Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಯಕಿ, ನಟಿ ಮಲ್ಲಿಕಾ ರಜಪೂತ್ ಅನುಮಾನಸ್ಪದ ಸಾವು

Mallika Rajput: ನಟಿ, ಗಾಯಕಿ ಮಲ್ಲಿಕಾ ರಜಪೂತ್ ಅಲಿಯಾಸ್ ವಿಜಯಲಕ್ಷ್ಮಿ ಅನುಮಾನಸ್ಪದವಾಗಿ ನಿಧನ ಹೊಂದಿದ್ದಾರೆ. ‘ರಿವಾಲ್ವರ್ ರಾಣಿ’ ಸಿನಿಮಾದಲ್ಲಿ ನಟಿಸಿದ್ದ ಮಲ್ಲಿಕಾ ಅವರಿಗೆ 35 ವರ್ಷ ವಯಸ್ಸಾಗಿತ್ತು.

ಗಾಯಕಿ, ನಟಿ ಮಲ್ಲಿಕಾ ರಜಪೂತ್ ಅನುಮಾನಸ್ಪದ ಸಾವು
Follow us
ಮಂಜುನಾಥ ಸಿ.
|

Updated on: Feb 13, 2024 | 10:59 PM

ನಟಿ, ಗಾಯಕಿ ಮಲ್ಲಿಕಾ ರಜಪೂತ್ (Mallika Rajput) (ವಿಜಯಲಕ್ಷ್ಮಿ) ನಿಧನ ಹೊಂದಿದ್ದಾರೆ. ಅವರಿಗೆ 35 ವರ್ಷ ವಯಸ್ಸಾಗಿತ್ತು. ಉತ್ತರ ಪ್ರದೇಶದ ಸುಲ್ತಾನಪುರದ ಮಲ್ಲಿಕಾರ ಮನೆಯ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಲ್ಲಿಕಾರ ಮೃತದೇಹ ಪತ್ತೆಯಾಗಿದೆ. ಮೇಲ್ನೋಟಕ್ಕೆ ಆತ್ಮಹತ್ಯೆಯಂತೆ ಕಾಣುತ್ತಿದೆ ಎಂದು ಪೊಲೀಸರು ಹೇಳಿದ್ದು, ಮರಣೋತ್ತರ ಪರೀಕ್ಷೆ ಹಾಗೂ ತನಿಖೆಯ ಬಳಿಕವೇ ಸಾವಿಗೆ ನಿಜವಾದ ಕಾರಣ ತಿಳಿದು ಬರಲಿದೆ ಎಂದಿದ್ದಾರೆ.

ಮಾಧ್ಯಮಗಳೊಟ್ಟಿಗೆ ಮಾತನಾಡಿರುವ ಮಲ್ಲಿಕಾರ ತಾಯಿ, ‘ಮಗಳು ಆರಾಮವಾಗಿಯೇ ಇದ್ದಳು, ಇಂದು ಬೆಳಿಗ್ಗೆ ಎದ್ದಾಗ ಆಕೆಯ ಕೋಣೆಯ ಬಾಗಿಲು ಹಾಕಿತ್ತು, ಲೈಟ್ ಆನ್ ಆಗಿತ್ತು. ಬಾಗಿಲು ತಟ್ಟಿದಾಗ ತೆಗೆಯಲಿಲ್ಲ, ನಾನು ಕಿಟಕಿಯಿಂದ ನೋಡಿದಾಗ ಮಗಳು ನಿಂತಿರುವಂತೆ ಕಂಡಿತು. ಬಳಿಕ ಆಕೆಯ ತಂದೆಯನ್ನು ಇನ್ನಿತರರನ್ನು ಕರೆಸಿ ಕದ ಒಡೆಸಿದಾಗ ಮಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದಳು’ ಎಂದಿದ್ದಾರೆ.

ಇದನ್ನೂ ಓದಿ:ಕನ್ನಡದ ಹಾಡು ಹಾಡಿ ಮೆಚ್ಚುಗೆ ಪಡೆದ ಗಾಯಕಿ ಶಿವಶ್ರೀ

ಮಲ್ಲಿಕಾ ರಜಪೂತ್, ‘ರಿವಾಲ್ವರ್ ರಾಣಿ’ ಸಿನಿಮಾದಲ್ಲಿ ಕಂಗನಾ ರಣೌತ್ ಜೊತೆ ನಟಿಸಿದ್ದರು. ಗಾಯಕಿಯೂ ಆಗಿದ್ದ ಮಲ್ಲಿಕಾ ಶಾನ್​ರ ಆಲ್ಬಂನಲ್ಲಿ ಹಾಡಿದ್ದರು, ನಟಿಸಿದ್ದರು ಸಹ. ಕಥಕ್ ನೃತ್ಯಗಾರ್ತಿಯೂ ಆಗಿದ್ದ ಮಲ್ಲಿಕಾ ನೃತ್ಯ ಪ್ರದರ್ಶನಗಳನ್ನು ಸಹ ನೀಡಿದ್ದಾರೆ. ರಾಜಕೀಯದಲ್ಲಿಯೂ ಆಸಕ್ತಿ ಇರಿಸಿಕೊಂಡಿದ್ದ ಮಲ್ಲಿಕಾ 2022ರಲ್ಲಿ ಉತ್ತರ ಪ್ರದೇಶ ಬಿಜೆಪಿ ಸೇರ್ಪಡೆಗೊಂಡಿದ್ದರು, ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಸ್ಥಾನವನ್ನು ಸಹ ಅವರಿಗೆ ನೀಡಲಾಗಿತ್ತು. ಆದರೆ ಇತ್ತೀಚೆಗೆ ಬಿಜೆಪಿಯಿಂದ ದೂರ ಉಳಿದಿದ್ದ ಮಲ್ಲಿಕಾ ಅಧ್ಯಾತ್ಮದ ಕಡೆಗೆ ಹೊರಳಿದ್ದರು.

ಕೋಟ್ವಾಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಆರಂಭಿಸಿದ್ದಾರೆ. ಠಾಣೆಯ ಮುಖ್ಯಸ್ಥರು ಹೇಳಿರುವಂತೆ, ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಎಂಬಂತೆ ಕಾಣುತ್ತಿದೆ. ಆದರೆ ಪೂರ್ಣ ತನಿಖೆಯ ಬಳಿಕವಷ್ಟೆ ನಿಧನಕ್ಕೆ ನಿಖರ ಕಾರಣ ತಿಳಿಯಲಿದೆ. ಮಲ್ಲಿಕಾರ ಆತ್ಮೀಯರು, ಕುಟುಂಬದವರ ವಿಚಾರಣೆಯನ್ನು ಮುಂದಿನ ದಿನಗಳಲ್ಲಿ ನಡೆಸಲಾಗುತ್ತದೆ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ