ಅಕ್ಷಯ್ ಕುಮಾರ್ ಕಪಾಳಕ್ಕೆ ಹೊಡೆದವರಿಗೆ 10 ಲಕ್ಷ ರು: ಬಹುಮಾನ ಘೋಷಿಸಿದ ಹಿಂದೂಪರ ಸಂಘಟನೆ

OMG 2: ಅಕ್ಷಯ್ ಕುಮಾರ್ ನಟನೆಯ 'ಓಎಂಜಿ 2' ಸಿನಿಮಾ ವಿವಾದಕ್ಕೆ ಸಿಲುಕಿದೆ. ಹಿಂದೂಪರ ಸಂಘಟನೆಗಳು ಸಿನಿಮಾದ ವಿರುದ್ಧ ಪ್ರತಿಭಟನೆ ಮಾಡಿದ್ದು, ಅಕ್ಷಯ್ ಕುಮಾರ್ ಕಪಾಳಕ್ಕೆ ಹೊಡೆದವರಿಗೆ ನಗದು ಬಹುಮಾನ ಘೋಷಿಸಿವೆ.

ಅಕ್ಷಯ್ ಕುಮಾರ್ ಕಪಾಳಕ್ಕೆ ಹೊಡೆದವರಿಗೆ 10 ಲಕ್ಷ ರು: ಬಹುಮಾನ ಘೋಷಿಸಿದ ಹಿಂದೂಪರ ಸಂಘಟನೆ
ಅಕ್ಷಯ್ ಕುಮಾರ್
Follow us
|

Updated on: Aug 12, 2023 | 7:24 PM

ಅಕ್ಷಯ್ ಕುಮಾರ್ (Akshay Kumar) ನಟನೆಯ ಒಂಬತ್ತು ಸಿನಿಮಾಗಳು ಒಂದರ ಹಿಂದೊಂದು ಮಕಾಡೆ ಮಲಗಿವೆ, ಇದೀಗ ಅಕ್ಷಯ್​ರ ಹೊಸ ಸಿನಿಮಾ ‘ಓ ಮೈ ಗಾಡ್ 2’ (OMG 2) ಬಿಡುಗಡೆ ಆಗಿದೆ. ಸಿನಿಮಾ ಸಾಧಾರಣ ಆರಂಭವನ್ನು ಪಡೆದುಕೊಂಡಿದ್ದು, ವೀಕೆಂಡ್​ನಲ್ಲಿ ಕಲೆಕ್ಷನ್ ಹೆಚ್ಚಿಸಿಕೊಳ್ಳುವ ನಿರೀಕ್ಷೆಯಲ್ಲಿದೆ. ಹೀಗಿರುವಾಗ ಸಿನಿಮಾದ ಕತೆ ತುಸು ವಿವಾದಕ್ಕೆ ಕಾರಣವಾಗಿದೆ. ಕೆಲವು ಹಿಂದೂಪರ ಸಂಘಟನೆಗಳು ಸಿನಿಮಾದ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ್ದು, ಬಾಯ್​ಕಾಟ್​ಗೆ ಒತ್ತಾಯಿಸಿವೆ. ಒಂದು ಸಂಘಟನೆಯಂತೂ ಅಕ್ಷಯ್​ಕುಮಾರ್​ಗೆ ಹೊಡೆದವರಿಗೆ ನಗದು ಪ್ರಶಸ್ತಿಯನ್ನು ಘೋಷಿಸಿದೆ.

ಅಕ್ಷಯ್ ಕುಮಾರ್ ಪಾತ್ರವೇನು?

‘ಓಹ್ ಮೈ ಗಾಡ್ 2’ ಸಿನಿಮಾದಲ್ಲಿ ಅಕ್ಷಯ್ ಕುಮಾರ್ ಭಗವಂತ ಶಿವನ ಶಿವಗಣದ ಸಂದೇಶವಾಹಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನ್ಯಾಯಕ್ಕಾಗಿ ಹೋರಾಡುತ್ತಿರುವ ತಮ್ಮ ಭಕ್ತನ ಸಹಾಯಕ್ಕೆ ನಿಲ್ಲುವ ಶಿವ ಗಣದ ಸದಸ್ಯನ ಪಾತ್ರ ಅವರದ್ದು. ಸಿನಿಮಾದ ಕತೆ ಲೈಂಗಿಕ ಶಿಕ್ಷಣದ ಕತೆಯನ್ನು ಒಳಗೊಂಡಿದೆ. ಆದರೆ ಅಕ್ಷಯ್ ಕುಮಾರ್​ ಅವರ ಈ ಸಿನಿಮಾದ ಬಗ್ಗೆ ಕೆಲವು ಹಿಂದೂಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದು, ಕೆಲವೆಡೆ ಪ್ರತಿಭಟನೆಗಳು ಸಹ ನಡೆದಿವೆ.

ಸಿನಿಮಾದಲ್ಲಿ ಶಿವನ ಭಕ್ತರಿಗೆ, ಶಿವಗಣಕ್ಕೆ ಅಪಮಾನ ಮಾಡಲಾಗಿದೆ ಎಂದು ಹಿಂದೂಪರ ಸಂಘಟನೆ ಸದಸ್ಯರು ಆಕ್ಷೇಪಿಸಿದ್ದು, ರಾಷ್ಟ್ರೀಯ ಹಿಂದೂ ಪರಿಷದ್​ನ ಸದಸ್ಯರು ಅಕ್ಷಯ್ ಕುಮಾರ್ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೆ ಸಿನಿಮಾದ ಪ್ರದರ್ಶನವನ್ನು ಈ ಕೂಡಲೇ ಬಂದ್ ಮಾಡುವಂತೆ ಒತ್ತಾಯಿಸಿದ್ದಾರೆ. ಇನ್ನು ಆಗ್ರಾದ ಹಿಂದೂಪರ ಸಂಘಟನೆಯೊಂದು ಸಿನಿಮಾ ವಿರುದ್ಧ ಆಕ್ರೋಶ ಹೊರಹಾಕಿದ್ದು, ನಟ ಅಕ್ಷಯ್ ಕುಮಾರ್​ ಕಪಾಳಕ್ಕೆ ಹೊಡೆದವರಿಗೆ ಅಥವಾ ಅವರ ಮೇಲೆ ಉಗಿದವರಿಗೆ 10 ಲಕ್ಷ ರೂಪಾಯಿ ನಗದು ಬಹುಮಾನ ಘೋಷಿಸಿದೆ.

ಇದನ್ನೂ ಓದಿ:ಸನ್ನಿ ಡಿಯೋಲ್​ಗೆ ಭರ್ಜರಿ ಗೆಲುವು; ಅಕ್ಷಯ್ ಕುಮಾರ್ ಎದುರು ತೊಡೆ ತಟ್ಟಿದ ನಟ

ಓಎಂಜಿ 2 ಸಿನಿಮಾವು ಅಪ್ರಾಪ್ತರಿಗೆ ಲೈಂಗಿಕ ಶಿಕ್ಷಣದ ಅಗತ್ಯದ ಬಗ್ಗೆ ಸಂದೇಶವನ್ನು ಒಳಗೊಂಡಿದೆ. ಸಿನಿಮಾದಲ್ಲಿ ಶಿವ ಭಕ್ತ ಪಂಕಜ್ ತ್ರಿಪಾಠಿ ತನ್ನ ಪುತ್ರನ ಕಾರಣಕ್ಕೆ ಸಮಸ್ಯೆಗೆ ಸಿಲುಕುತ್ತಾನೆ, ಲೈಂಗಿಕ ಶಿಕ್ಷಣದ ಕೊರತೆಯಿಂದಲೇ ತನ್ನ ಮಗನ ಕೃತ್ಯವೊಂದನ್ನು ಎಸಗಿದ್ದಾನೆ ಎಂದು ಅರಿತು, ಶಾಲೆಯು ಮಕ್ಕಳಿಗೆ ಲೈಂಗಿಕ ಶಿಕ್ಷಣ ನೀಡದೇ ಇರುವ ಬಗ್ಗೆ ನ್ಯಾಯಾಲಯದಲ್ಲಿ ದಾವೆ ಹೂಡುತ್ತಾರೆ. ಹೀಗೆ ಸಂಕಟದಲ್ಲಿ ಸಿಲುಕಿಕೊಂಡ ಭಕ್ತನಿಗೆ ಸಹಾಯ ಮಾಡಲೆಂದು ಭಗವಂತ ಶಿವನ ಆದೇಶದ ಮೇರೆಗೆ ಶಿವಗಣದ ಸದಸ್ಯನಾಗಿ ಅಕ್ಷಯ್ ಕುಮಾರ್ ಭೂಮಿಗೆ ಬರುತ್ತಾರೆ. ಹೀಗೆ ಕತೆ ಸಾಗುತ್ತದೆ.

ಸಿಬಿಎಫ್​ಸಿ ವಿವಾದ

ಸಿನಿಮಾ ಬಿಡುಗಡೆಗೆ ಮುನ್ನವೂ ಸಾಕಷ್ಟು ವಿವಾದ ಎಬ್ಬಿಸಿತ್ತು. ಸಿಬಿಎಫ್​ಸಿಯು 16 ಕಟ್​ಗಳನ್ನು ಸಿನಿಮಾಕ್ಕೆ ಸೂಚಿಸಿದ್ದಲ್ಲದೆ ಎ ಪ್ರಮಾಣ ಪತ್ರ ನೀಡಿ ಹದಿನೆಂಟು ವರ್ಷದ ಒಳಗಿನ ಮಕ್ಕಳು ಸಿನಿಮಾ ನೋಡದಂತೆ ನಿರ್ಬಂಧ ವಿಧಿಸಿತ್ತು. ಹಾಗೋ ಹೀಗೋ ಬಿಡುಗಡೆ ಆದ ಬಳಿಕ ಈಗ ಹಿಂದೂಪರ ಸಂಘಟನೆಗಳ ಆಕ್ರೋಶವನ್ನು ಸಿನಿಮಾ ಎದುರಿಸುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ