AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಮಗೇನು ಗೊತ್ತಿಲ್ಲ ಸುಮ್ಮನಿರಿ’: ಬಚ್ಚನ್ ಕುಟುಂಬ ಟೀಕಿಸಿದವರಿಗೆ ನಟಿಯ ತಿರುಗೇಟು

Amitabh Bachchan: ಅಮಿತಾಬ್ ಬಚ್ಚನ್, ಐಶ್ವರ್ಯಾ ರೈ ಅನ್ನು ನಿರ್ಲಕ್ಷಿಸಿದ್ದಾರೆ ಎಂದು ಟೀಕಿಸುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದಕ್ಕೆ ಖಡಕ್ ಆಗಿ ಪ್ರತಿಕ್ರಿಯೆ ನೀಡಿರುವ ನಟಿ, ಮಾಜಿ ಪತ್ರಕರ್ತೆ ಸಿಮಿ ಗೆರೆವಾಲ್ ನಿಮಗೇನೂ ಗೊತ್ತಿಲ್ಲ ಸುಮ್ಮನಿದ್ದುಬಿಡಿ ಎಂದಿದ್ದಾರೆ.

‘ನಿಮಗೇನು ಗೊತ್ತಿಲ್ಲ ಸುಮ್ಮನಿರಿ’: ಬಚ್ಚನ್ ಕುಟುಂಬ ಟೀಕಿಸಿದವರಿಗೆ ನಟಿಯ ತಿರುಗೇಟು
 ಶ್ರೀಲಕ್ಷ್ಮೀ ಎಚ್
| Edited By: |

Updated on: Sep 26, 2024 | 6:43 PM

Share

ಐಶ್ವರ್ಯಾ ರೈ ಹಾಗೂ ಅವರ ಮಾವ ಅಮಿತಾಭ್ ಬಚ್ಚನ್ ಮಧ್ಯೆ ಸರಿ ಇಲ್ಲ ಎನ್ನುವ ಮಾತು ಇದೆ. ಐಶ್ವರ್ಯಾ ಹಾಗೂ ಅಮಿತಾಭ್ ಮಧ್ಯೆ ಏನೋ ಕಿರಿಕ್ ಆಗಿದೆ ಎನ್ನಲಾಗಿದೆ. ಅಮಿತಾಭ್ ಅವರು ಮಗಳು ಶ್ವೇತಾ, ಮಗ ಅಭಿಷೇಕ್, ಮೊಮ್ಮೊಗಳು ನವ್ಯಾ ಬಗ್ಗೆ ಪೋಸ್ಟ್ ಹಾಗು ಕಮೆಂಟ್ ಮಾಡುತ್ತಾರೆ. ಅದೇಕೋ ಏನೋ ಐಶ್ವರ್ಯಾ ಅವರನ್ನು ಕಂಡರೆ ಅವರಿಗೆ ಅಷ್ಟಕ್ಕಷ್ಟೆ. ಉದ್ದೇಶ ಪೂರ್ವಕವಾಗಿ ಅವರು ಐಶ್ವರ್ಯಾನ ದೂರವಿಡುತ್ತಿರುವಂತೆ ಕಂಡು ಬರುತ್ತಿದೆ.

ಐಶ್ವರ್ಯಾ ಹಾಗೂ ಅಮಿತಾಭ್ ಮಧ್ಯೆ ಯಾವುದೂ ಸರಿ ಇಲ್ಲ ಎನ್ನಲಾಗಿದೆ. ಈ ಕಾರಣದಿಂದಲೇ ಐಶ್ವರ್ಯಾ ಅವರು ಪತಿ ಅಭಿಷೇಕ್ ಇಂದ ದೂರ ಆಗುವ ಪ್ರಯತ್ನದಲ್ಲಿ ಇದ್ದಾರೆ. ಇತ್ತೀಚೆಗೆ ‘ಜಾಗರೂಕ್ ಜನತಾ’ ಹೆಸರಿನ ಇನ್ಸ್ಟಾಗ್ರಾಮ್ ಖಾತೆ ಮೂಲಕ ಮಹಿಳೆಯೊಬ್ಬರು ವಿಡಿಯೋ ಪೋಸ್ಟ್ ಮಾಡಿದ್ದರು. ಇದರಲ್ಲಿ ಅವರು ಐಶ್ವರ್ಯಾನ ನಿರ್ಲಕ್ಷಿಸಿದ ಅಮಿತಾಭ್ ಅವರನ್ನು ಟೀಕಿಸಿದ್ದರು.

ಇದನ್ನೂ ಓದಿ:ಪತಿ ಅಮಿತಾಬ್ ಬಚ್ಚನ್​ ಬಗ್ಗೆ ಜಯಾ ಬಚ್ಚನ್​ಗೆ ಇದೆ ಒಂದು ದೂರು

ಇದಕ್ಕೆ ಹಿರಿಯ ನಟಿ ಸಿಮಿ ಗರೇವಾಲ್ ಅವರು ಕಮೆಂಟ್ ಮಾಡಿದ್ದಾರೆ. ‘ನಿಮಗೇನು ಗೊತ್ತಿಲ್ಲ. ಇದನ್ನು ನಿಲ್ಲಿಸಿ’ ಎಂದು ಬರೆಇದ್ದಾರೆ. ಅವರ ಕಮೆಂಟ್ ಸ್ವಲ್ಪ ಖಡಕ್ ಆಗಿಯೇ ಇತ್ತು. ಈ ಮೂಲಕ ಬಚ್ಚನ್ ಕುಟುಂಬದಲ್ಲಿ ಎಲ್ಲವೂ ಸರಿಯಾಗಿಯೇ ಇದೆ ಎಂದು ಹೇಳುವ ಪ್ರಯತ್ನ ಮಾಡಿದ್ದಾರೆ. ಇತ್ತೀಚೆಗೆ ಐಶ್ವರ್ಯಾ ಹಾಗೂ ಮಗಳು ಆರಾಧ್ಯಾ ಪ್ಯಾರಿಸ್ ತೆರಳಿದ್ದಾರೆ. ಅಲ್ಲಿ ‘ಪ್ಯಾರಿಸ್ ಫ್ಯಾಷನ್ ವೀಕ್’ನಲ್ಲಿ ಭಾಗಿ ಆಗಿ ಗಮನ ಸೆಳೆದಿದ್ದಾರೆ. ಈ ವೇಳೆ ಐಶ್ವರ್ಯಾ ಕೈಯಲ್ಲಿ ಅಭಿಷೇಕ್ ಈ ಮೊದಲು ಹಾಕಿದ್ದ ರಿಂಗ್ ಇತ್ತು. ಇದು ಫ್ಯಾನ್ಸ್ಗೆ ಗೊಂದಲ ಮೂಡಿಸಿದೆ.

ಐಶ್ವರ್ಯಾ ರೈ ಹಾಗೂ ಅಭಿಷೇಕ್ ಬಚ್ಚನ್ 2007ರ ಏಪ್ರಿಲ್ 20ರಂದು ವಿವಾಹ ಆದರು. ಗ್ರ್ಯಾಂಡ್ ಆಗಿ ಈ ಮದುವೆ ನಡೆಯಿತು. ಈ ದಂಪತಿಗೆ ಆರಾಧ್ಯಾ ಬಚ್ಚನ್ ಹೆಸರಿನ ಮಗಳು ಇದ್ದಾರೆ. ಐಶ್ವರ್ಯಾ ಹಾಗೂ ಆರಾಧ್ಯಾ ಮಾತ್ರ ಒಟ್ಟಾಗಿ ಕಾಣಿಸಿಕೊಳ್ಳುತ್ತಿರುವುದರಿಂದ ಸಹಜವಾಗಿಯೇ ಚರ್ಚೆಗಳು ಸೃಷ್ಟಿ ಆಗಿವೆ. ಆದರೆ, ಈ ಬಗ್ಗೆ ಯಾವುದೇ ಅಧಿಕೃತ ಸ್ಟೇಟ್ಮೆಂಟ್ ಇವರು ನೀಡಿಲ್ಲ. ಈ ಬಗ್ಗೆ ಸ್ಪಷ್ಟನೆ ಸಿಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
ಕಾಕ್ರೋಚ್‌ ಪಕ್ಷದ ಸಂಸ್ಥಾಪಕ ಯಾರು?ಭಾರತದ ಬಗ್ಗೆ ಧ್ವನಿ ಎತ್ತಿದ್ದೇಕೆ?
ಕಾಕ್ರೋಚ್‌ ಪಕ್ಷದ ಸಂಸ್ಥಾಪಕ ಯಾರು?ಭಾರತದ ಬಗ್ಗೆ ಧ್ವನಿ ಎತ್ತಿದ್ದೇಕೆ?
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ