Singer KK: ಕೆಕೆ ಹಾಡಿದ್ದ ಕೊನೆಯ ಹಾಡು ರಿಲೀಸ್; ನೆಚ್ಚಿನ ಗಾಯಕನ ಗೀತೆಯನ್ನು ಕೇಳಿ ಭಾವುಕರಾದ ಅಭಿಮಾನಿಗಳು

Singer KK last song: ಗಾಯಕ ಕೆಕೆ ಹಾಡಿದ್ದ ಕೊನೆಯ ಹಾಡು ರಿಲೀಸ್ ಆಗಿದೆ. ಇನ್ನಷ್ಟೇ ತೆರೆಕಾಣಬೇಕಿರುವ ಚಿತ್ರವಾದ ‘ಶೆರ್ಡಿಲ್: ದಿ ಪಿಲಿಭಿತ್ ಸಾಗಾ’ದ 'ಧೂಪ್ ಪಾನಿ ಬಹ್ನೆ ದೇ' ಹಾಡನ್ನು ಕೇಳಿ ಅಭಿಮಾನಿಗಳು ಭಾವುಕರಾಗಿದ್ದಾರೆ.

Singer KK: ಕೆಕೆ ಹಾಡಿದ್ದ ಕೊನೆಯ ಹಾಡು ರಿಲೀಸ್; ನೆಚ್ಚಿನ ಗಾಯಕನ ಗೀತೆಯನ್ನು ಕೇಳಿ ಭಾವುಕರಾದ ಅಭಿಮಾನಿಗಳು
ಗಾಯಕ ಕೆಕೆ
Follow us
| Updated By: shivaprasad.hs

Updated on:Jun 07, 2022 | 10:37 AM

ಕೆಕೆ ಎಂದೇ ಖ್ಯಾತರಾಗಿದ್ದ ಗಾಯಕ ಕೃಷ್ಣಕುಮಾರ್ ಕುನ್ನತ್ (Singer KK) ಅವರು ಮೇ 31 ರಂದು ಕೋಲ್ಕತ್ತಾದಲ್ಲಿ ಕಾರ್ಯಕ್ರಮದಲ್ಲಿ ಹಾಡಿದ ನಂತರ ಹೃದಯಾಘಾತದಿಂದ ನಿಧನರಾಗಿದ್ದರು. ಅವರ ಧ್ವನಿಯ ಮೋಡಿಗೆ ಮರುಳಾಗದ ಕೇಳುಗರಿಲ್ಲ. ಕನ್ನಡ, ಹಿಂದಿ ಸೇರಿದಂತೆ ವಿವಿಧ ಭಾಷೆಗಳಲ್ಲಿ ಹಾಡಿ, ಜನರ ಪ್ರೀತಿ ಗಳಿಸಿದ್ದ ಅವರ ನಿಧನಕ್ಕೆ ಎಲ್ಲರೂ ಕಂಬನಿ ಮಿಡಿದಿದ್ದರು. ಇದೀಗ ಕೆಕೆ ಅವರ ಗೌರವಾರ್ಥವಾಗಿ ಅವರು ಹಾಡಿದ್ದ ಹಾಡೊಂದನ್ನು ರಿಲೀಸ್ ಮಾಡಲಾಗಿದೆ. ಇದು ಅವರು ಹಾಡಿರುವ ಕೊನೆಯ ಹಾಡೆಂದು ವರದಿಗಳು ಹೇಳಿವೆ. ಇನ್ನಷ್ಟೇ ತೆರೆಕಾಣಬೇಕಿರುವ ಚಿತ್ರವಾದ ‘ಶೆರ್ಡಿಲ್: ದಿ ಪಿಲಿಭಿತ್ ಸಾಗಾ’ದ ಹಾಡನ್ನು ಟಿ-ಸೀರೀಸ್ ಮತ್ತು ರಿಲಯನ್ಸ್​ ಟಂಟರ್​ಟೈನ್​ಮೆಂಟ್ ರಿಲೀಸ್ ಮಾಡಿದೆ. ಪ್ರಸ್ತುತ ರಿಲೀಸ್ ಆಗಿರುವ ‘ಧೂಪ್ ಪಾನಿ ಬಹ್ನೆ ದೇ’ ಹಾಡಿಗೆ ಸಾಹಿತ್ಯ ಬರೆದಿರುವವರು ಗುಲ್ಜಾರ್​. ಮತ್ತು ಸಂಗೀತ ನೀಡಿರುವವರು ಶಂತನು ಮೊಯಿತ್ರಾ. ಪ್ರಕೃತಿ ಮಾತೆಯನ್ನು ಉಳಿಸಲು ಮನವಿ ಮಾಡುವ ಸಾಹಿತ್ಯವನ್ನು ಹೊಂದಿರುವ ಅದ್ಭುತ ಹಾಡು ಇದಾಗಿದೆ. ಕೇಳುಗರು ಗುನುಗುವಂತಿರುವ ಈ ಹಾಡು ಇದೀಗ ಕೆಕೆ ಅಭಿಮಾನಿಗಳನ್ನು ಭಾವುಕರಾಗಿಸಿದೆ.

ಕೆಕೆ ಹಾಡಿರುವ ಹಾಡು ಇಲ್ಲಿದೆ:

ಇದನ್ನೂ ಓದಿ
Image
Samrat Prithviraj BO Collections: ಸೋಮವಾರದಂದು ಕುಸಿದ ‘ಸಾಮ್ರಾಟ್ ಪೃಥ್ವಿರಾಜ್’ ಕಲೆಕ್ಷನ್; ಅಕ್ಷಯ್ ನಟನೆಯ ಚಿತ್ರ ಇದುವರೆಗೆ ಗಳಿಸಿದ್ದೆಷ್ಟು?
Image
Tamannaah Bhatia: ತೆಲುಗಿನಲ್ಲಿ ‘ನಿಧಿಮಾ‘ ಆಗಿ ಕಾಣಿಸಿಕೊಳ್ಳುತ್ತಿರುವ ತಮನ್ನಾ ಭಾಟಿಯಾ; ನಟಿಯ ಅಂದದ ಫೋಟೋಗಳು ಇಲ್ಲಿವೆ
Image
Salman Khan: ಬಾಲಿವುಡ್​ ಚಿತ್ರಗಳ ಸೋಲಿನ ಬೆನ್ನಲ್ಲೇ ತಮ್ಮ ಮುಂದಿನ ಚಿತ್ರದ ಬಗ್ಗೆ ಮಹತ್ವದ ನಿರ್ಧಾರ ತಳೆದ್ರಾ ಸಲ್ಮಾನ್ ಖಾನ್?
Image
Ekta Kapoor Birthday: ಏಕ್ತಾ ಕಪೂರ್ ನಿರ್ಮಾಣ ಮಾಡಿರೋ ಈ ಚಿತ್ರಗಳನ್ನು ವೀಕ್ಷಿಸಿದ್ದೀರಾ? ಮಿಸ್ ಮಾಡಲೇಬೇಡಿ

‘ಶೆರ್ಡಿಲ್’ ಚಿತ್ರದಲ್ಲಿ ಪಂಕಜ್ ತ್ರಿಪಾಠಿ, ನೀರಜ್ ಕಬಿ, ಸಯಾನಿ ಗುಪ್ತಾ ಮೊದಲಾದವರು ನಟಿಸಿದ್ದಾರೆ. ಹಾಡನ್ನು ಕೇಳಿ ಅಭಿಮಾನಿಗಳು ಭಾವುಕರಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಅನಿಸಿಕೆ ಹಂಚಿಕೊಳ್ಳುತ್ತಿದ್ದಾರೆ. ‘ಕೆಕೆ ಅವರ ಸ್ಥಾನ ತುಂಬಲು ಯಾರಿಗೂ ಸಾಧ್ಯವಿಲ್ಲ’ ಎಂದು ಅಭಿಮಾನಿಗಳು ಬರೆದುಕೊಂಡಿದ್ದಾರೆ.

ಅಭಿಮಾನಿಗಳ ಕೆಲವು ಪ್ರತಿಕ್ರಿಯೆಗಳು ಇಲ್ಲಿವೆ:

ಈ ಹಾಡಿಗೆ ಸಾಹಿತ್ಯ ಬರೆದಿರುವ ಖ್ಯಾತ ಸಾಹಿತಿ ಗುಲ್ಜಾರ್, ಕೆಕೆ ಅವರ ಅಗಲುವಿಕೆಯ ನೋವನ್ನು ತೋಡಿಕೊಂಡಿದ್ದಾರೆ. ‘ಇದು ಕೆಕೆ ಅವರ ಕೊನೆಯ ಹಾಡಾಗಿರುವುದು ಬಹಳ ದುಃಖದ ವಿಚಾರ’ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:29 am, Tue, 7 June 22

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ