ಸಂಜಯ್​ ದತ್​ ಅಪರಾಧ ಹಿನ್ನೆಲೆಯಿಂದ ಚಿತ್ರತಂಡಕ್ಕೆ ತೊಂದರೆ; ನಟನಿಗೆ ಗೇಟ್​ ಪಾಸ್​?

ನಟ ಸಂಜಯ್​ ದತ್​ ಅವರು ಜೈಲು ಶಿಕ್ಷೆ ಅನುಭವಿಸಿ ಬಂದಿದ್ದು ಗೊತ್ತೇ ಇದೆ. ಇದರಿಂದ ಅವರಿಗೆ ಈಗಲೂ ಕೆಲವು ಸಮಸ್ಯೆಗಳು ಎದುರಾಗುತ್ತಿವೆ. ಯುನೈಟೆಡ್​ ಕಿಂಗ್​ಡಮ್​ಗೆ ತೆರಳಲು ಸಂಜಯ್​ ದತ್​ ಅವರಿಗೆ ವೀಸಾ ಸಿಕ್ಕಿಲ್ಲ. ಇದರಿಂದ ‘ಸನ್​ ಆಫ್​ ಸರ್ದಾರ್​ 2’ ಚಿತ್ರತಂಡದವರಿಗೆ ತಲೆಬಿಸಿ ಉಂಟಾಗಿದೆ. ಹಾಗಾಗಿ ಪಾತ್ರವರ್ಗದಲ್ಲಿ ಬದಲಾವಣೆ ಆಗುತ್ತಿದೆ ಎಂಬ ಮಾತು ಕೇಳಿಬಂದಿದೆ.

ಸಂಜಯ್​ ದತ್​ ಅಪರಾಧ ಹಿನ್ನೆಲೆಯಿಂದ ಚಿತ್ರತಂಡಕ್ಕೆ ತೊಂದರೆ; ನಟನಿಗೆ ಗೇಟ್​ ಪಾಸ್​?
ಸಂಜಯ್​ ದತ್​
Follow us
|

Updated on: Aug 06, 2024 | 5:10 PM

ವೈಯಕ್ತಿಕ ಜೀವನದಲ್ಲಿ ಹಾಗೂ ವೃತ್ತಿ ಬದುಕಿನಲ್ಲಿ ಸಾಕಷ್ಟು ಏಳು-ಬೀಳುಗಳನ್ನು ಕಂಡವರು ನಟ ಸಂಜಯ್​ ದತ್​. ಎಲ್ಲ ಬಗೆಯ ಪಾತ್ರಗಳನ್ನೂ ಮಾಡಿ ಅವರು ಸೈ ಎನಿಸಿಕೊಂಡಿದ್ದಾರೆ. ವಿಲನ್​, ಹೀರೋ, ಅತಿಥಿ ಪಾತ್ರ.. ಹೀಗೆ ಎಲ್ಲ ರೀತಿಯಲ್ಲೂ ಸಂಜಯ್​ ದತ್​ ಅವರು ಅಭಿಮಾನಿಗಳನ್ನು ರಂಜಿಸಿದ್ದಾರೆ. ಬಣ್ಣದ ಲೋಕದಲ್ಲಿ ಅವರಿಗೆ ಸಖತ್​ ಬೇಡಿಕೆ ಇದೆ ಎಂಬುದು ನಿಜ. ಆದರೆ ಅವರಿಗೆ ಅಪರಾಧ ಹಿನ್ನೆಲೆ ಇರುವ ಕಾರಣದಿಂದ ‘ಸನ್​ ಆಫ್ ಸರ್ದಾರ್​ 2’ ಚಿತ್ರದಿಂದ ಅವರಿಗೆ ಗೇಟ್​ಪಾಸ್​ ನೀಡಲಾಗಿದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿದೆ.

ಅಜಯ್​ ದೇವಗನ್​ ಮತ್ತು ಸಂಜಯ್​ ದತ್​ ಅವರು ಮುಖ್ಯಭೂಮಿಕೆ ನಿಭಾಯಿಸಿದ ‘ಸನ್​ ಆಫ್​ ಸರ್ದಾರ್​’ ಸಿನಿಮಾ 2012ರಲ್ಲಿ ಬಿಡುಗಡೆ ಆಗಿತ್ತು. ಈಗ ಅದರ ಸೀಕ್ವೆಲ್​ಗೆ ಕೆಲಸಗಳು ಆರಂಭ ಆಗಿವೆ. ‘ಔರೋ ಮೇ ಕಹಾ ಧಮ್​ ತಾ’ ಸಿನಿಮಾದ ಸೋಲಿನ ಬಳಿಕ ಅಜಯ್​ ದೇವಗನ್​ ಅವರು ‘ಸನ್​ ಆಫ್ ಸರ್ದಾರ್​ 2’ ಸಿನಿಮಾದ ಶೂಟಿಂಗ್​ನಲ್ಲಿ ಭಾಗಿ ಆಗಿದ್ದಾರೆ. ಆದರೆ ಅವರ ಜೊತೆ ಸಂಜಯ್​ ದತ್​ ನಟಿಸುವುದು ಅನುಮಾನ ಎನ್ನಲಾಗಿದೆ. ಅವರ ಪಾತ್ರವನ್ನು ರವಿ ಕಿಶನ್​ ನಿಭಾಯಿಸುತ್ತಾರೆ ಎಂದು ಸುದ್ದಿ ಹಬ್ಬಿದೆ.

ಸೀಕ್ವೆಲ್​ ಕಥೆಯ ಬಹುಪಾಲು ದೃಶ್ಯಗಳು ವಿದೇಶದಲ್ಲಿ ನಡೆಯಲಿವೆ. ಆದರೆ ಯುನೈಟೆಡ್​ ಕಿಂಗ್​ಡಮ್​ಗೆ ತೆರಳಲು ಸಂಜಯ್​ ದತ್​ ಅವರಿಗೆ ವೀಸಾ ಸಿಗುತ್ತಿಲ್ಲ. ಅದಕ್ಕೆ ಕಾರಣ ಆಗಿರುವುದು ಅವರ ಅಪರಾಧ ಹಿನ್ನೆಲೆ. 1993ರಲ್ಲಿ ಅಕ್ರಮವಾಗಿ ಶಸ್ತ್ರಾಸ್ತ ಹೊಂದಿರುವ ಕಾರಣದಿಂದ ಸಂಜಯ್​ ದತ್​ ಅವರು ಜೈಲು ವಾಸ ಅನುಭವಿಸಿದ್ದರು. ಆ ಬಳಿಕ ಅವರಿಗೆ ಕೆಲವು ದೇಶಗಳಿಗೆ ತೆರಳಲು ವೀಸಾ ಸಮಸ್ಯೆ ಉಂಟಾಯಿತು. ಅದು ಈಗಲೂ ಮುಂದುವರಿದೆ.

ಇದನ್ನೂ ಓದಿ: ರಾ ಏಜೆಂಟ್​ ಆಗಲಿರುವ ರಣವೀರ್​ ಸಿಂಗ್​ಗೆ ಸಂಜಯ್​ ದತ್​ ವಿಲನ್; ಇದು ‘ಕೆಜಿಎಫ್​ 2’ ಎಫೆಕ್ಟ್​

ಸಂಜಯ್​ ದತ್​ ಅವರು ಅಮೆರಿಕಕ್ಕೆ ಹಲವು ಬಾರಿ ತೆರಳಿದ್ದಾರೆ. ಆದರೆ ಯುನೈಟೆಡ್​ ಕಿಂಗ್​ಡಮ್​ಗೆ ಹೋಗಲು ಅವರಿಗೆ ವೀಸಾ ಸಿಗುತ್ತಿಲ್ಲ. ಯುಕೆನಲ್ಲಿ ನಡೆಯಲಿರುವ ‘ಸನ್​ ಆಫ್​ ಸರ್ದಾರ್​ 2’ ಸಿನಿಮಾದ ಶೂಟಿಂಗ್ ಸಲುವಾಗಿ ಸಂಜಯ್​ ದತ್​ ಸಲ್ಲಿಸಿದ್ದ ವೀಸಾ ಅರ್ಜಿ ತಿರಸ್ಕೃತಗೊಂಡಿದೆ. ಹಾಗಾಗಿ ಅವರನ್ನು ಚಿತ್ರತಂಡದಿಂದ ಕೈಬಿಡಲಾಗಿದೆ ಎಂಬ ಗಾಸಿಪ್​ ಹಬ್ಬಿದೆ. ಇನ್ನೊಂದು ಮೂಲದ ಪ್ರಕಾರ, ಸಂಜಯ್​ ದತ್​ ಅವರು ಈ ಸಿನಿಮಾದಲ್ಲಿ ಮುಂದುವರಿಯಲಿದ್ದಾರೆ. ಆದರೆ ಅವರ ಪಾತ್ರದ ಚಿತ್ರೀಕರಣವನ್ನು ಭಾರತದಲ್ಲೇ ಮಾಡಲಾಗುವುದು ಎನ್ನಲಾಗುತ್ತಿದೆ. ಈ ಬಗ್ಗೆ ಚಿತ್ರತಂಡದವರು ಅಧಿಕೃತವಾಗಿ ಏನು ಹೇಳುತ್ತಾರೆ ಎಂಬುದನ್ನು ಕಾದುನೋಡಬೇಕು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಗುಜರಾತ್ ಪ್ರವಾಹದಲ್ಲಿ ಸಿಲುಕಿದ ಕಾರು ಹತ್ತಿ ಕುಳಿತು ಹರಟೆ ಹೊಡೆದ ದಂಪತಿ
ಗುಜರಾತ್ ಪ್ರವಾಹದಲ್ಲಿ ಸಿಲುಕಿದ ಕಾರು ಹತ್ತಿ ಕುಳಿತು ಹರಟೆ ಹೊಡೆದ ದಂಪತಿ
ಕಾಂಗ್ರೆಸ್​-JDS ಮೈತ್ರಿ: ಬಹುಮತ ಇಲ್ಲದಿದ್ರೂ ಅಧ್ಯಕ್ಷ ಸ್ಥಾನ ಕೈ ವಶಕ್ಕೆ
ಕಾಂಗ್ರೆಸ್​-JDS ಮೈತ್ರಿ: ಬಹುಮತ ಇಲ್ಲದಿದ್ರೂ ಅಧ್ಯಕ್ಷ ಸ್ಥಾನ ಕೈ ವಶಕ್ಕೆ
ಗಣಪತಿ ವಿಸರ್ಜನೆ ಬಳಿಕ ಈಜಲು ಹೊಳೆಗೆ ಹಾರಿದ ಯುವಕರು
ಗಣಪತಿ ವಿಸರ್ಜನೆ ಬಳಿಕ ಈಜಲು ಹೊಳೆಗೆ ಹಾರಿದ ಯುವಕರು
ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ
ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು