್ಟುಕೊಂಡು ಹೋಗಬೇಕಾಗುತ್ತದೆ. ಅದೇ ಸಮಸ್ಯೆ ಆಗಿಬಿಡುತ್ತದೆ’ ಎಂದು ಸಲ್ಮಾನ್ ಖಾನ್ ಅವರು ಹೇಳಿದ್ದಾರೆ. ‘ಸಿಕಂದರ್’ ಕುರಿತ ಸುದ್ದಿಗೋಷ್ಠಿಗೆ ಬಾಡಿಗಾರ್ಡ್ಸ್​ ಜೊತೆ ಬಂದ ಸಲ್ಮಾನ್ ಖಾನ್ ಅವರ ವಿಡಿಯೋಗಳು ವೈರಲ್ ಆಗಿವೆ.

1998ರಲ್ಲಿ ‘ಹಮ್ ಸಾಥ್ ಸಾಥ್ ಹೈ’ ಸಿನಿಮಾದ ಶೂಟಿಂಗ್ ವೇಳೆ ಕೃಷ್ಣಮೃಗ ಬೇಟೆ ಆಡಿದ ಆರೋಪ ಸಲ್ಮಾನ್ ಖಾನ್ ಮೇಲೆ ಎದುರಾಯಿತು. ಆಗಿನಿಂದಲೂ ಸಲ್ಮಾನ್ ಖಾನ್ ಅವರಿಗೆ ಜೀವ ಬೆದರಿಕೆ ಬರುತ್ತಲೇ ಇದೆ. ಅವರನ್ನು ಹತ್ಯೆ ಮಾಡಬೇಕು ಎಂದು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್​ನವರು ಪ್ರಯತ್ನಿಸುತ್ತಲೇ ಇದ್ದಾರೆ. ಬಹಿರಂಗವಾಗಿಯೇ ಕೊಲೆ ಬೆದರಿಗೆ ಹಾಕಲಾಗುತ್ತಿದೆ.

ಇದನ್ನೂ ಓದಿ
Image
ಸಲ್ಲು ಜೊತೆ ಪ್ರೇಮ, ಇಬ್ಬರು ಮಕ್ಕಳ ತಂದೆಯ ಜೊತೆ ವಿವಾಹ, ಆ ಬಳಿಕ ವಿಚ್ಛೇದನ
Image
ಸಿನಿಮಾ ಕೈಬಿಟ್ಟು ಸಲ್ಮಾನ್ ಖಾನ್​ಗೆ ಕ್ಷಮೆ ಕೇಳಿದ ಅಟ್ಲಿ; ರಾಂಗ್ ಆದ ನಟ?
Image
ದಕ್ಷಿಣದ ನಿರ್ದೇಶಕನ ಮೇಲೆ ಉರಿದು ಬಿದ್ದ ಸಲ್ಮಾನ್ ಖಾನ್ ಅಭಿಮಾನಿಗಳು, ಕಾರಣ?
Image
ಸಲ್ಮಾನ್ ಖಾನ್​ಗೆ ಬಂದಿರಲಿಲ್ಲ ಆಫರ್; ಜೀವನ ಬದಲಾಯಿಸಿದ ವ್ಯಕ್ತಿ ಇವರು

ಇದನ್ನೂ ಓದಿ: ಸಲ್ಮಾನ್ ಖಾನ್ ಸಿನಿಮಾದಲ್ಲಿ ಕಂತೆ ಕಂತೆ ನಕಲಿ ನೋಟು ಬಳಕೆ; ಇಲ್ಲಿದೆ ಸಾಕ್ಷಿ

ಮನೆಮೇಲೆ ಗುಂಡಿನ ದಾಳಿ ನಡೆದ ನಂತರ ಸಲ್ಮಾನ್ ಖಾನ್ ಅವರು ಭದ್ರತೆ ಹೆಚ್ಚಿಸಿಕೊಂಡರು. ಅವರ ಇಡೀ ಕುಟುಂಬಕ್ಕೆ ಈ ಘಟನೆಯಿಂದ ಶಾಕ್ ಆಗಿದೆ. ಒಂದಷ್ಟು ದಿನಗಳ ಕಾಲ ಸಲ್ಮಾನ್ ಖಾನ್ ಅವರು ಮನೆಯಿಂದ ಹೊರಗೆ ಬಂದಿರಲಿಲ್ಲ. ಆದರೆ ಎಷ್ಟು ದಿನ ಹಾಗಿರಲು ಸಾಧ್ಯ? ಶೂಟಿಂಗ್​ನಲ್ಲಿ ಅವರು ಪಾಲ್ಗೊಳ್ಳಲೇಬೇಕು. ಹಾಗಾಗಿ ಅಪಾಯದ ನಡುವೆಯೇ ಸಲ್ಮಾನ್ ಖಾನ್ ಅವರು ಸಿನಿಮಾ ಕೆಲಸಗಳನ್ನು ಮಾಡುತ್ತಿದ್ದಾರೆ.

‘ಸಿಕಂದರ್’ ಸಿನಿಮಾ ಬಗ್ಗೆ ಹೇಳುವುದಾದರೆ, ಈ ಚಿತ್ರಕ್ಕೆ ಎ.ಆರ್. ಮುರುಗದಾಸ್ ಅವರು ನಿರ್ದೇಶನ ಮಾಡಿದ್ದಾರೆ. ರಶ್ಮಿಕಾ ಮಂದಣ್ಣ ಮತ್ತು ಸಲ್ಮಾನ್ ಖಾನ್ ಅವರು ಜೋಡಿಯಾಗಿ ನಟಿಸಿದ್ದಾರೆ. ಏಪ್ರಿಲ್ 30ರಂದು ಈ ಚಿತ್ರ ಬಿಡುಗಡೆ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Daily Devotional: ಶನಿ ಅಥವಾ ಸಾಡೇಸಾತಿಯಿಂದ ಪಾರಾಗಲು ಏನು ಮಾಡಬೇಕು?
Daily Devotional: ಶನಿ ಅಥವಾ ಸಾಡೇಸಾತಿಯಿಂದ ಪಾರಾಗಲು ಏನು ಮಾಡಬೇಕು?
Daily Horoscope: ಇಂದಿನ ದ್ವಾದಶ ರಾಶಿಗಳ ಫಲಾಫಲವನ್ನು ತಿಳಿಯಿರಿ
Daily Horoscope: ಇಂದಿನ ದ್ವಾದಶ ರಾಶಿಗಳ ಫಲಾಫಲವನ್ನು ತಿಳಿಯಿರಿ
ಹೆಂಡತಿ, ಮಕ್ಕಳು ಇರುವ ಮನು ಹಿಂದೆ ಯಾಕೆ ಹೋದೆ? ಉತ್ತರಿಸಿದ ಸಂತ್ರಸ್ತ ಮಹಿಳೆ
ಹೆಂಡತಿ, ಮಕ್ಕಳು ಇರುವ ಮನು ಹಿಂದೆ ಯಾಕೆ ಹೋದೆ? ಉತ್ತರಿಸಿದ ಸಂತ್ರಸ್ತ ಮಹಿಳೆ
ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್