AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರ್ಮಿಕ ಭಾವನೆಗಳಿಗೆ ಧಕ್ಕೆ: ‘ಯಾರಿಯಾ 2’ಸಿನಿಮಾದ ವಿರುದ್ಧ ದೂರು

Yaariyan 2: ಹಿಂದಿ ಸಿನಿಮಾ 'ಯಾರಿಯಾ 2' ವಿರುದ್ಧ ಸಿಖ್ ಸಮುದಾಯ ಅಸಮಾಧಾನ ಹೊರಹಾಕಿದ್ದು, ದೂರು ಸಹ ದಾಖಲು ಮಾಡಿದೆ. ಸಿಖ್ಖರ ಪವಿತ್ರ ಕಿರ್ಪಾನ್ ಅನ್ನು ಆಕ್ಷೇಪಾರ್ಹ ರೀತಿಯಲ್ಲಿ ಧರಿಸಿರುವ ಬಗ್ಗೆ ಸಿಖ್ ಗುರುದ್ವಾರ್ ಪ್ರಬಂಧಕ್ ಸಮಿತಿ ದೂರು ಸಲ್ಲಿಸಿದೆ.

ಧಾರ್ಮಿಕ ಭಾವನೆಗಳಿಗೆ ಧಕ್ಕೆ: ‘ಯಾರಿಯಾ 2’ಸಿನಿಮಾದ ವಿರುದ್ಧ ದೂರು
ಯಾರಿಯಾ 2
ಮಂಜುನಾಥ ಸಿ.
|

Updated on: Aug 30, 2023 | 4:28 PM

Share

ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪದಲ್ಲಿ ಬಾಲಿವುಡ್ (Bollywood) ಸಿನಿಮಾ ‘ಯಾರಿಯಾ 2’ ವಿರುದ್ಧ ದೂರು ದಾಖಲಾಗಿದೆ. ಸಿಖ್ ಗುರುದ್ವಾರ್ ಪ್ರಬಂಧಕ್ ಸಮಿತಿಯು ದೂರು ದಾಖಲಿಸಿದ್ದು, ಆಕ್ಷೇಪಾರ್ಹ ದೃಶ್ಯಗಳನ್ನು ಕೂಡಲೇ ತೆಗೆಯಬೇಕೆಂದು, ಇಲ್ಲವಾದಲ್ಲಿ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಲಾಗಿದೆ. ಸಿಬಿಎಫ್​ಸಿಗೆ ಸಹ ಈ ಬಗ್ಗೆ ಮನವಿ ಮಾಡಿದ್ದು, ಆಕ್ಷೇಪಣೆಗೆ ಒಳಪಟ್ಟಿರುವ ದೃಶ್ಯಗಳಿಗೆ ಕತ್ತರಿ ಹಾಕುವಂತೆ ಮನವಿ ಮಾಡಲಾಗಿದೆ.

‘ಯಾರಿಯಾ 2’ ಸಿನಿಮಾ ಇನ್ನೂ ಬಿಡುಗಡೆ ಆಗಿಲ್ಲ ಆದರೆ ಇತ್ತೀಚೆಗಷ್ಟೆ ಸಿನಿಮಾದ ಹಾಡೊಂದು ಬಿಡುಗಡೆ ಆಗಿದೆ. ಹಾಡಿನಲ್ಲಿ ನಾಯಕ, ಕೋಪಗೊಂಡ ನಾಯಕಿಯನ್ನು ಒಲಿಸಿಕೊಳ್ಳಲು ಹಿಂದೆ ಬಿದ್ದಿರುವ ಸನ್ನಿವೇಶವಿದೆ. ಈ ಹಾಡಿನಲ್ಲಿ ನಾಯಕ ಸಿಖ್ಖರು ಧರಿಸುವ ಕಿರ್ಪಾನ್ ಅನ್ನು ಧರಿಸಿದ್ದಾರೆ. ಇದು ಸಿಖ್ ಸಮುದಾಯದ ಆಕ್ಷೇಪಣೆಗೆ ಕಾರಣವಾಗಿದೆ.

ಈ ಬಗ್ಗೆ ಸಿಖ್ ಗುರುದ್ವಾರ್ ಪ್ರಬಂಧಕ್ ಸಮಿತಿ ದೂರು ಸಲ್ಲಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಹ ಆಕ್ಷೇಪಣೆ ವ್ಯಕ್ತಪಡಿಸಿದ್ದು, ‘ರಾಧಿಕಾ ರಾವ್ ಮತ್ತು ವಿನಯ್ ಸಪ್ರು ನಿರ್ದೇಶನದ ‘ಯಾರಿಯಾ 2’ ಸಿನಿಮಾದ ‘ಸವಾರೆ ಘರ್’ ಹಾಡಿನಲ್ಲಿ ಚಿತ್ರೀಕರಿಸಲಾಗಿರುವ ದೃಶ್ಯಗಳ ಬಗ್ಗೆ ತೀವ್ರ ಖಂಡನೆ ವ್ಯಕ್ತಪಡಿಸುತ್ತಿದ್ದೇವೆ. ಹಾಡಿನಲ್ಲಿ ನಟನೋರ್ವ ಸಿಖ್ಖರ ಪವಿತ್ರ ‘ಕಿರ್ಪಾನ್’ ಅನ್ನು ಅತ್ಯಂತ ಆಕ್ಷೇಪಾರ್ಹ ರೀತಿಯಲ್ಲಿ ಧರಿಸಿದ್ದಾರೆ. ಇದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ” ಎಂದಿದ್ದಾರೆ.

ಇದನ್ನೂ ಓದಿ:ವಿವಾದದಲ್ಲಿ ರಾಮ್​ ಚರಣ್​ ಪತ್ನಿ ಉಪಾಸನಾ; ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪ

‘ಈ ದೃಶ್ಯಗಳು ಪ್ರಪಂಚದಾದ್ಯಂತ ಇರುವ ಸಿಖ್ಖರ ಧಾರ್ಮಿಕ ಭಾವನೆಗಳಿಗೆ ಘಾಸಿ ಉಂಟು ಮಾಡುತ್ತಿದೆ. ‘ಅಕಾಲ್ ತಕ್ತ್ ಸಾಹೀಬ್​’ ಸಿಖ್ ಧಾರ್ಮಿಕ ನೀತಿ ಸಂಹಿತೆ ಅನುಸಾರ ಸಿಖ್ ವ್ಯಕ್ತಿ ಮಾತ್ರವೇ ಕಿರ್ಪಾನ್ ಅನ್ನು ಧರಿಸಬಹುದಾಗಿದೆ. ಈ ಹಕ್ಕು ಭಾರತೀಯ ಸಂವಿಧಾನವೇ ನೀಡಿದ್ದಾಗಿದೆ. ‘ಯಾರಿಯಾ 2’ ಚಿತ್ರತಂಡವು ಈ ನಿಯಮವನ್ನು ಉಲ್ಲಂಘನೆ ಮಾಡಿದೆ’ ಎಂದಿದೆ ಸಿಖ್ ಗುರುದ್ವಾರ್ ಪ್ರಬಂಧಕ್ ಸಮಿತಿ.

‘ವಿಡಿಯೋ ಹಾಡು ಪ್ರಸ್ತುತ ಟಿಸೀರೀಸ್ ಯೂಟ್ಯೂಬ್ ಚಾನೆಲ್​ನಲ್ಲಿ ಲಭ್ಯವಿದ್ದು, ಈ ಕೂಡಲೇ ಈ ವಿಡಿಯೋವನ್ನು ಹಿಂಪಡೆಯಬೇಕು. ಸಿಖ್ ಸಮುದಾಯಕ್ಕೆ ಅಪಮಾನ ಮಾಡುವ ದೃಶ್ಯಗಳನ್ನು ತೆಗೆಯದೇ ಸಿನಿಮಾವನ್ನು ಬಿಡುಗಡೆ ಮಾಡಬಾರದು. ಇದಕ್ಕೆ ಸಿಬಿಎಫ್​ಸಿ ಸಹ ಅವಕಾಶ ನೀಡಬಾರದು. ಮಾತ್ರವಲ್ಲದೆ ಈ ವಿಡಿಯೋ ಹಾಡು ಲಭ್ಯವಿರುವ ಇತರೆ ಸಾಮಾಜಿಕ ಜಾಲತಾಣಗಳು, ಡಿಜಿಟಲ್ ವೇದಿಕೆಗಳಿಂದಲೂ ಹಾಡನ್ನು ತೆಗೆಯಬೇಕು. ಇಲ್ಲವಾದರೆ ಕಾನೂನು ಹೋರಾಟದ ಜೊತೆಗೆ ಪ್ರತಿಭಟನೆಗಳನ್ನು ಎದುರಿಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದ್ದಾರೆ.

‘ಯಾರಿಯಾ 2’ ಸಿನಿಮಾ ತಂಡವು ಸಾಮಾಜಿಕ ಜಾಲತಾಣದ ಮೂಲಕ ಸಮುದಾಯದ ಕ್ಷಮೆ ಕೇಳಿದ್ದು, ಕಿರ್ಪಾನ್ ಧರಿಸಿರುವ ದೃಶ್ಯಗಳನ್ನು ತೆಗೆಯುವುದಾಗಿ ಭರವಸೆ ನೀಡಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ