AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Snehalata Dixit: ಮಾಧುರಿ ದೀಕ್ಷಿತ್​ ತಾಯಿ ಸ್ನೇಹಲತಾ ನಿಧನ; 91ನೇ ವಯಸ್ಸಿಗೆ ಇಹಲೋಕ ತ್ಯಜಿಸಿದ ಹಿರಿಯ ಜೀವ

Madhuri Dixit Mother Death: ಮುಂಬೈನ ನಿವಾಸದಲ್ಲಿ ಮಾಧುರಿ ದೀಕ್ಷಿತ್​ ಅವರ ತಾಯಿ ಸ್ನೇಹಲತಾ ದೀಕ್ಷಿತ್​ ಕೊನೆಯುಸಿರು ಎಳೆದಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಆಪ್ತರು ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

Snehalata Dixit: ಮಾಧುರಿ ದೀಕ್ಷಿತ್​ ತಾಯಿ ಸ್ನೇಹಲತಾ ನಿಧನ; 91ನೇ ವಯಸ್ಸಿಗೆ ಇಹಲೋಕ ತ್ಯಜಿಸಿದ ಹಿರಿಯ ಜೀವ
ಸ್ನೇಹಲತಾ ದೀಕ್ಷಿತ್, ಮಾಧುರಿ ದೀಕ್ಷಿತ್
ಮದನ್​ ಕುಮಾರ್​
|

Updated on:Mar 12, 2023 | 5:16 PM

Share

ಬಾಲಿವುಡ್​ನ ಖ್ಯಾತ ನಟಿ ಮಾಧುರಿ ದೀಕ್ಷಿತ್​ (Madhuri Dixit) ಅವರ ಮನೆಯಲ್ಲಿ ಶೋಕದ ವಾತಾವರಣ ಸೃಷ್ಟಿ ಆಗಿದೆ. ಮಾಧುರಿ ತಾಯಿ ಸ್ನೇಹಲತಾ ದೀಕ್ಷಿತ್​ (Snehalata Dixit) ಅವರು ನಿಧನರಾಗಿದ್ದಾರೆ. ಮಾಧುರಿ ದೀಕ್ಷಿತ್​ ವೃತ್ತಿಜೀವನಕ್ಕೆ ಅವರ ತಾಯಿ ನೀಡಿದ ಬೆಂಬಲ ಅಪಾರ. ಅಮ್ಮ ಕಲಿಸಿದ ಶಿಸ್ತಿನ ಪಾಠದ ಬಗ್ಗೆ ಮಾಧುರಿ ಅವರು ಅನೇಕ ಬಾರಿ ಹೇಳಿಕೊಂಡಿದ್ದರು. ಇಂದು (ಮಾರ್ಚ್​ 12) ಸ್ನೇಹಲತಾ ದೀಕ್ಷಿತ್​ ಅವರು ಮುಂಬೈನ ನಿವಾಸದಲ್ಲಿ ಕೊನೆಯುಸಿರು ಎಳೆದರು. ಅವರಿಗೆ 91 ವರ್ಷ ವಯಸ್ಸಾಗಿತ್ತು. ಮುಂಬೈನಲ್ಲೇ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ವರದಿ ಆಗಿದೆ. ತಾಯಿಯನ್ನು ಕಳೆದುಕೊಂಡ ಮಾಧುರಿ ದೀಕ್ಷಿತ್​ ಅವರಿಗೆ ಬಾಲಿವುಡ್​ನ (Bollywood) ಅನೇಕ ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ. ಸೋಶಿಯಲ್​ ಮೀಡಿಯಾ ಮೂಲಕ ಅಭಿಮಾನಿಗಳು ಕೂಡ ಸ್ನೇಹಲತಾ ದೀಕ್ಷಿತ್​ ಆತ್ಮಕ್ಕೆ ಶಾಂತಿ ಕೋರುತ್ತಿದ್ದಾರೆ.

ಗಾಯನದಲ್ಲಿ ಸ್ನೇಹಲತಾ ದೀಕ್ಷಿತ್​ ಅವರು ಆಸಕ್ತಿ ಹೊಂದಿದ್ದರು. 2013ರಲ್ಲಿ ಮಾಧುರಿ ದೀಕ್ಷಿತ್​ ನಟಿಸಿದ್ದ ‘ಗುಲಾಬ್​ ಗ್ಯಾಂಗ್​’ ಸಿನಿಮಾದ ಒಂದು ಹಾಡಿಗೆ ಸ್ನೇಹಲತಾ ಧ್ವನಿ ನೀಡಿದ್ದರು. ಆ ಘಟನೆಯನ್ನು ನಿರ್ದೇಶಕ ಅನುಭವ್​ ಸಿನ್ಹಾ ಅವರು ವಿವರಿಸಿದ್ದರು. ‘ಒಂದು ಹಾಡು ಹೇಳಬೇಕು ಅಂತ ನಾವು ಮಾಧರಿ ಅವರಿಗೆ ಕೇಳಿದೆವು. ರೆಕಾರ್ಡಿಂಗ್​ ದಿನ ಮಾಧುರಿ ಜೊತೆ ಸ್ನೇಹಲತಾ ಕೂಡ ಬಂದಿದ್ದರು. ಅವರ ಧ್ವನಿಯೂ ಮಧುರವಾಗಿದೆ ಅಂತ ಗೊತ್ತಾಯಿತು. ಹಾಗಾಗಿ ಅವರ ಬಳಿಯೂ ಹಾಡುವಂತೆ ಕೇಳಿಕೊಂಡೆವು. ಇಬ್ಬರೂ ಜೊತೆಯಾಗಿ ಆ ಹಾಡಿಗೆ ಧ್ವನಿ ನೀಡಿದರು’ ಎಂದು ಅನುಭವ್​ ಸಿನ್ಹಾ ಹೇಳಿದ್ದರು.

ಇದನ್ನೂ ಓದಿ: Madhuri Dixit: ಪಾಕಿಸ್ತಾನಿ ಹುಡುಗಿಯ ಡ್ಯಾನ್ಸ್​ ಕಾಪಿ ಮಾಡಿದ ಮಾಧುರಿ ದೀಕ್ಷಿತ್​; ನೆಟ್ಟಿಗರಿಂದ ಬುದ್ಧಿಮಾತು

ಇದನ್ನೂ ಓದಿ
Image
ಯೋಗರಾಜ್ ಭಟ್ ಮಾವ, ಸ್ಯಾಂಡಲ್​ವುಡ್ ಕಲಾವಿದ ಸತ್ಯ ನಾರಾಯಣ್ ಹೃದಯಾಘಾತದಿಂದ ನಿಧನ
Image
Edava Basheer Death: ಹಾಡುವಾಗಲೇ ವೇದಿಕೆಯಲ್ಲಿ ಕುಸಿದು ಬಿದ್ದು ಆರ್ಕೆಸ್ಟ್ರಾ ಗಾಯಕ ಎಡವ ಬಶೀರ್​ ನಿಧನ; ವಿಡಿಯೋ ವೈರಲ್​
Image
Chalapathi Chowdary Death: ಹಿರಿಯ ನಟ ಕ್ಯಾಪ್ಟನ್​ ಚಲಪತಿ ಚೌದ್ರಿ ನಿಧನ
Image
Mohan Juneja: ಖ್ಯಾತ ನಟ ಮೋಹನ್​ ಜುನೇಜ ನಿಧನ; ‘ಕೆಜಿಎಫ್​’ ಚಿತ್ರದಲ್ಲಿ ಅಭಿನಯಿಸಿದ್ದ ಜನಪ್ರಿಯ ಕಲಾವಿದ ಇನ್ನಿಲ್ಲ

ವೃತ್ತಿಜೀವನದಲ್ಲಿ ಎಷ್ಟೇ ಜನಪ್ರಿಯತೆ, ಯಶಸ್ಸು ಸಿಕ್ಕರೂ ಕೂಡ ವೈಯಕ್ತಿಕ ಬದುಕು ಹೇಗೆ ಇರಬೇಕು ಎಂದು ಮಾಧುರಿ ದೀಕ್ಷಿತ್​ಗೆ ಕಲಿಸಿದ್ದೇ ಅವರ ತಾಯಿ ಸ್ನೇಹಲತಾ. ಆ ಬಗ್ಗೆ ಕಳೆದ ವರ್ಷ ಸಂದರ್ಶನವೊಂದರಲ್ಲಿ ಮಾಧುರಿ ದೀಕ್ಷಿತ್​ ಹೇಳಿಕೊಂಡಿದ್ದರು.

‘ನಾನು ಸಿನಿಮಾ ನಟಿ ಆದ ನಂತರವೂ ಒಂದು ವೇಳೆ ನನ್ನ ರೂಮ್​ ಸರಿಯಾಗಿ ಇಟ್ಟುಕೊಳ್ಳದೇ ಇದ್ದರೆ ಅಮ್ಮ ಬೈಯ್ಯುತ್ತಿದ್ದರು. ಆ ರೀತಿ ಅವರು ನನ್ನನ್ನು ಬೆಳೆಸಿದರು. ಅದಕ್ಕಾಗಿಯೇ ನಾನು ಹೀಗೆ ಇದ್ದೇನೆ. ಮನೆಗೆ ಬಂದಾಗ ಗಂಡ ಮತ್ತು ಮಕ್ಕಳನ್ನು ನೋಡುತ್ತೇನೆ. ಕೆಲಸದ ವಿಚಾರವನ್ನು ಸ್ಟುಡಿಯೋದಲ್ಲಿ ಬಿಟ್ಟು ಬರುತ್ತೇನೆ’ ಎಂದು ಮಾಧುರಿ ದೀಕ್ಷಿತ್​ ಹೇಳಿದ್ದರು.

ಇದನ್ನೂ ಓದಿ: ಸಲಿಂಗಕಾಮಿ ಪಾತ್ರದಲ್ಲಿ ಮಾಧುರಿ ದೀಕ್ಷಿತ್​? ಹೊರಬಿತ್ತು ಫ್ಯಾನ್ಸ್​ ಅಚ್ಚರಿಪಡುವಂತಹ ಬ್ರೇಕಿಂಗ್​ ನ್ಯೂಸ್​

ಸ್ನೇಹಲತಾ ದೀಕ್ಷಿತ್​ ಅವರ 90ನೇ ವರ್ಷದ ಹುಟ್ಟುಹಬ್ಬಕ್ಕೆ ಮಾಧುರಿ ದೀಕ್ಷಿತ್​ ಭಾವುಕವಾಗಿ ಪೋಸ್ಟ್​ ಮಾಡಿದ್ದರು. ‘ನೀವು ಕಲಿಸಿದ ಪಾಠಗಳೇ ನನ್ನ ಬದುಕಿಗೆ ದೊಡ್ಡ ಉಡುಗೊರೆ’ ಎಂದು ಅವರು ಬರೆದುಕೊಂಡಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 5:16 pm, Sun, 12 March 23

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!