AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arijit Singh: ಗುಂಪಿನಲ್ಲಿ ಅರಿಜಿತ್​ ಸಿಂಗ್​​ ಕೈ ಎಳೆದ ಮಹಿಳಾ ಅಭಿಮಾನಿ; ಗಾಯಗೊಂಡ ಗಾಯಕನ ವಿಡಿಯೋ ವೈರಲ್​

Arijit Singh Viral Video: ಮಹಿಳಾ ಅಭಿಮಾನಿಯ ಈ ವರ್ತನೆಯಿಂದ ಅರಿಜಿತ್​ ಸಿಂಗ್​ ಅವರಿಗೆ ತೊಂದರೆ ಆಗಿದೆ. ಈ ರೀತಿ ನಡೆದುಕೊಳ್ಳುವುದು ಸರಿಯಲ್ಲ ಎಂದು ಅವರು ಬುದ್ಧಿ ಹೇಳಿದ್ದಾರೆ.

Arijit Singh: ಗುಂಪಿನಲ್ಲಿ ಅರಿಜಿತ್​ ಸಿಂಗ್​​ ಕೈ ಎಳೆದ ಮಹಿಳಾ ಅಭಿಮಾನಿ; ಗಾಯಗೊಂಡ ಗಾಯಕನ ವಿಡಿಯೋ ವೈರಲ್​
ಅರಿಜಿತ್ ಸಿಂಗ್
Follow us
ಮದನ್​ ಕುಮಾರ್​
|

Updated on:May 08, 2023 | 4:29 PM

ಗಾಯಕ ಅರಿಜಿತ್​ ಸಿಂಗ್​ (Arijit Singh) ಅವರಿಗೆ ಸಿಕ್ಕಾಪಟ್ಟೆ ಜನಪ್ರಿಯತೆ ಇದೆ. ಅವರ ಕಂಠಕ್ಕೆ ಕೋಟ್ಯಂತರ ಅಭಿಮಾನಿಗಳಿದ್ದಾರೆ. ಅನೇಕ ಸೂಪರ್​ ಹಿಟ್​ ಹಾಡುಗಳನ್ನು ನೀಡಿದ ಖ್ಯಾತಿ ಅರಿಜಿತ್​ ಸಿಂಗ್​ ಅವರಿಗೆ ಸಲ್ಲುತ್ತದೆ. ಸಿನಿಮಾಗಳಲ್ಲಿ ಹಾಡುವುದರ ಜೊತೆಗೆ ದೇಶದ ವಿವಿಧ ನಗರಗಳಲ್ಲಿ ಅವರು ಸಂಗೀತ ಕಾರ್ಯಕ್ರಮವನ್ನೂ (Arijit Singh live concert) ನಡೆಸಿಕೊಡುತ್ತಾರೆ. ಆಗೆಲ್ಲಾ ಅಪಾರ ಸಂಖ್ಯೆಯ ಅಭಿಮಾನಿಗಳು ಸೇರುತ್ತಾರೆ. ಎಲ್ಲರ ಜೊತೆಯೂ ಅರಿಜಿತ್​ ಸಿಂಗ್​ ಅವರು ಪ್ರೀತಿಯಿಂದ ನಡೆದುಕೊಳ್ಳುತ್ತಾರೆ. ಆದರೆ ಅವರ ಆ ಸ್ವಭಾವವನ್ನೇ ಕೆಲವರು ದುರ್ಬಳಕೆ ಮಾಡಿಕೊಳ್ಳುತ್ತಾರೆ ಎಂಬುದು ಬೇಸರದ ವಿಚಾರ. ಇತ್ತೀಚೆಗೆ ಔರಂಗಬಾದ್​ನಲ್ಲಿ ಸಂಗೀತ ಕಾರ್ಯಕ್ರಮ ನೀಡುತ್ತಿದ್ದ ವೇಳೆ ಮಹಿಳಾ ಅಭಿಮಾನಿಯೊಬ್ಬರು ಅರಿಜಿತ್​ ಸಿಂಗ್​ ಅವರ ಕೈ ಹಿಡಿದು ಎಳೆದಿದ್ದಾರೆ. ಅದರಿಂದ ಅವರಿಗೆ ಗಾಯ ಆಗಿದೆ. ಈ ಸಂದರ್ಭದ ವಿಡಿಯೋ ವೈರಲ್​ ಆಗಿದ್ದು, ಫ್ಯಾನ್ಸ್​ ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ಅರಿಜಿತ್​ ಸಿಂಗ್​ ಅವರದ್ದು ಸರಳವಾದ ವ್ಯಕ್ತಿತ್ವ. ಪ್ರತಿ ಬಾರಿ ಸಂಗೀತ ಕಾರ್ಯಕ್ರಮ ನೀಡಿದಾಗಲೂ ಅವರು ಅಭಿಮಾನಿಗಳ ಬಳಿಗೆ ತೆರಳಿ ಮಾತುಕತೆ ನಡೆಸುತ್ತಾರೆ. ಔರಂಗಬಾದ್​ನಲ್ಲೂ ಹಾಗೆಯೇ ಆಗಿದೆ. ಒಂದು ಹಾಡು ಹೇಳಿ ಮುಗಿಸಿದ ಬಳಿಕ ಅವರು ವೇದಿಕೆಯ ಅಕ್ಕ-ಪಕ್ಕ ನಿಂತಿದ್ದ ಅಭಿಮಾನಿಗಳನ್ನು ಮಾತನಾಡಿಸಲು ತೆರಳಿದರು. ಆದರೆ ಅಲ್ಲಿದ್ದ ಮಹಿಳಾ ಅಭಿಮಾನಿಯೊಬ್ಬರು ಜೋರಾಗಿ ಅವರ ಕೈ ಹಿಡಿದು ಎಳೆದರು.

ಅಭಿಮಾನಿಯ ಈ ವರ್ತನೆಯಿಂದ ಅರಿಜಿತ್​ ಸಿಂಗ್​ ಅವರಿಗೆ ತೊಂದರೆ ಆಗಿದೆ. ಹಾಗಿದ್ದರೂ ಕೂಡ ಅವರು ಕೋಪಗೊಂಡಿಲ್ಲ. ಇಂಥ ವರ್ತನೆ ಸರಿಯಲ್ಲ ಎಂದು ಅವರು ಬುದ್ಧಿ ಹೇಳಿದ್ದಾರೆ. ‘ನಿಮಗೆ ಇದು ಅರ್ಥವಾಗಬೇಕು. ನೀವು ಎಂಜಾಯ್​ ಮಾಡುತ್ತಿದ್ದೀರಿ. ನಾನು ಹಾಡು ಹೇಳಲು ಸಾಧ್ಯವಾಗದೇ ಇದ್ದರೆ ನೀವು ಹೇಗೆ ಎಂಜಾಯ್​ ಮಾಡುತ್ತೀರಿ? ನೀವು ತಿಳಿವಳಿಕೆ ಇರುವ ವ್ಯಕ್ತಿ. ಹಾಗಿದ್ದರೂ ಕೂಡ ನನ್ನ ಕೈ ಯಾಕೆ ಎಳೆದ್ರಿ? ಈಗ ನನ್ನ ಕೈ ನಡುಗುತ್ತಿದೆ’ ಎಂದು ಅರಿಜಿತ್​ ಸಿಂಗ್​ ಹೇಳಿದರು.

ಇದನ್ನೂ ಓದಿ: ‘ಒಮ್ಮೆ ನಿಮ್ಮನ್ನು ಮುಟ್ತೀನಿ’: ಕರೀನಾ ಕಪೂರ್​ ಎದುರು ಮನವಿ ಮಾಡಿದ ಅಭಿಮಾನಿ: ನಟಿಯ ಪ್ರತಿಕ್ರಿಯೆ ಹೇಗಿತ್ತು?

ತಾವು ಮಾಡಿದ ತಪ್ಪು ಏನೆಂಬುದು ಆ ಮಹಿಳೆಗೆ ಅರ್ಥವಾಯಿತು. ಕೂಡಲೇ ಅವರು ಅರಿಜಿತ್​ ಸಿಂಗ್​ ಬಳಿ ಕ್ಷಮೆ ಕೇಳಿದರು. ‘ಸೆಲೆಬ್ರಿಟಿಗಳ ಜೊತೆ ಹೇಗೆ ನಡೆದುಕೊಳ್ಳಬೇಕು ಎಂಬುದನ್ನು ಫ್ಯಾನ್ಸ್​ ಅರ್ಥ ಮಾಡಿಕೊಳ್ಳಬೇಕು’ ಎಂದು ನೆಟ್ಟಿಗರು ಕಮೆಂಟ್​ ಮಾಡಿದ್ದಾರೆ. ‘ಇಷ್ಟೆಲ್ಲ ಆದರೂ ಕೂಡ ಅರಿಜಿತ್​ ಸಿಂಗ್​ ಅವರು ತಮ್ಮ ತಾಳ್ಮೆ ಕಳೆದುಕೊಂಡಿಲ್ಲ’ ಎಂದು ಸಹ ನೆಟ್ಟಿಗರು ಮೆಚ್ಚುಗೆ ಸೂಚಿಸಿದ್ದಾರೆ. ವೇದಿಕೆಯಲ್ಲೇ ಅರಿಜಿತ್​ ಸಿಂಗ್ ಅವರಿಗೆ ಪ್ರಥಮ ಚಿಕಿತ್ಸೆ ನೀಡಲಾಯಿತು. ನಂತರ ಅವರು ಕಾರ್ಯಕ್ರಮ ಮುಂದುವರಿಸಿದರು.

​ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:24 pm, Mon, 8 May 23

ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಬಸ್​ನಲ್ಲಿ ಕಂಡಕ್ಟರ್ ಮೊಬೈಲ್​​ನ್ನೇ ಕದ್ದ ಚಾಲಾಕಿ ಕಳ್ಳ
ಬಸ್​ನಲ್ಲಿ ಕಂಡಕ್ಟರ್ ಮೊಬೈಲ್​​ನ್ನೇ ಕದ್ದ ಚಾಲಾಕಿ ಕಳ್ಳ
ದಕ್ಷತೆಯಿಂದ ಗುಮಾಸ್ತ ಕೆಲಸ ಮಾಡುತ್ತಿದ್ದ: ಪ್ರಾದೇಶಿಕ ಸಾರಿಗೆ ಅಧಿಕಾರಿ
ದಕ್ಷತೆಯಿಂದ ಗುಮಾಸ್ತ ಕೆಲಸ ಮಾಡುತ್ತಿದ್ದ: ಪ್ರಾದೇಶಿಕ ಸಾರಿಗೆ ಅಧಿಕಾರಿ
ಪ್ರಲ್ಹಾದ್ ಜೋಶಿ ಸುದ್ದಿಗೋಷ್ಠಿ ಲೈವ್
ಪ್ರಲ್ಹಾದ್ ಜೋಶಿ ಸುದ್ದಿಗೋಷ್ಠಿ ಲೈವ್
‘ಜನರಿಗೆ ಮನು ಬುದ್ಧಿ ತೋರಿಸಲು ಆ ಆಡಿಯೋ ಬಿಟ್ಟೆ’; ಸಂತ್ರಸ್ತೆಯ ನೇರ ಮಾತು
‘ಜನರಿಗೆ ಮನು ಬುದ್ಧಿ ತೋರಿಸಲು ಆ ಆಡಿಯೋ ಬಿಟ್ಟೆ’; ಸಂತ್ರಸ್ತೆಯ ನೇರ ಮಾತು