AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ ಬೀದಿಯಲ್ಲಿ ವಡಾ ಪಾವ್ ಮಾರಿದ ಆಮಿರ್ ಖಾನ್; ವಿಡಿಯೋ ವೈರಲ್

ಜೂನ್ 20ರಂದು ‘ಸಿತಾರೆ ಜಮೀನ್ ಪರ್’ ಸಿನಿಮಾ ರಿಲೀಸ್ ಆಗಲಿದೆ. ಈ ಚಿತ್ರದ ಪ್ರಚಾರದಲ್ಲಿ ಆಮಿರ್ ಖಾನ್ ಭಾಗಿಯಾಗಿದ್ದಾರೆ. ಅವರು ಮುಂಬೈನಲ್ಲಿ ವಡಾ ಪಾವ್ ಮಾರುತ್ತಿರುವ ವಿಡಿಯೋ ವೈರಲ್ ಆಗಿದೆ. ಜನರು ಹಲವು ರೀತಿಯಲ್ಲಿ ಕಮೆಂಟ್ ಮಾಡಿದ್ದಾರೆ. ಇನ್ನು, ಚಿತ್ರದ ಬಿಡುಗಡೆಗೂ ಮುನ್ನ ತಮ್ಮ ಆಪ್ತ ಸ್ನೇಹಿತರನ್ನು ಕರೆದು ಆಮಿರ್ ಖಾನ್ ಅವರು ಪಾರ್ಟಿ ಮಾಡಿದ್ದಾರೆ.

ಮುಂಬೈ ಬೀದಿಯಲ್ಲಿ ವಡಾ ಪಾವ್ ಮಾರಿದ ಆಮಿರ್ ಖಾನ್; ವಿಡಿಯೋ ವೈರಲ್
Aamir Khan
ಮದನ್​ ಕುಮಾರ್​
|

Updated on:Jun 08, 2025 | 11:46 AM

Share

ಬಾಲಿವುಡ್ ನಟ ಆಮಿರ್ ಖಾನ್ ಅವರಿಗೆ ಒಂದು ಗೆಲುವು ಬೇಕಿದೆ. ಅದಕ್ಕಾಗಿ ಅವರು ತುಂಬ ಹಂಬಲಿಸುತ್ತಿದ್ದಾರೆ. ಈ ಮೊದಲು ಅವರು ನಟಿಸಿದ ‘ಥಗ್ಸ್ ಆಫ್ ಹಿಂದುಸ್ತಾನ್’, ‘ಲಾಲ್ ಸಿಂಗ್ ಚಡ್ಡಾ’ ಸಿನಿಮಾಗಳು ಸೋತವು. ಈಗ ಅವರು ‘ಸಿತಾರೆ ಜಮೀನ್ ಪರ್’ ಸಿನಿಮಾದಲ್ಲಿ ನಟಿಸಿದ್ದಾರೆ. ಒಂದು ರೀತಿಯಲ್ಲಿ ಇದು ಅವರ ಕಮ್​ಬ್ಯಾಕ್ ಸಿನಿಮಾ. ಹಾಗಾಗಿ ಅಭಿಮಾನಿಗಳು ಕೂಡ ನಿರೀಕ್ಷೆ ಹೊಂದಿದ್ದಾರೆ. ಸಿನಿಮಾದ ಪ್ರಚಾರದ ಸಲುವಾಗಿ ಆಮಿರ್ ಖಾನ್ ಅವರು ಹಲವು ರೀತಿಯ ಸರ್ಕಸ್ ಮಾಡುತ್ತಿದ್ದಾರೆ. ಮುಂಬೈ ಬೀದಿಯಲ್ಲಿ ಅವರು ವಡಾ ಪಾವ್ ಮಾರಿದ್ದೇ ಈ ಮಾತಿಗೆ ಉದಾಹರಣೆ.

ಹೌದು, ಆಮಿರ್ ಖಾನ್ ಅವರು ಮುಂಬೈನ ಬೀದಿಯಲ್ಲಿ ನಿಂತು ವಡಾ ಪಾವ್ ಮಾರಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಇದು ‘ಸಿತಾರೆ ಜಮೀನ್ ಪರ್’ ಚಿತ್ರದ ಪ್ರಚಾರಕ್ಕಾಗಿ ಮಾಡಿದ್ದು ಎಂಬುದು ಸ್ಪಷ್ಟ. ಹಾಗಾಗಿ ನೆಟ್ಟಿಗರು ಅವರನ್ನು ಟ್ರೋಲ್ ಮಾಡಿದ್ದಾರೆ. ‘ಪ್ರಚಾರಕ್ಕಾಗಿ ಏನೆಲ್ಲ ಮಾಡಬೇಕಾಗುತ್ತದೆ’ ಎಂದು ನೆಟ್ಟಿಗರು ಕಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ
Image
ಆಮಿರ್ ಖಾನ್-ರಣ್​ಬೀರ್ ಕಪೂರ್ ಜಗಳ, ಮಧ್ಯಸ್ಥಿಕೆ ವಹಿಸಿದ ರೋಹಿತ್ ಶರ್ಮಾ
Image
ಹೊಸ ಪ್ರಾಜೆಕ್ಟ್​ಗಾಗಿ ಒಂದಾದ ಆಮಿರ್-ರಣಬೀರ್; ವಿಚಾರ ರಿವೀಲ್ ಮಾಡಿದ ಆಲಿಯಾ
Image
59ನೇ ವಯಸ್ಸಲ್ಲಿ ಬೆಂಗಳೂರು ಹುಡುಗಿ ಮೇಲೆ ಆಮಿರ್​​​ಗೆ ಲವ್? ಯಾರು ಈ ಗೌರಿ?
Image
ಆಮಿರ್ ಖಾನ್ ಈ ರೀತಿ ವೇಷ ಹಾಕಿದ್ದು ದುಡ್ಡಿಗಾಗಿ; ಅಸಲಿ ವಿಚಾರ ರಿವೀಲ್

‘ಸಿತಾರೆ ಜಮೀನ್ ಪರ್’ ಸಿನಿಮಾದಲ್ಲಿ ಆಮಿರ್ ಖಾನ್, ಜೆನಿಲಿಯಾ ದೇಶಮುಖ್ ಮುಂತಾದವರು ನಟಿಸಿದ್ದಾರೆ. ಅನೇಕ ಹೊಸ ಕಲಾವಿದರಿಗೆ ಅವಕಾಶ ನೀಡಲಾಗಿದೆ. ಸ್ವತಃ ಆಮಿರ್ ಖಾನ್ ಅವರು ಈ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಜೂನ್ 20ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಪ್ರಚಾರ ಕಾರ್ಯದಲ್ಲಿ ಆಮಿರ್ ಖಾನ್ ಅವರು ಬ್ಯುಸಿ ಆಗಿದ್ದಾರೆ.

ಆಮಿರ್ ಖಾನ್ ಅವರ ತಾಯಿ ಜೀನತ್ ಹುಸೇನ್ ಅವರಿಗೆ ಈಗ 91 ವರ್ಷ ವಯಸ್ಸು. ಈ ವಯಸ್ಸಿನಲ್ಲಿ ಅವರು ಸಿನಿಮಾದ ಶೂಟಿಂಗ್ ನೋಡಲು ಬಯಸಿದರು. ‘ಸಿತಾರೆ ಜಮೀನ್ ಪರ್’ ಚಿತ್ರದ ಶೂಟಿಂಗ್ ನೋಡಲು ಅವರು ತೆರಳಿದ್ದರು. ಆಗ ಅವರ ಮನವೊಲಿಸಿ, ಒಂದು ಶಾಟ್​ನಲ್ಲಿ ನಟಿಸುವಂತೆ ಒಪ್ಪಿಸಲಾಗಿದೆ. ಆ ಕಾರಣದಿಂದಲೂ ಆಮಿರ್ ಖಾನ್ ಅವರ ಪಾಲಿಗೆ ಈ ಸಿನಿಮಾ ವಿಶೇಷವಾಗಿದೆ.

ಇದನ್ನೂ ಓದಿ: ಬರೀ ರಿಮೇಕ್ ಮಾಡ್ತೀರಿ ಎಂಬ ಟೀಕೆಗೆ ಖಡಕ್ ಉತ್ತರ ನೀಡಿದ ಆಮಿರ್ ಖಾನ್

‘ಚಾಂಪಿಯನ್ಸ್’ ಸಿನಿಮಾದ ರಿಮೇಕ್ ಆಗಿ ‘ಸಿತಾರೆ ಜಮೀನ್ ಪರ್’ ಸಿನಿಮಾ ಮೂಡಿಬಂದಿದೆ. ಟ್ರೇಲರ್ ನೋಡಿದ ಅಭಿಮಾನಿಗಳಿಗೆ ಇಷ್ಟ ಆಗಿದೆ. ಚಿತ್ರದ ಬಿಡುಗಡೆಗೂ ಮುನ್ನ ಸ್ನೇಹಿತರನ್ನು ಕರೆದು ಆಮಿರ್ ಖಾನ್ ಪಾರ್ಟಿ ಮಾಡಿದ್ದಾರೆ. ಈ ಪಾರ್ಟಿಯಲ್ಲಿ ರಣಬೀರ್ ಕಪೂರ್, ಸಚಿನ್ ತೆಂಡುಲ್ಕರ್ ಮುಂತಾದವರು ಭಾಗಿಯಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:25 am, Sun, 8 June 25

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು