AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀತೆ ಪಾತ್ರ ಮಾಡಿದ ಕರೀನಾ ಕಪೂರ್​ ಖಾನ್; ‘ಸಿಂಘಂ ಅಗೇನ್’ ಚಿತ್ರದಲ್ಲಿ ರಾಮಾಯಣ

ರಾಮಾಯಣದ ಕಥೆಯನ್ನು ಇಟ್ಟುಕೊಂಡು ರೋಹಿತ್ ಶೆಟ್ಟಿ ಅವರು ‘ಸಿಂಘಂ ಅಗೇನ್​’ ಚಿತ್ರವನ್ನು ನಿರ್ದೇಶಿಸಿದ್ದಾರೆ. ಈ ಸಿನಿಮಾದಲ್ಲಿ ಬಹುತಾರಾಗಣ ಇದೆ. ಅಜಯ್​ ದೇವಗನ್​, ರಣವೀರ್​ ಸಿಂಗ್​, ಕರೀನಾ ಕಪೂರ್​ ಖಾನ್​, ಅರ್ಜುನ್​ ಕಪೂರ್​, ಅಕ್ಷಯ್​ ಕುಮಾರ್​, ದೀಪಿಕಾ ಪಡುಕೋಣೆ ಮುಂತಾದವರು ಅಭಿನಯಿಸಿದ್ದಾರೆ. ಟ್ರೇಲರ್​ ನೋಡಿದ ಸಿನಿಪ್ರಿಯರಿಗೆ ಖುಷಿ ಆಗಿದೆ.

ಸೀತೆ ಪಾತ್ರ ಮಾಡಿದ ಕರೀನಾ ಕಪೂರ್​ ಖಾನ್; ‘ಸಿಂಘಂ ಅಗೇನ್’ ಚಿತ್ರದಲ್ಲಿ ರಾಮಾಯಣ
ಕರೀನಾ ಕಪೂರ್​ ಖಾನ್, ರಾಮ-ಲಕ್ಷ್ಮಣ
ಮದನ್​ ಕುಮಾರ್​
|

Updated on: Oct 07, 2024 | 3:06 PM

Share

ಈ ವರ್ಷ ದೀಪಾವಳಿ ಹಬ್ಬಕ್ಕೆ ‘ಸಿಂಘಂ ಅಗೇನ್​’ ಸಿನಿಮಾ ಬಿಡುಗಡೆ ಆಗಲಿದೆ. ಈ ಚಿತ್ರಕ್ಕೆ ರೋಹಿತ್​ ಶೆಟ್ಟಿ ನಿರ್ದೇಶನ ಮಾಡಿದ್ದಾರೆ. ಅಜಯ್​ ದೇವಗನ್​, ಕರೀನಾ ಕಪೂರ್​ ಖಾನ್​, ದೀಪಿಕಾ ಪಡುಕೋಣೆ, ರಣವೀರ್​ ಸಿಂಗ್​, ಅಕ್ಷಯ್​ ಕುಮಾರ್​, ಜಾಕಿ ಶ್ರಾಫ್​, ಟೈಗರ್​ ಶ್ರಾಫ್, ಅರ್ಜುನ್​ ಕಪೂರ್​ ಮುಂತಾದ ಸ್ಟಾರ್​ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಈಗ ‘ಸಿಂಘಂ ಅಗೇನ್​’ ಸಿನಿಮಾದ ಟ್ರೇಲರ್​ ಬಿಡುಗಡೆ ಆಗಿದೆ. ಟ್ರೇಲರ್​ ನೋಡಿದ ಎಲ್ಲರಿಗೂ ಅಚ್ಚರಿ ಆಗಿದೆ. ಈ ಸಿನಿಮಾದಲ್ಲಿ ಇರುವುದು ರಾಮಾಯಣದ ಕಥೆ! ಕರೀನಾ ಕಪೂರ್​ ಖಾನ್​ ಅವರು ಸೀತೆಯ ಪಾತ್ರ ಮಾಡಿದ್ದಾರೆ.

ಸೀತೆಯನ್ನು ರಾವಣ ಅಪಹರಿಸಿಕೊಂಡು ಹೋದಾಗ ರಾಮ ಲಂಕೆಗೆ ಹೋಗಿದ್ದು ರಾಮಾಯಣದ ಕಹಾನಿ. ಅದನ್ನೇ ಇಟ್ಟುಕೊಂಡು ರೋಹಿತ್​ ಶೆಟ್ಟಿ ಅವರು ‘ಸಿಂಘಂ ಅಗೇನ್​’ ಸಿನಿಮಾ ಮಾಡಿದ್ದಾರೆ. ಇದು ಆಧುನಿಕ ರಾಮಾಯಣ. ಇಲ್ಲಿ ರಾಮನಾಗಿ ಅಜಯ್​ ದೇವಗನ್​ ನಟಿಸಿದ್ದಾರೆ. ಅವರ ಪತ್ನಿಯಾಗಿ ಕರೀನಾ ಕಪೂರ್​ ಖಾನ್​ ಕಾಣಿಸಿಕೊಂಡಿದ್ದಾರೆ. ಹಾಗಾದರೆ ರಾವಣ ಯಾರು? ಅರ್ಜುನ್​ ಕಪೂರ್!

ಇದನ್ನೂ ಓದಿ: ಬರೋಬ್ಬರಿ 130 ಕೋಟಿ ರೂಪಾಯಿಗೆ ‘ಸಿಂಘಂ ಅಗೇನ್’ ಒಟಿಟಿ ಡೀಲ್​; ಯಾವಾಗ ರಿಲೀಸ್?

ಶ್ರೀಲಂಕಾದಲ್ಲಿ ಇರುವ ನಟೋರಿಯಸ್​ ವ್ಯಕ್ತಿಯಾಗಿ ಅರ್ಜುನ್​ ಕಪೂರ್​ ಅಭಿನಯಿಸಿದ್ದಾರೆ. ನಾಯಕಿಯನ್ನು ವಿಲನ್​ ಅಪಹರಣ ಮಾಡಿದ ಬಳಿಕ ಆಕೆಯನ್ನು ಮರಳಿ ಕರೆದುಕೊಂಡು ಬರಲು ಲಂಕೆಗೆ ಸಿಂಘಂ (ಅಜಯ್​ ದೇವಗನ್) ಪ್ರಯಾಣ ಮಾಡುತ್ತಾನೆ. ಅವನಿಗೆ ಲಕ್ಷ್ಮಣ (ಟೈಗರ್​ ಶ್ರಾಫ್​), ಆಂಜನೇಯ (ರಣವೀರ್​ ಸಿಂಗ್​), ಜಟಾಯು (ಅಕ್ಷಯ್​ ಕುಮಾರ್​) ಮುಂತಾದವರು ಸಾಥ್​ ನೀಡುತ್ತಾರೆ. ಈ ರೀತಿ ಕಥೆಯನ್ನು ‘ಸಿಂಗಂ ಅಗೇನ್’ ಸಿನಿಮಾದಲ್ಲಿ ನಿರ್ದೇಶಕ ರೋಹಿತ್​ ಶೆಟ್ಟಿ ತೋರಿಸಲಿದ್ದಾರೆ.

‘ಸಿಂಘಂ ಅಗೇನ್​’ ಸಿನಿಮಾದ ಟ್ರೇಲರ್:

ನವೆಂಬರ್​ 1ರಂದು ‘ಸಿಂಗಂ ಅಗೇನ್​’ ಸಿನಿಮಾ ತೆರೆಕಾಣಲಿದೆ. ದೀಪಿಕಾ ಪಡುಕೋಣೆ ಕೂಡ ಈ ಸಿನಿಮಾದಲ್ಲಿ ಭರ್ಜರಿ ಆ್ಯಕ್ಷನ್​ ಮೆರೆದಿದ್ದಾರೆ ಎಂಬುದಕ್ಕೆ ಟ್ರೇಲರ್​ನಲ್ಲಿ ಸಾಕ್ಷಿ ಸಿಕ್ಕಿದೆ. ರೋಹಿತ್​ ಶೆಟ್ಟಿ ಅವರ ಸಿನಿಮಾದಲ್ಲಿ ಅದ್ದೂರಿತನ ಇದ್ದೇ ಇರುತ್ತದೆ. ಅದು ಈ ಚಿತ್ರದಲ್ಲೂ ಮುಂದುವರಿದಿದೆ. ಇನ್ನು, ಕಾಮಿಡಿ ಕೂಡ ಇರಲಿದೆ. ಬಹುತಾರಾಗಣ ಇರುವ ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಎಷ್ಟು ಕಲೆಕ್ಷನ್​ ಮಾಡಲಿದೆ ಎಂಬುದನ್ನು ತಿಳಿಯುವ ಕೌತುಕ ಎಲ್ಲರಿಗೂ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ