AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀಲಿ ಚಿತ್ರ ನಿರ್ಮಾಣ ಪ್ರಕರಣ; ಜೈಲಿನಲ್ಲಿರುವ ರಾಜ್​ ಕುಂದ್ರಾಗೆ ಮಧ್ಯಂತರ ರಿಲೀಫ್​ ನೀಡಿದ ಬಾಂಬೆ ಹೈಕೋರ್ಟ್​

ವಾರದ ಹಿಂಎ ರಾಜ್​ ಕುಂದ್ರಾ ಜಾಮೀನು ಅರ್ಜಿಯ ವಿಚಾರಣೆಯನ್ನು ಮುಂಬೈನ ಸೆಷನ್​ ಕೋರ್ಟ್​ ನಡೆಸಿ, ಈ ವಿಚಾರಣೆಯನ್ನು ಕೋರ್ಟ್​ ಆಗಸ್ಟ್​ 20ರವರೆಗೆ ಮುಂದೂಡಿತ್ತು.

ನೀಲಿ ಚಿತ್ರ ನಿರ್ಮಾಣ ಪ್ರಕರಣ; ಜೈಲಿನಲ್ಲಿರುವ ರಾಜ್​ ಕುಂದ್ರಾಗೆ ಮಧ್ಯಂತರ ರಿಲೀಫ್​ ನೀಡಿದ ಬಾಂಬೆ ಹೈಕೋರ್ಟ್​
ರಾಜ್​ ಕುಂದ್ರಾ
TV9 Web
| Edited By: |

Updated on:Aug 18, 2021 | 2:08 PM

Share

ಅಶ್ಲೀಲ ಸಿನಿಮಾ ನಿರ್ಮಾಣ ಪ್ರಕರಣದಲ್ಲಿ ರಾಜ್​ ಕುಂದ್ರಾ ಬಂಧನಕ್ಕೆ ಒಳಗಾಗಿ ತಿಂಗಳಾಗುತ್ತಾ ಬಂದಿದೆ. ಅವರ ವಿರುದ್ಧ ಆರೋಪ ತುಂಬಾನೇ ಗಂಭೀರವಾಗಿದೆ. ಜತೆಗೆ ಅವರಿಗೆ ಜಾಮೀನು ಸಿಕ್ಕರೆ ಸಾಕ್ಷ್ಯ ನಾಶವಾಗುವ ಸಾಧ್ಯತೆ ಕೂಡ ಇದೆ. ಹೀಗಾಗಿ ಎಷ್ಟೇ ಪ್ರಯತ್ನ ಮಾಡಿದರೂ ಅವರಿಗೆ ಜಾಮೀನು ಸಿಗುತ್ತಿಲ್ಲ. ಈ ಬೆನ್ನಲ್ಲೇ ಅವರಿಗೆ ಬಾಂಬೆ ಹೈಕೋರ್ಟ್​ ಕಡೆಯಿಂದ ರಿಲೀಫ್​ ಒಂದು ಸಿಕ್ಕಿದೆ. ಅವರ ಜಾಮೀನು ಅರ್ಜಿಯನ್ನು ಆಗಸ್ಟ್​ 25ರಂದು ವಿಚಾರಣೆ ನಡೆಸಲಾಗುವುದು ಎಂದು ಕೋರ್ಟ್​ ಹೇಳಿದೆ.

ವಾರದ ಹಿಂಎ ರಾಜ್​ ಕುಂದ್ರಾ ಜಾಮೀನು ಅರ್ಜಿಯ ವಿಚಾರಣೆಯನ್ನು ಮುಂಬೈನ ಸೆಷನ್​ ಕೋರ್ಟ್​ ನಡೆಸಿ, ಈ ವಿಚಾರಣೆಯನ್ನು ಕೋರ್ಟ್​ ಆಗಸ್ಟ್​ 20ರವರೆಗೆ ಮುಂದೂಡಿತ್ತು. ರಾಜ್​ ಕುಂದ್ರಾಗೆ ಜಾಮೀನು ನೀಡಿದರೆ ಆಗುವ ತೊಂದರೆಗಳೇನು? ಅವರಿಗೆ ಏಕೆ ಜಾಮೀನು ನೀಡಬಾರದು ಎನ್ನುವ ಬಗ್ಗೆ ಮುಂಬೈ ಕ್ರೈಮ್​ ಬ್ರ್ಯಾಂಚ್​ನವರು 19 ಕಾರಣಗಳನ್ನು ನೀಡಿದ್ದರು. ಈ ಕಾರಣಕ್ಕೆ ಸೆಷನ್​ ಕೋರ್ಟ್​ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದೆ ಎನ್ನಲಾಗಿದೆ. ಈ ಕಾರಣಕ್ಕೆ ನಿರೀಕ್ಷಣಾ ಜಾಮೀನು ನೀಡಬೇಕು ಎಂದು ಕೋರಿ ರಾಜ್​ ಕುಂದ್ರಾ ಬಾಂಬೆ ಹೈಕೋರ್ಟ್​ ಮೆಟ್ಟಿಲೇರಿದ್ದರು. ಈಗ ಅರ್ಜಿ ವಿಚಾರಣೆಗೆ ಹೈಕೋರ್ಟ್​ ಸಮ್ಮತಿಸಿದೆ.

ನೀಲಿ ಸಿನಿಮಾ ನಿರ್ಮಾಣ ಮಾಡಿ ಅದನ್ನು ಹಂಚುವ ಕೆಲಸವನ್ನು ರಾಜ್​ ಕುಂದ್ರಾ ಮಾಡುತ್ತಿದ್ದರು. ಆದರೆ, ತಾವು ನಿರ್ಮಾಣ ಮಾಡುತ್ತಿದ್ದುದು ನೀಲಿ ಚಿತ್ರ ಅಲ್ಲ ಎಂದಿದ್ದಾರೆ ರಾಜ್​ ಕುಂದ್ರಾ. ಈಗ ಅವರು ಜೈಲಿನಿಂದ ಹೊರ ಬರೋಕೆ ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದ್ದಾರೆ. ಆದರೆ, ಇದು ಸಾಧ್ಯವಾಗುತ್ತಿಲ್ಲ. ಇನ್ನು, ರಾಜ್​ ಕುಂದ್ರಾ ಬಂಧನದ ನಂತರ ಶಿಲ್ಪಾ ಶೆಟ್ಟಿ ಜನಪ್ರಿಯತೆಗೆ ಪೆಟ್ಟು ಬಿದ್ದಿದೆ. ಅನೇಕ ಬ್ರ್ಯಾಂಡ್​ಗಳು ಅವರ ಜತೆಗಿನ ಒಪ್ಪಂದ ರದ್ದು ಮಾಡಿಕೊಳ್ಳಲು ಮುಂದಾಗಿವೆ ಎನ್ನಲಾಗಿದೆ.

ಇದನ್ನೂ ಓದಿ: Shilpa Shetty: ರಾಜ್​ ಕುಂದ್ರಾ ಜೈಲಿನಲ್ಲಿರುವಾಗಲೇ ಗುಡ್​ ನ್ಯೂಸ್​ ನೀಡಿದ ಶಿಲ್ಪಾ ಶೆಟ್ಟಿ

Published On - 1:58 pm, Wed, 18 August 21

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!