AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋನಾಕ್ಷಿ ಸಿನ್ಹಾಗೆ ಬಂಧನ ಭೀತಿ; ಜಾಮೀನು ರಹಿತ ವಾರೆಂಟ್​ ಜಾರಿ ಮಾಡಿದ ಕೋರ್ಟ್​: ಏನಿದು ಕೇಸ್​?

ಹಣ ಗಳಿಸಲು ಸೆಲೆಬ್ರಿಟಿಗಳು ಅನೇಕ ಹಾದಿಗಳನ್ನು ಕಂಡುಕೊಂಡಿರುತ್ತಾರೆ. ಕಾರ್ಯಕ್ರಮದ ಆಯೋಜಕರಿಂದ ಸೋನಾಕ್ಷಿ ಸಿನ್ಹಾ ಅವರು ಬರೋಬ್ಬರಿ 37 ಲಕ್ಷ ರೂಪಾಯಿ ಪಡೆದುಕೊಂಡಿದ್ದರು ಎಂದು ತಿಳಿದುಬಂದಿದೆ.

ಸೋನಾಕ್ಷಿ ಸಿನ್ಹಾಗೆ ಬಂಧನ ಭೀತಿ; ಜಾಮೀನು ರಹಿತ ವಾರೆಂಟ್​ ಜಾರಿ ಮಾಡಿದ ಕೋರ್ಟ್​: ಏನಿದು ಕೇಸ್​?
ಸೋನಾಕ್ಷಿ ಸಿನ್ಹಾ
Follow us
TV9 Web
| Updated By: ಮದನ್​ ಕುಮಾರ್​

Updated on: Mar 07, 2022 | 8:48 AM

ಹಿಂದಿ ಚಿತ್ರರಂಗದ ಖ್ಯಾತ ನಟಿ ಸೋನಾಕ್ಷಿ ಸಿನ್ಹಾ (Sonakshi Sinha) ಅವರು ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಿನಿಮಾ ಮತ್ತು ಇತರೆ ಗಾಸಿಪ್​ಗಳಿಂದ ಗಮನ ಸೆಳೆಯುತ್ತಿದ್ದ ಅವರು ಈಗ ಗಂಭೀರ ವಿಚಾರದಿಂದ ಸುದ್ದಿ ಆಗಿದ್ದಾರೆ. ಸೋನಾಕ್ಷಿ ಸಿನ್ಹಾ ವಿರುದ್ಧ ಜಾಮೀನು ರಹಿತ ಅರೆಸ್ಟ್​ ವಾರೆಂಟ್​ ಜಾರಿ ಮಾಡಲಾಗಿದೆ. ಅಷ್ಟಕ್ಕೂ ಅವರ ಮೇಲಿರುವ ಪ್ರಕರಣ ಏನು? ವಂಚನೆ ಕೇಸ್​ (Fraud Case)! ಹೌದು, ಸೋನಾಕ್ಷಿ ವಿರುದ್ಧ ವಂಚನೆ ಆರೋಪ ಕೇಳಿಬಂದಿದೆ. ದೆಹಲಿಯಲ್ಲಿ ನಡೆಯಬೇಕಿದ್ದ ಕಾರ್ಯಕ್ರಮವೊಂದರ ಆಯೋಜಕರಿಂದ ಲಕ್ಷಾಂತರ ರೂಪಾಯಿ ಪಡೆದುಕೊಂಡಿದ್ದ ಸೋನಾಕ್ಷಿ ಸಿನ್ಹಾ ಅವರು ನಂತರ ಆ ಕಾರ್ಯಕ್ರಮಕ್ಕೆ ಹಾಜರಾಗದೇ ತಪ್ಪಿಸಿಕೊಂಡಿದ್ದರು. ಮುಂಗಡವಾಗಿ ಪಡೆದಿದ್ದ ಹಣವನ್ನು ವಾಪಸ್​ ನೀಡಲು ಕೂಡ ಅವರು ಒಪ್ಪಿಕೊಂಡಿರಲಿಲ್ಲ. ಹಾಗಾಗಿ ಅವರ ವಿರುದ್ಧ ಕೇಸ್​ ದಾಖಲಾಗಿದೆ. ನಟಿಯಿಂದ ವಂಚನೆ ಆಗಿದೆ ಎಂದು ಆರೋಪಿಸಿ ಕಾರ್ಯಕ್ರಮದ ಆಯೋಜಕ ಪ್ರಮೋದ್​ ಶರ್ಮಾ ಎಂಬುವವರು ಕಾನೂನು ಹೋರಾಟ ಮಾಡುತ್ತಿದ್ದಾರೆ. ಈ ಪ್ರಕರಣದ ಸಂಬಂಧ ಸೋನಾಕ್ಷಿ ಸಿನ್ಹಾ ವಿರುದ್ಧ ಜಾಮೀನು ರಹಿತ ಅರೆಸ್ಟ್​ ವಾರೆಂಟ್​ (Non Bailable Warrant) ಜಾರಿ ಮಾಡಲಾಗಿದೆ. ಹಾಗಾಗಿ ಅವರಿಗೆ ಬಂಧನದ ಭೀತಿ ಎದುರಾಗಿದೆ.

ಹಣ ಗಳಿಸಲು ಸೆಲೆಬ್ರಿಟಿಗಳು ಅನೇಕ ಹಾದಿಗಳನ್ನು ಕಂಡುಕೊಂಡಿರುತ್ತಾರೆ. ಕಾರ್ಯಕ್ರಮಗಳಲ್ಲಿ ಅತಿಥಿಯಾಗಿ ಭಾಗವಹಿಸಿದರೆ ಅವರಿಗೆ ಕೈ ತುಂಬ ಹಣ ನೀಡಲಾಗುತ್ತದೆ. ಅದೇ ರೀತಿ ಸೋನಾಕ್ಷಿ ಸಿನ್ಹಾ ಅವರಿಗೂ ಆಫರ್​ ನೀಡಲಾಗಿತ್ತು. ಕಾರ್ಯಕ್ರಮದ ಆಯೋಜಕರಿಂದ ಅವರು ಬರೋಬ್ಬರಿ 37 ಲಕ್ಷ ರೂಪಾಯಿ ಪಡೆದುಕೊಂಡಿದ್ದರು ಎಂದು ತಿಳಿದುಬಂದಿದೆ. ಹಣ ಪಡೆದ ಬಳಿಕ ಕಾರ್ಯಕ್ರಮಕ್ಕೆ ಹಾಜರಾಗದೇ, ಹಣವನ್ನೂ ವಾಪಸ್​ ನೀಡದೇ ಅವರು ಸತಾಯಿಸಿದ್ದಾರೆ. ಅಷ್ಟೇ ಆಗಿದ್ದರೆ ಸೋನಾಕ್ಷಿ ವಿರುದ್ಧ ಇಂದು ಜಾಮೀನು ರಹಿತ ಅರೆಸ್ಟ್​ ವಾರೆಂಟ್​ ಜಾರಿ ಆಗುತ್ತಿರಲಿಲ್ಲವೇನೋ. ಅದರ ಜೊತೆಗೆ ಸೋನಾಕ್ಷಿ ಇನ್ನೊಂದು ಎಡವಟ್ಟು ಮಾಡಿದ್ದಾರೆ.

ಉತ್ತರ ಪ್ರದೇಶದ ಮೊರಾದಾಬಾದ್​ ಜಿಲ್ಲೆಯಲ್ಲಿ ಈ ಕೇಸ್​ ದಾಖಲಾಗಿದೆ. ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದು ಸೋನಾಕ್ಷಿ ಸಿನ್ಹಾ ಅವರು ವಿಚಾರಣೆಗೆ ಹಾಜರಾಗಿಲ್ಲ. ಪದೇಪದೇ ಅವರು ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿರುವ ಕಾರಣದಿಂದ ಅರೆಸ್ಟ್​ ವಾರೆಂಟ್​ ಜಾರಿ ಮಾಡಲಾಗಿದೆ. ‘ಸೋನಾಕ್ಷಿ ಸಿನ್ಹಾ ಅವರನ್ನು ಬಂಧಿಸಿ, ಏ.24ರಂದು ನ್ಯಾಯಾಲಯದ ಮುಂದೆ ಹಾಜರು ಪಡಿಸಬೇಕು’ ಎಂದು ಪೊಲೀಸರಿಗೆ ಕೋರ್ಟ್​ ಆದೇಶ ನೀಡಿದೆ.

ಸೋನಾಕ್ಷಿ ಸಿನ್ಹಾ ಮದುವೆ ಗಾಸಿಪ್​:

ನಟ ಸಲ್ಮಾನ್​ ಖಾನ್ ಅವರ ಮದುವೆ ಬಗ್ಗೆ ಆಗಾಗ ಚರ್ಚೆ ಆಗುತ್ತಲೇ ಇರುತ್ತದೆ. ಮೋಸ್ಟ್​ ಎಲಿಜಬಲ್​ ಬ್ಯಾಚುಲರ್​ ಎನಿಸಿಕೊಂಡಿರುವ ಅವರು ಹಲವರ ಜೊತೆ ಡೇಟಿಂಗ್​ ಮಾಡಿದ್ದರು. ಆದರೆ ಯಾರೂ ಕೂಡ ಸಲ್ಲು ಜೊತೆ ಮದುವೆ ಆಗಲು ಮುಂದೆ ಬರಲಿಲ್ಲ. ಸಲ್ಮಾನ್​ ಖಾನ್​ ಮತ್ತು ಸೋನಾಕ್ಷಿ ಸಿನ್ಹಾ ಅವರು ಮದುವೆ ಆಗಿದ್ದಾರೆ ಎಂಬ ಗಾಳಿ ಸುದ್ದಿ ಇತ್ತೀಚೆಗೆ ಹರಡಿತ್ತು. ಅದಕ್ಕೆ ಕಾರಣ ಆಗಿರುವುದು ಒಂದೇ ಒಂದು ಫೋಟೋ. ಸಲ್ಮಾನ್​ ಖಾನ್​ ಮತ್ತು ಸೋನಾಕ್ಷಿ ಸಿನ್ಹಾ ಅವರು ನವ ದಂಪತಿಯ ರೀತಿಯಲ್ಲಿ ಮದುವೆ ಡ್ರೆಸ್​ನಲ್ಲಿ ಕಾಣಿಸಿಕೊಂಡಿರುವ ಒಂದು ಫೋಟೋ ವೈರಲ್​ ಆಗಿತ್ತು. ಈ ಜೋಡಿಯ ನಡುವೆ ಉತ್ತಮ ಒಡನಾಟ ಇದೆ ಎಂಬುದು ನಿಜ. ಆದರೆ ಮದುವೆ ಆಗಿದ್ದಾರೆ ಎಂಬುದೆಲ್ಲ ಬರೀ ಕಟ್ಟುಕಥೆ. ಅದೊಂದು ಎಡಿಟೆಡ್​ ಫೋಟೋ. ಬೇರೆ ಯಾರದ್ದೋ ಮದುವೆ ಫೋಟೋಗೆ ಸೋನಾಕ್ಷಿ ಸಿನ್ಹಾ ಹಾಗೂ ಸಲ್ಮಾನ್​ ಖಾನ್​ ಅವರ ಮುಖವನ್ನು ಎಡಿಟ್​ ಮಾಡಿ ಆ ರೀತಿ ವೈರಲ್​ ಮಾಡಲಾಗಿತ್ತು. ಅದನ್ನು ನಿಜ ಎಂದು ನಂಬಿಕೊಂಡವರು ನಂತರ ಸತ್ಯ ಏನೆಂಬುದು ತಿಳಿದು ಪೆಚ್ಚಾಗಿದ್ದರು.

ಇದನ್ನೂ ಓದಿ:

ಗಂಡ-ಹೆಂಡತಿ ವೇಷದಲ್ಲಿ ಸೋನಾಕ್ಷಿ-ಸಲ್ಮಾನ್​ ಖಾನ್​; ನಕಲಿ ಫೋಟೋ ನೋಡಿ ಯಾಮಾರಿದ ನೆಟ್ಟಿಗರು​

‘ಎಲ್ಲರಿಗೂ ಕೊವಿಡ್​ ಬರ್ತಿದೆ, ನಂಗೂ ಬರಬೇಕಾ?’; ಸಣ್ಣ ವಿಚಾರಕ್ಕೆ ಇಂಥ ಮಾತಾಡಿದ ಸೋನಾಕ್ಷಿ ಸಿನ್ಹಾ

ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ