AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜಯ್​ ದತ್​ ಅಪರಾಧ ಹಿನ್ನೆಲೆಯಿಂದ ಚಿತ್ರತಂಡಕ್ಕೆ ತೊಂದರೆ; ನಟನಿಗೆ ಗೇಟ್​ ಪಾಸ್​?

ನಟ ಸಂಜಯ್​ ದತ್​ ಅವರು ಜೈಲು ಶಿಕ್ಷೆ ಅನುಭವಿಸಿ ಬಂದಿದ್ದು ಗೊತ್ತೇ ಇದೆ. ಇದರಿಂದ ಅವರಿಗೆ ಈಗಲೂ ಕೆಲವು ಸಮಸ್ಯೆಗಳು ಎದುರಾಗುತ್ತಿವೆ. ಯುನೈಟೆಡ್​ ಕಿಂಗ್​ಡಮ್​ಗೆ ತೆರಳಲು ಸಂಜಯ್​ ದತ್​ ಅವರಿಗೆ ವೀಸಾ ಸಿಕ್ಕಿಲ್ಲ. ಇದರಿಂದ ‘ಸನ್​ ಆಫ್​ ಸರ್ದಾರ್​ 2’ ಚಿತ್ರತಂಡದವರಿಗೆ ತಲೆಬಿಸಿ ಉಂಟಾಗಿದೆ. ಹಾಗಾಗಿ ಪಾತ್ರವರ್ಗದಲ್ಲಿ ಬದಲಾವಣೆ ಆಗುತ್ತಿದೆ ಎಂಬ ಮಾತು ಕೇಳಿಬಂದಿದೆ.

ಸಂಜಯ್​ ದತ್​ ಅಪರಾಧ ಹಿನ್ನೆಲೆಯಿಂದ ಚಿತ್ರತಂಡಕ್ಕೆ ತೊಂದರೆ; ನಟನಿಗೆ ಗೇಟ್​ ಪಾಸ್​?
ಸಂಜಯ್​ ದತ್​
ಮದನ್​ ಕುಮಾರ್​
|

Updated on: Aug 06, 2024 | 5:10 PM

Share

ವೈಯಕ್ತಿಕ ಜೀವನದಲ್ಲಿ ಹಾಗೂ ವೃತ್ತಿ ಬದುಕಿನಲ್ಲಿ ಸಾಕಷ್ಟು ಏಳು-ಬೀಳುಗಳನ್ನು ಕಂಡವರು ನಟ ಸಂಜಯ್​ ದತ್​. ಎಲ್ಲ ಬಗೆಯ ಪಾತ್ರಗಳನ್ನೂ ಮಾಡಿ ಅವರು ಸೈ ಎನಿಸಿಕೊಂಡಿದ್ದಾರೆ. ವಿಲನ್​, ಹೀರೋ, ಅತಿಥಿ ಪಾತ್ರ.. ಹೀಗೆ ಎಲ್ಲ ರೀತಿಯಲ್ಲೂ ಸಂಜಯ್​ ದತ್​ ಅವರು ಅಭಿಮಾನಿಗಳನ್ನು ರಂಜಿಸಿದ್ದಾರೆ. ಬಣ್ಣದ ಲೋಕದಲ್ಲಿ ಅವರಿಗೆ ಸಖತ್​ ಬೇಡಿಕೆ ಇದೆ ಎಂಬುದು ನಿಜ. ಆದರೆ ಅವರಿಗೆ ಅಪರಾಧ ಹಿನ್ನೆಲೆ ಇರುವ ಕಾರಣದಿಂದ ‘ಸನ್​ ಆಫ್ ಸರ್ದಾರ್​ 2’ ಚಿತ್ರದಿಂದ ಅವರಿಗೆ ಗೇಟ್​ಪಾಸ್​ ನೀಡಲಾಗಿದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿದೆ.

ಅಜಯ್​ ದೇವಗನ್​ ಮತ್ತು ಸಂಜಯ್​ ದತ್​ ಅವರು ಮುಖ್ಯಭೂಮಿಕೆ ನಿಭಾಯಿಸಿದ ‘ಸನ್​ ಆಫ್​ ಸರ್ದಾರ್​’ ಸಿನಿಮಾ 2012ರಲ್ಲಿ ಬಿಡುಗಡೆ ಆಗಿತ್ತು. ಈಗ ಅದರ ಸೀಕ್ವೆಲ್​ಗೆ ಕೆಲಸಗಳು ಆರಂಭ ಆಗಿವೆ. ‘ಔರೋ ಮೇ ಕಹಾ ಧಮ್​ ತಾ’ ಸಿನಿಮಾದ ಸೋಲಿನ ಬಳಿಕ ಅಜಯ್​ ದೇವಗನ್​ ಅವರು ‘ಸನ್​ ಆಫ್ ಸರ್ದಾರ್​ 2’ ಸಿನಿಮಾದ ಶೂಟಿಂಗ್​ನಲ್ಲಿ ಭಾಗಿ ಆಗಿದ್ದಾರೆ. ಆದರೆ ಅವರ ಜೊತೆ ಸಂಜಯ್​ ದತ್​ ನಟಿಸುವುದು ಅನುಮಾನ ಎನ್ನಲಾಗಿದೆ. ಅವರ ಪಾತ್ರವನ್ನು ರವಿ ಕಿಶನ್​ ನಿಭಾಯಿಸುತ್ತಾರೆ ಎಂದು ಸುದ್ದಿ ಹಬ್ಬಿದೆ.

ಸೀಕ್ವೆಲ್​ ಕಥೆಯ ಬಹುಪಾಲು ದೃಶ್ಯಗಳು ವಿದೇಶದಲ್ಲಿ ನಡೆಯಲಿವೆ. ಆದರೆ ಯುನೈಟೆಡ್​ ಕಿಂಗ್​ಡಮ್​ಗೆ ತೆರಳಲು ಸಂಜಯ್​ ದತ್​ ಅವರಿಗೆ ವೀಸಾ ಸಿಗುತ್ತಿಲ್ಲ. ಅದಕ್ಕೆ ಕಾರಣ ಆಗಿರುವುದು ಅವರ ಅಪರಾಧ ಹಿನ್ನೆಲೆ. 1993ರಲ್ಲಿ ಅಕ್ರಮವಾಗಿ ಶಸ್ತ್ರಾಸ್ತ ಹೊಂದಿರುವ ಕಾರಣದಿಂದ ಸಂಜಯ್​ ದತ್​ ಅವರು ಜೈಲು ವಾಸ ಅನುಭವಿಸಿದ್ದರು. ಆ ಬಳಿಕ ಅವರಿಗೆ ಕೆಲವು ದೇಶಗಳಿಗೆ ತೆರಳಲು ವೀಸಾ ಸಮಸ್ಯೆ ಉಂಟಾಯಿತು. ಅದು ಈಗಲೂ ಮುಂದುವರಿದೆ.

ಇದನ್ನೂ ಓದಿ: ರಾ ಏಜೆಂಟ್​ ಆಗಲಿರುವ ರಣವೀರ್​ ಸಿಂಗ್​ಗೆ ಸಂಜಯ್​ ದತ್​ ವಿಲನ್; ಇದು ‘ಕೆಜಿಎಫ್​ 2’ ಎಫೆಕ್ಟ್​

ಸಂಜಯ್​ ದತ್​ ಅವರು ಅಮೆರಿಕಕ್ಕೆ ಹಲವು ಬಾರಿ ತೆರಳಿದ್ದಾರೆ. ಆದರೆ ಯುನೈಟೆಡ್​ ಕಿಂಗ್​ಡಮ್​ಗೆ ಹೋಗಲು ಅವರಿಗೆ ವೀಸಾ ಸಿಗುತ್ತಿಲ್ಲ. ಯುಕೆನಲ್ಲಿ ನಡೆಯಲಿರುವ ‘ಸನ್​ ಆಫ್​ ಸರ್ದಾರ್​ 2’ ಸಿನಿಮಾದ ಶೂಟಿಂಗ್ ಸಲುವಾಗಿ ಸಂಜಯ್​ ದತ್​ ಸಲ್ಲಿಸಿದ್ದ ವೀಸಾ ಅರ್ಜಿ ತಿರಸ್ಕೃತಗೊಂಡಿದೆ. ಹಾಗಾಗಿ ಅವರನ್ನು ಚಿತ್ರತಂಡದಿಂದ ಕೈಬಿಡಲಾಗಿದೆ ಎಂಬ ಗಾಸಿಪ್​ ಹಬ್ಬಿದೆ. ಇನ್ನೊಂದು ಮೂಲದ ಪ್ರಕಾರ, ಸಂಜಯ್​ ದತ್​ ಅವರು ಈ ಸಿನಿಮಾದಲ್ಲಿ ಮುಂದುವರಿಯಲಿದ್ದಾರೆ. ಆದರೆ ಅವರ ಪಾತ್ರದ ಚಿತ್ರೀಕರಣವನ್ನು ಭಾರತದಲ್ಲೇ ಮಾಡಲಾಗುವುದು ಎನ್ನಲಾಗುತ್ತಿದೆ. ಈ ಬಗ್ಗೆ ಚಿತ್ರತಂಡದವರು ಅಧಿಕೃತವಾಗಿ ಏನು ಹೇಳುತ್ತಾರೆ ಎಂಬುದನ್ನು ಕಾದುನೋಡಬೇಕು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ