AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗಳು, ಸಹೋದರಿ ಮದುವೆ ಆಗಿದ್ದು ಹಿಂದೂಗಳನ್ನೇ; ಲವ್ ಜಿಹಾದ್ ಆರೋಪಕ್ಕೆ ಆಮಿರ್ ಖಾನ್ ಉತ್ತರ

ಆಮಿರ್ ಖಾನ್ ಅವರ ಮೇಲೆ ಕೆಲವರು ಲವ್ ಜಿಹಾದ್ ಆರೋಪ ಹೊರಿಸಿದ್ದರು. ಅವುಗಳಿಗೆ ಈಗ ಆಮಿರ್ ಖಾನ್ ಪ್ರತಿಕ್ರಿಯಿಸಿದ್ದಾರೆ. ತಮ್ಮ ಕುಟುಂಬದಲ್ಲಿ ಆಗಿರುವ ಅಂತರ್​ ಧರ್ಮೀಯ ವಿವಾಹಗಳ ಬಗ್ಗೆ ಆಮಿರ್ ಖಾನ್ ಉಲ್ಲೇಖಿಸಿದ್ದಾರೆ. ಸಂದರ್ಶನವೊಂದರಲ್ಲಿ ಅವರು ಈ ಕುರಿತು ಮಾತನಾಡಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ..

ಮಗಳು, ಸಹೋದರಿ ಮದುವೆ ಆಗಿದ್ದು ಹಿಂದೂಗಳನ್ನೇ; ಲವ್ ಜಿಹಾದ್ ಆರೋಪಕ್ಕೆ ಆಮಿರ್ ಖಾನ್ ಉತ್ತರ
Aamir Khan
ಮದನ್​ ಕುಮಾರ್​
|

Updated on: Jun 16, 2025 | 8:08 PM

Share

2014ರಲ್ಲಿ ಬಿಡುಗಡೆ ಆದ ‘ಪಿಕೆ’ ಸಿನಿಮಾ ಸೂಪರ್ ಹಿಟ್ ಆಯಿತು. ಆದರೆ ಸಾಕಷ್ಟು ವಿವಾದಗಳನ್ನು ಕೂಡ ಮಾಡಿಕೊಂಡಿತು. ಈ ಚಿತ್ರದಲ್ಲಿ ಲವ್ ಜಿಹಾದ್ (Love Jihad) ಇದೆ ಎಂದು ಕೆಲವರು ಆರೋಪ ಮಾಡಿದ್ದರು. ಆ ಆರೋಪಗಳಿಗೆ ಈಗ ನಟ ಆಮಿರ್ ಖಾನ್ (Aamir Khan) ಉತ್ತರ ನೀಡಿದ್ದಾರೆ. ಸದ್ಯ ಆಮಿರ್ ಖಾನ್ ಅವರು ‘ಸಿತಾರೆ ಜಮೀನ್ ಪರ್’ ಸಿನಿಮಾದ ಬಿಡುಗಡೆಗೆ ಸಜ್ಜಾಗಿದ್ದಾರೆ. ಈ ನಡುವೆ ಹಲವು ಮಾಧ್ಯಮಗಳಿಗೆ ಸಂದರ್ಶನ ನೀಡುತ್ತಿದ್ದಾರೆ. ಈ ಸಂದರ್ಭದಲ್ಲಿ ಲವ್ ಜಿಹಾದ್ ಆರೋಪಕ್ಕೆ ಅವರು ಪ್ರತಿಕ್ರಿಯಿಸಿದ್ದಾರೆ. ತಮ್ಮದೇ ಕುಟುಂಬದ ಉದಾಹರಣೆಯನ್ನು ಅವರು ತೆಗೆದುಕೊಂಡಿದ್ದಾರೆ.

‘ಎರಡು ಪ್ರತ್ಯೇಕ ಧರ್ಮಗಳ ಜನರ ನಡುವೆ ಪ್ರೀತಿ ಮೂಡಿದಾಗ, ಅದು ಯಾವಾಗಲೂ ಲವ್ ಜಿಹಾದ್ ಆಗಿರುವುದಿಲ್ಲ. ಇಬ್ಬರು ಪರಸ್ಪರ ಪ್ರೀತಿಸುತ್ತಾರೆ. ಅದು ಮನುಷ್ಯತ್ವದ ಬಂಧ. ಅದು ಧರ್ಮವನ್ನೂ ಮೀರಿದ್ದು’ ಎಂದು ಆಮಿರ್ ಖಾನ್ ಹೇಳಿದ್ದಾರೆ. ಆಮಿರ್ ಖಾನ್ ಅಕ್ಕ ನಿಖತ್ ಖಾನ್ ಅವರು ಸಂತೋಷ್ ಹೆಗಡೆ ಜೊತೆ ಮದುವೆ ಆದರು. ತಂಗಿ ಫರ್ಹತ್ ಖಾನ್ ಅವರು ರಾಜೀವ್ ದತ್ತ ಜೊತೆ ಮದುವೆ ಆದರು. ಆಮಿರ್ ಖಾನ್ ಮಗಳು ಇರಾ ಖಾನ್ ಮದುವೆ ನೂಪುರ್ ಶಿಕಾರೆ ಜೊತೆ ನಡೆಯಿತು.

ಆಮಿರ್ ಖಾನ್ ಮದುವೆ ಆಗಿರುವುದು ಕೂಡ ಹಿಂದೂ ಧರ್ಮದವರನ್ನು. ಮೊದಲ ಪತ್ನಿ ರೀನಾ ದತ್ತ, ಎರಡನೇ ಪತ್ನಿ ಕಿರಣ್ ರಾವ್ ಅವರು ಹಿಂದು ಧರ್ಮದವರು. ಈಗ ಆಮಿರ್ ಖಾನ್ ಅವರಿಗೆ ಬೆಂಗಳೂರು ಮೂಲದ ಗೌರಿ ಎಂಬ ಮಹಿಳೆ ಜೊತೆ ಪ್ರೀತಿ ಚಿಗುರಿದೆ. ಗೌರಿ ಕೂಡ ಹಿಂದು ಧರ್ಮದವರು.

ಇದನ್ನೂ ಓದಿ
Image
ಆಮಿರ್ ಖಾನ್-ರಣ್​ಬೀರ್ ಕಪೂರ್ ಜಗಳ, ಮಧ್ಯಸ್ಥಿಕೆ ವಹಿಸಿದ ರೋಹಿತ್ ಶರ್ಮಾ
Image
ಹೊಸ ಪ್ರಾಜೆಕ್ಟ್​ಗಾಗಿ ಒಂದಾದ ಆಮಿರ್-ರಣಬೀರ್; ವಿಚಾರ ರಿವೀಲ್ ಮಾಡಿದ ಆಲಿಯಾ
Image
59ನೇ ವಯಸ್ಸಲ್ಲಿ ಬೆಂಗಳೂರು ಹುಡುಗಿ ಮೇಲೆ ಆಮಿರ್​​​ಗೆ ಲವ್? ಯಾರು ಈ ಗೌರಿ?
Image
ಆಮಿರ್ ಖಾನ್ ಈ ರೀತಿ ವೇಷ ಹಾಕಿದ್ದು ದುಡ್ಡಿಗಾಗಿ; ಅಸಲಿ ವಿಚಾರ ರಿವೀಲ್

‘ಪಿಕೆ’ ಸಿನಿಮಾದಲ್ಲಿ ಹಿಂದೂ ಧರ್ಮಕ್ಕೆ ಅವಮಾನ ಮಾಡಲಾಗಿತ್ತು ಎಂಬ ಆರೋಪವನ್ನು ಕೂಡ ಆಮಿರ್ ಖಾನ್ ತಳ್ಳಿ ಹಾಕಿದ್ದಾರೆ. ‘ನಾವು ಯಾವುದೇ ಧರ್ಮದ ವಿರುದ್ಧ ಇಲ್ಲ. ಎಲ್ಲ ಧರ್ಮದವರನ್ನು ನಾವು ಗೌರವಿಸುತ್ತೇವೆ. ಹಣ ಕೀಳುವ ಉದ್ದೇಶದಿಂದ ಧರ್ಮವನ್ನು ದುರ್ಬಳಕೆ ಮಾಡಿಕೊಂಡು ಸಾಮಾನ್ಯ ಜನರಿಗೆ ಮೋಸ ಮಾಡುವ ವ್ಯಕ್ತಿಗಳ ಬಗ್ಗೆ ಎಚ್ಚರ ಇರಲಿ ಎಂಬುದನ್ನು ಆ ಸಿನಿಮಾ ಹೇಳುತ್ತೇನೆ. ಅಂಥ ವ್ಯಕ್ತಿಗಳು ನಿಮಗೆ ಎಲ್ಲ ಧರ್ಮದಲ್ಲಿ ಸಿಗುತ್ತಾರೆ. ಅದನ್ನು ತಿಳಿಸುವುದೇ ಸಿನಿಮಾದ ಉದ್ದೇಶ’ ಎಂದಿದ್ದಾರೆ ಆಮಿರ್ ಖಾನ್.

ಇದನ್ನೂ ಓದಿ: ಭಾರತದ ಧ್ವಜ ತೆಗೆಯಬೇಕು: ಆಮಿರ್ ಖಾನ್​ಗೆ ಸೂಚನೆ ನೀಡಿದ್ದ ಪಾಕಿಸ್ತಾನ; ನಟ ಮಾಡಿದ್ದೇನು?

ಆಮಿರ್ ಖಾನ್ ನಟಿಸಿರುವ ‘ಸಿತಾರೆ ಜಮೀನ್ ಪರ್’ ಸಿನಿಮಾ ಜೂನ್ 20ರಂದು ಬಿಡುಗಡೆ ಆಗಲಿದೆ. ಈ ಸಿನಿಮಾದಲ್ಲಿ ಅನೇಕ ಹೊಸ ಕಲಾವಿದರು ನಟಿಸಿದ್ದಾರೆ. ಆಮಿರ್ ಖಾನ್​ಗೆ ಜೋಡಿಯಾಗಿ ಜೆನಿಲಿಯಾ ದೇಶಮುಖ್ ಅಭಿನಯಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!