AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆನ್ ಜಿ ಪ್ರತಿಭಟನಾಕಾರರ ಬೆಂಬಲಕ್ಕೆ ನಿಂತ ವಿಶಾಲ್ ದದ್ಲಾನಿ: ಕಂಗನಾ ಮಾತಿಗೆ ತಿರುಗೇಟು

ನಟಿ ಕಂಗನಾ ರಣಾವತ್ ಅವರು ಜೆನ್ ಜಿ ಯುವಕ-ಯುವತಿಯರ ಪ್ರತಿಭಟನೆಯನ್ನು ಖಂಡಿಸಿದ್ದರು. ಆದರೆ ಗಾಯಕ ವಿಶಾಲ್ ದದ್ಲಾನಿ ಅವರು ಜೆನ್ ಜಿಗಳ ಪರ ನಿಂತಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳ ಮೇಲೆ ಆದ ಹಲ್ಲೆಯನ್ನು ವಿಶಾಲ್ ದದ್ಲಾನಿ ಟೀಕಿಸಿದ್ದಾರೆ.

ಜೆನ್ ಜಿ ಪ್ರತಿಭಟನಾಕಾರರ ಬೆಂಬಲಕ್ಕೆ ನಿಂತ ವಿಶಾಲ್ ದದ್ಲಾನಿ: ಕಂಗನಾ ಮಾತಿಗೆ ತಿರುಗೇಟು
Vishal Dadlani
ಮದನ್​ ಕುಮಾರ್​
|

Updated on: Jul 29, 2026 | 5:31 PM

Share

ಮುಖ್ಯಾಂಶಗಳು

  • ಜೆನ್ ಜಿ ವಿದ್ಯಾರ್ಥಿಗಳ ಭಾಷೆಯನ್ನು ಟೀಕಿಸಿದ್ದ ಕಂಗನಾಗೆ ವಿಶಾಲ್ ದದ್ಲಾನಿ ತಿರುಗೇಟು ನೀಡಿದ್ದಾರೆ.
  • ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಮಾಡಿದ್ದನ್ನು ವಿಶಾಲ್ ಅವರು ತೀವ್ರವಾಗಿ ಖಂಡಿಸಿದ್ದಾರೆ.
  • ಪ್ರತಿಭಟನೆ ಮಾಡಿದವರ ವಿರುದ್ಧ ಅಪಪ್ರಚಾರ ನಡೆಸಲಾಗುತ್ತಿದೆ ಎಂದು ವಿಶಾಲ್ ಆರೋಪಿಸಿದ್ದಾರೆ.

ಇತ್ತೀಚೆಗೆ ನಡೆದ ಜೆನ್ ಜಿ (Gen Z) ವಿದ್ಯಾರ್ಥಿಗಳ ಪ್ರತಿಭಟನೆ ಹಾಗೂ ಅವರ ಭಾಷಾ ಶೈಲಿಯನ್ನು ಕಟುವಾಗಿ ಟೀಕಿಸಿದ್ದ ಬಿಜೆಪಿ ಸಂಸದೆ, ನಟಿ ಕಂಗನಾ ರಣಾವತ್ (Kangana Ranaut) ಹೇಳಿಕೆಗೆ ಬಾಲಿವುಡ್‌ನ ಪ್ರಸಿದ್ಧ ಸಂಗೀತ ನಿರ್ದೇಶಕ, ಗಾಯಕ ವಿಶಾಲ್ ದದ್ಲಾನಿ (Vishal Dadlani) ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನಾನಿರತ ಯುವಜನರ ಪರವಾಗಿ ಧ್ವನಿ ಎತ್ತಿರುವ ವಿಶಾಲ್, ವಿದ್ಯಾರ್ಥಿಗಳ ಮೇಲಾದ ಪೊಲೀಸ್ ದೌರ್ಜನ್ಯವನ್ನು ತೀವ್ರವಾಗಿ ಖಂಡಿಸಿದ್ದಾರೆ. ಆ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಮೂಲಕ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಕಂಗನಾ ರಣಾವತ್ ಹೇಳಿದ್ದೇನು?

ವಿದ್ಯಾರ್ಥಿ ಪ್ರತಿಭಟನಾಕಾರರು ಬಳಸುತ್ತಿರುವ ಭಾಷೆ ಮತ್ತು ಸೋಶಿಯಲ್ ಮೀಡಿಯಾದಲ್ಲಿನ ವಿಡಿಯೋಗಳ ಕುರಿತು ಕಂಗನಾ ರಣಾವತ್ ಅವರು ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಕಟು ಪದಗಳಿಂದ ವಾಗ್ದಾಳಿ ನಡೆಸಿದ್ದರು. ‘ನನ್ನ ಜೀವನದಲ್ಲೇ ಇಷ್ಟೊಂದು ಅಸಹ್ಯಕರ ವಿಡಿಯೋಗಳನ್ನು ನೋಡಿರಲಿಲ್ಲ. ಜೆನ್ ಜಿ ಪ್ರತಿಭಟನೆಯ ಇನ್‌ಸ್ಟಾಗ್ರಾಮ್ ರೀಲ್ಸ್‌ಗಳು ವಾಂತಿ ಬರಿಸುವಂತಿವೆ. ಅವರು ಮಾತನಾಡುತ್ತಿರುವ ಶೈಲಿ ಹಾಗೂ ಬಳಸುತ್ತಿರುವ ಭಾಷೆ ತೀರಾ ಕೆಳಮಟ್ಟದ್ದಾಗಿದೆ’ ಎಂದು ಬರೆದುಕೊಂಡಿದ್ದರು.

View this post on Instagram

A post shared by VISHAL (@vishaldadlani)

ವಿಶಾಲ್ ದದ್ಲಾನಿ ಖಾರವಾದ ಪ್ರತಿಕ್ರಿಯೆ:

ಕಂಗನಾ ಅವರ ಈ ಹೇಳಿಕೆಗಳ ಬೆನ್ನಲ್ಲೇ ಸೋಶಿಯಲ್ ಮೀಡಿಯಾದಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಂಡಿರುವ ವಿಶಾಲ್ ದದ್ಲಾನಿ ಅವರು, ವಿದ್ಯಾರ್ಥಿಗಳ ಮೇಲಾದ ಹಲ್ಲೆಯನ್ನು ಪ್ರಶ್ನಿಸಿದ್ದಾರೆ. ‘ಕೆಟ್ಟ ಭಾಷೆ ಎನ್ನುತ್ತೀರಾ? ನೀವು ಬೀದಿಯಲ್ಲಿ ಮಕ್ಕಳ ಮೇಲೆ ಹಲ್ಲೆ ನಡೆಸಿದ್ದೀರಿ. ಅವರ ಮೇಲೆ ಕಲ್ಲು ತೂರಿ, ಲಾಠಿ ಪ್ರಹಾರ, ಅಶ್ರು ವಾಯು ಹಾಗೂ ಪೆಲೆಟ್ ಗನ್ ಪ್ರಯೋಗ ಮಾಡಿದ್ದೀರಿ. ನಿಮ್ಮ ಬಾಡಿಗೆ ಗೂಂಡಾಗಳು ಇಂದಿಗೂ ಅವರನ್ನು ಬೆದರಿಸುತ್ತಿದ್ದಾರೆ. ಹೀಗಿರುವಾಗ ಅವರು ಬೈದಿರುವುದರಲ್ಲಿ ತಪ್ಪೇನಿದೆ?’ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ‘ಜೆನ್ ಜಿ’ಗಳನ್ನು ‘ಜನರೇಷನ್ ಗಟಾರ್’ ಎಂದಿದ್ದಕ್ಕೆ ಸ್ಪಷ್ಟನೆ ನೀಡಿದ ಕಂಗನಾ ರಣಾವತ್

ಈ ಪೋಸ್ಟ್‌ನ ಕ್ಯಾಪ್ಷನ್‌ನಲ್ಲಿ, ‘ಯುವ ಪ್ರತಿಭಟನಾಕಾರರ ವಿರುದ್ಧ ಸಾರ್ವಜನಿಕ ಅಭಿಪ್ರಾಯ ರೂಪಿಸಲು ಹಣ ನೀಡಿ ಪೇಯ್ಡ್ ಅಪಪ್ರಚಾರ ನಡೆಸಲಾಗುತ್ತಿದೆ. ಇದು ನಿಮ್ಮ ಅಸಹಾಯಕತೆಯನ್ನು ತೋರಿಸುತ್ತದೆ’ ಎಂದು ವಿಶಾಲ್ ದದ್ಲಾನಿ ಅವರು ಲೇವಡಿ ಮಾಡಿದ್ದಾರೆ. ವಿದ್ಯಾರ್ಥಿಗಳು ಬಳಸಿದ ಭಾಷೆಯನ್ನು ಟೀಕಿಸುವುದಕ್ಕಿಂತ ಹೆಚ್ಚಾಗಿ, ಅವರ ಮೇಲಾದ ದೌರ್ಜನ್ಯಗಳ ಕುರಿತು ಸಮಾಜ ಗಮನಹರಿಸಬೇಕು ಎಂದು ವಿಶಾಲ್ ಹೇಳಿದ್ದು, ಸದ್ಯ ಈ ವಿಷಯವು ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ