AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರ್ಮಿಕ ಭಾವನೆಗಳಿಗೆ ಧಕ್ಕೆ: ‘ಯಾರಿಯಾ 2’ಸಿನಿಮಾದ ವಿರುದ್ಧ ದೂರು

Yaariyan 2: ಹಿಂದಿ ಸಿನಿಮಾ 'ಯಾರಿಯಾ 2' ವಿರುದ್ಧ ಸಿಖ್ ಸಮುದಾಯ ಅಸಮಾಧಾನ ಹೊರಹಾಕಿದ್ದು, ದೂರು ಸಹ ದಾಖಲು ಮಾಡಿದೆ. ಸಿಖ್ಖರ ಪವಿತ್ರ ಕಿರ್ಪಾನ್ ಅನ್ನು ಆಕ್ಷೇಪಾರ್ಹ ರೀತಿಯಲ್ಲಿ ಧರಿಸಿರುವ ಬಗ್ಗೆ ಸಿಖ್ ಗುರುದ್ವಾರ್ ಪ್ರಬಂಧಕ್ ಸಮಿತಿ ದೂರು ಸಲ್ಲಿಸಿದೆ.

ಧಾರ್ಮಿಕ ಭಾವನೆಗಳಿಗೆ ಧಕ್ಕೆ: ‘ಯಾರಿಯಾ 2’ಸಿನಿಮಾದ ವಿರುದ್ಧ ದೂರು
ಯಾರಿಯಾ 2
ಮಂಜುನಾಥ ಸಿ.
|

Updated on: Aug 30, 2023 | 4:28 PM

Share

ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪದಲ್ಲಿ ಬಾಲಿವುಡ್ (Bollywood) ಸಿನಿಮಾ ‘ಯಾರಿಯಾ 2’ ವಿರುದ್ಧ ದೂರು ದಾಖಲಾಗಿದೆ. ಸಿಖ್ ಗುರುದ್ವಾರ್ ಪ್ರಬಂಧಕ್ ಸಮಿತಿಯು ದೂರು ದಾಖಲಿಸಿದ್ದು, ಆಕ್ಷೇಪಾರ್ಹ ದೃಶ್ಯಗಳನ್ನು ಕೂಡಲೇ ತೆಗೆಯಬೇಕೆಂದು, ಇಲ್ಲವಾದಲ್ಲಿ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಲಾಗಿದೆ. ಸಿಬಿಎಫ್​ಸಿಗೆ ಸಹ ಈ ಬಗ್ಗೆ ಮನವಿ ಮಾಡಿದ್ದು, ಆಕ್ಷೇಪಣೆಗೆ ಒಳಪಟ್ಟಿರುವ ದೃಶ್ಯಗಳಿಗೆ ಕತ್ತರಿ ಹಾಕುವಂತೆ ಮನವಿ ಮಾಡಲಾಗಿದೆ.

‘ಯಾರಿಯಾ 2’ ಸಿನಿಮಾ ಇನ್ನೂ ಬಿಡುಗಡೆ ಆಗಿಲ್ಲ ಆದರೆ ಇತ್ತೀಚೆಗಷ್ಟೆ ಸಿನಿಮಾದ ಹಾಡೊಂದು ಬಿಡುಗಡೆ ಆಗಿದೆ. ಹಾಡಿನಲ್ಲಿ ನಾಯಕ, ಕೋಪಗೊಂಡ ನಾಯಕಿಯನ್ನು ಒಲಿಸಿಕೊಳ್ಳಲು ಹಿಂದೆ ಬಿದ್ದಿರುವ ಸನ್ನಿವೇಶವಿದೆ. ಈ ಹಾಡಿನಲ್ಲಿ ನಾಯಕ ಸಿಖ್ಖರು ಧರಿಸುವ ಕಿರ್ಪಾನ್ ಅನ್ನು ಧರಿಸಿದ್ದಾರೆ. ಇದು ಸಿಖ್ ಸಮುದಾಯದ ಆಕ್ಷೇಪಣೆಗೆ ಕಾರಣವಾಗಿದೆ.

ಈ ಬಗ್ಗೆ ಸಿಖ್ ಗುರುದ್ವಾರ್ ಪ್ರಬಂಧಕ್ ಸಮಿತಿ ದೂರು ಸಲ್ಲಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಹ ಆಕ್ಷೇಪಣೆ ವ್ಯಕ್ತಪಡಿಸಿದ್ದು, ‘ರಾಧಿಕಾ ರಾವ್ ಮತ್ತು ವಿನಯ್ ಸಪ್ರು ನಿರ್ದೇಶನದ ‘ಯಾರಿಯಾ 2’ ಸಿನಿಮಾದ ‘ಸವಾರೆ ಘರ್’ ಹಾಡಿನಲ್ಲಿ ಚಿತ್ರೀಕರಿಸಲಾಗಿರುವ ದೃಶ್ಯಗಳ ಬಗ್ಗೆ ತೀವ್ರ ಖಂಡನೆ ವ್ಯಕ್ತಪಡಿಸುತ್ತಿದ್ದೇವೆ. ಹಾಡಿನಲ್ಲಿ ನಟನೋರ್ವ ಸಿಖ್ಖರ ಪವಿತ್ರ ‘ಕಿರ್ಪಾನ್’ ಅನ್ನು ಅತ್ಯಂತ ಆಕ್ಷೇಪಾರ್ಹ ರೀತಿಯಲ್ಲಿ ಧರಿಸಿದ್ದಾರೆ. ಇದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ” ಎಂದಿದ್ದಾರೆ.

ಇದನ್ನೂ ಓದಿ:ವಿವಾದದಲ್ಲಿ ರಾಮ್​ ಚರಣ್​ ಪತ್ನಿ ಉಪಾಸನಾ; ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪ

‘ಈ ದೃಶ್ಯಗಳು ಪ್ರಪಂಚದಾದ್ಯಂತ ಇರುವ ಸಿಖ್ಖರ ಧಾರ್ಮಿಕ ಭಾವನೆಗಳಿಗೆ ಘಾಸಿ ಉಂಟು ಮಾಡುತ್ತಿದೆ. ‘ಅಕಾಲ್ ತಕ್ತ್ ಸಾಹೀಬ್​’ ಸಿಖ್ ಧಾರ್ಮಿಕ ನೀತಿ ಸಂಹಿತೆ ಅನುಸಾರ ಸಿಖ್ ವ್ಯಕ್ತಿ ಮಾತ್ರವೇ ಕಿರ್ಪಾನ್ ಅನ್ನು ಧರಿಸಬಹುದಾಗಿದೆ. ಈ ಹಕ್ಕು ಭಾರತೀಯ ಸಂವಿಧಾನವೇ ನೀಡಿದ್ದಾಗಿದೆ. ‘ಯಾರಿಯಾ 2’ ಚಿತ್ರತಂಡವು ಈ ನಿಯಮವನ್ನು ಉಲ್ಲಂಘನೆ ಮಾಡಿದೆ’ ಎಂದಿದೆ ಸಿಖ್ ಗುರುದ್ವಾರ್ ಪ್ರಬಂಧಕ್ ಸಮಿತಿ.

‘ವಿಡಿಯೋ ಹಾಡು ಪ್ರಸ್ತುತ ಟಿಸೀರೀಸ್ ಯೂಟ್ಯೂಬ್ ಚಾನೆಲ್​ನಲ್ಲಿ ಲಭ್ಯವಿದ್ದು, ಈ ಕೂಡಲೇ ಈ ವಿಡಿಯೋವನ್ನು ಹಿಂಪಡೆಯಬೇಕು. ಸಿಖ್ ಸಮುದಾಯಕ್ಕೆ ಅಪಮಾನ ಮಾಡುವ ದೃಶ್ಯಗಳನ್ನು ತೆಗೆಯದೇ ಸಿನಿಮಾವನ್ನು ಬಿಡುಗಡೆ ಮಾಡಬಾರದು. ಇದಕ್ಕೆ ಸಿಬಿಎಫ್​ಸಿ ಸಹ ಅವಕಾಶ ನೀಡಬಾರದು. ಮಾತ್ರವಲ್ಲದೆ ಈ ವಿಡಿಯೋ ಹಾಡು ಲಭ್ಯವಿರುವ ಇತರೆ ಸಾಮಾಜಿಕ ಜಾಲತಾಣಗಳು, ಡಿಜಿಟಲ್ ವೇದಿಕೆಗಳಿಂದಲೂ ಹಾಡನ್ನು ತೆಗೆಯಬೇಕು. ಇಲ್ಲವಾದರೆ ಕಾನೂನು ಹೋರಾಟದ ಜೊತೆಗೆ ಪ್ರತಿಭಟನೆಗಳನ್ನು ಎದುರಿಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದ್ದಾರೆ.

‘ಯಾರಿಯಾ 2’ ಸಿನಿಮಾ ತಂಡವು ಸಾಮಾಜಿಕ ಜಾಲತಾಣದ ಮೂಲಕ ಸಮುದಾಯದ ಕ್ಷಮೆ ಕೇಳಿದ್ದು, ಕಿರ್ಪಾನ್ ಧರಿಸಿರುವ ದೃಶ್ಯಗಳನ್ನು ತೆಗೆಯುವುದಾಗಿ ಭರವಸೆ ನೀಡಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?