AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಚ್ಚಿ ಬೀಳಿಸುತ್ತಿದೆ ಆಮಿರ್​ ಖಾನ್​ ಹೊಸ ಲುಕ್​; ಅಭಿಮಾನಿಗಳಲ್ಲಿ ಹೆಚ್ಚಿದೆ ಕೌತುಕ

ಈ ಬಾರಿ ಬಾಲಿವುಡ್​ ನಟ ಆಮಿರ್​ ಖಾನ್​ ಅವರು ಹೊಸದೇನನ್ನೋ ಪ್ರಯತ್ನಿಸುತ್ತಿದ್ದಾರೆ. ಅವರ ಹಲವು ಗೆಟಪ್​ಗಳು ವೈರಲ್​ ಆಗಿವೆ. ಒಂದು ಲುಕ್​ನಲ್ಲಿ ಅವರು ಹಾರರ್​ ಫೀಲ್​ ನೀಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿರುವ ಈ ಫೋಟೋಗಳನ್ನು ನೋಡಿ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ಶೀಘ್ರದಲ್ಲೇ ಅವರ ಹೊಸ ಸಿನಿಮಾ ಬಗ್ಗೆ ಅಪ್​ಡೇಟ್​ ಸಿಗಲಿದೆ.

ಬೆಚ್ಚಿ ಬೀಳಿಸುತ್ತಿದೆ ಆಮಿರ್​ ಖಾನ್​ ಹೊಸ ಲುಕ್​; ಅಭಿಮಾನಿಗಳಲ್ಲಿ ಹೆಚ್ಚಿದೆ ಕೌತುಕ
ಆಮಿರ್​ ಖಾನ್​
ಮದನ್​ ಕುಮಾರ್​
|

Updated on: Mar 05, 2024 | 3:55 PM

Share

ಖ್ಯಾತ ನಟ ಆಮಿರ್ ಖಾನ್​ (Aamir Khan) ಅವರು ಸತತ ಸೋಲಿನಿಂದ ಕಂಗೆಟ್ಟಿದ್ದಾರೆ. ಅವರು ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದ ‘ಲಾಲ್​ ಸಿಂಗ್​ ಚಡ್ಡಾ’ ಸಿನಿಮಾ ಸೋತ ಬಳಿಕ ಅವರು ಸ್ಕ್ರಿಪ್ಟ್​ ಆಯ್ಕೆಗೆ ಹೆಚ್ಚು ತಲೆ ಕೆಡಿಸಿಕೊಂಡಿದ್ದಾರೆ. ಈಗ ಆಮಿರ್ ಖಾನ್​ ಅವರು ‘ಸಿತಾರೆ ಜಮೀನ್​ ಪರ್​’ (Sitaare Zameen Par) ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ನಡುವೆ ಅವರ ಒಂದು ಹೊಸ ಗೆಟಪ್​ ವೈರಲ್​ ಆಗಿದೆ. ಭಯಬೀಳಿಸುವ ರೀತಿಯಲ್ಲಿ ಇರುವ ಅವರ ಫೋಟೋವನ್ನು (Aamir Khan Viral​ Photo) ನೋಡಿದ ಬಳಿಕ ಆಮಿರ್ ಖಾನ್ ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಾಗಿದೆ. ಸದ್ಯಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋ ಬಗ್ಗೆಯೇ ಚರ್ಚೆ ಆಗುತ್ತಿದೆ.

ಅಂದಹಾಗೆ, ಆಮಿರ್​ ಖಾನ್​ ಅವರ ಈ ಹೊಸ ಗೆಟಪ್​ ಅಪ್​ಲೋಡ್​ ಆಗಿರುವುದು ಪಾಪರಾಜಿಯೊಬ್ಬರ ಸೋಶಿಯಲ್​ ಮೀಡಿಯಾ ಖಾತೆಯಲ್ಲಿ. ಆಮಿರ್ ಖಾನ್​ ಅವರು ಇದನ್ನು ಇನ್ನೂ ಶೇರ್​ ಮಾಡಿಕೊಂಡಿಲ್ಲ. ‘ಸಿತಾರೆ ಜಮೀನ್​ ಪರ್​’ ಸಿನಿಮಾದಲ್ಲಿ ನಟಿಸುತ್ತಿರುವ ದರ್ಶೀಲ್​ ಸಫಾರಿ ಅವರು ಕೂಡ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ‘ಇದು ಆಮಿರ್​ ಖಾನ್​ ಅವರ ಮಲ್ಟಿವರ್ಸ್​. ನಾವೆಲ್ಲರೂ ಅದರಲ್ಲಿ ಜೀವಿಸುತ್ತಿದ್ದೇವೆ ಅಷ್ಟೇ’ ಎಂದು ಅವರು ಕ್ಯಾಪ್ಷನ್​ ನೀಡಿದ್ದಾರೆ. ಹಾಗಾಗಿ ಇದು ನಿಜವಾಗಿಯೂ ಯಾವ ಸಿನಿಮಾದ ಗೆಟಪ್​ ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ.

ಇದನ್ನೂ ಓದಿ: ನಾಟು ನಾಟು ಸ್ಟೆಪ್​ ಹಾಕಲಾಗದೇ ಸೋತ ಆಮಿರ್​, ಸಲ್ಲು, ಶಾರುಖ್​; ಮುಜುಗರ ತಪ್ಪಿಸಲು ಮಾಡಿದ್ದೇನು?

ಇತ್ತೀಚಿನ ದಿನಗಳಲ್ಲಿ ಸೆಲೆಬ್ರಿಟಿಗಳು ಪ್ರಚಾರಕ್ಕಾಗಿ ಇಲ್ಲಸಲ್ಲದ ಸರ್ಕಸ್​ ಮಾಡುತ್ತಿದ್ದಾರೆ. ತಾವು ಒಪ್ಪಿಕೊಂಡಿರುವ ಬ್ರ್ಯಾಂಡ್​ಗಳ ಪ್ರಚಾರಕ್ಕಾಗಿ ಹೊಸ ಹೊಸ ತಂತ್ರಗಳನ್ನು ಬಳಸಲಾಗುತ್ತಿದೆ. ಈಗ ಆಮಿರ್​ ಖಾನ್​ ಅವರ ವೈರಲ್​ ಫೋಟೋದ ಹಿಂದೆಯೂ ಅಂಥದ್ದೇ ಪ್ರಚಾರ ತಂತ್ರ ಇರಬಹುದು ಎಂದು ಕೆಲವರು ಊಹಿಸುತ್ತಿದ್ದಾರೆ. ಇದು ಯಾವುದೋ ಜಾಹೀರಾತಿನ ಫೋಟೋ ಇರಬಹುದು ಎಂದು ನೆಟ್ಟಿಗರು ಕಮೆಂಟ್​ ಮಾಡುತ್ತಿದ್ದಾರೆ.

ಆಮಿರ್​ ಖಾನ್​ ಅವರ ವೈರಲ್​ ಫೋಟೋ:

ಆಮಿರ್​ ಖಾನ್​ ನಿರ್ದೇಶನ ಮಾಡಿದ್ದ ‘ತಾರೆ ಜಮೀನ್​ ಪರ್​’ ಸಿನಿಮಾ 2007ರಲ್ಲಿ ಬಿಡುಗಡೆ ಆಗಿತ್ತು. ಆ ಸಿನಿಮಾದಲ್ಲಿ ಆಮಿರ್ ಖಾನ್​ ಜೊತೆ ಬಾಲನಟ ದರ್ಶೀಲ್​ ಸಫಾರಿ ಅವರು ಅಭಿನಯಿಸಿದ್ದರು. ಈಗ ಬರೋಬ್ಬರಿ 16 ವರ್ಷಗಳ ಬಳಿಕ ಅವರು ‘ಸಿತಾರೆ ಜಮೀನ್​ ಪರ್​’ ಸಿನಿಮಾದಲ್ಲಿ ಮತ್ತೊಮ್ಮೆ ಒಂದಾಗಿ ತೆರೆ ಹಂಚಿಕೊಳ್ಳುತ್ತಿದ್ದಾರೆ. ಶೂಟಿಂಗ್​ ಸೆಟ್​ನಿಂದ ಒಂದು ಫೋಟೋವನ್ನು ದರ್ಶೀಲ್​ ಸಫಾರಿ ಅವರು ಇತ್ತೀಚೆಗೆ ಹಂಚಿಕೊಂಡಿದ್ದರು. ಈ ಸಿನಿಮಾ ಬಗ್ಗೆ ಶೀಘ್ರದಲ್ಲೇ ಅಪ್​ಡೇಟ್​ ಸಿಗಲಿದೆ. ಮತ್ತೊಮ್ಮೆ ಆಮಿರ್​ ಖಾನ್ ಮತ್ತು ದರ್ಶೀಲ್​ ಸಫಾರಿ ಅವರನ್ನು ಒಟ್ಟಿಗೆ ನೋಡಲು ಫ್ಯಾನ್ಸ್​ ಕಾದಿದ್ದಾರೆ. ಈ ಸಿನಿಮಾದ ಕಥೆಯ ಬಗ್ಗೆ ಸಿಕ್ಕಾಪಟ್ಟೆ ಕೌತುಕ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ