AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಭೇಟಿ ಬಳಿಕ ಟ್ರೋಲ್‌; ಅದ್ನಾನ್ ಸಮಿ ತಿರುಗೇಟು

ಮೋಹನ್ ಭಾಗವತ್ ಭೇಟಿ ಬಳಿಕ ಅದ್ನಾನ್ ಸಾಮಿ ಹಂಚಿಕೊಂಡಿದ್ದ ಫೋಟೋ ಸಖತ್ ವೈರಲ್ ಆಗಿತ್ತು. ಸೋಶಿಯಲ್ ಮೀಡಿಯಾದಲ್ಲಿ ಅವರನ್ನು ಹಿಗ್ಗಾಮುಗ್ಗಾ ಟ್ರೋಲ್ ಮಾಡಲಾಗಿತ್ತು. ಆ ಘಟನೆಗೆ ಈಗ ಅದ್ನಾನ್ ಸಮಿ ಅವರು ಉತ್ತರ ನೀಡಿದ್ದಾರೆ. ‘ನನಗೆ ಏನು ಸರಿ ಅನಿಸುತ್ತದೋ ಅದನ್ನೇ ಮಾಡುತ್ತೇನೆ’ ಎಂದು ಅವರು ಹೇಳಿದ್ದಾರೆ.

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಭೇಟಿ ಬಳಿಕ ಟ್ರೋಲ್‌; ಅದ್ನಾನ್ ಸಮಿ ತಿರುಗೇಟು
Mohan Bhagwat, Adnan Sami
ಮದನ್​ ಕುಮಾರ್​
|

Updated on:May 21, 2026 | 4:56 PM

Share

ಖ್ಯಾತ ಗಾಯಕ ಅದ್ನಾನ್ ಸಮಿ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರನ್ನು ಭೇಟಿಯಾದ ಫೋಟೋಗಳನ್ನು ಹಂಚಿಕೊಂಡಿದ್ದಕ್ಕಾಗಿ ಸೋಶಿಯಲ್ ಮೀಡಿಯಾದಲ್ಲಿ ತೀವ್ರ ಟ್ರೋಲಿಂಗ್‌ಗೆ ಒಳಗಾಗಿದ್ದರು. ಸದ್ಯ ಈ ವಿಚಾರವಾಗಿ ಮೌನ ಮುರಿದಿರುವ ಅದ್ನಾನ್ ಸಮಿ (Adnan Sami) ಅವರು, ಹೀಯಾಳಿಸುವವರ ಬಗ್ಗೆ ತಾವು ಕಿಂಚಿತ್ತೂ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಖಡಕ್ ಆಗಿ ಪ್ರತಿಕ್ರಿಯಿಸಿದ್ದಾರೆ.

ಇತ್ತೀಚೆಗೆ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ತಮ್ಮ ಮೇಲಿನ ಟ್ರೋಲಿಂಗ್ ಮತ್ತು ವಿವಾದಗಳ ಬಗ್ಗೆ ಮಾತನಾಡಿದ ಅದ್ನಾನ್ ಸಮಿ, ‘ನಾನು ಸ್ವತಂತ್ರ ಮನಸ್ಸಿನ ವ್ಯಕ್ತಿ. ಸದ್ಯ ನನ್ನ ಮನಸ್ಸಿಗೆ ಯಾವುದೇ ಫಿಲ್ಟರ್‌ಗಳಿಲ್ಲ. ನನಗೆ ಏನು ಸರಿ ಅನಿಸುತ್ತದೋ ಅದನ್ನೇ ಮಾಡುತ್ತೇನೆ. ನಾನು ದೇವರಿಗೆ ಮಾತ್ರ ಉತ್ತರ ನೀಡಬೇಕೇ ಹೊರತು ಬೇರೆ ಯಾರಿಗೂ ಅಲ್ಲ’ ಎಂದು ನೇರವಾಗಿ ಹೇಳಿದ್ದಾರೆ.

ಮುಂದುವರಿದು ಮಾತನಾಡಿದ ಅವರು, ‘ಯಾರಾದರೂ ನನ್ನೊಂದಿಗೆ ಚೆನ್ನಾಗಿ ನಡೆದುಕೊಂಡರೆ, ಅವರು ಯಾರೇ ಆಗಿದ್ದರೂ ನಾನು ಅವರೊಂದಿಗೆ ಒಳ್ಳೆಯ ರೀತಿಯಲ್ಲೇ ನಡೆದುಕೊಳ್ಳುತ್ತೇನೆ. ಬೇರೊಬ್ಬರ ಅಭಿಪ್ರಾಯದ ಆಧಾರದ ಮೇಲೆ ನಾನು ಯಾರನ್ನೂ ಅಳೆಯಲು ಹೋಗುವುದಿಲ್ಲ. ಅದರಲ್ಲೂ ವಿಶೇಷವಾಗಿ ನನಗೆ ಯಾರ ಬಗ್ಗೆ ಸಂಪೂರ್ಣವಾಗಿ ತಿಳಿದಿಲ್ಲವೋ, ಅವರ ಬಗ್ಗೆ ನಾನು ಖಂಡಿತವಾಗಿಯೂ ಯಾವುದೇ ತೀರ್ಪು ನೀಡುವುದಿಲ್ಲ. ಜನರು ನನ್ನ ಬಗ್ಗೆ ಏನು ಅಂದುಕೊಳ್ಳುತ್ತಾರೆ ಅಂತ ನಾನು ತಲೆಕೆಡಿಸಿಕೊಳ್ಳುವುದಿಲ್ಲ’ ಎಂದು ಖಡಕ್ ಆಗಿ ಪ್ರತಿಕ್ರಿಯಿಸಿದ್ದಾರೆ.

View this post on Instagram

A post shared by ADNAN SAMI (@adnansamiworld)

ಸೋಶಿಯಲ್ ಮೀಡಿಯಾ ಸಂಸ್ಕೃತಿಯೇ ಇಂತಹ ಪರಿಸ್ಥಿತಿಗೆ ಕಾರಣ ಎಂದಿರುವ ಅದ್ನಾನ್, ಜನರು ಹಿನ್ನೆಲೆ ತಿಳಿಯದೆ ತರಾತುರಿಯಲ್ಲಿ ತೀರ್ಮಾನಕ್ಕೆ ಬರುತ್ತಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ‘ನನ್ನ ಒಂದು ಫೋಟೋ ಅಥವಾ ಒಂದು ಹಾಡನ್ನು ನೋಡಿ ನಾನು ಯಾರು, ಎಂಥವನು ಎಂದು ನಿರ್ಣಯಿಸಲು ಸಾಧ್ಯ ಎಂದು ಯಾರಾದರೂ ಅಂದುಕೊಂಡಿದ್ದರೆ, ಅವರು ಭ್ರಮೆಯ ಲೋಕದಲ್ಲಿದ್ದಾರೆ ಎಂದರ್ಥ. ನನ್ನನ್ನು ಟ್ರೋಲ್ ಮಾಡುವವರಲ್ಲಿ ಹೆಚ್ಚಿನವರು ನನ್ನ ಅಭಿಮಾನಿಗಳಲ್ಲ, ಅವರು ಕೇವಲ ನೆಗೆಟಿವಿಟಿ ಹರಡಲು ಕಾಯುತ್ತಿರುತ್ತಾರೆ’ ಎಂದಿದ್ದಾರೆ.

ಇದನ್ನೂ ಓದಿ: ‘ಗುಡ್​ ಬೈ’ ಹೇಳಿದ ಖ್ಯಾತ ಗಾಯಕ ಅದ್ನಾನ್ ಸಮಿ: ಫ್ಯಾನ್ಸ್​ ವಲಯದಲ್ಲಿ ಆತಂಕ

ಕಳೆದ ಫೆಬ್ರವರಿ ತಿಂಗಳಲ್ಲಿ ಅದ್ನಾನ್ ಸಮಿ ಅವರು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಭೇಟಿಯಾದ ಫೋಟೋಗಳನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದರು. ‘ಆರ್‌ಎಸ್‌ಎಸ್ ಸರಸಂಘಚಾಲಕರಾದ ಶ್ರೀ ಮೋಹನ್ ಭಾಗವತ್ ಅವರೊಂದಿಗೆ ಅದ್ಭುತವಾದ ಮಧ್ಯಾಹ್ನವನ್ನು ಕಳೆದಿದ್ದೇನೆ. ಅವರು ಮಾತನಾಡುವುದನ್ನು ಕೇಳುವುದೇ ಒಂದು ಸಂತೋಷ. ಆರ್‌ಎಸ್‌ಎಸ್ ಬಗ್ಗೆ ಇದ್ದ ಹಲವು ತಪ್ಪು ಕಲ್ಪನೆಗಳನ್ನು ಅವರು ತುಂಬಾ ಸರಳವಾಗಿ ಮನವರಿಕೆ ಮಾಡಿಕೊಟ್ಟರು. ಅವರು ಅತ್ಯಂತ ಸುಸಂಸ್ಕೃತ ವ್ಯಕ್ತಿ ಮತ್ತು ಉದಾತ್ತ ಜೀವಿ’ ಎಂದು ಆ ಫೋಟೋಗಳಿಗೆ ಕ್ಯಾಪ್ಷನ್ ಬರೆದುಕೊಂಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 4:12 pm, Thu, 21 May 26

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ