AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arijit Singh: ಗುಂಪಿನಲ್ಲಿ ಅರಿಜಿತ್​ ಸಿಂಗ್​​ ಕೈ ಎಳೆದ ಮಹಿಳಾ ಅಭಿಮಾನಿ; ಗಾಯಗೊಂಡ ಗಾಯಕನ ವಿಡಿಯೋ ವೈರಲ್​

Arijit Singh Viral Video: ಮಹಿಳಾ ಅಭಿಮಾನಿಯ ಈ ವರ್ತನೆಯಿಂದ ಅರಿಜಿತ್​ ಸಿಂಗ್​ ಅವರಿಗೆ ತೊಂದರೆ ಆಗಿದೆ. ಈ ರೀತಿ ನಡೆದುಕೊಳ್ಳುವುದು ಸರಿಯಲ್ಲ ಎಂದು ಅವರು ಬುದ್ಧಿ ಹೇಳಿದ್ದಾರೆ.

Arijit Singh: ಗುಂಪಿನಲ್ಲಿ ಅರಿಜಿತ್​ ಸಿಂಗ್​​ ಕೈ ಎಳೆದ ಮಹಿಳಾ ಅಭಿಮಾನಿ; ಗಾಯಗೊಂಡ ಗಾಯಕನ ವಿಡಿಯೋ ವೈರಲ್​
ಅರಿಜಿತ್ ಸಿಂಗ್
ಮದನ್​ ಕುಮಾರ್​
|

Updated on:May 08, 2023 | 4:29 PM

Share

ಗಾಯಕ ಅರಿಜಿತ್​ ಸಿಂಗ್​ (Arijit Singh) ಅವರಿಗೆ ಸಿಕ್ಕಾಪಟ್ಟೆ ಜನಪ್ರಿಯತೆ ಇದೆ. ಅವರ ಕಂಠಕ್ಕೆ ಕೋಟ್ಯಂತರ ಅಭಿಮಾನಿಗಳಿದ್ದಾರೆ. ಅನೇಕ ಸೂಪರ್​ ಹಿಟ್​ ಹಾಡುಗಳನ್ನು ನೀಡಿದ ಖ್ಯಾತಿ ಅರಿಜಿತ್​ ಸಿಂಗ್​ ಅವರಿಗೆ ಸಲ್ಲುತ್ತದೆ. ಸಿನಿಮಾಗಳಲ್ಲಿ ಹಾಡುವುದರ ಜೊತೆಗೆ ದೇಶದ ವಿವಿಧ ನಗರಗಳಲ್ಲಿ ಅವರು ಸಂಗೀತ ಕಾರ್ಯಕ್ರಮವನ್ನೂ (Arijit Singh live concert) ನಡೆಸಿಕೊಡುತ್ತಾರೆ. ಆಗೆಲ್ಲಾ ಅಪಾರ ಸಂಖ್ಯೆಯ ಅಭಿಮಾನಿಗಳು ಸೇರುತ್ತಾರೆ. ಎಲ್ಲರ ಜೊತೆಯೂ ಅರಿಜಿತ್​ ಸಿಂಗ್​ ಅವರು ಪ್ರೀತಿಯಿಂದ ನಡೆದುಕೊಳ್ಳುತ್ತಾರೆ. ಆದರೆ ಅವರ ಆ ಸ್ವಭಾವವನ್ನೇ ಕೆಲವರು ದುರ್ಬಳಕೆ ಮಾಡಿಕೊಳ್ಳುತ್ತಾರೆ ಎಂಬುದು ಬೇಸರದ ವಿಚಾರ. ಇತ್ತೀಚೆಗೆ ಔರಂಗಬಾದ್​ನಲ್ಲಿ ಸಂಗೀತ ಕಾರ್ಯಕ್ರಮ ನೀಡುತ್ತಿದ್ದ ವೇಳೆ ಮಹಿಳಾ ಅಭಿಮಾನಿಯೊಬ್ಬರು ಅರಿಜಿತ್​ ಸಿಂಗ್​ ಅವರ ಕೈ ಹಿಡಿದು ಎಳೆದಿದ್ದಾರೆ. ಅದರಿಂದ ಅವರಿಗೆ ಗಾಯ ಆಗಿದೆ. ಈ ಸಂದರ್ಭದ ವಿಡಿಯೋ ವೈರಲ್​ ಆಗಿದ್ದು, ಫ್ಯಾನ್ಸ್​ ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ಅರಿಜಿತ್​ ಸಿಂಗ್​ ಅವರದ್ದು ಸರಳವಾದ ವ್ಯಕ್ತಿತ್ವ. ಪ್ರತಿ ಬಾರಿ ಸಂಗೀತ ಕಾರ್ಯಕ್ರಮ ನೀಡಿದಾಗಲೂ ಅವರು ಅಭಿಮಾನಿಗಳ ಬಳಿಗೆ ತೆರಳಿ ಮಾತುಕತೆ ನಡೆಸುತ್ತಾರೆ. ಔರಂಗಬಾದ್​ನಲ್ಲೂ ಹಾಗೆಯೇ ಆಗಿದೆ. ಒಂದು ಹಾಡು ಹೇಳಿ ಮುಗಿಸಿದ ಬಳಿಕ ಅವರು ವೇದಿಕೆಯ ಅಕ್ಕ-ಪಕ್ಕ ನಿಂತಿದ್ದ ಅಭಿಮಾನಿಗಳನ್ನು ಮಾತನಾಡಿಸಲು ತೆರಳಿದರು. ಆದರೆ ಅಲ್ಲಿದ್ದ ಮಹಿಳಾ ಅಭಿಮಾನಿಯೊಬ್ಬರು ಜೋರಾಗಿ ಅವರ ಕೈ ಹಿಡಿದು ಎಳೆದರು.

ಅಭಿಮಾನಿಯ ಈ ವರ್ತನೆಯಿಂದ ಅರಿಜಿತ್​ ಸಿಂಗ್​ ಅವರಿಗೆ ತೊಂದರೆ ಆಗಿದೆ. ಹಾಗಿದ್ದರೂ ಕೂಡ ಅವರು ಕೋಪಗೊಂಡಿಲ್ಲ. ಇಂಥ ವರ್ತನೆ ಸರಿಯಲ್ಲ ಎಂದು ಅವರು ಬುದ್ಧಿ ಹೇಳಿದ್ದಾರೆ. ‘ನಿಮಗೆ ಇದು ಅರ್ಥವಾಗಬೇಕು. ನೀವು ಎಂಜಾಯ್​ ಮಾಡುತ್ತಿದ್ದೀರಿ. ನಾನು ಹಾಡು ಹೇಳಲು ಸಾಧ್ಯವಾಗದೇ ಇದ್ದರೆ ನೀವು ಹೇಗೆ ಎಂಜಾಯ್​ ಮಾಡುತ್ತೀರಿ? ನೀವು ತಿಳಿವಳಿಕೆ ಇರುವ ವ್ಯಕ್ತಿ. ಹಾಗಿದ್ದರೂ ಕೂಡ ನನ್ನ ಕೈ ಯಾಕೆ ಎಳೆದ್ರಿ? ಈಗ ನನ್ನ ಕೈ ನಡುಗುತ್ತಿದೆ’ ಎಂದು ಅರಿಜಿತ್​ ಸಿಂಗ್​ ಹೇಳಿದರು.

ಇದನ್ನೂ ಓದಿ: ‘ಒಮ್ಮೆ ನಿಮ್ಮನ್ನು ಮುಟ್ತೀನಿ’: ಕರೀನಾ ಕಪೂರ್​ ಎದುರು ಮನವಿ ಮಾಡಿದ ಅಭಿಮಾನಿ: ನಟಿಯ ಪ್ರತಿಕ್ರಿಯೆ ಹೇಗಿತ್ತು?

ತಾವು ಮಾಡಿದ ತಪ್ಪು ಏನೆಂಬುದು ಆ ಮಹಿಳೆಗೆ ಅರ್ಥವಾಯಿತು. ಕೂಡಲೇ ಅವರು ಅರಿಜಿತ್​ ಸಿಂಗ್​ ಬಳಿ ಕ್ಷಮೆ ಕೇಳಿದರು. ‘ಸೆಲೆಬ್ರಿಟಿಗಳ ಜೊತೆ ಹೇಗೆ ನಡೆದುಕೊಳ್ಳಬೇಕು ಎಂಬುದನ್ನು ಫ್ಯಾನ್ಸ್​ ಅರ್ಥ ಮಾಡಿಕೊಳ್ಳಬೇಕು’ ಎಂದು ನೆಟ್ಟಿಗರು ಕಮೆಂಟ್​ ಮಾಡಿದ್ದಾರೆ. ‘ಇಷ್ಟೆಲ್ಲ ಆದರೂ ಕೂಡ ಅರಿಜಿತ್​ ಸಿಂಗ್​ ಅವರು ತಮ್ಮ ತಾಳ್ಮೆ ಕಳೆದುಕೊಂಡಿಲ್ಲ’ ಎಂದು ಸಹ ನೆಟ್ಟಿಗರು ಮೆಚ್ಚುಗೆ ಸೂಚಿಸಿದ್ದಾರೆ. ವೇದಿಕೆಯಲ್ಲೇ ಅರಿಜಿತ್​ ಸಿಂಗ್ ಅವರಿಗೆ ಪ್ರಥಮ ಚಿಕಿತ್ಸೆ ನೀಡಲಾಯಿತು. ನಂತರ ಅವರು ಕಾರ್ಯಕ್ರಮ ಮುಂದುವರಿಸಿದರು.

​ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:24 pm, Mon, 8 May 23

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ