ಸೋನಾಕ್ಷಿ ಸಿನ್ಹಾಗೆ ಬಂಧನ ಭೀತಿ; ಜಾಮೀನು ರಹಿತ ವಾರೆಂಟ್​ ಜಾರಿ ಮಾಡಿದ ಕೋರ್ಟ್​: ಏನಿದು ಕೇಸ್​?

ಹಣ ಗಳಿಸಲು ಸೆಲೆಬ್ರಿಟಿಗಳು ಅನೇಕ ಹಾದಿಗಳನ್ನು ಕಂಡುಕೊಂಡಿರುತ್ತಾರೆ. ಕಾರ್ಯಕ್ರಮದ ಆಯೋಜಕರಿಂದ ಸೋನಾಕ್ಷಿ ಸಿನ್ಹಾ ಅವರು ಬರೋಬ್ಬರಿ 37 ಲಕ್ಷ ರೂಪಾಯಿ ಪಡೆದುಕೊಂಡಿದ್ದರು ಎಂದು ತಿಳಿದುಬಂದಿದೆ.

ಸೋನಾಕ್ಷಿ ಸಿನ್ಹಾಗೆ ಬಂಧನ ಭೀತಿ; ಜಾಮೀನು ರಹಿತ ವಾರೆಂಟ್​ ಜಾರಿ ಮಾಡಿದ ಕೋರ್ಟ್​: ಏನಿದು ಕೇಸ್​?
ಸೋನಾಕ್ಷಿ ಸಿನ್ಹಾ
Follow us
| Updated By: ಮದನ್​ ಕುಮಾರ್​

Updated on: Mar 07, 2022 | 8:48 AM

ಹಿಂದಿ ಚಿತ್ರರಂಗದ ಖ್ಯಾತ ನಟಿ ಸೋನಾಕ್ಷಿ ಸಿನ್ಹಾ (Sonakshi Sinha) ಅವರು ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಿನಿಮಾ ಮತ್ತು ಇತರೆ ಗಾಸಿಪ್​ಗಳಿಂದ ಗಮನ ಸೆಳೆಯುತ್ತಿದ್ದ ಅವರು ಈಗ ಗಂಭೀರ ವಿಚಾರದಿಂದ ಸುದ್ದಿ ಆಗಿದ್ದಾರೆ. ಸೋನಾಕ್ಷಿ ಸಿನ್ಹಾ ವಿರುದ್ಧ ಜಾಮೀನು ರಹಿತ ಅರೆಸ್ಟ್​ ವಾರೆಂಟ್​ ಜಾರಿ ಮಾಡಲಾಗಿದೆ. ಅಷ್ಟಕ್ಕೂ ಅವರ ಮೇಲಿರುವ ಪ್ರಕರಣ ಏನು? ವಂಚನೆ ಕೇಸ್​ (Fraud Case)! ಹೌದು, ಸೋನಾಕ್ಷಿ ವಿರುದ್ಧ ವಂಚನೆ ಆರೋಪ ಕೇಳಿಬಂದಿದೆ. ದೆಹಲಿಯಲ್ಲಿ ನಡೆಯಬೇಕಿದ್ದ ಕಾರ್ಯಕ್ರಮವೊಂದರ ಆಯೋಜಕರಿಂದ ಲಕ್ಷಾಂತರ ರೂಪಾಯಿ ಪಡೆದುಕೊಂಡಿದ್ದ ಸೋನಾಕ್ಷಿ ಸಿನ್ಹಾ ಅವರು ನಂತರ ಆ ಕಾರ್ಯಕ್ರಮಕ್ಕೆ ಹಾಜರಾಗದೇ ತಪ್ಪಿಸಿಕೊಂಡಿದ್ದರು. ಮುಂಗಡವಾಗಿ ಪಡೆದಿದ್ದ ಹಣವನ್ನು ವಾಪಸ್​ ನೀಡಲು ಕೂಡ ಅವರು ಒಪ್ಪಿಕೊಂಡಿರಲಿಲ್ಲ. ಹಾಗಾಗಿ ಅವರ ವಿರುದ್ಧ ಕೇಸ್​ ದಾಖಲಾಗಿದೆ. ನಟಿಯಿಂದ ವಂಚನೆ ಆಗಿದೆ ಎಂದು ಆರೋಪಿಸಿ ಕಾರ್ಯಕ್ರಮದ ಆಯೋಜಕ ಪ್ರಮೋದ್​ ಶರ್ಮಾ ಎಂಬುವವರು ಕಾನೂನು ಹೋರಾಟ ಮಾಡುತ್ತಿದ್ದಾರೆ. ಈ ಪ್ರಕರಣದ ಸಂಬಂಧ ಸೋನಾಕ್ಷಿ ಸಿನ್ಹಾ ವಿರುದ್ಧ ಜಾಮೀನು ರಹಿತ ಅರೆಸ್ಟ್​ ವಾರೆಂಟ್​ (Non Bailable Warrant) ಜಾರಿ ಮಾಡಲಾಗಿದೆ. ಹಾಗಾಗಿ ಅವರಿಗೆ ಬಂಧನದ ಭೀತಿ ಎದುರಾಗಿದೆ.

ಹಣ ಗಳಿಸಲು ಸೆಲೆಬ್ರಿಟಿಗಳು ಅನೇಕ ಹಾದಿಗಳನ್ನು ಕಂಡುಕೊಂಡಿರುತ್ತಾರೆ. ಕಾರ್ಯಕ್ರಮಗಳಲ್ಲಿ ಅತಿಥಿಯಾಗಿ ಭಾಗವಹಿಸಿದರೆ ಅವರಿಗೆ ಕೈ ತುಂಬ ಹಣ ನೀಡಲಾಗುತ್ತದೆ. ಅದೇ ರೀತಿ ಸೋನಾಕ್ಷಿ ಸಿನ್ಹಾ ಅವರಿಗೂ ಆಫರ್​ ನೀಡಲಾಗಿತ್ತು. ಕಾರ್ಯಕ್ರಮದ ಆಯೋಜಕರಿಂದ ಅವರು ಬರೋಬ್ಬರಿ 37 ಲಕ್ಷ ರೂಪಾಯಿ ಪಡೆದುಕೊಂಡಿದ್ದರು ಎಂದು ತಿಳಿದುಬಂದಿದೆ. ಹಣ ಪಡೆದ ಬಳಿಕ ಕಾರ್ಯಕ್ರಮಕ್ಕೆ ಹಾಜರಾಗದೇ, ಹಣವನ್ನೂ ವಾಪಸ್​ ನೀಡದೇ ಅವರು ಸತಾಯಿಸಿದ್ದಾರೆ. ಅಷ್ಟೇ ಆಗಿದ್ದರೆ ಸೋನಾಕ್ಷಿ ವಿರುದ್ಧ ಇಂದು ಜಾಮೀನು ರಹಿತ ಅರೆಸ್ಟ್​ ವಾರೆಂಟ್​ ಜಾರಿ ಆಗುತ್ತಿರಲಿಲ್ಲವೇನೋ. ಅದರ ಜೊತೆಗೆ ಸೋನಾಕ್ಷಿ ಇನ್ನೊಂದು ಎಡವಟ್ಟು ಮಾಡಿದ್ದಾರೆ.

ಉತ್ತರ ಪ್ರದೇಶದ ಮೊರಾದಾಬಾದ್​ ಜಿಲ್ಲೆಯಲ್ಲಿ ಈ ಕೇಸ್​ ದಾಖಲಾಗಿದೆ. ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದು ಸೋನಾಕ್ಷಿ ಸಿನ್ಹಾ ಅವರು ವಿಚಾರಣೆಗೆ ಹಾಜರಾಗಿಲ್ಲ. ಪದೇಪದೇ ಅವರು ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿರುವ ಕಾರಣದಿಂದ ಅರೆಸ್ಟ್​ ವಾರೆಂಟ್​ ಜಾರಿ ಮಾಡಲಾಗಿದೆ. ‘ಸೋನಾಕ್ಷಿ ಸಿನ್ಹಾ ಅವರನ್ನು ಬಂಧಿಸಿ, ಏ.24ರಂದು ನ್ಯಾಯಾಲಯದ ಮುಂದೆ ಹಾಜರು ಪಡಿಸಬೇಕು’ ಎಂದು ಪೊಲೀಸರಿಗೆ ಕೋರ್ಟ್​ ಆದೇಶ ನೀಡಿದೆ.

ಸೋನಾಕ್ಷಿ ಸಿನ್ಹಾ ಮದುವೆ ಗಾಸಿಪ್​:

ನಟ ಸಲ್ಮಾನ್​ ಖಾನ್ ಅವರ ಮದುವೆ ಬಗ್ಗೆ ಆಗಾಗ ಚರ್ಚೆ ಆಗುತ್ತಲೇ ಇರುತ್ತದೆ. ಮೋಸ್ಟ್​ ಎಲಿಜಬಲ್​ ಬ್ಯಾಚುಲರ್​ ಎನಿಸಿಕೊಂಡಿರುವ ಅವರು ಹಲವರ ಜೊತೆ ಡೇಟಿಂಗ್​ ಮಾಡಿದ್ದರು. ಆದರೆ ಯಾರೂ ಕೂಡ ಸಲ್ಲು ಜೊತೆ ಮದುವೆ ಆಗಲು ಮುಂದೆ ಬರಲಿಲ್ಲ. ಸಲ್ಮಾನ್​ ಖಾನ್​ ಮತ್ತು ಸೋನಾಕ್ಷಿ ಸಿನ್ಹಾ ಅವರು ಮದುವೆ ಆಗಿದ್ದಾರೆ ಎಂಬ ಗಾಳಿ ಸುದ್ದಿ ಇತ್ತೀಚೆಗೆ ಹರಡಿತ್ತು. ಅದಕ್ಕೆ ಕಾರಣ ಆಗಿರುವುದು ಒಂದೇ ಒಂದು ಫೋಟೋ. ಸಲ್ಮಾನ್​ ಖಾನ್​ ಮತ್ತು ಸೋನಾಕ್ಷಿ ಸಿನ್ಹಾ ಅವರು ನವ ದಂಪತಿಯ ರೀತಿಯಲ್ಲಿ ಮದುವೆ ಡ್ರೆಸ್​ನಲ್ಲಿ ಕಾಣಿಸಿಕೊಂಡಿರುವ ಒಂದು ಫೋಟೋ ವೈರಲ್​ ಆಗಿತ್ತು. ಈ ಜೋಡಿಯ ನಡುವೆ ಉತ್ತಮ ಒಡನಾಟ ಇದೆ ಎಂಬುದು ನಿಜ. ಆದರೆ ಮದುವೆ ಆಗಿದ್ದಾರೆ ಎಂಬುದೆಲ್ಲ ಬರೀ ಕಟ್ಟುಕಥೆ. ಅದೊಂದು ಎಡಿಟೆಡ್​ ಫೋಟೋ. ಬೇರೆ ಯಾರದ್ದೋ ಮದುವೆ ಫೋಟೋಗೆ ಸೋನಾಕ್ಷಿ ಸಿನ್ಹಾ ಹಾಗೂ ಸಲ್ಮಾನ್​ ಖಾನ್​ ಅವರ ಮುಖವನ್ನು ಎಡಿಟ್​ ಮಾಡಿ ಆ ರೀತಿ ವೈರಲ್​ ಮಾಡಲಾಗಿತ್ತು. ಅದನ್ನು ನಿಜ ಎಂದು ನಂಬಿಕೊಂಡವರು ನಂತರ ಸತ್ಯ ಏನೆಂಬುದು ತಿಳಿದು ಪೆಚ್ಚಾಗಿದ್ದರು.

ಇದನ್ನೂ ಓದಿ:

ಗಂಡ-ಹೆಂಡತಿ ವೇಷದಲ್ಲಿ ಸೋನಾಕ್ಷಿ-ಸಲ್ಮಾನ್​ ಖಾನ್​; ನಕಲಿ ಫೋಟೋ ನೋಡಿ ಯಾಮಾರಿದ ನೆಟ್ಟಿಗರು​

‘ಎಲ್ಲರಿಗೂ ಕೊವಿಡ್​ ಬರ್ತಿದೆ, ನಂಗೂ ಬರಬೇಕಾ?’; ಸಣ್ಣ ವಿಚಾರಕ್ಕೆ ಇಂಥ ಮಾತಾಡಿದ ಸೋನಾಕ್ಷಿ ಸಿನ್ಹಾ

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ