AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಯಕಿ, ನಟಿ ಮಲ್ಲಿಕಾ ರಜಪೂತ್ ಅನುಮಾನಸ್ಪದ ಸಾವು

Mallika Rajput: ನಟಿ, ಗಾಯಕಿ ಮಲ್ಲಿಕಾ ರಜಪೂತ್ ಅಲಿಯಾಸ್ ವಿಜಯಲಕ್ಷ್ಮಿ ಅನುಮಾನಸ್ಪದವಾಗಿ ನಿಧನ ಹೊಂದಿದ್ದಾರೆ. ‘ರಿವಾಲ್ವರ್ ರಾಣಿ’ ಸಿನಿಮಾದಲ್ಲಿ ನಟಿಸಿದ್ದ ಮಲ್ಲಿಕಾ ಅವರಿಗೆ 35 ವರ್ಷ ವಯಸ್ಸಾಗಿತ್ತು.

ಗಾಯಕಿ, ನಟಿ ಮಲ್ಲಿಕಾ ರಜಪೂತ್ ಅನುಮಾನಸ್ಪದ ಸಾವು
ಮಂಜುನಾಥ ಸಿ.
|

Updated on: Feb 13, 2024 | 10:59 PM

Share

ನಟಿ, ಗಾಯಕಿ ಮಲ್ಲಿಕಾ ರಜಪೂತ್ (Mallika Rajput) (ವಿಜಯಲಕ್ಷ್ಮಿ) ನಿಧನ ಹೊಂದಿದ್ದಾರೆ. ಅವರಿಗೆ 35 ವರ್ಷ ವಯಸ್ಸಾಗಿತ್ತು. ಉತ್ತರ ಪ್ರದೇಶದ ಸುಲ್ತಾನಪುರದ ಮಲ್ಲಿಕಾರ ಮನೆಯ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಲ್ಲಿಕಾರ ಮೃತದೇಹ ಪತ್ತೆಯಾಗಿದೆ. ಮೇಲ್ನೋಟಕ್ಕೆ ಆತ್ಮಹತ್ಯೆಯಂತೆ ಕಾಣುತ್ತಿದೆ ಎಂದು ಪೊಲೀಸರು ಹೇಳಿದ್ದು, ಮರಣೋತ್ತರ ಪರೀಕ್ಷೆ ಹಾಗೂ ತನಿಖೆಯ ಬಳಿಕವೇ ಸಾವಿಗೆ ನಿಜವಾದ ಕಾರಣ ತಿಳಿದು ಬರಲಿದೆ ಎಂದಿದ್ದಾರೆ.

ಮಾಧ್ಯಮಗಳೊಟ್ಟಿಗೆ ಮಾತನಾಡಿರುವ ಮಲ್ಲಿಕಾರ ತಾಯಿ, ‘ಮಗಳು ಆರಾಮವಾಗಿಯೇ ಇದ್ದಳು, ಇಂದು ಬೆಳಿಗ್ಗೆ ಎದ್ದಾಗ ಆಕೆಯ ಕೋಣೆಯ ಬಾಗಿಲು ಹಾಕಿತ್ತು, ಲೈಟ್ ಆನ್ ಆಗಿತ್ತು. ಬಾಗಿಲು ತಟ್ಟಿದಾಗ ತೆಗೆಯಲಿಲ್ಲ, ನಾನು ಕಿಟಕಿಯಿಂದ ನೋಡಿದಾಗ ಮಗಳು ನಿಂತಿರುವಂತೆ ಕಂಡಿತು. ಬಳಿಕ ಆಕೆಯ ತಂದೆಯನ್ನು ಇನ್ನಿತರರನ್ನು ಕರೆಸಿ ಕದ ಒಡೆಸಿದಾಗ ಮಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದಳು’ ಎಂದಿದ್ದಾರೆ.

ಇದನ್ನೂ ಓದಿ:ಕನ್ನಡದ ಹಾಡು ಹಾಡಿ ಮೆಚ್ಚುಗೆ ಪಡೆದ ಗಾಯಕಿ ಶಿವಶ್ರೀ

ಮಲ್ಲಿಕಾ ರಜಪೂತ್, ‘ರಿವಾಲ್ವರ್ ರಾಣಿ’ ಸಿನಿಮಾದಲ್ಲಿ ಕಂಗನಾ ರಣೌತ್ ಜೊತೆ ನಟಿಸಿದ್ದರು. ಗಾಯಕಿಯೂ ಆಗಿದ್ದ ಮಲ್ಲಿಕಾ ಶಾನ್​ರ ಆಲ್ಬಂನಲ್ಲಿ ಹಾಡಿದ್ದರು, ನಟಿಸಿದ್ದರು ಸಹ. ಕಥಕ್ ನೃತ್ಯಗಾರ್ತಿಯೂ ಆಗಿದ್ದ ಮಲ್ಲಿಕಾ ನೃತ್ಯ ಪ್ರದರ್ಶನಗಳನ್ನು ಸಹ ನೀಡಿದ್ದಾರೆ. ರಾಜಕೀಯದಲ್ಲಿಯೂ ಆಸಕ್ತಿ ಇರಿಸಿಕೊಂಡಿದ್ದ ಮಲ್ಲಿಕಾ 2022ರಲ್ಲಿ ಉತ್ತರ ಪ್ರದೇಶ ಬಿಜೆಪಿ ಸೇರ್ಪಡೆಗೊಂಡಿದ್ದರು, ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಸ್ಥಾನವನ್ನು ಸಹ ಅವರಿಗೆ ನೀಡಲಾಗಿತ್ತು. ಆದರೆ ಇತ್ತೀಚೆಗೆ ಬಿಜೆಪಿಯಿಂದ ದೂರ ಉಳಿದಿದ್ದ ಮಲ್ಲಿಕಾ ಅಧ್ಯಾತ್ಮದ ಕಡೆಗೆ ಹೊರಳಿದ್ದರು.

ಕೋಟ್ವಾಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಆರಂಭಿಸಿದ್ದಾರೆ. ಠಾಣೆಯ ಮುಖ್ಯಸ್ಥರು ಹೇಳಿರುವಂತೆ, ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಎಂಬಂತೆ ಕಾಣುತ್ತಿದೆ. ಆದರೆ ಪೂರ್ಣ ತನಿಖೆಯ ಬಳಿಕವಷ್ಟೆ ನಿಧನಕ್ಕೆ ನಿಖರ ಕಾರಣ ತಿಳಿಯಲಿದೆ. ಮಲ್ಲಿಕಾರ ಆತ್ಮೀಯರು, ಕುಟುಂಬದವರ ವಿಚಾರಣೆಯನ್ನು ಮುಂದಿನ ದಿನಗಳಲ್ಲಿ ನಡೆಸಲಾಗುತ್ತದೆ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ
ಎಕ್ಸಿಟ್ ಪೋಲ್ ಬೆನ್ನಲ್ಲೇ ಬಾಂಗ್ಲಾದೇಶಕ್ಕೆ ನಡುಕ
ಎಕ್ಸಿಟ್ ಪೋಲ್ ಬೆನ್ನಲ್ಲೇ ಬಾಂಗ್ಲಾದೇಶಕ್ಕೆ ನಡುಕ