AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋನಾಕ್ಷಿ ಸಿನ್ಹಾ ಮದುವೆ ಬಳಿಕ ಆಸ್ಪತ್ರೆಗೆ ದಾಖಲಾದ ತಂದೆ ಶತ್ರುಘ್ನ ಸಿನ್ಹಾ; ಕಾರಣ ಏನು?

7 ವರ್ಷಗಳ ಕಾಲ ಪ್ರೀತಿಸಿದ್ದ ಸೋನಾಕ್ಷಿ ಸಿನ್ಹಾ ಹಾಗೂ ಝಹೀರ್​ ಇಖ್ಬಾಲ್​ ಅವರು ಜೂ.23ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಈ ಜೋಡಿಯದ್ದು ಅಂತರ್​ಧರ್ಮೀಯ ವಿವಾಹ. ಮದುವೆ ನಂತರ ಸೋನಾಕ್ಷಿ ತಂದೆ ಶತ್ರುಘ್ನ ಸಿನ್ಹಾ ಆಸ್ಪತ್ರೆಗೆ ದಾಖಲಾದರು. ಆ ವಿಷಯ ತಿಳಿದು ಅಭಿಮಾನಿಗಳಿಗೆ ಬೇಸರ ಆಯಿತು. ಈ ಕುರಿತು ಈಗ ಇನ್ನಷ್ಟು ಮಾಹಿತಿ ಸಿಕ್ಕಿದೆ.

ಸೋನಾಕ್ಷಿ ಸಿನ್ಹಾ ಮದುವೆ ಬಳಿಕ ಆಸ್ಪತ್ರೆಗೆ ದಾಖಲಾದ ತಂದೆ ಶತ್ರುಘ್ನ ಸಿನ್ಹಾ; ಕಾರಣ ಏನು?
ಸೋನಾಕ್ಷಿ ಸಿನ್ಹಾ, ಝಹೀರ್​ ಇಖ್ಬಾಲ್​, ಶತ್ರುಘ್ನ ಸಿನ್ಹಾ
ಮದನ್​ ಕುಮಾರ್​
|

Updated on: Jun 30, 2024 | 8:48 PM

Share

ನಟಿ ಸೋನಾಕ್ಷಿ ಸಿನ್ಹಾ (Sonakshi Sinha) ಮತ್ತು ನಟ ಝಹಿರ್​ ಇಖ್ಬಾಲ್​ ಅವರು ಕೆಲವೇ ದಿನಗಳ ಹಿಂದೆ ಮದುವೆ ಆದರು. ಇವರದ್ದು ಅಂತರ್​​ಧರ್ಮೀಯ ವಿವಾಹ. ಆ ಕಾರಣದಿಂದ ಅನೇಕರು ಈ ಜೋಡಿಯನ್ನು ಟ್ರೋಲ್​ ಮಾಡಿದ್ದರು. ಈ ಮದುವೆಗೆ ಸೋನಾಕ್ಷಿ ಸಿನ್ಹಾ ತಂದೆ ಶತ್ರುಘ್ನ ಸಿನ್ಹಾ (Sonakshi Sinha) ಒಪ್ಪಿಕೊಂಡಿರಲಿಲ್ಲ ಎಂದು ಕೆಲವರು ಗಾಸಿಪ್ ಹಬ್ಬಿಸಿದ್ದರು. ಆದರೆ ಆ ಸುದ್ದಿಯನ್ನು ಶತ್ರುಘ್ನ ಸಿನ್ಹಾ ತಳ್ಳಿ ಹಾಕಿದ್ದರು. ಮಗಳ ಮದುವೆಯಲ್ಲಿ ಅವರು ಖುಷಿಯಿಂದ ಭಾಗಿ ಆಗಿದ್ದರು. ಆದರೆ ಅದಾದ ಬಳಿಕ ಅವರು ಮುಂಬೈ ಖಾಸಗಿ ಆಸ್ಪತ್ರೆಗೆ ದಾಖಲಾದರು. ಅದಕ್ಕೆ ಕಾರಣ ಏನು ಎಂಬುದು ಈಗ ಬಹಿರಂಗ ಆಗಿದೆ.

ಸೋನಾಕ್ಷಿ ಸಿನ್ಹಾ ಅವರು ಬಹುಕಾಲದ ಗೆಳೆಯ ಝಹೀರ್​ ಇಖ್ಬಾಲ್​ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಎರಡೇ ದಿನಗಳಲ್ಲಿ ಶತ್ರುಘ್ನ ಸಿನ್ಹಾ ಅವರು ಆಸ್ಪತ್ರೆಗೆ ದಾಖಲಾಗಿದ್ದು ನೋಡಿ ಅಭಿಮಾನಿಗಳಿಗೆ ಶಾಕ್​ ಆಯಿತು. ಸೋನಾಕ್ಷಿ ಸಿನ್ಹಾ ಹಾಗೂ ಝಹೀರ್​ ಇಖ್ಬಾಲ್​ ಜೊತೆಯಾಗಿ ಆಸ್ಪತ್ರೆಗೆ ಹೋಗಿ ಶತ್ರುಘ್ನ ಸಿನ್ಹಾ ಅವರ ಆರೋಗ್ಯ ವಿಚಾರಿಸಿದ್ದಾರೆ. ಹಿರಿಯ ನಟನ ಆರೋಗ್ಯದಲ್ಲಿ ಏರುಪೇರು ಆಗಿದ್ದಕ್ಕೆ ಕಾರಣ ತಿಳಿದುಬಂದಿದೆ.

ವರದಿಗಳ ಪ್ರಕಾರ, ಶತ್ರುಘ್ನ ಸಿನ್ಹಾ ಅವರು ಮನೆಯಲ್ಲಿ ಸೋಫಾ ಮೇಲೆ ಕುಳಿತಿದ್ದರು. ಅಲ್ಲಿಂದ ಮೇಲೇಳುವಾಗ ಅವರು ಆಯ ತಪ್ಪಿ ಬಿದ್ದಿದ್ದಾರೆ. ಆ ಸಂದರ್ಭದಲ್ಲಿ ಅವರ ಪಕ್ಕೆಲುಬಿಗೆ ಪೆಟ್ಟಾಗಿದೆ. ಈ ಘಟನೆ ನಡೆದಾಗ ಸೋನಾಕ್ಷಿ ಸಿನ್ಹಾ ಕೂಡ ಮನೆಯಲ್ಲೇ ಇದ್ದರು. ಹಾಗಾಗಿ ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಬರಲಾಯಿತು. ಅಭಿಮಾನಿಗಳು ಆತಂಕ ಪಡುವುದು ಬೇಡ ಎನ್ನಲಾಗಿದೆ. ಅವರಿಗೆ ಜ್ವರ ಮತ್ತು ನಿಶಕ್ತಿ ಕೂಡ ಉಂಟಾಗಿದೆ ಎಂದು ವರದಿ ಆಗಿದೆ.

ಬಣ್ಣದ ಲೋಕದಲ್ಲಿ ಗಾಸಿಪ್​ಗಳಿಗೆ ಕೊರತೆ ಇಲ್ಲ. ಸೋನಾಕ್ಷಿ ಸಿನ್ಹಾ ಅವರು ಬೇರೆ ಧರ್ಮದ ಯುವಕನ ಜೊತೆ ಮದುವೆ ಆಗಿದ್ದರಿಂದ ಶತ್ರುಘ್ನ ಸಿನ್ಹಾ ಅವರು ಬೇಸರ ಮಾಡಿಕೊಂಡಿರಬಹುದು. ಅದೇ ಚಿಂತೆಯಲ್ಲಿ ಅವರಿಗೆ ಆರೋಗ್ಯ ಕೈಕೊಟ್ಟಿರಬಹುದು ಎಂದು ಕೆಲವರು ಮಾತನಾಡಿಕೊಂಡಿದ್ದರು. ಆದರೆ ಈಗ ಅವರು ಆಸ್ಪತ್ರೆಗೆ ದಾಖಲಾಗಿದ್ದಕ್ಕೆ ಅಸಲಿ ಕಾರಣ ಏನು ಎಂಬುದು ಗೊತ್ತಾಗಿದೆ.

ಇದನ್ನೂ ಓದಿ: ಮದುವೆ ಮುಗಿದ ಬೆನ್ನಲ್ಲೇ ಚೆಕಪ್​ಗೆ ಆಸ್ಪತ್ರೆಗೆ ತೆರಳಿದ ಸೋನಾಕ್ಷಿ; ಹುಟ್ಟಿದೆ ಪ್ರೆಗ್ನೆನ್ಸಿ ಸುದ್ದಿ

ಕಳೆದ 7 ವರ್ಷಗಳಿಂದ ಝಹೀಲ್​ ಇಖ್ಬಾಲ್​ ಮತ್ತು ಸೋನಾಕ್ಷಿ ಸಿನ್ಹಾ ಅವರು ಪ್ರೀತಿಸುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ಅವರ ಪ್ರೀತಿಯ ಬಗ್ಗೆ ಮಾಹಿತಿ ಹೊರಬಿತ್ತು. ಆಪ್ತರು ಮತ್ತು ಕುಟುಂಬದವರ ಸಮ್ಮುಖದಲ್ಲಿ ಅವರ ಮದುವೆ ನೆರವೇರಿತು. ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ಆರತಕ್ಷತೆ ಸಮಾರಂಭಕ್ಕೆ ತೆರಳಿ ನವ ಜೋಡಿಗೆ ಅಭಿನಂದನೆ ತಿಳಿಸಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​