AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆಫರ್​​ ಕಳೆದುಕೊಂಡಾಗ ಸ್ಟಾರ್​ ಮಕ್ಕಳು ಅಳುವುದಿಲ್ಲ’; ಬಾಲಿವುಡ್​ನಲ್ಲಿರುವ ಹೊರಗಿನವರನ್ನು ಟೀಕಿಸಿದ ಸೋನಾಕ್ಷಿ ಸಿನ್ಹಾ

ಸ್ಟಾರ್​ ನಟರ ಮಕ್ಕಳು ಹಾಗೂ ಹೊರಗಿನವರು ಎನ್ನುವ ಎರಡು ಕ್ಯಾಟೆಗಿರಿಯಲ್ಲಿ ಬಾಲಿವುಡ್​ಅನ್ನು ವಿಂಗಡಿಸಲಾಗುತ್ತದೆ. ಸ್ಟಾರ್​ ನಟರಿಂದ ನಮ್ಮ ಆಫರ್​ ಕೈ ತಪ್ಪಿತು ಎಂದು ಹೊರಗಿನವರು ಅನೇಕ ಬಾರಿ ಹೆಳಿಕೊಂಡಿದ್ದಾರೆ.

‘ಆಫರ್​​ ಕಳೆದುಕೊಂಡಾಗ ಸ್ಟಾರ್​ ಮಕ್ಕಳು ಅಳುವುದಿಲ್ಲ’; ಬಾಲಿವುಡ್​ನಲ್ಲಿರುವ ಹೊರಗಿನವರನ್ನು ಟೀಕಿಸಿದ ಸೋನಾಕ್ಷಿ ಸಿನ್ಹಾ
ಸೋನಾಕ್ಷಿ ಸಿನ್ಹಾ
TV9 Web
| Edited By: |

Updated on:Sep 29, 2021 | 9:35 PM

Share

ಬಾಲಿವುಡ್​ನಲ್ಲಿ ಸೋನಾಕ್ಷಿ ಸಿನ್ಹಾ ಬೇಡಿಕೆ ಕಳೆದುಕೊಂಡಿದ್ದಾರೆ. ಅವರಿಗೆ ಈಗ ಮೊದಲಿನಷ್ಟು ಬೇಡಿಕೆ ಉಳಿದಿಲ್ಲ. ಈ ವಿಚಾರದ ಬಗ್ಗೆ ಅವರಿಗೆ ಬೇಸರವಿದೆ. ಸ್ಟಾರ್​ ಕಿಡ್​ ಆದ ಹೊರತಾಗಿಯೂ ಸೋನಾಕ್ಷಿಗೆ ಆಫರ್​ಗಳು ಬರುತ್ತಿಲ್ಲ. ಈ ಬಗ್ಗೆ ಅವರು ಬೇಸರ ಹೊರ ಹಾಕಿದ್ದಾರೆ. ಅಲ್ಲದೆ, ಬಾಲಿವುಡ್​ನಲ್ಲಿ ಹೊರಗಿನವರನ್ನು ಪರೋಕ್ಷವಾಗಿ ಟೀಕಿಸಿದ್ದು, ನಮಗೂ ಆಫರ್​ಗಳು ಕೈತಪ್ಪುತ್ತವೆ ಎಂದು ಅವರು ಹೇಳಿಕೊಂಡಿದ್ದಾರೆ.

ಸ್ಟಾರ್​ ನಟರ ಮಕ್ಕಳು ಹಾಗೂ ಹೊರಗಿನವರು ಎನ್ನುವ ಎರಡು ವರ್ಗದಲ್ಲಿ  ಬಾಲಿವುಡ್​ಅನ್ನು ವಿಂಗಡಿಸಲಾಗುತ್ತದೆ. ಸ್ಟಾರ್​ ನಟರಿಂದ ನಮ್ಮ ಆಫರ್​ ಕೈ ತಪ್ಪಿತು ಎಂದು ಹೊರಗಿನವರು ಅನೇಕ ಬಾರಿ ಹೇಳಿಕೊಂಡಿದ್ದಾರೆ. ಸುಶಾಂತ್​ ಸಿಂಗ್​ಗೆ ಸಿನಿಮಾಆಫರ್​ಗಳು ತಪ್ಪಿ ಹೋಗುವುದಕ್ಕೆ ಸಾಕಷ್ಟು ಸ್ಟಾರ್​​ ನಿರ್ದೇಶಕರ ಕೈವಾಡ ಇತ್ತು ಎನ್ನುವ ಆರೋಪ ಇದೆ. ಹೀಗಿರುವಾಗಲೇ ಸೋನಾಕ್ಷಿ ಈ ಬಗ್ಗೆ ಮಾತನಾಡಿದ್ದಾರೆ.

‘ನಮಗೆ ಬಂದ ಸಿನಿಮಾ ಬೇರೆಯವರ ಕೈ ಸೇರುವುದು ಸರ್ವೇ ಸಾಮಾನ್ಯ. ಈ ವಿಚಾರದಲ್ಲಿ ಸ್ಟಾರ್​ ಕಿಡ್​ಗಳನ್ನು ಎಳೆದು ತರುವ ಅವಶ್ಯಕತೆಯೇ ಇಲ್ಲ. ಸ್ಟಾರ್​ ನಟರ ಮಕ್ಕಳೂ ಸಿನಿಮಾ ಆಫರ್​ ಕಳೆದುಕೊಂಡ ಉದಾಹರಣೆ ಇದೆ. ಆದರೆ, ಅವರು ಹೋಗಿ ಎಲ್ಲರ ಎದುರು ಅತ್ತಿಲ್ಲ. ಈ ರೀತಿ ಎಲ್ಲರಿಗೂ ಆಗುತ್ತದೆ. ಇದು ಜೀವನ. ಅದನ್ನು ಎದುರಿಸಿ’ ಎಂದು ಸೋನಾಕ್ಷಿ ಕಿವಿಮಾತು ಹೇಳಿದ್ದಾರೆ.

ನಟ ಶತ್ರುಘ್ನ ಸಿನ್ಹಾ ಹಾಗೂ ಪೂನಮ್​ ಸಿನ್ಹಾ ಮಗಳು ಸೋನಾಕ್ಷಿ. ಸಲ್ಮಾನ್​ ಖಾನ್​ ನಟನೆಯ ದಬಾಂಗ್​ ಚಿತ್ರದ ಮೂಲಕ ಬಣ್ಣದ ಬದುಕು ಆರಂಭಿಸಿದ ಅವರಿಗೆ ಸಾಲುಸಾಲು ಚಿತ್ರಗಳು ಸಿಕ್ಕವು. ಆದರೆ, ಇತ್ತೀಚೆಗೆ ಅವರು ನಟಿಸಿದ ಸಿನಿಮಾಗಳು ಫ್ಲಾಪ್​ ಆಗುತ್ತಿವೆ. ಹೀಗಾಗಿ, ನಿರ್ಮಾಪಕರು ಅವರ ಮನೆಯ ಕದ ತಟ್ಟುತ್ತಿಲ್ಲ. ಇತ್ತೀಚೆಗೆ ತೆರೆಕಂಡ ಅವರ ನಟನೆಯ, ‘ಭುಜ್​: ದಿ ಪ್ರೈಡ್​ ಆಫ್​ ಇಂಡಿಯಾ’ ಸಿನಿಮಾ ವಿಮರ್ಶೆಯಲ್ಲಿ ಸೋತಿದೆ. ಅವರಿಗೆ ಆರ್ಥಿಕವಾಗಿ ಯಾವುದೇ ಸಮಸ್ಯೆ ಇಲ್ಲ. ಆದರೆ, ಸಾಲುಸಾಲು ಸಿನಿಮಾಗಳು ಫ್ಲಾಪ್​ ಆಗುತ್ತಿರುವುದಕ್ಕೆ ವೃತ್ತಿ ಜೀವನಕ್ಕೆ ಹಿನ್ನಡೆ ಆಗುತ್ತಿದೆ.

ಇದನ್ನೂ ಓದಿ: ಬಾಲಯ್ಯನ ಜೊತೆ ನಟಿಸ್ತಿಲ್ವಂತೆ ಸೋನಾಕ್ಷಿ, ಹೊಸ ಸಿನಿಮಾ ಬಗ್ಗೆ ಶೀಘ್ರವೇ ಕೊಡ್ತಾರಂತೆ ಸುದ್ದಿ

ಪ್ರಾಣಿಪ್ರಿಯರೇ ಸೋನಾಕ್ಷಿ ಸಿನ್ಹಾಳ ‘ಗಬ್ರು’ ನೋಡಿದ್ದೀರಾ?

Published On - 6:59 pm, Wed, 29 September 21

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್