AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀತೆ ಪಾತ್ರ ಮಾಡಿದ ಕರೀನಾ ಕಪೂರ್​ ಖಾನ್; ‘ಸಿಂಘಂ ಅಗೇನ್’ ಚಿತ್ರದಲ್ಲಿ ರಾಮಾಯಣ

ರಾಮಾಯಣದ ಕಥೆಯನ್ನು ಇಟ್ಟುಕೊಂಡು ರೋಹಿತ್ ಶೆಟ್ಟಿ ಅವರು ‘ಸಿಂಘಂ ಅಗೇನ್​’ ಚಿತ್ರವನ್ನು ನಿರ್ದೇಶಿಸಿದ್ದಾರೆ. ಈ ಸಿನಿಮಾದಲ್ಲಿ ಬಹುತಾರಾಗಣ ಇದೆ. ಅಜಯ್​ ದೇವಗನ್​, ರಣವೀರ್​ ಸಿಂಗ್​, ಕರೀನಾ ಕಪೂರ್​ ಖಾನ್​, ಅರ್ಜುನ್​ ಕಪೂರ್​, ಅಕ್ಷಯ್​ ಕುಮಾರ್​, ದೀಪಿಕಾ ಪಡುಕೋಣೆ ಮುಂತಾದವರು ಅಭಿನಯಿಸಿದ್ದಾರೆ. ಟ್ರೇಲರ್​ ನೋಡಿದ ಸಿನಿಪ್ರಿಯರಿಗೆ ಖುಷಿ ಆಗಿದೆ.

ಸೀತೆ ಪಾತ್ರ ಮಾಡಿದ ಕರೀನಾ ಕಪೂರ್​ ಖಾನ್; ‘ಸಿಂಘಂ ಅಗೇನ್’ ಚಿತ್ರದಲ್ಲಿ ರಾಮಾಯಣ
ಕರೀನಾ ಕಪೂರ್​ ಖಾನ್, ರಾಮ-ಲಕ್ಷ್ಮಣ
ಮದನ್​ ಕುಮಾರ್​
|

Updated on: Oct 07, 2024 | 3:06 PM

Share

ಈ ವರ್ಷ ದೀಪಾವಳಿ ಹಬ್ಬಕ್ಕೆ ‘ಸಿಂಘಂ ಅಗೇನ್​’ ಸಿನಿಮಾ ಬಿಡುಗಡೆ ಆಗಲಿದೆ. ಈ ಚಿತ್ರಕ್ಕೆ ರೋಹಿತ್​ ಶೆಟ್ಟಿ ನಿರ್ದೇಶನ ಮಾಡಿದ್ದಾರೆ. ಅಜಯ್​ ದೇವಗನ್​, ಕರೀನಾ ಕಪೂರ್​ ಖಾನ್​, ದೀಪಿಕಾ ಪಡುಕೋಣೆ, ರಣವೀರ್​ ಸಿಂಗ್​, ಅಕ್ಷಯ್​ ಕುಮಾರ್​, ಜಾಕಿ ಶ್ರಾಫ್​, ಟೈಗರ್​ ಶ್ರಾಫ್, ಅರ್ಜುನ್​ ಕಪೂರ್​ ಮುಂತಾದ ಸ್ಟಾರ್​ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಈಗ ‘ಸಿಂಘಂ ಅಗೇನ್​’ ಸಿನಿಮಾದ ಟ್ರೇಲರ್​ ಬಿಡುಗಡೆ ಆಗಿದೆ. ಟ್ರೇಲರ್​ ನೋಡಿದ ಎಲ್ಲರಿಗೂ ಅಚ್ಚರಿ ಆಗಿದೆ. ಈ ಸಿನಿಮಾದಲ್ಲಿ ಇರುವುದು ರಾಮಾಯಣದ ಕಥೆ! ಕರೀನಾ ಕಪೂರ್​ ಖಾನ್​ ಅವರು ಸೀತೆಯ ಪಾತ್ರ ಮಾಡಿದ್ದಾರೆ.

ಸೀತೆಯನ್ನು ರಾವಣ ಅಪಹರಿಸಿಕೊಂಡು ಹೋದಾಗ ರಾಮ ಲಂಕೆಗೆ ಹೋಗಿದ್ದು ರಾಮಾಯಣದ ಕಹಾನಿ. ಅದನ್ನೇ ಇಟ್ಟುಕೊಂಡು ರೋಹಿತ್​ ಶೆಟ್ಟಿ ಅವರು ‘ಸಿಂಘಂ ಅಗೇನ್​’ ಸಿನಿಮಾ ಮಾಡಿದ್ದಾರೆ. ಇದು ಆಧುನಿಕ ರಾಮಾಯಣ. ಇಲ್ಲಿ ರಾಮನಾಗಿ ಅಜಯ್​ ದೇವಗನ್​ ನಟಿಸಿದ್ದಾರೆ. ಅವರ ಪತ್ನಿಯಾಗಿ ಕರೀನಾ ಕಪೂರ್​ ಖಾನ್​ ಕಾಣಿಸಿಕೊಂಡಿದ್ದಾರೆ. ಹಾಗಾದರೆ ರಾವಣ ಯಾರು? ಅರ್ಜುನ್​ ಕಪೂರ್!

ಇದನ್ನೂ ಓದಿ: ಬರೋಬ್ಬರಿ 130 ಕೋಟಿ ರೂಪಾಯಿಗೆ ‘ಸಿಂಘಂ ಅಗೇನ್’ ಒಟಿಟಿ ಡೀಲ್​; ಯಾವಾಗ ರಿಲೀಸ್?

ಶ್ರೀಲಂಕಾದಲ್ಲಿ ಇರುವ ನಟೋರಿಯಸ್​ ವ್ಯಕ್ತಿಯಾಗಿ ಅರ್ಜುನ್​ ಕಪೂರ್​ ಅಭಿನಯಿಸಿದ್ದಾರೆ. ನಾಯಕಿಯನ್ನು ವಿಲನ್​ ಅಪಹರಣ ಮಾಡಿದ ಬಳಿಕ ಆಕೆಯನ್ನು ಮರಳಿ ಕರೆದುಕೊಂಡು ಬರಲು ಲಂಕೆಗೆ ಸಿಂಘಂ (ಅಜಯ್​ ದೇವಗನ್) ಪ್ರಯಾಣ ಮಾಡುತ್ತಾನೆ. ಅವನಿಗೆ ಲಕ್ಷ್ಮಣ (ಟೈಗರ್​ ಶ್ರಾಫ್​), ಆಂಜನೇಯ (ರಣವೀರ್​ ಸಿಂಗ್​), ಜಟಾಯು (ಅಕ್ಷಯ್​ ಕುಮಾರ್​) ಮುಂತಾದವರು ಸಾಥ್​ ನೀಡುತ್ತಾರೆ. ಈ ರೀತಿ ಕಥೆಯನ್ನು ‘ಸಿಂಗಂ ಅಗೇನ್’ ಸಿನಿಮಾದಲ್ಲಿ ನಿರ್ದೇಶಕ ರೋಹಿತ್​ ಶೆಟ್ಟಿ ತೋರಿಸಲಿದ್ದಾರೆ.

‘ಸಿಂಘಂ ಅಗೇನ್​’ ಸಿನಿಮಾದ ಟ್ರೇಲರ್:

ನವೆಂಬರ್​ 1ರಂದು ‘ಸಿಂಗಂ ಅಗೇನ್​’ ಸಿನಿಮಾ ತೆರೆಕಾಣಲಿದೆ. ದೀಪಿಕಾ ಪಡುಕೋಣೆ ಕೂಡ ಈ ಸಿನಿಮಾದಲ್ಲಿ ಭರ್ಜರಿ ಆ್ಯಕ್ಷನ್​ ಮೆರೆದಿದ್ದಾರೆ ಎಂಬುದಕ್ಕೆ ಟ್ರೇಲರ್​ನಲ್ಲಿ ಸಾಕ್ಷಿ ಸಿಕ್ಕಿದೆ. ರೋಹಿತ್​ ಶೆಟ್ಟಿ ಅವರ ಸಿನಿಮಾದಲ್ಲಿ ಅದ್ದೂರಿತನ ಇದ್ದೇ ಇರುತ್ತದೆ. ಅದು ಈ ಚಿತ್ರದಲ್ಲೂ ಮುಂದುವರಿದಿದೆ. ಇನ್ನು, ಕಾಮಿಡಿ ಕೂಡ ಇರಲಿದೆ. ಬಹುತಾರಾಗಣ ಇರುವ ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಎಷ್ಟು ಕಲೆಕ್ಷನ್​ ಮಾಡಲಿದೆ ಎಂಬುದನ್ನು ತಿಳಿಯುವ ಕೌತುಕ ಎಲ್ಲರಿಗೂ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ