AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿನಲ್ಲಿರುವ ಹೀರೋನ ಕೊಲ್ಲಲು ನಡೆದಿದೆ ಪ್ಲ್ಯಾನ್? ಅನುಮಾನ ಹುಟ್ಟಿಸಿತು ಟ್ವೀಟ್

ಕಮಾಲ್ ಖಾನ್ ಆಗಸ್ಟ್ 30ರಂದು ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧನಕ್ಕೆ ಒಳಗಾದರು. ಈಗ ಕಮಾಲ್ ಟ್ವಿಟರ್ ಖಾತೆಯಿಂದ ಅಚ್ಚರಿಯ ಟ್ವೀಟ್ ಮಾಡಲಾಗಿದೆ.

ಜೈಲಿನಲ್ಲಿರುವ ಹೀರೋನ ಕೊಲ್ಲಲು ನಡೆದಿದೆ ಪ್ಲ್ಯಾನ್? ಅನುಮಾನ ಹುಟ್ಟಿಸಿತು ಟ್ವೀಟ್
ಕಮಾಲ್
TV9 Web
| Edited By: |

Updated on: Sep 09, 2022 | 6:30 AM

Share

ನಟ, ಸ್ವಯಂಘೋಷಿತ ವಿಮರ್ಶಕ ಕಮಾಲ್ ಆರ್​ ಖಾನ್ (Kamaal R Khan) ಜೈಲು ಪಾಲಾಗಿದ್ದಾರೆ. ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಹಾಗೂ ವಿವಾದಾತ್ಮಕ ಟ್ವೀಟ್ ಪ್ರಕರಣದಲ್ಲಿ ಅವರು ಜೈಲು ಸೇರಿದ್ದಾರೆ. ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಅವರಿಗೆ ಜಾಮೀನು ಸಿಕ್ಕಿದೆ. ಆದರೆ, ವಿವಾದಾತ್ಮಕ ಟ್ವೀಟ್ ಪ್ರಕರಣದಲ್ಲಿ ಅವರು ಜೈಲಿನಲ್ಲೇ ಇದ್ದಾರೆ. ತಂದೆಯನ್ನು ಜೈಲಿನಲ್ಲೇ ಕೊಲೆ ಮಾಡಲು ಸಂಚು ನಡೆದಿದೆ ಎಂದು ಅರ್ಥ ಬರುವ ರೀತಿಯಲ್ಲಿ ಕಮಾಲ್ ಮಗ ಫೈಸಲ್ ಕಮಾಲ್ ಆರೋಪ ಮಾಡಿದ್ದಾರೆ. ಈ ಮೂಲಕ ಪ್ರಕರಣ ನಾಟಕೀಯ ಬೆಳವಣಿಗೆ ಪಡೆದುಕೊಂಡಿದೆ.

ಕಮಾಲ್ ಖಾನ್ ಆಗಸ್ಟ್ 30ರಂದು ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧನಕ್ಕೆ ಒಳಗಾದರು. ಕಮಾಲ್​ ಖಾನ್ ವಿರುದ್ಧ ಎರಡೆರಡು ಕೇಸ್ ದಾಖಲಾಗಿದೆ. ಅಕ್ಷಯ್ ಕುಮಾರ್ ಹಾಗೂ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಬಗ್ಗೆ ವಿವಾದಾತ್ಮಕ ಟ್ವೀಟ್​ ಮಾಡಿದ್ದು ಒಂದು ಕಡೆಯಾದರೆ, ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಮತ್ತೊಂದು ಕಡೆ.  ಈಗ ಕಮಾಲ್ ಟ್ವಿಟರ್ ಖಾತೆಯಿಂದ ಅಚ್ಚರಿಯ ಟ್ವೀಟ್ ಮಾಡಲಾಗಿದೆ.

ಇದನ್ನೂ ಓದಿ
Image
RRR ಕಲೆಕ್ಷನ್​ ರಿಪೋರ್ಟ್​ ಸುಳ್ಳು ಎಂದ ಕಮಾಲ್​ ಆರ್​ ಖಾನ್​; ಸಾಬೀತು ಮಾಡುವುದಾಗಿ ಘೋಷಣೆ
Image
‘ಭಕ್ತರ ಭಕ್ತ ಮಹಾಭಕ್ತ’, ‘ಕಾಶ್ಮೀರದ ಶರ್ಮಾ’: ಖಾನ್​ ಚಿತ್ರಕ್ಕೆ ಹೊಸ ಹೆಸರು ಸೂಚಿಸಿದ ಇನ್ನೊಬ್ಬ ಖಾನ್​
Image
‘ಈ ನಟರಿಗೆ ಅಹಂಕಾರ ಜಾಸ್ತಿ’; ವಿಡಿಯೋ ಮೂಲಕ ಎಳೆ ಎಳೆಯಾಗಿ ವಿವರಿಸಿದ ಕಮಾಲ್​ ಆರ್.​ ಖಾನ್​
Image
ಸಲ್ಮಾನ್​ ಖಾನ್​ ವಿರುದ್ಧ ಯಾವುದೇ ಹೇಳಿಕೆ ನೀಡಬೇಡಿ; ಕಮಾಲ್​ ಆರ್​ ಖಾನ್​ಗೆ ಕೋರ್ಟ್​ ಆದೇಶ

‘ನಾನು ಕೆಆರ್​ಕೆ ಮಗ ಫೈಸಲ್ ಕಮಾಲ್. ಕೆಲವರು ಮುಂಬೈನಲ್ಲಿ ನನ್ನ ತಂದೆಯನ್ನು ಕೊಲ್ಲಲು ಟಾರ್ಚರ್ ನೀಡುತ್ತಿದ್ದಾರೆ. ನನಗೆ ಇನ್ನೂ 23 ವರ್ಷ ವಯಸ್ಸು. ನಾನು ಲಂಡನ್​ನಲ್ಲಿದ್ದೇನೆ. ನನ್ನ ತಂದೆಗೆ ಹೇಗೆ ಸಹಾಯ ಮಾಡಬೇಕು ಎಂಬುದು ಗೊತ್ತಾಗುತ್ತಿಲ್ಲ’ ಎಂದು ಕಮಾಲ್ ಖಾನ್ ಟ್ವಿಟರ್ ಖಾತೆಯಿಂದ ಟ್ವೀಟ್ ಮಾಡಲಾಗಿದೆ.

‘ಅಭಿಷೇಕ್ ಬಚ್ಚನ್, ರಿತೇಶ್ ದೇಶ್​ಮುಖ್ ಹಾಗೂ ದೇವೇಂದ್ರ ಫಡ್ನವೀಸ್​ ಅವರು ನನ್ನ ತಂದೆಯ ಜೀವನನ್ನು ಉಳಿಸಬೇಕು ಎಂದು ಕೋರುತ್ತೇನೆ. ಅವರು ಇಲ್ಲದಿದ್ದರೆ ನಾನು ನನ್ನ ತಂಗಿ ಸಾಯುತ್ತೇವೆ. ಅವರೇ ನನ್ನ ಜೀವ. ನನ್ನ ತಂದೆ ಉಳಿಸಲು ಸಾರ್ವಜನಿಕರೂ ಬೆಂಬಲ ನೀಡಿ. ಅವರು ಸಾಯಬಾರದು’ ಎಂದು ಟ್ವಿಟರ್​ನಲ್ಲಿ ಬರೆಯಲಾಗಿದೆ.

ಇದನ್ನೂ ಓದಿ: ಅಡ್ವಾನ್ಸ್ ಬುಕಿಂಗ್​ನಲ್ಲಿ ‘ಬ್ರಹ್ಮಾಸ್ತ್ರ’ ಕಮಾಲ್; ಆದರೆ, ‘ಕೆಜಿಎಫ್ 2’ ಸಮೀಪವೂ ಬರಲಿಲ್ಲ ರಣಬೀರ್ ಸಿನಿಮಾ ಕಲೆಕ್ಷನ್

ಈ ಟ್ವೀಟ್ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಕಮಾಲ್ ಅವರನ್ನು ಜೈಲಿನಲ್ಲೇ ಹತ್ಯೆ ಮಾಡಲು ಕೆಲವರು ಸಂಚು ರೂಪಿಸಿದ್ದಾರೆಯೇ ಎಂಬ ಪ್ರಶ್ನೆ ಅನೇಕರದ್ದು. ಇನ್ನೂ ಕೆಲವರು ಈ ಟ್ವೀಟ್​ನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಕಮಾಲ್ ಟ್ವಿಟರ್ ಖಾತೆ ಹ್ಯಾಕ್ ಆಗಿದೆಯೇ ಎಂಬ ಅನುಮಾನವನ್ನು ಕೆಲವರು ಹೊರಹಾಕಿದ್ದಾರೆ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು