AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀಲಿ ಚಿತ್ರ ನಿರ್ಮಾಣ ಪ್ರಕರಣ; ಜೈಲಿನಲ್ಲಿರುವ ರಾಜ್​ ಕುಂದ್ರಾಗೆ ಮಧ್ಯಂತರ ರಿಲೀಫ್​ ನೀಡಿದ ಬಾಂಬೆ ಹೈಕೋರ್ಟ್​

ವಾರದ ಹಿಂಎ ರಾಜ್​ ಕುಂದ್ರಾ ಜಾಮೀನು ಅರ್ಜಿಯ ವಿಚಾರಣೆಯನ್ನು ಮುಂಬೈನ ಸೆಷನ್​ ಕೋರ್ಟ್​ ನಡೆಸಿ, ಈ ವಿಚಾರಣೆಯನ್ನು ಕೋರ್ಟ್​ ಆಗಸ್ಟ್​ 20ರವರೆಗೆ ಮುಂದೂಡಿತ್ತು.

ನೀಲಿ ಚಿತ್ರ ನಿರ್ಮಾಣ ಪ್ರಕರಣ; ಜೈಲಿನಲ್ಲಿರುವ ರಾಜ್​ ಕುಂದ್ರಾಗೆ ಮಧ್ಯಂತರ ರಿಲೀಫ್​ ನೀಡಿದ ಬಾಂಬೆ ಹೈಕೋರ್ಟ್​
ರಾಜ್​ ಕುಂದ್ರಾ
TV9 Web
| Edited By: |

Updated on:Aug 18, 2021 | 2:08 PM

Share

ಅಶ್ಲೀಲ ಸಿನಿಮಾ ನಿರ್ಮಾಣ ಪ್ರಕರಣದಲ್ಲಿ ರಾಜ್​ ಕುಂದ್ರಾ ಬಂಧನಕ್ಕೆ ಒಳಗಾಗಿ ತಿಂಗಳಾಗುತ್ತಾ ಬಂದಿದೆ. ಅವರ ವಿರುದ್ಧ ಆರೋಪ ತುಂಬಾನೇ ಗಂಭೀರವಾಗಿದೆ. ಜತೆಗೆ ಅವರಿಗೆ ಜಾಮೀನು ಸಿಕ್ಕರೆ ಸಾಕ್ಷ್ಯ ನಾಶವಾಗುವ ಸಾಧ್ಯತೆ ಕೂಡ ಇದೆ. ಹೀಗಾಗಿ ಎಷ್ಟೇ ಪ್ರಯತ್ನ ಮಾಡಿದರೂ ಅವರಿಗೆ ಜಾಮೀನು ಸಿಗುತ್ತಿಲ್ಲ. ಈ ಬೆನ್ನಲ್ಲೇ ಅವರಿಗೆ ಬಾಂಬೆ ಹೈಕೋರ್ಟ್​ ಕಡೆಯಿಂದ ರಿಲೀಫ್​ ಒಂದು ಸಿಕ್ಕಿದೆ. ಅವರ ಜಾಮೀನು ಅರ್ಜಿಯನ್ನು ಆಗಸ್ಟ್​ 25ರಂದು ವಿಚಾರಣೆ ನಡೆಸಲಾಗುವುದು ಎಂದು ಕೋರ್ಟ್​ ಹೇಳಿದೆ.

ವಾರದ ಹಿಂಎ ರಾಜ್​ ಕುಂದ್ರಾ ಜಾಮೀನು ಅರ್ಜಿಯ ವಿಚಾರಣೆಯನ್ನು ಮುಂಬೈನ ಸೆಷನ್​ ಕೋರ್ಟ್​ ನಡೆಸಿ, ಈ ವಿಚಾರಣೆಯನ್ನು ಕೋರ್ಟ್​ ಆಗಸ್ಟ್​ 20ರವರೆಗೆ ಮುಂದೂಡಿತ್ತು. ರಾಜ್​ ಕುಂದ್ರಾಗೆ ಜಾಮೀನು ನೀಡಿದರೆ ಆಗುವ ತೊಂದರೆಗಳೇನು? ಅವರಿಗೆ ಏಕೆ ಜಾಮೀನು ನೀಡಬಾರದು ಎನ್ನುವ ಬಗ್ಗೆ ಮುಂಬೈ ಕ್ರೈಮ್​ ಬ್ರ್ಯಾಂಚ್​ನವರು 19 ಕಾರಣಗಳನ್ನು ನೀಡಿದ್ದರು. ಈ ಕಾರಣಕ್ಕೆ ಸೆಷನ್​ ಕೋರ್ಟ್​ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದೆ ಎನ್ನಲಾಗಿದೆ. ಈ ಕಾರಣಕ್ಕೆ ನಿರೀಕ್ಷಣಾ ಜಾಮೀನು ನೀಡಬೇಕು ಎಂದು ಕೋರಿ ರಾಜ್​ ಕುಂದ್ರಾ ಬಾಂಬೆ ಹೈಕೋರ್ಟ್​ ಮೆಟ್ಟಿಲೇರಿದ್ದರು. ಈಗ ಅರ್ಜಿ ವಿಚಾರಣೆಗೆ ಹೈಕೋರ್ಟ್​ ಸಮ್ಮತಿಸಿದೆ.

ನೀಲಿ ಸಿನಿಮಾ ನಿರ್ಮಾಣ ಮಾಡಿ ಅದನ್ನು ಹಂಚುವ ಕೆಲಸವನ್ನು ರಾಜ್​ ಕುಂದ್ರಾ ಮಾಡುತ್ತಿದ್ದರು. ಆದರೆ, ತಾವು ನಿರ್ಮಾಣ ಮಾಡುತ್ತಿದ್ದುದು ನೀಲಿ ಚಿತ್ರ ಅಲ್ಲ ಎಂದಿದ್ದಾರೆ ರಾಜ್​ ಕುಂದ್ರಾ. ಈಗ ಅವರು ಜೈಲಿನಿಂದ ಹೊರ ಬರೋಕೆ ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದ್ದಾರೆ. ಆದರೆ, ಇದು ಸಾಧ್ಯವಾಗುತ್ತಿಲ್ಲ. ಇನ್ನು, ರಾಜ್​ ಕುಂದ್ರಾ ಬಂಧನದ ನಂತರ ಶಿಲ್ಪಾ ಶೆಟ್ಟಿ ಜನಪ್ರಿಯತೆಗೆ ಪೆಟ್ಟು ಬಿದ್ದಿದೆ. ಅನೇಕ ಬ್ರ್ಯಾಂಡ್​ಗಳು ಅವರ ಜತೆಗಿನ ಒಪ್ಪಂದ ರದ್ದು ಮಾಡಿಕೊಳ್ಳಲು ಮುಂದಾಗಿವೆ ಎನ್ನಲಾಗಿದೆ.

ಇದನ್ನೂ ಓದಿ: Shilpa Shetty: ರಾಜ್​ ಕುಂದ್ರಾ ಜೈಲಿನಲ್ಲಿರುವಾಗಲೇ ಗುಡ್​ ನ್ಯೂಸ್​ ನೀಡಿದ ಶಿಲ್ಪಾ ಶೆಟ್ಟಿ

Published On - 1:58 pm, Wed, 18 August 21

ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ