AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Singer KK: ಗಾಯಕ ಕೆಕೆ ನಿಧನರಾಗಿ ಒಂದೂವರೆ ತಿಂಗಳ ಬಳಿಕ ಭಾವುಕ ಬರಹ​ ಹಂಚಿಕೊಂಡ ಪತ್ನಿ-ಮಕ್ಕಳು

Krishnakumar Kunnath: ಖ್ಯಾತ ಸಿಂಗರ್​ ಕೃಷ್ಣಕುಮಾರ್​ ಕುನ್ನತ್​ ನಿಧನರಾಗಿ ಒಂದೂವರೆ ತಿಂಗಳು ಕಳೆದಿದೆ. ಎಮೋಷನಲ್​ ಬರಹದ ಮೂಲಕ ಕುಟುಂಬದವರು ಅವರನ್ನು ನೆನಪಿಸಿಕೊಂಡಿದ್ದಾರೆ.

Singer KK: ಗಾಯಕ ಕೆಕೆ ನಿಧನರಾಗಿ ಒಂದೂವರೆ ತಿಂಗಳ ಬಳಿಕ ಭಾವುಕ ಬರಹ​ ಹಂಚಿಕೊಂಡ ಪತ್ನಿ-ಮಕ್ಕಳು
ಸಿಂಗರ್ ಕೆಕೆ
TV9 Web
| Edited By: |

Updated on:Jul 15, 2022 | 3:28 PM

Share

ಗಾಯಕ ಕೃಷ್ಣಕುಮಾರ್​ ಕುನ್ನತ್​​ (Krishnakumar Kunnath) ಅವರು ಅಕಾಲಿಕ ಮರಣ ಹೊಂದಿದ್ದು ತೀವ್ರ ನೋವಿನ ಸಂಗತಿ. ಕೊಲ್ಕತ್ತಾದಲ್ಲಿ ಸಂಗೀತ ಕಾರ್ಯಕ್ರಮ ನೀಡುವ ವೇಳೆಯೇ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ಬಳಿಕ ಕೆಲವೇ ಗಂಟೆಗಳಲ್ಲಿ ಅವರ ಪ್ರಾಣಪಕ್ಷಿ ಹಾರಿ ಹೋಯಿತು ಎಂಬ ಸುದ್ದಿ ತಿಳಿದಾಗ ಕೆಕೆ (Singer KK) ಅವರ ಅಭಿಮಾನಿಗಳಿಗೆ ಮತ್ತು ಕುಟುಂಬದವರಿಗೆ ದಿಕ್ಕೇ ತೋಚದಂತಾಗಿತ್ತು. ಆ ಕಹಿ ಘಟನೆ (KK Death) ನಡೆದು ಒಂದೂವರೆ ತಿಂಗಳು ಕಳೆದಿದೆ. ಈಗ ಅವರ ಕುಟುಂಬದವರು ಸೋಶಿಯಲ್​ ಮೀಡಿಯಾದಲ್ಲಿ ಎಮೋಷನಲ್​ ಮಾತುಗಳನ್ನು ಹಂಚಿಕೊಂಡಿದ್ದಾರೆ. ಈ ಪೋಸ್ಟ್​ ಸಖತ್​ ವೈರಲ್​ ಆಗಿದೆ. ಅಭಿಮಾನಿಗಳು ಕೂಡ ಭಾವುಕರಾಗಿ ಕಮೆಂಟ್​ ಮಾಡುತ್ತಿದ್ದಾರೆ.

ವಿವಿಧ ಭಾಷೆಗಳ ಹಲವಾರು ಸೂಪರ್​ ಹಿಟ್​ ಗೀತೆಗಳಿಗೆ ಧ್ವನಿ ನೀಡಿದವರು ಗಾಯಕ ಕೆಕೆ. ಆ ಹಾಡುಗಳ ಮೂಲಕ ಅವರು ಎಂದಿಗೂ ಜೀವಂತವಾಗಿ ಇರುತ್ತಾರೆ. ಹಾಗಿದ್ದರೂ ಕೂಡ ಭೌತಿಕವಾಗಿ ಅವರು ಇಲ್ಲ ಎಂಬ ಕೊರಗನ್ನು ನಿವಾರಿಸಲು ಸಾಧ್ಯವೇ ಇಲ್ಲ. ಅವರ ಮರಣದ ಬಳಿಕ ಮಂಕಾಗಿದ್ದ ಕುಟುಂದವರು ಈಗ ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ. ಕೆಕೆ ಅವರ ಆಸೆಯಂತೆಯೇ ಸೋಶಿಯಲ್​ ಮೀಡಿಯಾದಲ್ಲಿ ಪ್ರೊಫೈಲ್​ ಪಿಕ್ಚರ್​ ಬದಲಾಯಿಸಲಾಗಿದೆ. ತಮ್ಮ ಈಗಿನ ಪರಿಸ್ಥಿತಿ ಹೇಗಿದೆ ಎಂಬುದನ್ನು ಈ ಪೋಸ್ಟ್​ ಮೂಲಕ ತಿಳಿಸಿದ್ದಾರೆ ಕೆಕೆ ಕುಟುಂಬದವರು.

ಇದನ್ನೂ ಓದಿ
Image
ಖ್ಯಾತ ಹಾಸ್ಯ ನಟ ನರಸಿಂಹ ರಾಜು ಹಿರಿಯ ಪುತ್ರಿ ಧರ್ಮವತಿ ಇನ್ನಿಲ್ಲ; ಹೃದಯಾಘಾತದಿಂದ ನಿಧನ
Image
ಯೋಗರಾಜ್ ಭಟ್ ಮಾವ, ಸ್ಯಾಂಡಲ್​ವುಡ್ ಕಲಾವಿದ ಸತ್ಯ ನಾರಾಯಣ್ ಹೃದಯಾಘಾತದಿಂದ ನಿಧನ
Image
KK Death: ಸಾವಿಗಿಂತ ಕೆಲವೇ ನಿಮಿಷಗಳ ಮುನ್ನ ವೇದಿಕೆ ತೊರೆದಿದ್ದ ಗಾಯಕ ಕೆಕೆ; ಇಲ್ಲಿದೆ ವೈರಲ್​ ವಿಡಿಯೋ
Image
Edava Basheer Death: ಹಾಡುವಾಗಲೇ ವೇದಿಕೆಯಲ್ಲಿ ಕುಸಿದು ಬಿದ್ದು ಆರ್ಕೆಸ್ಟ್ರಾ ಗಾಯಕ ಎಡವ ಬಶೀರ್​ ನಿಧನ; ವಿಡಿಯೋ ವೈರಲ್​

‘ನಿಮಗೆ ಗಾಯಕನಾಗಿ, ನಮಗೆ ತಂದೆ ಹಾಗೂ ಪತಿಯಾಗಿ ಕೆಕೆ ಅವರು ತುಂಬ ಭಿನ್ನ ಸ್ವಭಾವದ ವ್ಯಕ್ತಿ ಆಗಿದ್ದರು. ನಿಜವಾದ ಪ್ರೀತಿ ಎಂದರೆ ಏನು ಎಂಬುದನ್ನು ಅವರ ಅಪರಿಮಿತವಾದ ಪ್ರೀತಿಯು ನಮಗೆ ಸದಾ ನೆನಪಿಸುತ್ತದೆ’ ಎಂದು ಕೆಕೆ ಕುಟುಂಬದವರು ಬರೆದುಕೊಂಡಿದ್ದಾರೆ. ಮನೆಯ ಸದಸ್ಯನನ್ನು ಕಳೆದುಕೊಂಡಿರುವುದು ತಮ್ಮ ಜೀವನದ ಅತಿ ನೋವಿನ ಸಂಗತಿ ಎಂದು ಅವರು ತಿಳಿಸಿದ್ದಾರೆ. ‘ಏನೇ ಮಾಡಿದರೂ ನಿಮ್ಮ ಮೇಲೆ ನಂಬಿಕೆ ಇರಬೇಕು. ಶೇಕಡ 100ರಷ್ಟು ಶ್ರಮವಹಿಸಿ ಮಾಡಬೇಕು’ ಎಂದು ಕೆಕೆ ಹೇಳುತ್ತಿದ್ದ ಮಾತನ್ನು ಇಂದು ತಾವೆಲ್ಲರೂ ಪಾಲಿಸುತ್ತಿರುವುದಾಗಿ ಈ ಪೋಸ್ಟ್​ನಲ್ಲಿ ತಿಳಿಸಲಾಗಿದೆ.

View this post on Instagram

A post shared by KK (@kk_live_now)

ಕೆಕೆ ಪತ್ನಿ ಜ್ಯೋತಿ ಅವರು ಉತ್ತಮ ಪೇಂಟರ್​. ಅನೇಕ ಚಿತ್ರಗಳನ್ನು ಬರೆಯುವ ಮೂಲಕ ಅವರು ಗಮನ ಸೆಳೆಯುತ್ತಾರೆ. ಅಗಲಿದ ಪತಿಯ ಪೇಯಿಂಟ್​ಗಳನ್ನು ಅವರು ಮಾಡುತ್ತಿದ್ದಾರೆ. ಅವುಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಅವುಗಳಿಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸುತ್ತಿದ್ದಾರೆ.

Published On - 3:28 pm, Fri, 15 July 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್