AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿನಲ್ಲಿರುವ ಹೀರೋನ ಕೊಲ್ಲಲು ನಡೆದಿದೆ ಪ್ಲ್ಯಾನ್? ಅನುಮಾನ ಹುಟ್ಟಿಸಿತು ಟ್ವೀಟ್

ಕಮಾಲ್ ಖಾನ್ ಆಗಸ್ಟ್ 30ರಂದು ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧನಕ್ಕೆ ಒಳಗಾದರು. ಈಗ ಕಮಾಲ್ ಟ್ವಿಟರ್ ಖಾತೆಯಿಂದ ಅಚ್ಚರಿಯ ಟ್ವೀಟ್ ಮಾಡಲಾಗಿದೆ.

ಜೈಲಿನಲ್ಲಿರುವ ಹೀರೋನ ಕೊಲ್ಲಲು ನಡೆದಿದೆ ಪ್ಲ್ಯಾನ್? ಅನುಮಾನ ಹುಟ್ಟಿಸಿತು ಟ್ವೀಟ್
ಕಮಾಲ್
TV9 Web
| Edited By: |

Updated on: Sep 09, 2022 | 6:30 AM

Share

ನಟ, ಸ್ವಯಂಘೋಷಿತ ವಿಮರ್ಶಕ ಕಮಾಲ್ ಆರ್​ ಖಾನ್ (Kamaal R Khan) ಜೈಲು ಪಾಲಾಗಿದ್ದಾರೆ. ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಹಾಗೂ ವಿವಾದಾತ್ಮಕ ಟ್ವೀಟ್ ಪ್ರಕರಣದಲ್ಲಿ ಅವರು ಜೈಲು ಸೇರಿದ್ದಾರೆ. ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಅವರಿಗೆ ಜಾಮೀನು ಸಿಕ್ಕಿದೆ. ಆದರೆ, ವಿವಾದಾತ್ಮಕ ಟ್ವೀಟ್ ಪ್ರಕರಣದಲ್ಲಿ ಅವರು ಜೈಲಿನಲ್ಲೇ ಇದ್ದಾರೆ. ತಂದೆಯನ್ನು ಜೈಲಿನಲ್ಲೇ ಕೊಲೆ ಮಾಡಲು ಸಂಚು ನಡೆದಿದೆ ಎಂದು ಅರ್ಥ ಬರುವ ರೀತಿಯಲ್ಲಿ ಕಮಾಲ್ ಮಗ ಫೈಸಲ್ ಕಮಾಲ್ ಆರೋಪ ಮಾಡಿದ್ದಾರೆ. ಈ ಮೂಲಕ ಪ್ರಕರಣ ನಾಟಕೀಯ ಬೆಳವಣಿಗೆ ಪಡೆದುಕೊಂಡಿದೆ.

ಕಮಾಲ್ ಖಾನ್ ಆಗಸ್ಟ್ 30ರಂದು ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧನಕ್ಕೆ ಒಳಗಾದರು. ಕಮಾಲ್​ ಖಾನ್ ವಿರುದ್ಧ ಎರಡೆರಡು ಕೇಸ್ ದಾಖಲಾಗಿದೆ. ಅಕ್ಷಯ್ ಕುಮಾರ್ ಹಾಗೂ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಬಗ್ಗೆ ವಿವಾದಾತ್ಮಕ ಟ್ವೀಟ್​ ಮಾಡಿದ್ದು ಒಂದು ಕಡೆಯಾದರೆ, ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಮತ್ತೊಂದು ಕಡೆ.  ಈಗ ಕಮಾಲ್ ಟ್ವಿಟರ್ ಖಾತೆಯಿಂದ ಅಚ್ಚರಿಯ ಟ್ವೀಟ್ ಮಾಡಲಾಗಿದೆ.

ಇದನ್ನೂ ಓದಿ
Image
RRR ಕಲೆಕ್ಷನ್​ ರಿಪೋರ್ಟ್​ ಸುಳ್ಳು ಎಂದ ಕಮಾಲ್​ ಆರ್​ ಖಾನ್​; ಸಾಬೀತು ಮಾಡುವುದಾಗಿ ಘೋಷಣೆ
Image
‘ಭಕ್ತರ ಭಕ್ತ ಮಹಾಭಕ್ತ’, ‘ಕಾಶ್ಮೀರದ ಶರ್ಮಾ’: ಖಾನ್​ ಚಿತ್ರಕ್ಕೆ ಹೊಸ ಹೆಸರು ಸೂಚಿಸಿದ ಇನ್ನೊಬ್ಬ ಖಾನ್​
Image
‘ಈ ನಟರಿಗೆ ಅಹಂಕಾರ ಜಾಸ್ತಿ’; ವಿಡಿಯೋ ಮೂಲಕ ಎಳೆ ಎಳೆಯಾಗಿ ವಿವರಿಸಿದ ಕಮಾಲ್​ ಆರ್.​ ಖಾನ್​
Image
ಸಲ್ಮಾನ್​ ಖಾನ್​ ವಿರುದ್ಧ ಯಾವುದೇ ಹೇಳಿಕೆ ನೀಡಬೇಡಿ; ಕಮಾಲ್​ ಆರ್​ ಖಾನ್​ಗೆ ಕೋರ್ಟ್​ ಆದೇಶ

‘ನಾನು ಕೆಆರ್​ಕೆ ಮಗ ಫೈಸಲ್ ಕಮಾಲ್. ಕೆಲವರು ಮುಂಬೈನಲ್ಲಿ ನನ್ನ ತಂದೆಯನ್ನು ಕೊಲ್ಲಲು ಟಾರ್ಚರ್ ನೀಡುತ್ತಿದ್ದಾರೆ. ನನಗೆ ಇನ್ನೂ 23 ವರ್ಷ ವಯಸ್ಸು. ನಾನು ಲಂಡನ್​ನಲ್ಲಿದ್ದೇನೆ. ನನ್ನ ತಂದೆಗೆ ಹೇಗೆ ಸಹಾಯ ಮಾಡಬೇಕು ಎಂಬುದು ಗೊತ್ತಾಗುತ್ತಿಲ್ಲ’ ಎಂದು ಕಮಾಲ್ ಖಾನ್ ಟ್ವಿಟರ್ ಖಾತೆಯಿಂದ ಟ್ವೀಟ್ ಮಾಡಲಾಗಿದೆ.

‘ಅಭಿಷೇಕ್ ಬಚ್ಚನ್, ರಿತೇಶ್ ದೇಶ್​ಮುಖ್ ಹಾಗೂ ದೇವೇಂದ್ರ ಫಡ್ನವೀಸ್​ ಅವರು ನನ್ನ ತಂದೆಯ ಜೀವನನ್ನು ಉಳಿಸಬೇಕು ಎಂದು ಕೋರುತ್ತೇನೆ. ಅವರು ಇಲ್ಲದಿದ್ದರೆ ನಾನು ನನ್ನ ತಂಗಿ ಸಾಯುತ್ತೇವೆ. ಅವರೇ ನನ್ನ ಜೀವ. ನನ್ನ ತಂದೆ ಉಳಿಸಲು ಸಾರ್ವಜನಿಕರೂ ಬೆಂಬಲ ನೀಡಿ. ಅವರು ಸಾಯಬಾರದು’ ಎಂದು ಟ್ವಿಟರ್​ನಲ್ಲಿ ಬರೆಯಲಾಗಿದೆ.

ಇದನ್ನೂ ಓದಿ: ಅಡ್ವಾನ್ಸ್ ಬುಕಿಂಗ್​ನಲ್ಲಿ ‘ಬ್ರಹ್ಮಾಸ್ತ್ರ’ ಕಮಾಲ್; ಆದರೆ, ‘ಕೆಜಿಎಫ್ 2’ ಸಮೀಪವೂ ಬರಲಿಲ್ಲ ರಣಬೀರ್ ಸಿನಿಮಾ ಕಲೆಕ್ಷನ್

ಈ ಟ್ವೀಟ್ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಕಮಾಲ್ ಅವರನ್ನು ಜೈಲಿನಲ್ಲೇ ಹತ್ಯೆ ಮಾಡಲು ಕೆಲವರು ಸಂಚು ರೂಪಿಸಿದ್ದಾರೆಯೇ ಎಂಬ ಪ್ರಶ್ನೆ ಅನೇಕರದ್ದು. ಇನ್ನೂ ಕೆಲವರು ಈ ಟ್ವೀಟ್​ನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಕಮಾಲ್ ಟ್ವಿಟರ್ ಖಾತೆ ಹ್ಯಾಕ್ ಆಗಿದೆಯೇ ಎಂಬ ಅನುಮಾನವನ್ನು ಕೆಲವರು ಹೊರಹಾಕಿದ್ದಾರೆ.

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ