AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Singer KK Death Anniversary: ಕೆಕೆ ಪುಣ್ಯತಿಥಿ; ಖ್ಯಾತ ಗಾಯಕನ ಸಾವಿಗೆ ಕಾರಣವಾಗಿತ್ತು ಹಲವು ನಿರ್ಲಕ್ಷ್ಯ

ಕೆಕೆ ಅವರು 2022ರ ಮೇ 31ರಂದು ಕೋಲ್ಕತ್ತಾದಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಹಾಡುತ್ತಿದ್ದರು. ಹಾಡುತ್ತಿರುವಾಗಲೇ ಅವರಿಗೆ ಅತೀವ ಸುಸ್ತು ಕಾಣಿಸಿಕೊಂಡಿತು. ಆ ಬಳಿಕ ಹೃದಯಾಘಾತ ಆಯಿತು.

Singer KK Death Anniversary: ಕೆಕೆ ಪುಣ್ಯತಿಥಿ; ಖ್ಯಾತ ಗಾಯಕನ ಸಾವಿಗೆ ಕಾರಣವಾಗಿತ್ತು ಹಲವು ನಿರ್ಲಕ್ಷ್ಯ
ಸಿಂಗರ್ ಕೆಕೆ
ರಾಜೇಶ್ ದುಗ್ಗುಮನೆ
|

Updated on: May 31, 2023 | 11:09 AM

Share

ಖ್ಯಾತ ಗಾಯಕ ಕೃಷ್ಣಕುಮಾರ್ ಕುನ್ನತ್ (ಕೆಕೆ) ನಿಧನ ಹೊಂದಿ ಇಂದಿಗೆ (ಮೇ 31) ಒಂದು ವರ್ಷ (KK Death Anniversary). ಕೋಲ್ಕತ್ತಾದಲ್ಲಿ ಸಂಗೀತ ಕಾರ್ಯಕ್ರಮ ನೀಡುತ್ತಿದ್ದಾಗ ಕೆಕೆ ಅವರ ಆರೋಗ್ಯದಲ್ಲಿ ಸಮಸ್ಯೆ ಉಂಟಾಯಿತು. ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವುದರೊಳಗೆ ಪ್ರಾಣ ಪಕ್ಷಿ ಹಾರಿ ಹೋಗಿತ್ತು. ಹೃದಯಾಘಾತದಿಂದ ಕೆಕೆ ನಿಧನ ಹೊಂದಿದರು. ಈ ದಿನವನ್ನು ಅವರ ಅಭಿಮಾನಿಗಳು, ಕುಟುಂಬದವರು ನೆನಪಿಸಿಕೊಳ್ಳುತ್ತಿದ್ದಾರೆ. ಕೆಕೆ ಗೀತೆಗಳನ್ನು ನೆನಪಿಸಿಕೊಳ್ಳುವ ಮೂಲಕ ಶ್ರದ್ಧಾಂಜಲಿ ಅರ್ಪಿಸುವ ಕೆಲಸ ಆಗುತ್ತಿದೆ.

ಆದಿನ ನಡೆದಿದ್ದೇನು?

ಕೆಕೆ ಅವರು 2022ರ ಮೇ 31ರಂದು ಕೋಲ್ಕತ್ತಾದಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಹಾಡುತ್ತಿದ್ದರು. ಹಾಡುತ್ತಿರುವಾಗಲೇ ಅವರಿಗೆ ಅತೀವ ಸುಸ್ತು ಕಾಣಿಸಿಕೊಂಡಿತು. ವೇದಿಕೆ ಇಳಿದ ಅವರು ನೇರವಾಗಿ ಹೋಟೆಲ್ ತೆರಳಿದರು. ಅಲ್ಲಿಂದ ಆಸ್ಪತ್ರೆಗೆ ಹೊರಟರು. ಮಾರ್ಗಮಧ್ಯೆ ಅವರಿಗೆ ಹೃದಯಾಘಾತ ಉಂಟಾಗಿದ್ದರಿಂದ ಮೃತಪಟ್ಟರು. ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದರು.

ಇದನ್ನೂ ಓದಿ: Singer KK Death: ಕೋಲ್ಕತ್ತಾದಲ್ಲಿ ಸಂಗೀತ ಕಾರ್ಯಕ್ರಮ ನೀಡಿದ ನಂತರ 53 ವರ್ಷದ ಗಾಯಕ ಕೆಕೆ ಕುಸಿದು ಬಿದ್ದು ಸಾವು

ಮರಣೋತ್ತರ ಪರೀಕ್ಷೆಯಲ್ಲೇನಿತ್ತು?

ಕೆಕೆ ಸಾವಿಗೆ ಹೃದಯಾಘಾತವೇ ಕಾರಣ ಎಂದು ಮರಣೋತ್ತರ ಪರೀಕ್ಷೆಯ ವರದಿಯಲ್ಲಿದೆ. ಕೆಕೆ ಕೊಠಡಿಯಲ್ಲಿ 10 ರೀತಿಯ ಔಷಧಗಳು ಸಿಕ್ಕಿದ್ದವು. ಪಿತ್ತ ಕಡಿಮೆ ಮಾಡುವ ಮಾತ್ರೆ, ವಿಟಾಮಿನ್ ಸಿ ಮಾತ್ರೆ, ಆಯುರ್ವೇದಿಕ್ ಔಷಧಗಳು ದೊರೆತಿದ್ದವು.

ನಿರ್ಲಕ್ಷ್ಯ ಸಾವಿಗೆ ಕಾರಣ

ಮೇ 31ರ ಬೆಳಗ್ಗೆಯೇ ಕೆಕೆ ಅವರಿಗೆ ಯಾವುದೂ ಸರಿ ಇಲ್ಲ ಎನಿಸುತ್ತಿತ್ತು. ಈ ವಿಚಾರವನ್ನು ಅವರು ಮ್ಯಾನೇಜರ್ ಬಳಿಯೂ ಹೇಳಿಕೊಂಡಿದ್ದರು. ಪತ್ನಿಗೆ ಕರೆ ಮಾಡಿದಾಗ ಎಡ ಭುಜ ನೋಯುತ್ತಿದೆ ಎಂದಿದ್ದರು. ಇದು ಹೃದಯಾಘಾತದ ಮುನ್ಸೂಚನೆ ಎಂಬುದು ವೈದ್ಯರ ಅಭಿಪ್ರಾಯ. ಆದರೆ, ಇದನ್ನು ಅವರು ಗಂಭೀರವಾಗಿ ಪರಿಗಣಿಸಿರಲಿಲ್ಲ. ವೇದಿಕೆ ಮೇಲೆ ಹಾಡುತ್ತಿದ್ದಾಗ ಕೆಕೆ ಅವರ ಮುಖದಿಂದ ಬೆವರು ಧಾರಾಕಾರವಾಗಿ ಹರಿಯುತ್ತಿತ್ತು. ಇದನ್ನು ನಿರ್ಲಕ್ಷ್ಯ ಮಾಡಲಾಯಿತು. ಹಾಡಲು ಸಾಧ್ಯವಾಗದೆ ಹೊರಟಾಗ ಅವರು ಆಸ್ಪತ್ರೆಗೆ ತೆರಳುವ ಬದಲು ಹೋಟೆಲ್​ಗೆ ಹೋಗಿದ್ದರು. ಇದು ಕೂಡ ಅವರ ಪ್ರಾಣಕ್ಕೆ ಕುತ್ತಾಯಿತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ